AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ 5.4 ಕೋಟಿ ರೂ ದಂಡ; ಆರ್​ಬಿಐನ ವಿವಿಧ ನಿಯಮಗಳ ಉಲ್ಲಂಘನೆ ಆರೋಪ

Paytm Payments Bank Faces Penalty: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಆರ್​ಬಿಐ ಪೆನಾಲ್ಟಿ ಹಾಕಿದೆ. ಕೆವೈಸಿ ಸೇರಿದಂತೆ ಕೆಲ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ 5.39 ಕೋಟಿ ರೂ ಮೊತ್ತದ ದಂಡ ಹಾಕಿರುವುದಾಗಿ ಆರ್​ಬಿಐ ಗುರುವಾರ ಹೇಳಿದೆ. ಆರ್​ಬಿಐನಿಂದ ನಿಗದಿಪಡಿಸಿದ ಆಡಿಟರ್​ಗಳು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ಕೆವೈಸಿ ಇತ್ಯಾದಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ನಿಯಮ ಉಲ್ಲಂಘನೆಗಳು ಬೆಳಕಿಗೆ ಬಂದಿವೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ 5.4 ಕೋಟಿ ರೂ ದಂಡ; ಆರ್​ಬಿಐನ ವಿವಿಧ ನಿಯಮಗಳ ಉಲ್ಲಂಘನೆ ಆರೋಪ
ಪೇಟಿಎಂ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 12, 2023 | 7:17 PM

ಮುಂಬೈ, ಅಕ್ಟೋಬರ್ 13: ಎರಡು ದಿನಗಳ ಹಿಂದೆ ವಿವಿಧ ಸಹಕಾರಿ ಬ್ಯಾಂಕುಗಳಿಗೆ ದಂಡ ವಿಧಿಸಿದ್ದ ಆರ್​ಬಿಐ ಇದೀಗ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಮೇಲೆ ಪೆನಾಲ್ಟಿ ಹಾಕಿದೆ. ಕೆವೈಸಿ ಸೇರಿದಂತೆ ಕೆಲ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ 5.39 ಕೋಟಿ ರೂ ಮೊತ್ತದ ದಂಡ ಹಾಕಿರುವುದಾಗಿ ಆರ್​ಬಿಐ ಗುರುವಾರ (ಅ. 13) ಹೇಳಿದೆ.

ಕೆವೈಸಿ ನಿಯಮಗಳಲ್ಲದೇ ಇನ್ನೂ ಕೆಲ ಸಂಗತಿಗಳಲ್ಲಿ ಪೇಟಿಎಂ ಬ್ಯಾಂಕ್ ತಪ್ಪೆಸಗಿರುವುದು ತಿಳಿದುಬಂದಿದೆ. ಪೇಟಿಎಂ ಬ್ಯಾಂಕ್ಸ್​ನ ಪರವಾನಿಗೆ ವಿಚಾರದಲ್ಲಿ ಆರ್​ಬಿಐನ ಮಾರ್ಗಸೂಚಿ ನಿಯಮಗಳ ಉಲ್ಲಂಘನೆಯಾಗಿದೆ. ಸೈಬರ್ ಸೆಕ್ಯೂರಿಟಿ ಫ್ರೇಮ್​ವರ್ಕ್ ನಿಯಮಗಳ ಉಲ್ಲಂಘನೆಯಾಗಿದೆ. ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್​ಗಳ ಸುರಕ್ಷತೆಯ ನಿಯಮಗಳಲ್ಲಿ ಉಲ್ಲಂಘನೆ ಆಗಿದೆ ಎಂಬುದು ಆರ್​ಬಿಐ ಪ್ರಕಟಣೆಯಿಂದ ಗೊತ್ತಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್​ನಲ್ಲಿ ಭಾರತದ ರೀಟೇಲ್ ಹಣದುಬ್ಬರ ಶೇ. 5.02ಕ್ಕೆ ಇಳಿಕೆ; 3 ತಿಂಗಳಲ್ಲೇ ಕನಿಷ್ಠ ದರ

ಆರ್​ಬಿಐನಿಂದ ನಿಗದಿಪಡಿಸಿದ ಆಡಿಟರ್​ಗಳು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ಕೆವೈಸಿ ಇತ್ಯಾದಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ನಿಯಮ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ 5 ಕೋಟಿ ರೂಗಿಂತ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.

