AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Repo Rate: ಆಗಸ್ಟ್​ನಲ್ಲಿ ಬಡ್ಡಿದರ ಕಡಿಮೆಗೊಳ್ಳುವ ನಿರೀಕ್ಷೆ; ಆರ್​ಬಿಐನ ಎಂಪಿಸಿ ಸಭೆ ಇವತ್ತಿಂದ; ಫೆ. 8ಕ್ಕೆ ನಿರ್ಧಾರ ಪ್ರಕಟ

SBI Research report on RBI MPC: ಭಾರತೀಯ ರಿಸರ್ವ್ ಬ್ಯಾಂಕ್ ಆಗಸ್ಟ್ ತಿಂಗಳಲ್ಲಿ ರೆಪೊ ದರ ಇಳಿಕೆ ಮಾಡಬಹುದು ಎಂದು ಎಸ್​ಬಿಐ ರಿಸರ್ಚ್ ಟೀಮ್​ನ ವರದಿಯಲ್ಲಿ ಅಂದಾಜಿಸಲಾಗಿದೆ. ಆರ್​ಬಿಐನ ಎಂಪಿಸಿ ಸಭೆ ಇಂದು ಫೆ. 6ರಂದು ಆರಂಭವಾಗಿದ್ದು, 8ರಂದು ಗವರ್ನರ್ ಶಕ್ತಿಕಾಂತ ದಾಸ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಲಿದ್ದಾರೆ. ಆರ್​ಬಿಐನ ಮಾನಿಟರಿ ಪಾಲಿಸಿ ಸಮಿತಿಯಲ್ಲಿ ಗವರ್ನರ್ ಸೇರಿ ಆರು ಮಂದಿ ಸದಸ್ಯರಿದ್ದಾರೆ. ಇದರಲ್ಲಿ ಆರ್​ಬಿಐಗೆ ಸೇರದ ಮೂವರು ಸದಸ್ಯರಿದ್ದಾರೆ.

Repo Rate: ಆಗಸ್ಟ್​ನಲ್ಲಿ ಬಡ್ಡಿದರ ಕಡಿಮೆಗೊಳ್ಳುವ ನಿರೀಕ್ಷೆ; ಆರ್​ಬಿಐನ ಎಂಪಿಸಿ ಸಭೆ ಇವತ್ತಿಂದ; ಫೆ. 8ಕ್ಕೆ ನಿರ್ಧಾರ ಪ್ರಕಟ
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 06, 2024 | 12:10 PM

Share

ನವದೆಹಲಿ, ಫೆಬ್ರುವರಿ 6: ಭಾರತೀಯ ರಿಸರ್ವ್ ಬ್ಯಾಂಕ್​ನ ಮಾನಿಟರಿ ಪಾಲಿಸಿ ಕಮಿಟಿ ಸಭೆ (RBI MPC meeting) ಇವತ್ತು ಆರಂಭಗೊಂಡಿದೆ. ರೆಪೋ ದರ (repo rate) ಅಥವಾ ಬಡ್ಡಿದರದ ಬಗ್ಗೆ ಯಾವ ನಿರ್ಧಾರ ಕೈಗೊಳ್ಳಬಹುದು ಎಂಬುದು ಎಲ್ಲರಿಗೂ ಎಂಪಿಸಿ ಸಭೆಯಲ್ಲಿ ನೆಟ್ಟಿರುವ ಕುತೂಹಲವಾಗಿದೆ. ಎಸ್​ಬಿಐ ರಿಸರ್ಚ್ ವರದಿ ಪ್ರಕಾರ ಈ ಬಾರಿಯ ಎಂಪಿಸಿ ಸಭೆಯಲ್ಲಿ ರೆಪೋ ದರ ಬದಲಾಯಿಸುವ ಸಾಧ್ಯತೆ ಇಲ್ಲ. ಈ ಬಾರಿ ಮಾತ್ರವಲ್ಲ, ಜೂನ್​ವರೆಗೆ ರೆಪೋ ದರ ಯಥಾಸ್ಥಿತಿಯಲ್ಲಿ ಮುಂದುವರಿಯಬಹುದು. ಅಂದರೆ, ಈ ಬಾರಿಯೂ ಸೇರಿ ಇನ್ನು ಮೂರು ಬಾರಿಯೂ ರೆಪೋ ದರ ಶೇ. 6.5ರಲ್ಲೇ ಮುಂದುವರಿಯಬಹುದು. ಆಗಸ್ಟ್ ತಿಂಗಳಲ್ಲಿ ನಡೆಯುವ ಎಂಪಿಸಿ ಸಭೆಯಲ್ಲಿ ಬಡ್ಡಿದರವನ್ನು ಇಳಿಸಲು ಆರ್​ಬಿಐ ಆಲೋಚಿಸಬಹುದು ಎಂದು ಎಸ್​ಬಿಐ ರಿಸರ್ಚ್​ನ ವರದಿಯಲ್ಲಿ (SBI research report) ಅಂದಾಜು ಮಾಡಲಾಗಿದೆ.

