AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Paytm: ಹೊಸ ಡೆಪಾಸಿಟ್ ಪಡೆಯುವಂತಿಲ್ಲ; ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ; ಪೇಟಿಎಂ ಆ್ಯಪ್ ಬಳಸುವಂತಿಲ್ಲವಾ?

RBI imposes restrictions on Paytm Payments Bank: ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಯಾವುದೇ ಹೊಸ ಖಾತೆ ರಚಿಸಲು ಮತ್ತು ಡೆಪಾಸಿಟ್ ಪಡೆಯುವಂತಿಲ್ಲ ಎಂದು ಆರ್​ಬಿಐ ನಿರ್ಬಂಧ ಹಾಕಿದೆ. ಪೇಟಿಎಂ ಬ್ಯಾಂಕ್​ನಲ್ಲಿ ಬ್ಯಾಂಕಿಂಗ್ ನಿಯಮಗಳ ಉಲ್ಲಂಘನೆಯಾಗಿರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ. ಆದರೆ ಪೇಟಿಎಂನ ಇತರ ಯುಪಿಐ ಸೇವೆಗಳಿಗೆ ಈ ನಿರ್ಬಂಧ ಅನ್ವಯ ಆಗುವುದಿಲ್ಲ.

Paytm: ಹೊಸ ಡೆಪಾಸಿಟ್ ಪಡೆಯುವಂತಿಲ್ಲ; ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಆರ್​ಬಿಐ ನಿರ್ಬಂಧ; ಪೇಟಿಎಂ ಆ್ಯಪ್ ಬಳಸುವಂತಿಲ್ಲವಾ?
ಪೇಟಿಎಂ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jan 31, 2024 | 6:12 PM

Share

ನವದೆಹಲಿ, ಜನವರಿ 31: ವಿವಿಧ ನಿಯಮಗಳನ್ನು ಉಲ್ಲಂಘಿಸಿರುವುದು ಬೆಳಕಿಗೆ ಬಂದ ಹಿನ್ನೆಲೆಯಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ (Paytm Payments Bank) ಮೇಲೆ ಆರ್​ಬಿಐ ಹಲವು ನಿರ್ಬಂಧಗಳನ್ನು ವಿಧಿಸಿದೆ. ಹೊಸ ಗ್ರಾಹಕರನ್ನು ಸ್ವೀಕರಿಸಬಾರದು; ಹೊಸ ಡೆಪಾಸಿಟ್ ಪಡೆಯಬಾರದು; ಫೆಬ್ರುವರಿ 29ರ ನಂತರ ಪೇಮೆಂಟ್ಸ್ ಬ್ಯಾಂಕ್ ಖಾತೆಗೆ ಜೋಡಿತವಾದ ವ್ಯಾಲಟ್, ಫಾಸ್​ಟ್ಯಾಗ್ ಇತ್ಯಾದಿ ಪ್ರೀಪೇಡ್ ಯಂತ್ರಗಳಿಗೆ (prepaid instruments) ಟಾಪಪ್ ಹಾಕಿಸುವಂತಿಲ್ಲ ಎಂದು ಆರ್​ಬಿಐ ನಿರ್ಬಂಧ ಹಾಕಿದೆ.

ಪೇಟಿಎಂ ಆ್ಯಪ್​ಗೂ ಇದಕ್ಕೂ ಸಂಬಂಧ ಇಲ್ಲ

ಆದರೆ, ಇದು ಪೇಟಿಎಂನ ಪೇಮೆಂಟ್ಸ್ ಬ್ಯಾಂಕ್​ಗೆ ಮಾತ್ರ ಹಾಕಲಾಗಿರುವ ನಿರ್ಬಂಧ. ಪೇಟಿಎಂ ಆ್ಯಪ್​ನಲ್ಲಿರುವ ಬೇರೆಲ್ಲಾ ಯುಪಿಐ ವಹಿವಾಟು ಸೇವೆಗಳನ್ನು ಪಡೆಯಬಹುದಾಗಿದೆ. ಪೇಟಿಎಂ ಸ್ಕ್ಯಾನ್ ಮಾಡಿ ಹಣ ಪಾವತಿಸಬಹುದು. ವಿದ್ಯುತ್, ನೀರು ಇತ್ಯಾದಿ ಬಿಲ್​ಗಳನ್ನು ಮಾಮೂಲಿಯಾಗಿ ನೀವು ಪಾವತಿಸಬಹುದು.

