Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐನಿಂದ 25 ಮೂಲಾಂಕಗಳಷ್ಟು ಬಡ್ಡಿದರ ಕಡಿತದ ನಿರೀಕ್ಷೆ; ಮುಂದಿನ ಕ್ವಾರ್ಟರ್​ನಲ್ಲೂ ಮತ್ತೊಂದು ಸುತ್ತಿನ ಕ್ರಮ ಸಾಧ್ಯತೆ

RBI MPC meeting expectations: ಫೆಬ್ರುವರಿ 5ರಿಂದ 7ರವರೆಗೆ ನಡೆಯುವ ಆರ್​ಬಿಐ ಹಣಕಾಸು ನೀತಿ ಸಮಿತಿ ಸಭೆಯಲ್ಲಿ ರಿಪೋ ದರ ಅಥವಾ ಬಡ್ಡಿದರ ಕಡಿತಗೊಳಿಸಬಹುದು ಎನ್ನಲಾಗಿದೆ. ರಾಯ್ಟರ್ಸ್, ಎಕನಾಮಿಕ್ ಟೈಮ್ಸ್ ಇತ್ಯಾದಿ ಸಂಸ್ಥೆಗಳು ನಡೆಸಿದ ಆರ್ಥಿಕ ತಜ್ಞರ ಪೋಲಿಂಗ್​ನಲ್ಲಿ ಈ ಅನಿಸಿಕೆ ವ್ಯಕ್ತವಾಗಿದೆ. ಆರ್ಥಿಕತೆಗೆ ಪುಷ್ಟಿ ಕೊಡಲು ಆರ್​ಬಿಐ ಬಡ್ಡಿದರ ಕಡಿಮೆ ಮಾಡುವುದು ಅಗತ್ಯ ಎನಿಸಬಹುದು ಎನ್ನುವ ಅಭಿಪ್ರಾಯ ಇದೆ.

ಆರ್​ಬಿಐನಿಂದ 25 ಮೂಲಾಂಕಗಳಷ್ಟು ಬಡ್ಡಿದರ ಕಡಿತದ ನಿರೀಕ್ಷೆ; ಮುಂದಿನ ಕ್ವಾರ್ಟರ್​ನಲ್ಲೂ ಮತ್ತೊಂದು ಸುತ್ತಿನ ಕ್ರಮ ಸಾಧ್ಯತೆ
ಆರ್​ಬಿಐ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 03, 2025 | 11:58 AM

ನವದೆಹಲಿ, ಫೆಬ್ರುವರಿ 3: ಬಜೆಟ್ ಬಳಿಕ ಈಗ ಎಲ್ಲರ ಚಿತ್ತ ಆರ್​ಬಿಐನತ್ತ ನೆಟ್ಟಿದೆ. ಬುಧವಾರದಿಂದ (ಫೆ. 5) ಮೂರು ದಿನಗಳ ಕಾಲ ಆರ್​ಬಿಐನ ಎಂಪಿಸಿ ಸಭೆ ನಡೆಯಲಿದೆ. ಈ ಸಭೆಯಲ್ಲಿ ಬಡ್ಡಿದರ ಕಡಿತಗೊಳಿಸುವ ನಿರ್ಧಾರ ತೆಗೆದುಕೊಳ್ಳಲಾಗುತ್ತದೋ ಇಲ್ಲವೋ ಎಂಬುದು ಎಲ್ಲರಿಗೂ ಇರುವ ಕುತೂಹಲವಾಗಿದೆ. ವಿವಿಧ ಆರ್ಥಿಕ ತಜ್ಞರ ಪ್ರಕಾರ ಈ ಬಾರಿಯ ಎಂಪಿಸಿ ಸಭೆಯಲ್ಲಿ ಬಡ್ಡಿದರ ಕಡಿತಗೊಳಿಸುವ ಸಾಧ್ಯತೆ ದಟ್ಟವಾಗಿದೆ. ವಿವಿಧ ಸಂಸ್ಥೆಗಳು ನಡೆಸಿದ ಪೋಲಿಂಗ್​ನಲ್ಲಿ ಬಡ್ಡಿದರ 25 ಮೂಲಾಂಕಗಳಷ್ಟು ಕಡಿಮೆಗೊಳಿಸಬಹುದು ಎನ್ನುವ ಅಭಿಪ್ರಾಯವೇ ಬಂದಿದೆ. ಶೇ. 6.50 ಇರುವ ಬಡ್ಡಿದರ ಶೇ. 6.25ಕ್ಕೆ ಇಳಿಯಬಹುದು. ಕಳೆದ ನಾಲ್ಕೈದು ವರ್ಷದಲ್ಲಿ ಇದೇ ಮೊದಲ ಬಾರಿಗೆ ಬಡ್ಡಿ ದರ ಇಳಿಸಿದಂತಾಗುತ್ತದೆ.

