AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ 5.4 ಕೋಟಿ ರೂ ದಂಡ; ಆರ್​ಬಿಐನ ವಿವಿಧ ನಿಯಮಗಳ ಉಲ್ಲಂಘನೆ ಆರೋಪ

Paytm Payments Bank Faces Penalty: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ ಆರ್​ಬಿಐ ಪೆನಾಲ್ಟಿ ಹಾಕಿದೆ. ಕೆವೈಸಿ ಸೇರಿದಂತೆ ಕೆಲ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ 5.39 ಕೋಟಿ ರೂ ಮೊತ್ತದ ದಂಡ ಹಾಕಿರುವುದಾಗಿ ಆರ್​ಬಿಐ ಗುರುವಾರ ಹೇಳಿದೆ. ಆರ್​ಬಿಐನಿಂದ ನಿಗದಿಪಡಿಸಿದ ಆಡಿಟರ್​ಗಳು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ಕೆವೈಸಿ ಇತ್ಯಾದಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ನಿಯಮ ಉಲ್ಲಂಘನೆಗಳು ಬೆಳಕಿಗೆ ಬಂದಿವೆ.

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ 5.4 ಕೋಟಿ ರೂ ದಂಡ; ಆರ್​ಬಿಐನ ವಿವಿಧ ನಿಯಮಗಳ ಉಲ್ಲಂಘನೆ ಆರೋಪ
ಪೇಟಿಎಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 12, 2023 | 7:17 PM

Share

ಮುಂಬೈ, ಅಕ್ಟೋಬರ್ 13: ಎರಡು ದಿನಗಳ ಹಿಂದೆ ವಿವಿಧ ಸಹಕಾರಿ ಬ್ಯಾಂಕುಗಳಿಗೆ ದಂಡ ವಿಧಿಸಿದ್ದ ಆರ್​ಬಿಐ ಇದೀಗ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಮೇಲೆ ಪೆನಾಲ್ಟಿ ಹಾಕಿದೆ. ಕೆವೈಸಿ ಸೇರಿದಂತೆ ಕೆಲ ನಿಯಮಗಳನ್ನು ಉಲ್ಲಂಘಿಸಿದ ಕಾರಣಕ್ಕೆ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಮೇಲೆ 5.39 ಕೋಟಿ ರೂ ಮೊತ್ತದ ದಂಡ ಹಾಕಿರುವುದಾಗಿ ಆರ್​ಬಿಐ ಗುರುವಾರ (ಅ. 13) ಹೇಳಿದೆ.

ಕೆವೈಸಿ ನಿಯಮಗಳಲ್ಲದೇ ಇನ್ನೂ ಕೆಲ ಸಂಗತಿಗಳಲ್ಲಿ ಪೇಟಿಎಂ ಬ್ಯಾಂಕ್ ತಪ್ಪೆಸಗಿರುವುದು ತಿಳಿದುಬಂದಿದೆ. ಪೇಟಿಎಂ ಬ್ಯಾಂಕ್ಸ್​ನ ಪರವಾನಿಗೆ ವಿಚಾರದಲ್ಲಿ ಆರ್​ಬಿಐನ ಮಾರ್ಗಸೂಚಿ ನಿಯಮಗಳ ಉಲ್ಲಂಘನೆಯಾಗಿದೆ. ಸೈಬರ್ ಸೆಕ್ಯೂರಿಟಿ ಫ್ರೇಮ್​ವರ್ಕ್ ನಿಯಮಗಳ ಉಲ್ಲಂಘನೆಯಾಗಿದೆ. ಮೊಬೈಲ್ ಬ್ಯಾಂಕಿಂಗ್ ಅಪ್ಲಿಕೇಶನ್​ಗಳ ಸುರಕ್ಷತೆಯ ನಿಯಮಗಳಲ್ಲಿ ಉಲ್ಲಂಘನೆ ಆಗಿದೆ ಎಂಬುದು ಆರ್​ಬಿಐ ಪ್ರಕಟಣೆಯಿಂದ ಗೊತ್ತಾಗಿದೆ.