ಇದನ್ನೂ ಓದಿ: ಇಪಿಎಫ್​ಒದಿಂದ ನಿಮ್ಮ ಮೊಬೈಲ್​ಗೂ ಈ ಮೆಸೇಜ್ ಬಂದಿರಬೇಕು; ನಾರಿಶಕ್ತಿ ಪರೀಕ್ಷೆಯಾ ಇದು? ಮೆಸೇಜ್​ನಲ್ಲಿರೋ ಲಿಂಕ್ ಕ್ಲಿಕ್ ಮಾಡಿ ಫಾರ್ಮ್ ತುಂಬಿಸಿ

ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ಗೆ ಯಾಕೆ ಈ ನಿರ್ಬಂಧ?

ಹೊರಗಿನ ಆಡಿಟರ್​ಗಳು ಪೇಟಿಎಂ ಬ್ಯಾಂಕ್​ನಲ್ಲಿ ಆಡಿಟಿಂಗ್ ಮಾಡಿವೆ. ಬ್ಯಾಂಕಿಂಗ್ ನಿಯಮಗಳನ್ನು ಸರಿಯಾಗಿ ಪಾಲಿಸಲಾಗುತ್ತಿಲ್ಲ ಎಂಬ ವಿಚಾರ ಆಡಿಟಿಂಗ್​ನಿಂದ ಗೊತ್ತಾಗಿದೆ. ಎರಡು ವರ್ಷದ ಹಿಂದೆಯೇ ಇದು ನಡೆದಿತ್ತು. 2022ರ ಮಾರ್ಚ್ ತಿಂಗಳಲ್ಲಿ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್ ಹೊಸ ಗ್ರಾಹಕರನ್ನು ಹೊಂದಬಾರದು ಎಂದು ಆರ್​ಬಿಐ ನಿರ್ಬಂಧ ಹಾಕಿತ್ತು. ಇದೀಗ 2024ರ ಫೆಬ್ರುವರಿ 29ರ ನಂತರ ಪ್ರೀಪೇಡ್ ಇನ್ಸ್​ಟ್ರುಮೆಂಟ್ಸ್, ವ್ಯಾಲಟ್ಸ್, ಫಾಸ್​ಟ್ಯಾಗ್, ಎನ್​ಸಿಎಂಸಿ ಕಾರ್ಡ್ ಇತ್ಯಾದಿಗೆ ಹಣ ರವಾನಿಸುವಂತಿಲ್ಲ, ಟಾಪಪ್ ಹಾಕುವಂತಿಲ್ಲ ಎಂದು ಆರ್​ಬಿಐ ಆದೇಶಿಸಿದೆ.

ಅದರೆ, ಈ ಮೊದಲೇ ಪೇಟಿಎಂ ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಅಕೌಂಟ್ ಹೊಂದಿರುವವರ ಖಾತೆಗೆ ಕ್ಯಾಷ್​ಬ್ಯಾಕ್, ಬಡ್ಡಿ, ರೀಫಂಡ್ ಇತ್ಯಾದಿಯನ್ನು ಹಾಕಲು ಅಡ್ಡಿ ಇಲ್ಲ. ಪೇಮೆಂಟ್ಸ್ ಬ್ಯಾಂಕ್​ನಲ್ಲಿ ಖಾತೆ ಹೊಂದಿರುವವರು ತಮ್ಮ ಹಣವನ್ನು ಸಂಪೂರ್ಣ ವಿತ್​ಡ್ರಾ ಮಾಡಿಕೊಳ್ಳಲು ಯಾವುದೇ ಅಡ್ಡಿ ಆಗಬಾರದು ಎಂದೂ ಆರ್​ಬಿಐ ಸೂಚಿಸಿದೆ.

ಇದನ್ನೂ ಓದಿ: Infosys: ಇನ್ಫೋಸಿಸ್ ಸಂಸ್ಥೆಗೆ ಅಮೆರಿಕದ ಪ್ರಾಧಿಕಾರದಿಂದ ದಂಡ; ಶಾರ್ಟ್ ಪೇಮೆಂಟ್ ಕಾರಣ

ಹಾಗೆಯೇ, ಪೇಟಿಎಂ ಮಾಲೀಕ ಸಂಸ್ಥೆಯಾದ ಒನ್97 ಕಮ್ಯೂನಿಕೇಶನ್ಸ್ ಮತ್ತು ಪೇಟಿಎಂ ಪೇಮೆಂಟ್ಸ್ ಸರ್ವಿಸಸ್​ನ ನೋಡಲ್ ಅಕೌಂಟ್​​ಗಳನ್ನು ಫೆಬ್ರುವರಿ 29ರೊಳಗೆ ನಿಲ್ಲಿಸುವಂತೆಯೂ ರಿಸರ್ವ್ ಬ್ಯಾಂಕ್ ನಿರ್ದೇಶನ ನೀಡಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