AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reserve Bank Of India: ಮೊಬಿಕ್ವಿಕ್, ಸ್ಪೈಸ್ ಮನಿಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದ ಆರ್​ಬಿಐ

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾದಿಂದ ನೀಡಲಾದ ನಿರ್ದೇಶನದ ಪಾಲನೆ ಮಾಡದ ಕಾರಣಕ್ಕೆ ಮೊಬಿಕ್ವಿಕ್, ಸ್ಪೈಸ್ ಮನಿ ಎಂಬೆರಡು ಪೇಮೆಂಟ್​ ಸಿಸ್ಟಮ್ ಆಪರೇಟರ್ಸ್ ಮೇಲೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ.

Reserve Bank Of India: ಮೊಬಿಕ್ವಿಕ್, ಸ್ಪೈಸ್ ಮನಿಗೆ ತಲಾ 1 ಕೋಟಿ ರೂಪಾಯಿ ದಂಡ ವಿಧಿಸಿದ ಆರ್​ಬಿಐ
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Dec 23, 2021 | 5:09 PM

Share

ಮೊಬಿಕ್ವಿಕ್ ಸಿಸ್ಟಮ್ಸ್ ಮತ್ತು ಸ್ಪೈಸ್ ಮನಿ ಎಂಬೆರಡು ಪೇಮೆಂಟ್ ಸಿಸ್ಟಮ್ ಆಪರೇಟರ್ಸ್ (PSOs) ಮೇಲೆ ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ದಂಡವನ್ನು ವಿಧಿಸಿದೆ. ನಿಯಮಾವಳಿ ಪಾಲನೆ ಮಾಡದ ಕಾರಣಕ್ಕೆ ಇಂಥದ್ದೊಂದು ಕ್ರಮ ಕೈಗೊಂಡಿದೆ ಎಂದು ಕೇಂದ್ರ ಬ್ಯಾಂಕ್ ಹೇಳಿಕೆಯಲ್ಲಿ ತಿಳಿಸಲಾಗಿದೆ. ಮೊಬಿಕ್ವಿಕ್ ಮತ್ತು ಸ್ಪೈಸ್ ಮನಿ ಎರಡಕ್ಕೂ ತಲಾ 1 ಕೋಟಿ ರೂಪಾಯಿ ಜುಲ್ಮಾನೆ ಹಾಕಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹೇಳಿರುವ ಪ್ರಕಾರ, ನಿಯಮಾವಳಿಗಳ ಪಾಲನೆಯಲ್ಲಿನ ಕೊರತೆಯಿಂದಾಗಿ ಈ ಕ್ರಮವನ್ನು ಕೈಗೊಳ್ಳಲಾಗಿದೆ. ಆದರೆ ಇದರಲ್ಲಿ ಯಾವುದೇ ವಹಿವಾಟಿನ ಸಿಂಧುತ್ವ ಅಥವಾ ಸಂಸ್ಥೆಯು ಗ್ರಾಹಕರ ಜತೆಗೆ ಮಾಡಿಕೊಂಡ ಒಪ್ಪಂದಕ್ಕೆ ಸಂಬಂಧಿಸಿದ ಸಂಗತಿಗಳು ಯಾವುದೂ ಇಲ್ಲ ಎಂದು ಸ್ಪಷ್ಟಪಡಿಸಲಾಗಿದೆ.

ಭಾರತ್ ಬಿಲ್ ಪೇಮೆಂಟ್ ಆಪರೇಟಿಂಗ್ ಯೂನಿಟ್ಸ್​ (BBPOUs) ನಿವ್ವಳ ಮೌಲ್ಯಕ್ಕೆ ಸಂಬಂಧಿಸಿದಂತೆ ನೀಡಿದ್ದ ನಿರ್ದೇಶನದ ಅನ್ವಯ ಸಂಸ್ಥೆಗಳು ಇಲ್ಲ ಎಂಬುದು ಆರ್​ಬಿಐ ಗಮನಕ್ಕೆ ಬಂದಿದೆ. ಆ ನಂತರದಲ್ಲಿ ನೋಟಿಸ್ ನೀಡಲಾಗಿದೆ.

