AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆಟುಕುವ ಗೃಹಸಾಲ: ಆರ್​ಬಿಐನಿಂದ ಸಾಲಕ್ಕೆ ತಕ್ಕ ಆಸ್ತಿಮೌಲ್ಯ ನಿಯಮಗಳ ರಿಯಾಯ್ತಿ ವಿಸ್ತರಣೆ

ಆಸ್ತಿ ಮೌಲ್ಯ ಮತ್ತು ಸಾಲದ (Loan To Value - LTV) ಅನುಪಾತದ ನಡುವೆ ಇದ್ದ ರಿಯಾಯ್ತಿಯನ್ನು ಮಾರ್ಚ್ 31, 2023ರವರೆಗೆ ಮುಂದುವರಿಸುವುದಾಗಿ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು.

ಕೈಗೆಟುಕುವ ಗೃಹಸಾಲ: ಆರ್​ಬಿಐನಿಂದ ಸಾಲಕ್ಕೆ ತಕ್ಕ ಆಸ್ತಿಮೌಲ್ಯ ನಿಯಮಗಳ ರಿಯಾಯ್ತಿ ವಿಸ್ತರಣೆ
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
Follow us
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ

Updated on:Apr 08, 2022 | 12:06 PM

ಮುಂಬೈ: ಗೃಹಸಾಲಗಳ ಸಮಾನ ಮಾಸಿಕ ಕಂತು (Equated Monthly Installment – EMI) ಗ್ರಾಹಕರಿಗೆ ಹೊರೆಯಾಗಬಾರದು ಎನ್ನುವ ಕಾಳಜಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India – RBI) ಮುಂದುವರಿಸಿದೆ. ಆಸ್ತಿ ಮೌಲ್ಯ ಮತ್ತು ಸಾಲದ (Loan To Value – LTV) ಅನುಪಾತದ ನಡುವೆ ಇದ್ದ ರಿಯಾಯ್ತಿಯನ್ನು ಮಾರ್ಚ್ 31, 2023ರವರೆಗೆ ಮುಂದುವರಿಸುವುದಾಗಿ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು. ಸಾಲ ನೀಡುವಾಗ ಬ್ಯಾಂಕ್​ ಅಥವಾ ಹಣಕಾಸು ಸಂಸ್ಥೆಗಳು ಪರಿಗಣಿಸುವ ಅಪಾಯಗಳ (ರಿಸ್ಕ್​) ಬಗ್ಗೆ ಏಕರೂಪ ನಿಯಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ದೇಶದ ಆರ್ಥಿಕತೆಯ ಚೇತರಿಕೆಯಲ್ಲಿ ರಿಯಲ್ ಎಸ್ಟೇಟ್ ವಲಯವು ಬಹುಮುಖ್ಯ ಪಾತ್ರ ನಿರ್ವಹಿಸಲಿದೆ. ಇತರ ಹಲವು ಕ್ಷೇತ್ರಗಳು ಸಹ ರಿಯಲ್ ಎಸ್ಟೇಟ್​ನೊಂದಿಗೆ ಬೆಸೆದುಕೊಂಡಿವೆ. ಮತ್ತಷ್ಟು ಕುಸಿತ ತಡೆಗಟ್ಟಲು ಮತ್ತು ಆರ್ಥಿಕತೆಯ ಚೇತರಿಕೆ ಕಾರ್ಯಸಾಧುವಾಗಿಸಲು ಗೃಹಸಾಲಕ್ಕೆ ಸಿಗುತ್ತಿರುವ ರಿಯಾಯ್ತಿಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಇದರಿಂದ ಉದ್ಯೋಗ ಸೃಷ್ಟಿಯೂ ಹಲವು ಅನುಕೂಲಗಳು ಆಗುತ್ತವೆ ಎಂದು ಅವರು ಹೇಳಿದರು.

