AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Repo Rate Hike: ಆರ್​ಬಿಐ ಮತ್ತೆ ರೆಪೊ ದರ ಹೆಚ್ಚಿಸುವ ಸಾಧ್ಯತೆ; ಕಾರಣ ಇಲ್ಲಿದೆ

ರೂಪಾಯಿ ಮೌಲ್ಯ ಕುಸಿತ ಮತ್ತು ಅಮೆರಿಕದ ಬಡ್ಡಿ ದರದ ಜತೆಗಿನ ವ್ಯತ್ಯಾಸದ ಬಗ್ಗೆಯೂ ಆರ್​ಬಿಐ ಗಮನಹರಿಸಲಿದೆ. ರೆಪೊ ದರವನ್ನು ಶೇಕಡಾ 6.75ಕ್ಕೆ ನಿಗದಿಪಡಿಸುವ ಸಾಧ್ಯತೆ ಶೇಕಡಾ 60ರಷ್ಟಿದೆ ಎಂದು ಅರುಣ್ ಬನ್ಸಾಲ್ ಹೇಳಿದ್ದಾರೆ.

Repo Rate Hike: ಆರ್​ಬಿಐ ಮತ್ತೆ ರೆಪೊ ದರ ಹೆಚ್ಚಿಸುವ ಸಾಧ್ಯತೆ; ಕಾರಣ ಇಲ್ಲಿದೆ
RBI repo rate hike Best time to book your fixed deposits FDs know interest rates here
TV9 Web
| Edited By: |

Updated on:Dec 22, 2022 | 12:15 PM

Share

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಮುಂದಿನ ವರ್ಷ ಹಣಕಾಸು ನೀತಿಯಲ್ಲಿ ಮತ್ತೆ ರೆಪೊ ದರ (Repo Rate) ಹೆಚ್ಚಳ ಮಾಡುವ ಸಾಧ್ಯತೆ ಇದೆ ಎನ್ನಲಾಗಿದೆ. ಹಣದುಬ್ಬರ (inflation) ಪ್ರಮಾಣ ತೀವ್ರವಾಗಿ ಏರಿಕೆಯಾಗಿರುವುದರಿಂದ ಅಮೆರಿಕದ ಫೆಡರಲ್ ಬ್ಯಾಂಕ್ (Federal Bank) ಬಡ್ಡಿ ದರ ಹೆಚ್ಚಿಸುವ ಸಾಧ್ಯತೆ ಬಹಳ ಹೆಚ್ಚಾಗಿದೆ. ಇದನ್ನೇ ಆರ್​ಬಿಐ ಕೂಡ ಅನುಸರಿಸುವ ಸಾಧ್ಯತೆ ಇದೆ. 50 ಮೂಲಾಂಶದಷ್ಟು ಹೆಚ್ಚಳ ಮಾಡಿ ಶೇಕಡಾ 6.75ಕ್ಕೆ ನಿಗದಿಪಡಿಸುವ ಸಾಧ್ಯತೆ ಇದೆ ಎನ್ನಲಾಗಿದೆ. ಪ್ರಮುಖ ಹಣದುಬ್ಬರ ಶೇಕಡಾ 6ಕ್ಕಿಂತ ಕೆಳಗೆ ಇರುವಂತೆ ನೋಡಿಕೊಳ್ಳುವತ್ತ ಆರ್​ಬಿಐ ಮುಖ್ಯವಾಗಿ ಗಮನಹರಿಸಲಿದೆ. ಹಣದುಬ್ಬರಕ್ಕೆ ಸಂಬಂಧಿಸಿದ ಇತರ ಕೆಲವು ಅಂಶಗಳು ಕೂಡ ಏರಿಕೆ ಕಂಡಿವೆ. ಹೀಗಾಗಿ ಹಣದುಬ್ಬರವು ಆರ್​ಬಿಐನ ಸಹನೆಯ ಮಿತಿಯ ಕೆಳಗೆ ಬಂದಿದೆ ಎಂದು ಈಗಲೇ ಹೇಳುವುದು ಸರಿಯಾಗದು ಎಂದು ಐಡಿಬಿಐ ಬ್ಯಾಂಕ್​ ಕಾರ್ಯನಿರ್ವಾಹಕ ನಿರ್ದೇಶಕ ಅರುಣ್ ಬನ್ಸಾಲ್ ‘ಪಿಟಿಐ’ ಸುದ್ದಿಸಂಸ್ಥೆಗೆ ನೀಡಿದ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ರೂಪಾಯಿ ಮೌಲ್ಯ ಕುಸಿತ ಮತ್ತು ಅಮೆರಿಕದ ಬಡ್ಡಿ ದರದ ಜತೆಗಿನ ವ್ಯತ್ಯಾಸದ ಬಗ್ಗೆಯೂ ಆರ್​ಬಿಐ ಗಮನಹರಿಸಲಿದೆ. ರೆಪೊ ದರವನ್ನು ಶೇಕಡಾ 6.75ಕ್ಕೆ ನಿಗದಿಪಡಿಸುವ ಸಾಧ್ಯತೆ ಶೇಕಡಾ 60ರಷ್ಟಿದೆ ಎಂದು ಅರುಣ್ ಬನ್ಸಾಲ್ ಹೇಳಿದ್ದಾರೆ. ಅಮೆರಿಕದ ಫೆಡರಲ್ ಬ್ಯಾಂಕ್ 2023ರಲ್ಲಿ ಬಡ್ಡಿ ದರವನ್ನು ಶೇಕಡಾ 5ಕ್ಕಿಂತ ಮೇಲ್ಮಟ್ಟಕ್ಕೆ ಹೆಚ್ಚಿಸುವ ಸಾಧ್ಯತೆ ಇದೆ. ಇದು ಭಾರತದ ಕೇಂದ್ರೀಯ ಬ್ಯಾಂಕ್ ಮೇಲೂ ಬಡ್ಡಿ ದರ ಹೆಚ್ಚಿಸುವಂತೆ ಪ್ರಭಾವ ಬೀರಲಿದೆ ಎಂದು ಅವರು ಹೇಳಿದ್ದಾರೆ.