ಇದನ್ನೂ ಓದಿ: ಸೆಪ್ಟೆಂಬರ್​ನಲ್ಲಿ ಭಾರತದ ರೀಟೇಲ್ ಹಣದುಬ್ಬರ ಶೇ. 5.02ಕ್ಕೆ ಇಳಿಕೆ; 3 ತಿಂಗಳಲ್ಲೇ ಕನಿಷ್ಠ ದರ

ಆರ್​ಬಿಐನಿಂದ ನಿಗದಿಪಡಿಸಿದ ಆಡಿಟರ್​ಗಳು ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನ ಕೆವೈಸಿ ಇತ್ಯಾದಿಯನ್ನು ಸಮಗ್ರವಾಗಿ ಪರಿಶೀಲಿಸಿದ ಬಳಿಕ ಈ ನಿಯಮ ಉಲ್ಲಂಘನೆಗಳು ಬೆಳಕಿಗೆ ಬಂದಿವೆ. ಈ ಹಿನ್ನೆಲೆಯಲ್ಲಿ 5 ಕೋಟಿ ರೂಗಿಂತ ಹೆಚ್ಚು ಮೊತ್ತದ ದಂಡ ವಿಧಿಸಲಾಗಿದೆ.

ಅಕ್ಟೋಬರ್ 9ರಂದು ಆರ್​ಬಿಐ ದೇಶದ ವಿವಿಧೆಡೆ ಇರುವ ಐದು ಸಹಕಾರಿ ಬ್ಯಾಂಕುಗಳ ಮೇಲೂ ನಿಯಮ ಉಲ್ಲಂಘನೆಗಳ ಕಾರಣಕ್ಕೆ ದಂಡ ವಿಧಿಸಿತ್ತು. ಎಸ್​ಬಿಪಿಪಿ ಕೋ ಆಪರೇಟಿವ್ ಬ್ಯಾಂಕ್, ಸಹ್ಯಾದ್ರಿ ಸಹಕಾರಿ ಬ್ಯಾಂಕ್, ರಹೀಮತ್​ಪುರ್ ಸಹಕಾರಿ ಬ್ಯಾಂಕ್, ಗಾಧಿಂಗ್ಲಜ್ ಅರ್ಬನ್ ಕೋ ಆಪರೇಟಿಂವ್ ಬ್ಯಾಂಕ್, ಕಲ್ಯಾಣ್ ಜನತಾ ಸಹಕಾರಿ ಬ್ಯಾಂಕ್, ಈ ಐದು ಬ್ಯಾಂಕುಗಳು ಆರ್​ಬಿಐನಿಂದ ದಂಡ ಎದುರಿಸಿವೆ.

ಇದನ್ನೂ ಓದಿ: ಗಂಗಾನದಿಯ ನೀರು ಮತ್ತು ಪೂಜಾ ಸಾಮಗ್ರಿ ಮೇಲೆ ಶೇ. 18ರಷ್ಟು ಜಿಎಸ್​ಟಿ ಇದೆಯಾ? ಇಲ್ಲಿದೆ ಕೇಂದ್ರ ಸರ್ಕಾರ ಸ್ಪಷ್ಟನೆ

ಮಹಾರಾಷ್ಟ್ರ ಮತ್ತು ಗುಜರಾತ್​ನಲ್ಲಿರುವ ಈ ಸಹಕಾರಿ ಬ್ಯಾಂಕುಗಳಿಗೆ 1 ಲಕ್ಷ ರೂನಿಂದ ಹಿಡಿದು 13 ಲಕ್ಷ ರೂವರೆಗೆ ಆರ್​ಬಿಐ ದಂಡ ಹಾಕಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 7:17 pm, Thu, 12 October 23

ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?
‘ಮಾರ್ಕ್’-‘45’ ಒಂದೇ ದಿನ ಬಿಡುಗಡೆ: ಸುದೀಪ್ ಹೇಳಿದ್ದೇನು?