AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ನಿರ್ದೇಶಕರಿಗೆ ಸಾಲ ಕೊಟ್ಟು ನಿಯಮ ಉಲ್ಲಂಘನೆ; ಟಿಡಿಸಿಸಿ ಬ್ಯಾಂಕ್​ಗೆ ದಂಡ ವಿಧಿಸಿದ ಆರ್​ಬಿಐ

TDCC Bank Fined by RBI: ತನ್ನ ಒಬ್ಬ ನಿರ್ದೇಶಕರಿಗೆ ಸಾಲ ಕೊಟ್ಟ ಕಾರಣಕ್ಕೆ ಥಾಣೆ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್​ಗೆ ಆರ್​ಬಿಐ 2 ಲಕ್ಷ ರೂ ದಂಡ ವಿಧಿಸಿದೆ. ಟಿಡಿಸಿಸಿ ಬ್ಯಾಂಕ್ 1949ರ ಬ್ಯಾಂಕಿಂಗ್ ರೆಗ್ಯುಲೇಶನ್ ಆ್ಯಕ್ಟ್​ನ ಸೆಕ್ಷನ್ 20 ಮತ್ತು 56ರ ನಿಯಮಗಳ ಉಲ್ಲಂಘನೆ ಮಾಡಿದೆ. ಟಿಡಿಸಿಸಿ ಬ್ಯಾಂಕ್​ನ ಹಣಕಾಸು ವಿವರವನ್ನು ನಬಾರ್ಡ್ ಪರಿಶೀಲನೆ ನಡೆಸಿದ ವೇಳೆ ಈ ಅಕ್ರಮ ಪತ್ತೆಯಾಗಿತ್ತು ಎಂದು ಆರ್​ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

RBI: ನಿರ್ದೇಶಕರಿಗೆ ಸಾಲ ಕೊಟ್ಟು ನಿಯಮ ಉಲ್ಲಂಘನೆ; ಟಿಡಿಸಿಸಿ ಬ್ಯಾಂಕ್​ಗೆ ದಂಡ ವಿಧಿಸಿದ ಆರ್​ಬಿಐ
ಆರ್​​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 24, 2023 | 10:47 AM

Share

ನವದೆಹಲಿ, ಡಿಸೆಂಬರ್ 24: ಮಹಾರಾಷ್ಟ್ರ ಮೂಲದ ಟಿಡಿಸಿಸಿ ಸಹಕಾರಿ ಬ್ಯಾಂಕ್ (TDCC Bank) ಮೇಲೆ ಆರ್​​ಬಿಐ ಲಕ್ಷ ರೂ ದಂಡ ವಿಧಿಸಿದೆ. ಬ್ಯಾಂಕ್​ನ ಒಬ್ಬ ನಿರ್ದೇಶಕರಿಗೆ ಸಾಲ ಕೊಟ್ಟಿದ್ದಕ್ಕೆ ಥಾಣೆ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಈ ಕ್ರಮ ಜರುಗಿಸಲಾಗಿದೆ. ಶುಕ್ರವಾರ (ಡಿ. 22) ಆರ್​ಬಿಐ ಈ ವಿಚಾರವನ್ನು ಬಹಿರಂಗಪಡಿಸಿದೆ. ಬ್ಯಾಂಕ್​ನ ಯಾವುದೇ ನಿರ್ದೇಶಕರಿಗೂ ಸಾಲ ಕೊಡುವಂತಿಲ್ಲ ಎಂಬುದು ಆರ್​ಬಿಐ ನಿಗದಿ ಮಾಡಿರುವ ನಿಯಮ.

ಟಿಡಿಸಿಸಿ ಬ್ಯಾಂಕ್ 1949ರ ಬ್ಯಾಂಕಿಂಗ್ ರೆಗ್ಯುಲೇಶನ್ ಕಾಯ್ದೆಯ ಸೆಕ್ಷನ್ 20 ಮತ್ತು 56ರ ನಿಯಮಗಳ ಉಲ್ಲಂಘನೆ ಮಾಡಿದೆ. ಅದಕ್ಕೆ 2 ಲಕ್ಷ ರೂ ದಂಡ ಹಾಕಿರುವುದಾಗಿ ಆರ್​ಬಿಐನ ಆದೇಶದಲ್ಲಿ ತಿಳಿಸಲಾಗಿದೆ. ನವೆಂಬರ್ 28ರಂದು ಆರ್​ಬಿಐನ ಈ ಆದೇಶ ಹೊರಟಿದೆ. ಮೊನ್ನೆ ಆರ್​ಬಿಐನ ಮುಖ್ಯ ಜನರಲ್ ಮ್ಯಾನೇಜರ್ ಯೋಗೇಶ್ ದಯಾಳ್ ಈ ಸಂಗತಿಯನ್ನು ಪತ್ರಿಕಾ ಪ್ರಕಟಣೆ ಮೂಲಕ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: Forex Rise: ಭಾರತದ ಫಾರೆಕ್ಸ್ ರಿಸರ್ವ್ಸ್ 616 ಬಿಲಿಯನ್ ಡಾಲರ್​ಗೆ ಏರಿಕೆ; ಕಳೆದ 20 ತಿಂಗಳ ಗರಿಷ್ಠ ಮಟ್ಟ

ಏನು ಆಗಿತ್ತು ಈ ಘಟನೆ?

