AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರೆಪೋ ದರದಲ್ಲಿ ಬದಲಾವಣೆ ಇಲ್ಲ; ಯಥಾಸ್ಥಿತಿ ಮುಂದುವರಿಸಲು ಆರ್​ಬಿಐ ನಿರ್ಧಾರ

RBI Governor Shaktikanta Das Announcement: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಬಡ್ಡಿದರಲ್ಲಿ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿದೆ. ರೆಪೋ ದರ ಶೇ. 6.5ರಲ್ಲಿ ಮುಂದುವರಿಯಲಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದರು.

ರೆಪೋ ದರದಲ್ಲಿ ಬದಲಾವಣೆ ಇಲ್ಲ; ಯಥಾಸ್ಥಿತಿ ಮುಂದುವರಿಸಲು ಆರ್​ಬಿಐ ನಿರ್ಧಾರ
ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Aug 10, 2023 | 11:15 AM

ನವದೆಹಲಿ, ಆಗಸ್ಟ್ 10: ನಿರೀಕ್ಷೆಯಂತೆ ಆರ್​ಬಿಐ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಆರ್​ಬಿಐನ ಬಡ್ಡಿದರ ಶೇ. 6.50ರಲ್ಲೇ ಮುಂದುವರಿಯಲಿದೆ. ಆಗಸ್ಟ್ 8ರಿಂದ ನಡೆದಿದ್ದ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿ (ಮಾನಿಟರಿ ಪಾಲಿಸಿ ಕಮಿಟಿ) ಸಭೆ ಇಂದು ಮುಕ್ತಾಯಗೊಂಡ ಬೆನ್ನಲ್ಲೇ ಅದರ ಗವರ್ನರ್ ಶಕ್ತಿಕಾಂತ ದಾಸ್ ಆ ಸಭೆಯ ನಿರ್ಧಾರವನ್ನು ಪ್ರಕಟಿಸಿದ್ದಾರೆ. ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್, ರೆಪೋ ದರದ ಯಥಾಸ್ಥಿತಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ರಿವರ್ಸ್ ರೆಪೋ ಇತ್ಯಾದಿ ಇತರ ದರಗಳಲ್ಲೂ ಯಾವುದೇ ವ್ಯತ್ಯಯವಾಗಿಲ್ಲ. 2023-24ರ ಹಣಕಾಸು ವರ್ಷದಲ್ಲಿ ಭಾರತದ ಜಿಡಿಪಿ ಶೇ. 6.5ರಷ್ಟು ಬೆಳೆಯಬಹುದು ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ. ಹಾಗೆಯೇ, ಹಣದುಬ್ಬರ ಶೇ. 5.625ರಷ್ಟು ಇರಬಹುದು ಎಂಬುದು ಅವರ ಅಂದಾಜು.

ಏನಿದು ರೆಪೋ ದರ?

ರೆಪೋ ಎಂದರೆ ರೀಪರ್ಚೇಸಿಂಗ್ ಆಪ್ಷನ್. ಅಂದರೆ ಮರುಖರೀದಿ ಆಯ್ಕೆ. ಬ್ಯಾಂಕುಗಳಿಗೆ ತುರ್ತು ಅಗತ್ಯಬಿದ್ದಾಗ ಅಥವಾ ಫಂಡಿಂಗ್ ಕೊರತೆ ಇದ್ದಾಗ ಆರ್​ಬಿಐನಿಂದ ಸಾಲ ಪಡೆಯುತ್ತವೆ. ಈ ಸಾಲಕ್ಕೆ ಆರ್​ಬಿಐ ವಿಧಿಸುವ ಬಡ್ಡಿಯೇ ರೆಪೋ ದರ. ರೆಪೋ ದರವನ್ನು ಆರ್​​ಬಿಐನ ಬಡ್ಡಿದರ ಎಂದೂ ಕರೆಯಲಾಗುತ್ತದೆ.