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾವು ಆ ಸಂಸ್ಥೆಗಳ ಲಿಖಿತ ಪ್ರತಿಕ್ರಿಯೆ ಮತ್ತು ವೈಯಕ್ತಿಕವಾಗಿ ಅಹವಾಲು ಆಲಿಸುವಾಗ ಮೌಖಿಕ ಉತ್ತರವನ್ನು ಗಣನೆಗೆ ತೆಗೆದುಕೊಂಡಿದೆ ಮತ್ತು ಅಂತಿಮವಾಗಿ ಆರ್​ಬಿಐ ನಿರ್ದೇಶನಕ್ಕೆ ತಕ್ಕಂತೆ ನಡೆದುಕೊಂಡಿಲ್ಲ ಎಂಬ ಆರೋಪವನ್ನು ನಿಗದಿಪಡಿಸಿದೆ. ಅದಾದ ಮೇಲೆ ಹಣಕಾಸು ದಂಡವನ್ನು ಹಾಕಲಾಗಿದೆ.

ಇದನ್ನೂ ಓದಿ: SBI: ಸ್ಟೇಟ್​ ಬ್ಯಾಂಕ್​ ಆಫ್​ ಇಂಡಿಯಾಗೆ 1 ಕೋಟಿ ರೂ. ದಂಡ ವಿಧಿಸಿದ ಆರ್​ಬಿಐ

ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಇದ್ದಕ್ಕಿದ್ದಂತೆ ಜನರು, ಹಸುಗಳ ಮೇಲೆ ಕಾಡು ಕರಡಿ ದಾಳಿ; ವಿಡಿಯೋ ವೈರಲ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ಮೈಸೂರು ರಿಂಗ್ ರಸ್ತೆಯ ಪರಿಸ್ಥಿತಿ ಹೇಗಿದೆ? ವಿಡಿಯೋ ಮೂಲಕ ತಿಳಿಸಿದ ಅನಿರುದ್
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ನರಕ ಸದೃಶ್ಯವಾಗಿತ್ತು ಖಳನಟ ವಜ್ರಮುನಿ ಕೊನೆಯ ದಿನಗಳು
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಉತ್ತರಾಖಂಡದ ಜೋಶಿಮಠದಲ್ಲಿರುವ ಸೇನಾ ಶಿಬಿರದಲ್ಲಿ ಬೆಂಕಿ ಅವಘಡ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಪತಿ ಮತ್ತು ಮಾವನಿಂದ ಚಿತ್ರಹಿಂಸೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಬಳ್ಳಾರಿ ಗಲಭೆ: ಶಾಸಕ ಜನಾರ್ದನರೆಡ್ಡಿ ನಿವಾಸದಲ್ಲಿ ಮತ್ತೊಂದು ಬುಲೆಟ್ ಪತ್ತೆ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ಗಿಲ್ಲಿ-ಅಶ್ವಿನಿ ನಡುವೆ ಮತ್ತೆ ಜಗಳ, ಯೋಗ್ಯತೆ ಬಗ್ಗೆ ಮಾತು: ವಿಡಿಯೋ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ರಿವರ್ಸ್ ವೇಳೆ ನಿಯಂತ್ರಣ ತಪ್ಪಿದ ಕಾರು: ವಿಡಿಯೋ ನೋಡಿದ್ರೆ ಹೌಹಾರ್ತೀರಿ
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಬಳ್ಳಾರಿ ಘರ್ಷಣೆಯಲ್ಲಿ ಕೈ ಕಾರ್ಯಕರ್ತ ಬಲಿ: ಗಲಾಟೆ ಶುರುವಾಗಿದ್ದು ಹೇಗೆ?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?
ಸರ್ಕಾರಿ ಶಾಲಾ ಮಕ್ಕಳಿಗೆ ಶಿಕ್ಷಕರಿಂದ ಔತಣಕೂಟ: ವಿಶೇಷವೇನು?