ಆರ್​ಬಿಐನ ಮಾನಿಟರಿ ಪಾಲಿಸಿ ಕಮಿಟಿಯ ಸಭೆ ಫೆಬ್ರುವರಿ 5ರಂದು ಆರಂಭವಾಗಿ 7ಕ್ಕೆ ಮುಗಿಯುತ್ತದೆ. ಫೆಬ್ರುವರಿ 7, ಶುಕ್ರವಾರದಂದು ಬೆಳಗ್ಗೆ 10 ಗಂಟೆಗೆ ಆರ್​​ಬಿಐನ ನೂತನ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ಹಿಂದಿನ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಅವರು ಹಣದುಬ್ಬರ ಮತ್ತು ಬಡ್ಡಿದರ ವಿಚಾರದಲ್ಲಿ ಬಹಳ ಕಟ್ಟುನಿಟ್ಟಾಗಿದ್ದರು. ಹೊಸ ಗವರ್ನರ್ ಅವರು ನಿರ್ಧಾರಗಳ ವಿಚಾರದಲ್ಲಿ ತುಸು ಉದಾರವಾಗಿರುತ್ತಾರೆ ಎನ್ನಲಾಗಿದೆ. ಹೀಗಾಗಿ, ಈ ಎಂಪಿಸಿ ಸಭೆಯಲ್ಲಿ ಬಡ್ಡಿದರ ಕಡಿತಗೊಳ್ಳುವ ಸಾಧ್ಯತೆ ದಟ್ಟವಾಗಿದೆ. ಹಾಗೆಯೇ, ಮುಂದಿನ ಕ್ವಾರ್ಟರ್​ನಲ್ಲಿ ಮತ್ತೊಂದು ಸುತ್ತಿನ ದರಕಡಿತ ಆಗುವ ಸಾಧ್ಯತೆಯೂ ಇದೆ ಎಂದು ರಾಯ್ಟರ್ಸ್ ಪೋಲ್​ನಲ್ಲಿ ಆರ್ಥಿಕ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ: ಬಜೆಟ್ ದಿನ ಕೈಕೊಟ್ಟ ವಿದೇಶೀ ಹೂಡಿಕೆದಾರರು; ಕೈ ಹಿಡಿದ ದೇಶೀ ಹೂಡಿಕೆದಾರರು

ಇತ್ತೀಚಿನ ದಿನಗಳಲ್ಲಿ ದೇಶದ ಬ್ಯಾಂಕಿಂಗ್ ಸಿಸ್ಟಂಗೆ ಸಾಕಷ್ಟು ಹಣದ ಹರಿವು ಆಗುವ ರೀತಿಯಲ್ಲಿ ಆರ್​ಬಿಐ ಕ್ರಮ ಕೈಗೊಂಡಿದೆ. ಇದು ಬಡ್ಡಿದರ ಕಡಿತಕ್ಕೆ ಆರ್​ಬಿಐ ಸಜ್ಜು ಮಾಡಿರುವ ವೇದಿಕೆ ಎನ್ನಲಾಗಿದೆ. ಹೀಗಾಗಿ, ದರಕಡಿತದ ನಿರೀಕ್ಷೆ ಈ ಬಾರಿ ಹೆಚ್ಚಿದೆ.

ರಿಪೋ ದರ ಕಡಿಮೆ ಮಾಡಲು ಇರುವ ಮತ್ತೊಂದು ಕಾರಣ ಎಂದರೆ ಆರ್ಥಿಕತೆಯ ಮಂದ ಬೆಳವಣಿಗೆ. ಮೂರನೇ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 5.4ರಷ್ಟು ಮಾತ್ರವೇ ಬೆಳವಣಿಗೆ ಕಂಡಿದೆ. ಇದು ವೃದ್ಧಿಯಾಗಬೇಕಾದರೆ ಬಡ್ಡಿದರ ಕಡಿತ ಇತ್ಯಾದಿ ಪೂರಕ ಕ್ರಮಗಳ ಅವಶ್ಯಕತೆ ಇದೆ. ಇದೊಂದು ಒತ್ತಡ ಸದ್ಯ ಆರ್​ಬಿಐ ಮೇಲೆ ಬಲವಾಗಿದೆ.