ಹಣದುಬ್ಬರ ಶೇ 4ಕ್ಕೆ ಇಳಿಸುವುದೇ ಗುರಿ; ಶಕ್ತಿಕಾಂತ ದಾಸ್

ಹಣದುಬ್ಬರ ಪ್ರಮಾಣವನ್ನು ಮತ್ತು ಒಟ್ಟಾರೆ ಬೆಳವಣಿಗೆ ಮೇಲೆ ನಿಗಾ ಇರಿಸಲಾಗಿದೆ. ಹಣದುಬ್ಬರ ಪ್ರಮಾಣವನ್ನು ಶೇಕಡಾ 4ರ ಮಟ್ಟಕ್ಕೆ ಬರುವಂತೆ ನೋಡಿಕೊಳ್ಳುವುದು ನಮ್ಮ ಗುರಿಯಾಗಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಬುಧವಾರ ಹೇಳಿದ್ದರು. ಹಣದುಬ್ಬರ ಕಡಿಮೆ ಮಾಡುವ ನಿಟ್ಟಿನಲ್ಲಿ ಹಣಕಾಸು ನೀತಿಯಲ್ಲಿ ಮತ್ತಷ್ಟು ಕ್ರಮಗಳನ್ನು ಕೈಗೊಳ್ಳಬೇಕಿದೆ. ಇದರಿಂದ ದೇಶದ ಆರ್ಥಿಕತೆಯ ಮಧ್ಯಮ ಅವಧಿಯ ಬೆಳವಣಿಗೆ ಉತ್ತಮಗೊಳ್ಳಲಿದೆ ಎಂದು ಅವರು ಹೇಳಿದ್ದಾರೆ. ಈ ಮೂಲಕ ಅವರು ಮುಂದಿನ ಹಣಕಾಸು ನೀತಿಯಲ್ಲಿ ಮತ್ತಷ್ಟು ಕ್ರಮ ಕೈಗೊಳ್ಳುವ ಸುಳಿವು ನೀಡಿದ್ದಾರೆ. ಮುಂದಿನ ಹಣಕಾಸು ನೀತಿ ಸಮಿತಿ ಸಭೆ ಫೆಬ್ರವರಿಯಲ್ಲಿ ನಡೆಯಲಿದೆ.

