AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Monetary Policy: ಕೆವೈಸಿಯಿಂದ ಹಿಡಿದು ರೀಟೇಲ್ ಡೈರೆಕ್ಟ್​ವರೆಗೆ ಆರ್​ಬಿಐನಿಂದ ಮೂರು ಮಹತ್ವದ ಗ್ರಾಹಕಕೇಂದ್ರಿತ ಕ್ರಮಗಳ ಘೋಷಣೆ

RBI announces 3 consumer centric steps announced: ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಬುಧವಾರ ಎಂಪಿಸಿ ಸಭೆಯ ನಿರ್ಧಾರ ಪ್ರಕಟಿಸಿದ್ದಾರೆ. ಪಿಎಂ ಜನ್ ಧನ್ ಯೋಜನೆಗಳಲ್ಲಿ ಶುರುವಾದ ಬ್ಯಾಂಕ್ ಖಾತೆಗಳಿಗೆ ಮತ್ತೊಮ್ಮೆ ಕೆವೈಸಿ ಪಡೆಯಲು ಬ್ಯಾಂಕುಗಳೇ ಜನರ ಸಮೀಪ ಹೋಗಲಿವೆ. ಮೃತ ಬ್ಯಾಂಕ್ ಗ್ರಾಹಕರ ಹಣಕ್ಕೆ ಸಲ್ಲಿಸುವ ಕ್ಲೇಮ್ ಅನ್ನು ಸೆಟಲ್ಮೆಂಟ್ ಮಾಡುವ ಕ್ರಮ ಸರಳಗೊಳಿಸಲಾಗಿದೆ.

RBI Monetary Policy: ಕೆವೈಸಿಯಿಂದ ಹಿಡಿದು ರೀಟೇಲ್ ಡೈರೆಕ್ಟ್​ವರೆಗೆ ಆರ್​ಬಿಐನಿಂದ ಮೂರು ಮಹತ್ವದ ಗ್ರಾಹಕಕೇಂದ್ರಿತ ಕ್ರಮಗಳ ಘೋಷಣೆ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Aug 06, 2025 | 11:26 AM

Share

ನವದೆಹಲಿ, ಆಗಸ್ಟ್ 6: ಭಾರತೀಯ ರಿಸರ್ವ್ ಬ್ಯಾಂಕ್ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಪ್ರಕಟಿಸಿದ ಎಂಪಿಸಿ ಸಭೆ (RBI MPC meeting) ನಿರ್ಧಾರಗಳಲ್ಲಿ ಕೆಲ ಗ್ರಾಹಕ ಕೇಂದ್ರಿತ ಕ್ರಮಗಳೂ (consumer centric steps) ಒಳಗೊಂಡಿವೆ. ಗ್ರಾಹಕರ ಅನುಕೂಲತೆ, ಹಣಕಾಸು ಒಳಗೊಳ್ಳುವಿಕೆಯನ್ನು ಗಮನದಲ್ಲಿಟ್ಟುಕೊಂಡು ಕ್ರಮಗಳನ್ನು ರೂಪಿಸಲಾಗಿದೆ ಎಂದು ಮಲ್ಹೋತ್ರಾ ತಿಳಿಸಿದ್ದಾರೆ. ಮೃತ ಗ್ರಾಹಕರ ಅಕೌಂಟ್​ಗಳನ್ನು ಅವರ ವಾರಸುದಾರರಿಗೆ ಸೆಟಲ್ಮೆಂಟ್ ಮಾಡುವ ಪ್ರಕ್ರಿಯೆ ಸರಳಗೊಳಿಸಿರುವುದೂ ಈ ಕ್ರಮಗಳಲ್ಲಿ ಒಳಗೊಳ್ಳಲಾಗಿದೆ.