ಇದನ್ನೂ ಓದಿ: Tariff war: ಅಮೆರಿಕ ವರ್ಸಸ್ ಕೆನಡಾ, ಮೆಕ್ಸಿಕೋ ಚೀನಾ ತೆರಿಗೆ ಯುದ್ಧ; ಭಾರತಕ್ಕಿದೆ ಲಾಭ

ಆರ್​ಬಿಐಗೆ ಬಡ್ಡಿದರ ಕಡಿತ ಮಾಡುವ ನಿರ್ಧಾರಕ್ಕೆ ಅಡ್ಡಿಯಾಗಿರುವುದು ಹಣದುಬ್ಬರ. ಈ ಹಣದುಬ್ಬರವನ್ನು ಶೇ. 4ಕ್ಕೆ ತಂದು ನಿಲ್ಲಿಸುವ ಆರ್​​ಬಿಐ ಗುರಿ ಸದ್ಯಕ್ಕೆ ಸಾಕಾರಗೊಂಡಿಲ್ಲ. ಹಣದುಬ್ಬರ ಶೇ. 5ರ ಆಸುಪಾಸಿನಲ್ಲಿ ಗಿರಕಿ ಹೊಡೆಯುತ್ತಿದೆ. ಆದರೆ, ಮುಂಬರುವ ದಿನಗಳಲ್ಲಿ ಬೆಲೆ ಏರಿಕೆ ಪ್ರಮಾಣ ತಗ್ಗುವ ಸಾಧ್ಯತೆ ಇದ್ದು, ಹಣದುಬ್ಬರವೂ ತಹಬದಿಗೆ ಬರಬಹುದು ಎನ್ನುವ ಆಶಾಭಾವನೆ ಇದೆ. ಇದೇನಾದರೂ ನಿಜವಾದಲ್ಲಿ ಆರ್​ಬಿಐ ಯಾವ ಮುಲಾಜೂ ಇಲ್ಲದೇ ಬಡ್ಡಿದರ ಕಡಿತಗೊಳಿಸಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರು ಮೈಸೂರು ಎಕ್ಸ್​ಪ್ರೆಸ್ ವೇ: ಕಾರಿನ ಮೇಲೆ ಹತ್ತಿದ ಮತ್ತೊಂದು ಕಾರು!
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
ಬೆಂಗಳೂರಿನ ಅರಮನೆ ಮೈದಾನದಲ್ಲಿ ಅಗ್ನಿ ಅವಘಡ
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
Video: ತ್ರಿವೇಣಿ ಸಂಗಮದಲ್ಲಿ ತಾನು ಮುಳುಗೇಳುವ ಬದಲು ಮೊಬೈಲ್ ಮುಳುಗಿಸಿದ ಯು
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಹಾವೇರಿ: ದನದ ಕೊಟ್ಟಿಗೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ವಸತಿ ನಿಲಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
ಮದುವೆ ಬಳಿಕ ಮೊದಲ ಬಾರಿಗೆ ಪ್ರತಿಕ್ರಿಯೆ ನೀಡಿದ ನಟ ಡಾಲಿ ಧನಂಜಯ
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
Video: ಮದುವೆ ಮನೆಗೆ ಕುದುರೆ ಮೇಲೆ ಬಂದ ವರ, ಅಲ್ಲೇ ಕುಸಿದು ಸಾವು
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ಬಿಮ್ಸ್​​ನ ಟ್ರಾಮಾ ಕೇರ್ ಸೆಂಟರ್​ನಲ್ಲಿ ಮೊಬೈಲ್ ಟಾರ್ಚ್​ನಲ್ಲಿ ಚಿಕಿತ್ಸೆ
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ದೆಹಲಿ ರೈಲ್ವೆ ನಿಲ್ದಾಣದಲ್ಲಾದ ಕಾಲ್ತುಳಿತದ ಬಳಿಕ ಅಲ್ಲಿನ ಅವಸ್ಥೆ ಹೇಗಿದೆ?
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಧನಂಜಯ ಕಟ್ಟಿದ ತಾಳಿ ಕಣ್ಣಿಗೆ ಒತ್ತಿಕೊಂಡ ಧನ್ಯತಾ; ಇದು ಭಾವುಕ ಕ್ಷಣ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ
ಮೆರಿಕದಿಂದ ಅಮೃತಸರಕ್ಕೆ ಬಂದಿಳಿದ 116 ಅಕ್ರಮ ವಲಸಿಗರನ್ನು ಹೊತ್ತ ವಿಮಾನ