ಇದನ್ನೂ ಓದಿ: Retail Inflation: ಕೊನೆಗೂ ಆರ್​ಬಿಐ ಸಹನೆಯ ಮಟ್ಟಕ್ಕೆ ಚಿಲ್ಲರೆ ಹಣದುಬ್ಬರ; ಶೇ 5.88ಕ್ಕೆ ಇಳಿಕೆ

ರೆಪೊ ಹೆಚ್ಚಳದ ವೇಗ ತಗ್ಗಿಸುವ ಸುಳಿವು ನೀಡಿದ್ದ ಆರ್​ಬಿಐ

ಡಿಸೆಂಬರ್​ 7ರಂದು 35 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸುವ ಮೂಲಕ ಆರ್​ಬಿಐ ದರ ಹೆಚ್ಚಳದ ವೇಗವನ್ನು ತಗ್ಗಿಸುವ ಸುಳಿವು ನೀಡಿತ್ತು. ರೆಪೊ ದರವನ್ನು ಶೇಕಡಾ 6.25ಕ್ಕೆ ನಿಗದಿಪಡಿಸಿತ್ತು. ಅದಕ್ಕಿಂತ ಹಿಂದಿನ ಹಣಕಾಸು ನೀತಿಗಳನ್ನು ಪ್ರಕಟಿಸುವಾಗಲೆಲ್ಲ 50 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿ, ಒಟ್ಟು 225 ಮೂಲಾಂಶ ಹೆಚ್ಚಳ ಮಾಡಿತ್ತು. ಪರಿಣಾಮವಾಗಿ ಬ್ಯಾಂಕ್​ಗಳು ಸಾಲದ ಮೇಲಿನ ಬಡ್ಡಿ ದರ ಮತ್ತು ವಿವಿಧ ಠೇವಣಿಗಳ ದರವನ್ನು ಹೆಚ್ಚಿಸಿವೆ. ಚಿಲ್ಲರೆ ಹಣದುಬ್ಬರ ನವೆಂಬರ್​ನಲ್ಲಿ ಶೇಕಡಾ 5.88ಕ್ಕೆ ಇಳಿಕೆಯಾಗಿ ಆರ್​​ಬಿಐ ಸಹನೆಯ ಮಟ್ಟಕ್ಕೆ ಬಂದಿತ್ತು. ಹೀಗಾಗಿ ಮುಂದಿನ ಹಣಕಾಸು ನೀತಿ ಸಭೆಯ ಬಳಿಕ ಆರ್​ಬಿಐ ರೆಪೊಮ ದರ ಹೆಚ್ಚಿಸುವ ಸಾಧ್ಯತೆ ಕಡಿಮೆ ಇದೆ ಎನ್ನಲಾಗಿತ್ತು. ಆದರೆ, ಇದೀಗ ಹಣದುಬ್ಬರ ಪ್ರಮಾಣವನ್ನು 4ಕ್ಕೆ ತರುವ ನಿಟ್ಟಿನಲ್ಲಿ ಶ್ರಮಿಸುವುದಾಗಿ ಆರ್​ಬಿಐ ಗವರ್ನರ್ ಹೇಳಿರುವುದು ರೆಪೊ ದರ ಹೆಚ್ಚಳದ ಸುಳಿವು ನೀಡಿದಂತಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 10:37 am, Thu, 22 December 22

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