ಭಾರತೀಯ ರಿಸರ್ವ್ ಬ್ಯಾಂಕ್​ನ ಎಂಪಿಸಿ ಸಭೆ ಇವತ್ತು ಆರಂಭವಾಗುತ್ತದೆ. ಫೆ. 8, ಗುರುವಾರದಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಈ ಸಭೆಯಲ್ಲಿ ಚರ್ಚಿತವಾದ ವಿಷಯಗಳು ಮತ್ತು ಸಭೆಯ ನಿರ್ಧಾರಗಳನ್ನು ಪತ್ರಿಕಾಗೋಷ್ಠಿ ಮೂಲಕ ಬಹಿರಂಗಪಡಿಸಲಿದ್ದಾರೆ. ರೆಪೋ ದರ ಇತ್ಯಾದಿ ಬಗ್ಗೆ ನಿರ್ಧಾರ ಪ್ರಕಟವಾಗಲಿದೆ. ಹಾಗೆಯೇ, ಜಿಡಿಪಿ ಬಗ್ಗೆ ಪರಿಷ್ಕೃತ ಅಂದಾಜು, ಭವಿಷ್ಯದ ಆರ್ಥಿಕ ಬೆಳವಣಿಗೆ ಸಾಧ್ಯತೆ, ಹಣದುಬ್ಬರ ಪರಿಸ್ಥಿತಿ ಇತ್ಯಾದಿ ಬಗ್ಗೆ ಎಂಪಿಸಿ ಸಭೆಯಲ್ಲಿ ಚರ್ಚೆಗಳಾಗಲಿವೆ.

ಇದನ್ನೂ ಓದಿ: ಇಂಡಸ್​ಇಂಡ್ ಷೇರು ಖರೀದಿಸಲು ಎಚ್​ಡಿಎಫ್​ಸಿಗೆ ಸಿಕ್ತು ಆರ್​ಬಿಐ ಅನುಮತಿ; ಷೇರುದಾರರದ್ದು ಇಲ್ಲವಾ ಸಮ್ಮತಿ?

ಏನಿದು ರೆಪೋ ದರ?

ರೆಪೋ ದರ ಎಂದರೆ ಆರ್​ಬಿಐನ ಬಡ್ಡಿದರ. ವಾಣಿಜ್ಯ ಬ್ಯಾಂಕುಗಳು ಆರ್​ಬಿಐನಿಂದ ಪಡೆಯುವ ಸಾಲಕ್ಕೆ ನೀಡಬೇಕಾದ ಬಡ್ಡಿ ಇದು. ಬ್ಯಾಂಕುಗಳ ಬಡ್ಡಿದರ ಪರಿಷ್ಕರಣೆಗೆ ರೆಪೋ ದರ ಆಧಾರವಾಗಿರುತ್ತದೆ. ಹೀಗಾಗಿ, ರೆಪೋ ದರ ಬಗ್ಗೆ ಆರ್​ಬಿಐ ಮಾಡುವ ಘೋಷಣೆಯತ್ತ ಎಲ್ಲರ ಚಿತ್ತ ನೆಟ್ಟಿರುತ್ತದೆ.

