AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ನಿರ್ದೇಶಕರಿಗೆ ಸಾಲ ಕೊಟ್ಟು ನಿಯಮ ಉಲ್ಲಂಘನೆ; ಟಿಡಿಸಿಸಿ ಬ್ಯಾಂಕ್​ಗೆ ದಂಡ ವಿಧಿಸಿದ ಆರ್​ಬಿಐ

TDCC Bank Fined by RBI: ತನ್ನ ಒಬ್ಬ ನಿರ್ದೇಶಕರಿಗೆ ಸಾಲ ಕೊಟ್ಟ ಕಾರಣಕ್ಕೆ ಥಾಣೆ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್​ಗೆ ಆರ್​ಬಿಐ 2 ಲಕ್ಷ ರೂ ದಂಡ ವಿಧಿಸಿದೆ. ಟಿಡಿಸಿಸಿ ಬ್ಯಾಂಕ್ 1949ರ ಬ್ಯಾಂಕಿಂಗ್ ರೆಗ್ಯುಲೇಶನ್ ಆ್ಯಕ್ಟ್​ನ ಸೆಕ್ಷನ್ 20 ಮತ್ತು 56ರ ನಿಯಮಗಳ ಉಲ್ಲಂಘನೆ ಮಾಡಿದೆ. ಟಿಡಿಸಿಸಿ ಬ್ಯಾಂಕ್​ನ ಹಣಕಾಸು ವಿವರವನ್ನು ನಬಾರ್ಡ್ ಪರಿಶೀಲನೆ ನಡೆಸಿದ ವೇಳೆ ಈ ಅಕ್ರಮ ಪತ್ತೆಯಾಗಿತ್ತು ಎಂದು ಆರ್​ಬಿಐ ಪ್ರಕಟಣೆಯಲ್ಲಿ ತಿಳಿಸಿದೆ.

RBI: ನಿರ್ದೇಶಕರಿಗೆ ಸಾಲ ಕೊಟ್ಟು ನಿಯಮ ಉಲ್ಲಂಘನೆ; ಟಿಡಿಸಿಸಿ ಬ್ಯಾಂಕ್​ಗೆ ದಂಡ ವಿಧಿಸಿದ ಆರ್​ಬಿಐ
ಆರ್​​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 24, 2023 | 10:47 AM

Share

ನವದೆಹಲಿ, ಡಿಸೆಂಬರ್ 24: ಮಹಾರಾಷ್ಟ್ರ ಮೂಲದ ಟಿಡಿಸಿಸಿ ಸಹಕಾರಿ ಬ್ಯಾಂಕ್ (TDCC Bank) ಮೇಲೆ ಆರ್​​ಬಿಐ ಲಕ್ಷ ರೂ ದಂಡ ವಿಧಿಸಿದೆ. ಬ್ಯಾಂಕ್​ನ ಒಬ್ಬ ನಿರ್ದೇಶಕರಿಗೆ ಸಾಲ ಕೊಟ್ಟಿದ್ದಕ್ಕೆ ಥಾಣೆ ಸೆಂಟ್ರಲ್ ಕೋ ಆಪರೇಟಿವ್ ಬ್ಯಾಂಕ್ ವಿರುದ್ಧ ಈ ಕ್ರಮ ಜರುಗಿಸಲಾಗಿದೆ. ಶುಕ್ರವಾರ (ಡಿ. 22) ಆರ್​ಬಿಐ ಈ ವಿಚಾರವನ್ನು ಬಹಿರಂಗಪಡಿಸಿದೆ. ಬ್ಯಾಂಕ್​ನ ಯಾವುದೇ ನಿರ್ದೇಶಕರಿಗೂ ಸಾಲ ಕೊಡುವಂತಿಲ್ಲ ಎಂಬುದು ಆರ್​ಬಿಐ ನಿಗದಿ ಮಾಡಿರುವ ನಿಯಮ.

ಟಿಡಿಸಿಸಿ ಬ್ಯಾಂಕ್ 1949ರ ಬ್ಯಾಂಕಿಂಗ್ ರೆಗ್ಯುಲೇಶನ್ ಕಾಯ್ದೆಯ ಸೆಕ್ಷನ್ 20 ಮತ್ತು 56ರ ನಿಯಮಗಳ ಉಲ್ಲಂಘನೆ ಮಾಡಿದೆ. ಅದಕ್ಕೆ 2 ಲಕ್ಷ ರೂ ದಂಡ ಹಾಕಿರುವುದಾಗಿ ಆರ್​ಬಿಐನ ಆದೇಶದಲ್ಲಿ ತಿಳಿಸಲಾಗಿದೆ. ನವೆಂಬರ್ 28ರಂದು ಆರ್​ಬಿಐನ ಈ ಆದೇಶ ಹೊರಟಿದೆ. ಮೊನ್ನೆ ಆರ್​ಬಿಐನ ಮುಖ್ಯ ಜನರಲ್ ಮ್ಯಾನೇಜರ್ ಯೋಗೇಶ್ ದಯಾಳ್ ಈ ಸಂಗತಿಯನ್ನು ಪತ್ರಿಕಾ ಪ್ರಕಟಣೆ ಮೂಲಕ ಬಹಿರಂಗಪಡಿಸಿದ್ದಾರೆ.