ಇನ್ನು, ರಿವರ್ಸ್ ರಿಪೋ ಎಂಬುದು ಇದರ ತಿರುವುಮುರುವು. ಬ್ಯಾಂಕುಗಳು ತಮ್ಮಲ್ಲಿರುವ ಹೆಚ್ಚುವರಿ ಹಣವನ್ನು ಬೇಕಾದರೆ ಆರ್​ಬಿಐನಲ್ಲಿ ಠೇವಣಿಯಾಗಿ ಇರಿಸಬಹುದು. ಇದಕ್ಕೆ ಆರ್​ಬಿಐ ನೀಡುವ ಬಡ್ಡಿದರವೇ ರಿವರ್ಸ್ ರೆಪೋ.

ಇದನ್ನೂ ಓದಿ: ಆರ್ಥಿಕ ಹಿಂಜರಿತವಾದರೆ ಷೇರುಮಾರುಕಟ್ಟೆಗೆ ಏನಾಗುತ್ತೆ? ಷೇರುಪೇಟೆ ಕುಸಿದರೂ ನಿಮ್ಮ ಹೂಡಿಕೆ ಹಣ ಭದ್ರವಾಗಿಸುವುದು ಹೇಗೆ?

ಆರ್​ಬಿಐ ಬಡ್ಡಿದರ ಹೆಚ್ಚಿಸಿದರೆ ಬ್ಯಾಂಕುಗಳು ಅದಕ್ಕೆ ಅನುಗುಣವಾಗಿ ತಮ್ಮ ಗ್ರಾಹಕರಿಗೆ ಅದರ ಲಾಭ ಅಥವಾ ನಷ್ಟವನ್ನು ವರ್ಗಾಯಿಸಬಹುದು. ಆದರೆ, ಅದು ಬ್ಯಾಂಕುಗಳ ಆಯ್ಕೆ.

ಹಣದುಬ್ಬರ ಎಷ್ಟಾಗಬಹುದು?

ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರ ಪ್ರಕಾರ, ಭಾರತದಲ್ಲಿ ಈ ಹಣಕಾಸು ವರ್ಷದಲ್ಲಿ (2023-24) ಸಿಪಿಐ ಹಣದುಬ್ಬರ ಶೇ. 5.5 ಆಗಬಹುದು. ಕಳೆದ ಬಾರಿ ನಡೆದಿದ್ದ ಸಭೆಯಲ್ಲಿ ಮಾಡಲಾಗಿದ್ದ ಅಂದಾಜು ಪ್ರಕಾರ ಈ ಹಣಕಾಸುವ ವರ್ಷದಲ್ಲಿ ಹಣದುಬ್ಬರ ಶೇ. 5.1ರಷ್ಟು ಇರಬಹುದು ಎನ್ನಲಾಗಿತ್ತು. ಈಗ ಅಂದಾಜನ್ನು ಪರಿಷ್ಕರಿಸಿ, ಹಣದುಬ್ಬರ ಇನ್ನಷ್ಟು ಏರಿಕೆಯನ್ನು ಆರ್​ಬಿಐ ನಿರೀಕ್ಷಿಸಿದೆ. ಮುಂದಿನ ಹಣಕಾಸು ವರ್ಷದಲ್ಲಿ (2024-25) ಹಣದುಬ್ಬರ ಶೇ. 5.2ರಷ್ಟಿರಬಹುದು ಎಂದು ಅಂದಾಜು ಮಾಡಲಾಗಿದೆ.

ಆರ್​ಬಿಐ ಹಣದುಬ್ಬರ ಸದ್ಯ ಉತ್ತಮ ಸ್ಥಿತಿಯಲ್ಲಿದೆ. ಈ ಬಾರಿ ಮುಂಗಾರು ಉತ್ತಮವಾಗಿರುವುದರಿಂದ ಆಹಾರ ಕೊರತೆ ಎದುರಾಗದು. ಆದರೆ, ಹೆಡ್​ಲೈನ್ ಇನ್​ಫ್ಲೇಶನ್ ಸದ್ಯೋಭವಿಷ್ಯದಲ್ಲಿ ಏರಿಕೆ ಆಗಬಹುದು ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ.

ಇದನ್ನೂ ಓದಿ: Explainer: ಜಗತ್ತು ಹಣದುಬ್ಬರದಿಂದ ತತ್ತರಿಸಿದರೆ ಚೀನಾಗೆ ಹಣದುಬ್ಬರಕುಸಿತದ ತಲೆನೋವು; ಏನಿದು ಡೀಫ್ಲೇಶನ್? ಆರ್ಥಿಕತೆಯ ಮೇಲೇನು ಪರಿಣಾಮ?