ಬಡ್ಡಿದರ ಹೆಚ್ಚಿನ ಮಟ್ಟದಲ್ಲಿ ಇದ್ದರೆ ಆರ್ಥಿಕ ಬೆಳವಣಿಗೆಗೆ ಹಿನ್ನಡೆ ಆಗುತ್ತದೆ. ಹೀಗಾಗಿ, ಆರ್​ಬಿಐ ಬಡ್ಡಿದರ ಕಡಿಮೆ ಮಾಡಬಹುದು ಎಂಬ ನಿರೀಕ್ಷೆ ಇದ್ದದ್ದು ಹೌದು. ಆದರೆ, ಅಮೆರಿಕದ ಆರ್ಥಿಕ ಪರಿಸ್ಥಿತಿ ಮತ್ತು ಅಲ್ಲಿನ ವೇತನ ಹೆಚ್ಚಳ ಇತ್ಯಾದಿಯಿಂದಾಗಿ ಆರ್​ಬಿಐ ತನ್ನ ಬಡ್ಡಿದರ ಕಡಿತದ ಆಲೋಚನೆಯನ್ನು ಇನ್ನಷ್ಟು ಕಾಲ ಮುಂದಕ್ಕೆ ಹಾಕಬಹುದು. ಎಸ್​ಬಿಐ ರಿಸರ್ಚ್ ರಿಪೋರ್ಟ್ ಇದೇ ಅಭಿಪ್ರಾಯ ವ್ಯಕ್ತಪಡಿಸಿದೆ.

ಇದನ್ನೂ ಓದಿ: ಪ್ಯಾನ್-ಆಧಾರ್ ಲಿಂಕ್ ವಿಳಂಬ: ಸರ್ಕಾರ ಸಂಗ್ರಹಿಸಿದ ದಂಡದ ಮೊತ್ತ 600 ಕೋಟಿ ರೂ

ಆಹಾರ ಮತ್ತು ಇಂಧನ ಹೊರತಾದ ಮುಖ್ಯ ಹಣದುಬ್ಬರ 2021 ಮತ್ತು 2022ರಲ್ಲಿ ಹೆಚ್ಚಿನ ಮಟ್ಟದಲ್ಲಿ (ಶೇ. 6) ಇತ್ತು. 2023ರಲ್ಲಿ ಇದು ಶೇ. 5ಕ್ಕೆ ಇಳಿದಿದೆ. 2023-24ರ ಹಣಕಾಸು ವರ್ಷದಲ್ಲಿ ರೀಟೇಲ್ ಹಣದುಬ್ಬರ ಶೇ. 5.4ರಷ್ಟು ಇರಬಹುದು. 2024-25ರಲ್ಲಿ ಈ ಹಣದುಬ್ಬರ ಶೇ. 4.6ರಿಂದ ಶೇ. 4.8ರಷ್ಟಿರಬಹುದು ಎಂದು ಎಸ್​ಬಿಐನ ತಜ್ಞರು ಹೇಳಿದ್ದಾರೆ.

ಆರ್​ಬಿಐನ ಎಂಪಿಸಿ ಸಭೆಯಲ್ಲಿ ಈ ಹಣದುಬ್ಬರ, ಜಿಡಿಪಿ ಇತ್ಯಾದಿ ವಿಚಾರಗಳು ಚರ್ಚೆಯಾಗುತ್ತವೆ. ಗವರ್ನರ್ ಶಕ್ತಿಕಾಂತ ದಾಸ್ ಸೇರಿ ಆರು ಮಂದಿ ಸದಸ್ಯರು ಈ ಮಾನಿಟರಿ ಪಾಲಿಸಿ ಕಮಿಟಿಯಲ್ಲಿ ಇದ್ದಾರೆ. ಈ ಆರು ಮಂದಿ ಸಾಕಷ್ಟು ಚರ್ಚೆಗಳನ್ನು ಮಾಡಿ ನಿರ್ಧಾರಗಳನ್ನು ಕೈಗೊಳ್ಳಲಿದ್ದಾರೆ. ಫೆಬ್ರುವರಿ 8ರಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬೆಳಗ್ಗೆ 10 ಗಂಟೆಗೆ ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