ಭಾರತದ ಎಲ್ಲ ಎಟಿಎಂಗಳಲ್ಲಿ ಕಾರ್ಡ್​ರಹಿತ ಹಣ ಹಿಂಪಡೆಯುವ ಸೌಲಭ್ಯ (Cardless Cash Withdrawal) ಸೌಲಭ್ಯ ಕಲ್ಪಿಸುವ ಸಾಧ್ಯತೆಯನ್ನು ಆರ್​ಬಿಐ ಈ ಬಾರಿ ಎಂಪಿಸಿಯಲ್ಲಿ ಪ್ರಸ್ತಾಪಿಸಿದೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್​ಫೇಸ್ (Unified Payments Interface – UPI) ಮೂಲಕ ಈ ಸೌಲಭ್ಯ ಕಲ್ಪಿಸಬಹುದಾಗಿದೆ ಎಂದು ದಾಸ್ ಅಭಿಪ್ರಾಯಪಟ್ಟರು. ‘ಪ್ರಸ್ತುತ ಕಾರ್ಡ್​ರಹಿತ ಹಣ ಹಿಂಪಡೆಯುವ ಸೌಲಭ್ಯವು ಕೆಲವೇ ಬ್ಯಾಂಕ್​ಗಳಿಗೆ ಸೀಮಿತವಾಗಿದೆ. ಇದನ್ನು ಎಲ್ಲ ಬ್ಯಾಂಕ್​ಗಳು ಮತ್ತು ಎಟಿಎಂ ಜಾಲಗಳಿಗೆ ವಿಸ್ತರಿಸಲಾಗುವುದು’ ಎಂದು ದಾಸ್ ಹೇಳಿದರು. ಕಾರ್ಡ್​ರಹಿತ ಪಾವತಿ ವಿಧಾನಗಳ ಅಳವಡಿಕೆಯಿಂದ ಸ್ಕಿಮಿಂಗ್ ಮತ್ತು ಕಾರ್ಡ್​ ಕ್ಲೋನಿಂಗ್​ನಂಥ ಅಕ್ರಮಗಳನ್ನೂ ತಡೆಗಟ್ಟಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಆರ್​ಬಿಐ ನಿಯಂತ್ರಣದಲ್ಲಿರುವ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಒದಗಿಸುತ್ತಿರುವ ಸೇವೆಯ ಗುಣಮಟ್ಟದ ಬಗ್ಗೆ ಸಹ ನಾವು ನಿಗಾ ಇರಿಸುತ್ತೇವೆ. ಹೊಸಹೊಸ ಆವಿಷ್ಕಾರಗಳು, ಉತ್ಪನ್ನಗಳು ಮತ್ತು ಸೇವೆಗಳು ಬಳಕೆಗೆ ಬರುತ್ತಿವೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳ ಬಳಕೆದಾರರ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಗ್ರಾಹಕ ಸೇವೆಗಳ ಸ್ಥಿತಿಗತಿ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

ಇದನ್ನೂ ಓದಿ: RBI Monetary Policy: ರೆಪೊ ದರ ಯಥಾಸ್ಥಿತಿ; ಎಲ್ಲ ಎಟಿಎಂಗಳಲ್ಲಿ ಕಾರ್ಡ್​ಲೆಸ್​ ಕ್ಯಾಶ್ ಸವಲತ್ತು

Published On - 11:22 am, Fri, 8 April 22

ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಗುತ್ತಿಗೆದಾರನ ದ್ವಿಚಕ್ರವಾಹನ ಹಾಸನದ ಬಸ್​ ನಿಲ್ದಾಣದ ಬಳಿ ಪತ್ತೆ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಕೋಮು ನಿಗ್ರಹ ದಳ ರಚಿಸಿರುವುದು ಹಿಂದೂಗಳನ್ನು ಟಾರ್ಗೆಟ್ ಮಾಡಲು: ವಿಜಯೇಂದ್ರ
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಒಕ್ಕಲಿಗರ ಕೋಟೆಯಲ್ಲಿ ಲಿಂಗಾಯತ ಸಿಎಂ ಮಾತು: ಡಿಕೆಶಿ ಆಪ್ತನಿಂದಲೇ MB ಪಾಟೀಲ್
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಹೋರಿಗೆ ಕೇಕ್ ತಿನ್ನಿಸಿ ತಾನೂ ತಿಂದ ಮಾಜಿ ಸಚಿವ ರೇಣುಕಾಚಾರ್ಯ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಚಾರ್ಮಾಡಿ ಘಾಟಿ ಡೇಂಜರ್ ಡೇಂಜರ್ ಮತ್ತಷ್ಟು ಕುಸಿಯುವ ಆತಂಕ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಯಾದಗಿರಿ ಜಿಲ್ಲೆಯಾದ್ಯಂತ ಧಾರಾಕಾರ ಮಳೆ; ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಸಚಿವರ ಬೇಜವಾಬ್ದಾರಿತನಕ್ಕೆ ಅಸಮಾಧಾನ ಹೊರಹಾಕಿದ ಸಿದ್ದರಾಮಯ್ಯ
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಪರಿಸರ ಮಾಲಿನ್ಯ ಹೆಚ್ಚುತ್ತಿರುವ ಬೆಂಗಳೂರಿಗೆ ಬೇಕು ಎಲೆಕ್ಟ್ರಿಕ್ ಬಸ್​ಗಳು
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ಕರಾವಳಿ ಪ್ರಾಂತ್ಯದ ಗಲಭೆಗಳಿಗೆ ಸಾಮಾಜಿಕ ಜಾಲತಾಣ ದೂರಿದ ಗುಂಡೂರಾವ್
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ
ನಾಲ್ವಡಿ ಕೃಷ್ಣರಾಜ ಒಡೆಯರ್ ಪ್ರತಿಮೆ ಮೇಲೆ ಕುಳಿತು ವ್ಯಕ್ತಿಯ ಹುಚ್ಚಾಟ