ಜನರ ಬಳಿಗೇ ಹೋಗಿ ಪುನರ್​ಕೆವೈಸಿ ಪಡೆಯುವ ವ್ಯವಸ್ಥೆ

ಪಿಎಂ ಜನ್ ಧನ್ ಯೋಜನೆ ಶುರುವಾಗಿ 10 ವರ್ಷ ಆಗಿದೆ. ಈ ಸ್ಕೀಮ್ ಅಡಿ ಶುರುವಾದ ಹೆಚ್ಚಿನ ಬ್ಯಾಂಕ್ ಅಕೌಂಟ್​ಗಳಿಗೆ ಮತ್ತೊಮ್ಮೆ ಕೆವೈಸಿ ಪಡೆಯಬೇಕಿದೆ. ಇದಕ್ಕಾಗಿ, ಪಂಚಾಯತ್ ಮಟ್ಟದಲ್ಲಿ ಬ್ಯಾಂಕುಗಳು ಜುಲೈ 1ರಿಂದ ಸೆಪ್ಟೆಂಬರ್ 30ರವರೆಗೆ ಶಿಬಿರಗಳನ್ನು ನಡೆಸಲಿವೆ. ಇಲ್ಲಿ ಬ್ಯಾಂಕ್ ಖಾತೆದಾರರಿಗೆ ಮರು-ಕೆವೈಸಿ ಪ್ರಕ್ರಿಯೆಯಲ್ಲಿ ನೆರವು ನೀಡಲಾಗುತ್ತದೆ. ಹಾಗೆಯೇ, ಮೈಕ್ರೋ ಇನ್ಷೂರೆನ್ಸ್, ಪೆನ್ಷನ್ ಸ್ಕೀಮ್ ಇತ್ಯಾದಿ ಸಂಬಂಧಿತ ಸೇವೆ ಹಾಗೂ ಮಾಹಿತಿಯನ್ನೂ ಈ ಶಿಬಿರಗಳಲ್ಲಿ ನೀಡಲಾಗುತ್ತದೆ ಎಂದು ಆರ್​ಬಿಐ ಗವರ್ನರ್ ತಿಳಿಸಿದ್ದಾರೆ.

ಮೃತ ಗ್ರಾಹಕರ ಬ್ಯಾಂಕ್ ಹಣಕ್ಕೆ ಕ್ಲೇಮ್ ಸಲ್ಲಿಸುವುದು ಸರಳ

ಮೃತ ಬ್ಯಾಂಕ್ ಗ್ರಾಹಕರ ಖಾತೆಯಲ್ಲಿನ ಹಣಕ್ಕೆ ವಾರಸುದಾರರು ಸಲ್ಲಿಸಿದ ಕ್ಲೇಮ್ ಅನ್ನು ಸೆಟಲ್ಮೆಂಟ್ ಮಾಡುವ ಪ್ರಕ್ರಿಯೆಯನ್ನು ಸರಳಗೊಳಿಸುವುದಾಗಿ ಆರ್​ಬಿಐ ಹೇಳಿದೆ.

ಇದನ್ನೂ ಓದಿ: RBI Repo Rate: ಆರ್​ಬಿಐ ರಿಪೋ ದರದಲ್ಲಿ ಬದಲಾವಣೆ ಇಲ್ಲ; ಶೇ. 5.5 ಬಡ್ಡಿದರ ಮುಂದುವರಿಸಿದ ರಿಸರ್ವ್ ಬ್ಯಾಂಕ್

ಆರ್​ಬಿಐ ರೀಟೇಲ್ ಡೈರೆಕ್ಟ್

ಆರ್​ಬಿಐ ತನ್ನ ರೀಟೇಲ್ ಡೈರೆಕ್ಟ್ ಪ್ಲಾಟ್​ಫಾರ್ಮ್ ಅನ್ನು ಅಪ್​ಗ್ರೇಡ್ ಮಾಡಿದೆ. ಸರ್ಕಾರಿ ಬಾಂಡ್ ಇತ್ಯಾದಿ ಗವರ್ನ್ಮೆಂಟ್ ಸೆಕ್ಯೂರಿಟೀಸ್​ಗಳಲ್ಲಿ ವ್ಯಕ್ತಿಗಳು ಹೂಡಿಕೆ ಮಾಡಲು ಈ ವೇದಿಕೆ ಅವಕಾಶ ಮಾಡಿಕೊಡುತ್ತದೆ. ಈ ರೀಟೇಲ್ ಹೂಡಿಕೆದಾರರು ತಮ್ಮ ಹೂಡಿಕೆಗಳನ್ನು ಮತ್ತಷ್ಟು ಉತ್ತಮವಾಗಿ ನಿಭಾಯಿಸಲು ಸಹಾಯವಾಗುವಂತಹ ಮತ್ತಷ್ಟು ಪರಿಕರಗಳನ್ನು ರೀಟೇಲ್ ಡೈರೆಕ್ಟ್ ಪ್ಲಾಟ್​ಫಾರ್ಮ್​ನಲ್ಲಿ ನೀಡಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