AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ

ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. 

RBI ವಿತ್ತೀಯ ನೀತಿ ಪ್ರಕಟ: ರೆಪೊ ದರದಲ್ಲಿಲ್ಲ ಬದಲಾವಣೆ
ಆರ್​ಬಿಐ ಗವರ್ನರ್ ಶಕ್ತಿಕಾಂತ್​ ದಾಸ್ (ಸಂಗ್ರಹ ಚಿತ್ರ)
ರಾಜೇಶ್ ದುಗ್ಗುಮನೆ
| Edited By: |

Updated on: Feb 05, 2021 | 2:13 PM

Share

ಮುಂಬೈ: ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಇಂದು (ಫೆ.5) ವಿತ್ತೀಯ ನೀತಿ ಪ್ರಕಟಿಸಿದೆ. ಸತತ ನಾಲ್ಕನೇ ಬಾರಿಗೆ ರೆಪೊ ದರದಲ್ಲಿ ಆರ್​ಬಿಐ ಯಾವುದೇ ಬದಲಾವಣೆ ಮಾಡಿಲ್ಲ. ಈ ವಿಷಯವನ್ನು ಇಂದು ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ರಿಸರ್ವ್​ ಬ್ಯಾಂಕ್​ ಆಫ್​ ಇಂಡಿಯಾ ಗವರ್ನರ್​ ಶಕ್ತಿಕಾಂತ್​ ದಾಸ್​ ಈ ಕುರಿತು ಮಾಹಿತಿ ನೀಡಿದರು.

ಹಣಕಾಸು ನೀತಿ ಸಮಿತಿ ಈ ಬಾರಿ ರೆಪೊ ದರದಲ್ಲಿ ಯಾವುದೆ ಬದಲಾವಣೆ ಮಾಡುತ್ತಿಲ್ಲ. ಹೀಗಾಗಿ, ಹಾಲಿ ಚಾಲ್ತಿಯಲ್ಲಿರುವ ಶೇ 4ರ ರೆಪೊ ದರ ಮುಂದುವರಿಯಲಿದೆ.  ರಿವರ್ಸ್​ ರೆಪೊ ದರ ಕೂಡ ಯಾವುದೇ ಬದಲಾವಣೆ ಕಾಣದೆ ಶೇ 3.35 ಇದೆ ಎಂದು ತಿಳಿಸಿದರು. 2021ರ ಬಜೆಟ್ ನಂತರ ಆರು ಸದಸ್ಯರ ಹಣಕಾಸು ನೀತಿ ಸಮಿತಿಯ ಮೊದಲ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮುಂದಿನ ದಿನಗಳಲ್ಲಿ ಭಾರತದ ಆರ್ಥಿಕತೆ ಸುಧಾರಿಸಲಿದೆ. ಕೊರೊನಾದಿಂದ ಉಂಟಾದ ಹಾನಿಯನ್ನು ಭವಿಷ್ಯದಲ್ಲಿ ನಾವು ಕಡಿಮೆ ಮಾಡಲು ಪ್ರಯತ್ನಿಸುತ್ತೇವೆ. ರಿಸರ್ವ್​ ಬ್ಯಾಂಕ್​ 2020 ಮೇ ತಿಂಗಳಲ್ಲಿ ಕೊನೆಯ ಬಾರಿಗೆ ರೆಪೊ ದರವನ್ನು ಕಡಿಮೆ ಮಾಡಿತ್ತು. ಈ ಮೂಲಕ ಆರ್ಥಿಕತೆಗೆ ಬಲ ತುಂಬುವ ಕೆಲಸ ಮಾಡಿತ್ತು.

ಇನ್ನು, ​ ಆರ್ಥಿಕತೆಗೆ ಬಲ ತುಂಬುವ ಕೆಲಸವನ್ನು ನಾವು ಮಾಡುತ್ತೇವೆ.  ಕೊರೊನಾ ಬಂದ ನಂತರದ ದಿನದಿಂದ ಇಲ್ಲಿಯವರೆಗೆ ಆರ್ಥಿಕತೆ ಚೇತರಿಕೆಗೆ ಬೇಕಾದ ಕೆಲಸವನ್ನು ಮಾಡಿದ್ದೇವೆ ಎಂದು ಶಕ್ತಿಕಾಂತ್​ ದಾಸ್​ ತಿಳಿಸಿದ್ದಾರೆ. ಇನ್ನು, ಇಂದು ಹಣಕಾಸು ನೀತಿ ಘೋಷಣೆಗೂ ಮೊದಲೇ ಷೇರು ಮಾರುಕಟ್ಟೆಯಲ್ಲಿ ಭಾರೀ ಏರಿಕೆ ಕಂಡಿತ್ತು. ನಿಫ್ಟಿ 15 ಸಾವಿರದ ಗಡಿ ತಲುಪಿದರೆ, ಸೆನ್ಸೆಕ್ಸ್​ 51 ಸಾವಿರದ ಗಡಿ ತಲುಪಿದೆ. ಮಧ್ಯಾಹ್ನದ ವೇಳೆಗೆ ಷೇರು ಮಾರುಕಟ್ಟೆಯಲ್ಲಿ ಇಳಿಕೆ ಕಂಡಿದೆ.

ಏನಿದು ರೆಪೊ ದರ? ನಮಗೆ ಸಾಲ ನೀಡುವುದಕ್ಕೆ ಬ್ಯಾಂಕ್​ಗಳು ಆರ್​ಬಿಐನಿಂದ ಸಾಲ ಪಡೆಯುತ್ತವೆ. ಆರ್​ಬಿಐ ಬ್ಯಾಂಕ್​ಗಳಿಗೆ ನೀಡುವ ಹಣಕ್ಕೆ ಬಡ್ಡಿ ಹಾಕುತ್ತದೆ. ಈ ಬಡ್ಡಿ ದರವೇ ರೆಪೊ ದರ. ಒಂದೊಮ್ಮೆ ರೆಪೊ ದರವನ್ನು ಆರ್​ಬಿಐ​ ಹೆಚ್ಚಿಸಿದರೆ ಜನಸಾಮಾನ್ಯರಿಗೆ ನೀಡುವ ಸಾಲದ ಬಡ್ಡಿ ದರ ಹೆಚ್ಚಲಿದೆ. ರೆಪೊ ದರ ಕಡಿಮೆ ಆದರೆ, ನಮಗೆ ಸಿಗುವ ಸಾಲದ ಬಡ್ಡಿ ದರ ಕಡಿಮೆ ಆಗಲಿದೆ. ಇಂದು ರೆಪೊ ದರದಲ್ಲಿ ಯಾವುದೆ ಬದಲಾವಣೆ ಕಂಡಿಲ್ಲ. ಹೀಗಾಗಿ, ಸಾಮಾನ್ಯರಿಗೆ ಸಿಗುವ ಸಾಲದ ಹಣದ ಬಡ್ಡಿ ದರ ಯಥಾಸ್ಥಿತಿಯಲ್ಲಿ ಮುಂದುವರಿಯಲಿದೆ.

Stock Market: ಷೇರು ಮಾರುಕಟ್ಟೆ ಬೆಳವಣಿಗೆಯಿಂದ ಜನ ಸಾಮಾನ್ಯರಿಗೇನು ಲಾಭ?

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಅಯೋಧ್ಯೆಗೆ ಹೊರಟ ಸಚ್ಚಿದಾನಂದ ಸ್ವಾಮೀಜಿಗೆ ರೈಲಿನಲ್ಲಿ ವಿಶೇಷ ಸೌಲಭ್ಯ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