2022ರ ಮಾರ್ಚ್ 31ರಂದು ಟಿಡಿಸಿಸಿ ಬ್ಯಾಂಕ್ ಹೊಂದಿದ್ದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಪರಿಶೀಲನೆ ನಡೆಸಿತ್ತು. ಇದರ ವರದಿ ಹಾಗೂ ಇತರ ಅಂಶಗಳನ್ನು ಗಮನಿಸಿದಾಗ ಟಿಡಿಸಿಸಿ ಬ್ಯಾಂಕ್ ತನ್ನ ಒಬ್ಬ ನಿರ್ದೇಶಕರಿಗೆ ಸಾಲ ಮಂಜೂರಾತಿ ಮಾಡಿರುವುದು ಬೆಳಕಿಗೆ ಬಂದಿತ್ತು.

ಸಾಲ ಕೊಟ್ಟಿರುವ ವಿಚಾರ ಗೊತ್ತಾದ ಬಳಿಕ ಟಿಡಿಸಿಸಿ ಬ್ಯಾಂಕ್​ಗೆ ಆರ್​ಬಿಐ ಶೋಕಾಸ್ ನೋಟೀಸ್ ಜಾರಿ ಮಾಡಿತ್ತು. ಇದಕ್ಕೆ ಬ್ಯಾಂಕ್ ಕೊಟ್ಟಿರುವ ಉತ್ತರ, ಹಾಗು ವ್ಯಕ್ತಿಗತ ವಿಚಾರಣೆ ವೇಳೆ ಮೌಖಿಕವಾಗಿ ತಿಳಿಸಿರುವ ವಿಚಾರವು ಸಹಕಾರಿ ಬ್ಯಾಂಕ್​ನಿಂದ ನಿಯಮ ಉಲ್ಲಂಘನೆ ಆಗಿರುವುದನ್ನು ಖಚಿತಪಡಿಸಿದೆ ಎಂದು ಆರ್​ಬಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sun, 24 December 23

Follow Us
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ಜಾಗತಿಕ ನಾಯಕರಿಂದ ಭಾರತದ ಸಾಂಪ್ರದಾಯಿಕ ಸಿರಿಧಾನ್ಯಗಳ ಮೆನುಗೆ ಮೆಚ್ಚುಗೆ
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ವಂದೇ ಮಾತರಂ ಗೀತೆ ವಿವಾದ: ಸರ್ಕಾರದ ಆದೇಶಕ್ಕೆ ಜನಾರ್ದನ ರೆಡ್ಡಿ ಸೆಡ್ಡು
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಸೆಪ್ಟೆಂಬರ್ 14 ರಿಂದ 20ರ ವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ವಿನಯ್ ಜತೆ ಜೋಡಿಯಾಗಿ ನಟಿಸಿ, ರಿಯಲ್ ಲೈಫ್​ನಲ್ಲಿ ಅಣ್ಣ ಎಂದು ಕರೆದಿದ್ದ ನಟಿ
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಹಾಸನದಲ್ಲಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ: ಗೃಹಿಣಿ ಸಾವು
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗಣಪತಿ ಮೂರ್ತಿ ಅನಾವರಣದ ವೇಳೆ ಅವಘಡ: ಶಾಸಕ ಗಣಿಗ ರವಿಕುಮಾರ್‌ಗೆ ಗಾಯ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಗೌರಿ-ಗಣೇಶ ಹಬ್ಬದ ಖರೀದಿ ಭರಾಟೆ: ಕೆ.ಆರ್​.ಮಾರ್ಕೆಟ್​​ನಲ್ಲಿ ಜನ ಸಾಗರ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಇಂದು ಈ ರಾಶಿಯವರು ಹಣಕಾಸಿನ ವಿಷಯದಲ್ಲಿ ಎಚ್ಚರದಿಂದಿರಿ
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಓಡಿಬಂದು ನಟ ಅಜಿತ್​​ನನ್ನು ತಬ್ಬಿಕೊಂಡ ತಮಿಳುನಾಡು ಸಿಎಂ ವಿಜಯ್
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು
ಆರ್ಯನ್ ಕಿಡ್ಸ್ ಗಾರ್ಡನ್ ಶಾಲೆಯಲ್ಲಿ ಕೃಷ್ಣ-ರಾಧೆಯಾಗಿ ಮಿಂಚಿದ ಪುಟಾಣಿಗಳು