2023-24ರ ಹಣಕಾಸು ವರ್ಷಕ್ಕೆ ಹಣದುಬ್ಬರದ ತ್ರೈಮಾಸಿಕ ಅಂದಾಜು

ಕ್ವಾರ್ಟರ್ 1: 5.4%

ಕ್ವಾರ್ಟರ್ 2: 6.2%

ಕ್ವಾರ್ಟರ್ 3: 5.7%

ಕ್ವಾರ್ಟರ್ 4: 5.2%

ಶೇ. 6.5ರಷ್ಟು ಜಿಡಿಪಿ ಬೆಳೆಯುವ ಅಂದಾಜು

ಪ್ರಸಕ್ತ ಹಣಕಾಸು ವರ್ಷದಲ್ಲಿ ಭಾರತದ ಆರ್ಥಿಕತೆ ಶೇ. 6.5ರಷ್ಟು ಬೆಳೆಯಬಹುದು ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ಎಂಪಿಸಿ ಸಭೆಯ ಅಂದಾಜನ್ನು ಪ್ರಕಟಿಸಿದ್ದಾರೆ. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಗರಿಷ್ಠ ದರದಲ್ಲಿ ಬೆಳೆದರೆ ಕೊನೆಯ ಕ್ವಾರ್ಟರ್ ತುಸು ದುರ್ಬಲ ಬೆಳವಣಿಗೆ ಕಾಣಲಿದೆ.

ಇದನ್ನೂ ಓದಿ: ಬಲಿಷ್ಠ ಬ್ಯಾಂಕ್; ಲಾಭದ ಓಟದಲ್ಲಿ ರಿಲಾಯನ್ಸ್ ಸಾಮ್ರಾಜ್ಯವನ್ನೇ ಹಿಂದಿಕ್ಕಿದ ಎಸ್​ಬಿಐ; ಎರಡು ದಶಕಗಳಲ್ಲಿ ಇದು ಎರಡನೇ ಸಲ

ಜಿಡಿಪಿ ದರ ಅಂದಾಜು (2023-24ರಲ್ಲಿ)

ಒಟ್ಟು ಜಿಡಿಪಿ ದರ: ಶೇ. 6.5

ಕ್ವಾರ್ಟರ್ 1: 8.0%

ಕ್ವಾರ್ಟರ್ 2: 6.5%

ಕ್ವಾರ್ಟರ್ 3: 6.0%

ಕ್ವಾರ್ಟರ್ 4: 5.7%

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:09 am, Thu, 10 August 23

ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ರಾಜಣ್ಣ ಹೇಳಿದ್ದೊಂದು, ಮಾಧ್ಯಮಗಳು ಅರ್ಥಮಾಡಿಕೊಂಡಿದ್ದು ಮತ್ತೊಂದು: ಸಿಎಂ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಸಚಿವರಾದ ಮಹದೇವಪ್ಪ ಮತ್ತು ಶಿವರಾಜ್ ತಂಗಡಿಗಿಯಿಂದಲೂ ಮಾಲಾರ್ಪಣೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಬದಲಾಗಲಿದೆ ಕರ್ನಾಟಕ ಪೊಲೀಸ್ ಟೋಪಿ! ನೆರೆರಾಜ್ಯಗಳ ಪೊಲೀಸ್ ಕ್ಯಾಪ್ ಪರಿಶೀಲನೆ
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಕೆಂಪೇಗೌಡ ಜಯಂತಿಯಂದು ಇಲ್ಲಿನ ಪ್ರತಿಮೆಗೆ ಮಾಲಾರ್ಪಣೆ: ಶಿವಕುಮಾರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ಸೆಪ್ಟೆಂಬರ್ ಕ್ರಾಂತಿ ಬಗ್ಗೆ ರಾಜಣ್ಣಗೆ ಸುಳಿವು ಇರಬಹುದು: ಪರಮೇಶ್ವರ್
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ವಿಐಪಿಗಳೆಂದು ಹೇಳಿಕೊಂಡು ಯಾರ‍್ಯಾರೋ ದೇವಿಯ ದರ್ಶನಕ್ಕೆ ನುಗ್ಗುತ್ತಿದ್ದಾರೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್