ಅಕ್ಟೋಬರ್ 9ರಂದು ಆರ್​ಬಿಐ ದೇಶದ ವಿವಿಧೆಡೆ ಇರುವ ಐದು ಸಹಕಾರಿ ಬ್ಯಾಂಕುಗಳ ಮೇಲೂ ನಿಯಮ ಉಲ್ಲಂಘನೆಗಳ ಕಾರಣಕ್ಕೆ ದಂಡ ವಿಧಿಸಿತ್ತು. ಎಸ್​ಬಿಪಿಪಿ ಕೋ ಆಪರೇಟಿವ್ ಬ್ಯಾಂಕ್, ಸಹ್ಯಾದ್ರಿ ಸಹಕಾರಿ ಬ್ಯಾಂಕ್, ರಹೀಮತ್​ಪುರ್ ಸಹಕಾರಿ ಬ್ಯಾಂಕ್, ಗಾಧಿಂಗ್ಲಜ್ ಅರ್ಬನ್ ಕೋ ಆಪರೇಟಿಂವ್ ಬ್ಯಾಂಕ್, ಕಲ್ಯಾಣ್ ಜನತಾ ಸಹಕಾರಿ ಬ್ಯಾಂಕ್, ಈ ಐದು ಬ್ಯಾಂಕುಗಳು ಆರ್​ಬಿಐನಿಂದ ದಂಡ ಎದುರಿಸಿವೆ.

ಇದನ್ನೂ ಓದಿ: ಗಂಗಾನದಿಯ ನೀರು ಮತ್ತು ಪೂಜಾ ಸಾಮಗ್ರಿ ಮೇಲೆ ಶೇ. 18ರಷ್ಟು ಜಿಎಸ್​ಟಿ ಇದೆಯಾ? ಇಲ್ಲಿದೆ ಕೇಂದ್ರ ಸರ್ಕಾರ ಸ್ಪಷ್ಟನೆ

ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿರುವ ಈ ಸಹಕಾರಿ ಬ್ಯಾಂಕುಗಳಿಗೆ 1 ಲಕ್ಷ ರೂನಿಂದ ಹಿಡಿದು 13 ಲಕ್ಷ ರೂವರೆಗೆ ಆರ್​ಬಿಐ ದಂಡ ಹಾಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Thu, 12 October 23

ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಹತ್ಯೆಯಾದ ಯುವಕನ ತಾಯಿಯಿಂದ ಅಸ್ಪಷ್ಟ ಮಾಹಿತಿ!
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಪಾಕಿಸ್ತಾನಕ್ಕೆ ಭಾರತದಿಂದ ಚೆನಾಬ್ ನದಿ ನೀರು ಬಂದ್; ಒಣಗಿದ ಸಲಾಲ್ ಡ್ಯಾಂ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಜಿಂಕೆಯನ್ನ ಬೇಟೆಯಾಡಿ ಬಾಯಲ್ಲಿ ಹಿಡಿದ ಹುಲಿಯ ಅಪರೂಪದ ದೃಶ್ಯ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಅಖ್ನೂರ್​ ಬಳಿ ಬರಿದಾದ ಚೆನಾಬ್ ನದಿ, ಖಾಲಿ ನದಿಯಲ್ಲಿ ಸ್ಥಳೀಯರ ಓಡಾಟ
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಹರೀಶ್ ಪೂಂಜಾ ಸೀರಿಯಲ್ ಅಫೆಂಡರ್ ಹಾಗೆ ಗೋಚರಿಸಸುತ್ತಾರೆ: ದಿನೇಶ್ ಗುಂಡೂರಾವ್
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಭದ್ರತಾ ಸಿಬ್ಬಂದಿ ಮೇಲೆ ಕಾರು ಹತ್ತಿಸಿದ ಚಾಲಕ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಪೆಟ್ರೋಲ್​ ಹಾಕುವ ವಿಚಾರಕ್ಕೆ ಗಲಾಟೆ: ಅಟ್ಟಾಡಿಸಿ ಕೆಲಸಗಾರರ ಮೇಲೆ ಹಲ್ಲೆ
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಸದಾನಂದಗೌಡರು ಬುಲ್ಡೋಜರ್ ಬಳಸುವ ಬಗ್ಗೆ ಹೇಳಿದ್ದು ಗೊತ್ತಿಲ್ಲ: ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಕರ್ನಾಟಕದಿಂದ ಎಷ್ಟು ಪಾಕಿಸ್ತಾನೀಯರು ವಾಪಸ್? ಮಾಹಿತಿ ನೀಡಿದ ಪರಮೇಶ್ವರ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್
ಶಿವಾನಂದ ರಾಜೀನಾಮೆ ಸಲ್ಲಿಸಿರುವುದು ಕೇವಲ ನಾಟಕ ಮಾತ್ರ: ವಿಶ್ವನಾಥ್