ಇದನ್ನೂ ಓದಿ: Forex Rise: ಭಾರತದ ಫಾರೆಕ್ಸ್ ರಿಸರ್ವ್ಸ್ 616 ಬಿಲಿಯನ್ ಡಾಲರ್​ಗೆ ಏರಿಕೆ; ಕಳೆದ 20 ತಿಂಗಳ ಗರಿಷ್ಠ ಮಟ್ಟ

ಏನು ಆಗಿತ್ತು ಈ ಘಟನೆ?

2022ರ ಮಾರ್ಚ್ 31ರಂದು ಟಿಡಿಸಿಸಿ ಬ್ಯಾಂಕ್ ಹೊಂದಿದ್ದ ಹಣಕಾಸು ಸ್ಥಿತಿಗೆ ಸಂಬಂಧಿಸಿದಂತೆ ರಾಷ್ಟ್ರೀಯ ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕ್ (ನಬಾರ್ಡ್) ಪರಿಶೀಲನೆ ನಡೆಸಿತ್ತು. ಇದರ ವರದಿ ಹಾಗೂ ಇತರ ಅಂಶಗಳನ್ನು ಗಮನಿಸಿದಾಗ ಟಿಡಿಸಿಸಿ ಬ್ಯಾಂಕ್ ತನ್ನ ಒಬ್ಬ ನಿರ್ದೇಶಕರಿಗೆ ಸಾಲ ಮಂಜೂರಾತಿ ಮಾಡಿರುವುದು ಬೆಳಕಿಗೆ ಬಂದಿತ್ತು.

ಸಾಲ ಕೊಟ್ಟಿರುವ ವಿಚಾರ ಗೊತ್ತಾದ ಬಳಿಕ ಟಿಡಿಸಿಸಿ ಬ್ಯಾಂಕ್​ಗೆ ಆರ್​ಬಿಐ ಶೋಕಾಸ್ ನೋಟೀಸ್ ಜಾರಿ ಮಾಡಿತ್ತು. ಇದಕ್ಕೆ ಬ್ಯಾಂಕ್ ಕೊಟ್ಟಿರುವ ಉತ್ತರ, ಹಾಗು ವ್ಯಕ್ತಿಗತ ವಿಚಾರಣೆ ವೇಳೆ ಮೌಖಿಕವಾಗಿ ತಿಳಿಸಿರುವ ವಿಚಾರವು ಸಹಕಾರಿ ಬ್ಯಾಂಕ್​ನಿಂದ ನಿಯಮ ಉಲ್ಲಂಘನೆ ಆಗಿರುವುದನ್ನು ಖಚಿತಪಡಿಸಿದೆ ಎಂದು ಆರ್​ಬಿಐ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:45 am, Sun, 24 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಸಚಿವರಾಗಿ ಪ್ರಮಾಣದ ಬೆನ್ನಲ್ಲೇ ತಂದೆ ಸಿದ್ದರಾಮಯ್ಯ ಆಶೀರ್ವಾದ ಪಡೆದ ಯತೀಂದ್ರ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆ ಶಿವಕುಮಾರ್ ಸಿಎಂ ಆಗಿದ್ದಕ್ಕೆ ತುಂಬಾ ಖುಷಿ ಆಗುತ್ತಿದೆ: ನಟಿ ರಮ್ಯಾ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಕೆಶಿ ಪದಗ್ರಹಣದ ಬೆನ್ನಲ್ಲೇ ವಿಧಾನಸೌಧದಲ್ಲಿ ಬದಲಾದ ಸಿಎಂ ಕಚೇರಿ ನಾಮಫಲಕ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಡಿಸಿಎಂ ಆಗಿ ಪರಮೇಶ್ವರ್ ಪ್ರಮಾಣವಚನ, ಇಲ್ಲಿದೆ ಇವರ ರಾಜಕೀಯ ಜರ್ನಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಸಂವಿಧಾನ ಹಿಡಿದು, ಅಜ್ಜಯ್ಯನ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದ ಡಿಕೆಶಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಕಾರಿನಲ್ಲಿ ಕುಳಿತೇ ಅಭಿಮಾನಿಗಳಿಗೆ ಫ್ಲೈಯಿಂಗ್ ಕಿಸ್ ಕೊಟ್ಟ ರಾಹುಲ್ ಗಾಂಧಿ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
ಡಿಕೆ ಶಿವಕುಮಾರ್ ಪ್ರಮಾಣ ವಚನಕ್ಕೆ ಖುಷಿಯಿಂದ ಆಗಮಿಸಿದ ನಟಿ ರಮ್ಯಾ: ವಿಡಿಯೋ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
Live: ಸಿಎಂ ಆಗಿ ಡಿಕೆ ಶಿವಕುಮಾರ್ ಪದಗ್ರಹಣ; ಲೈವ್​​ ನೋಡಿ
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಡಿಸಿಎಂ ಆಗಿ ಆಯ್ಕೆ ಬೆನ್ನಲ್ಲೇ ಪರಮೇಶ್ವರ್​​ ಫಸ್ಟ್​​ ರಿಯಾಕ್ಷನ್​​
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ
ಸಿಎಂ ಆಗುವ ಮುನ್ನವೇ ಡಿಕೆಶಿ ರಾಜಕೀಯ ತಂತ್ರಗಾರಿಕೆ