AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೈಗೆಟುಕುವ ಗೃಹಸಾಲ: ಆರ್​ಬಿಐನಿಂದ ಸಾಲಕ್ಕೆ ತಕ್ಕ ಆಸ್ತಿಮೌಲ್ಯ ನಿಯಮಗಳ ರಿಯಾಯ್ತಿ ವಿಸ್ತರಣೆ

ಆಸ್ತಿ ಮೌಲ್ಯ ಮತ್ತು ಸಾಲದ (Loan To Value - LTV) ಅನುಪಾತದ ನಡುವೆ ಇದ್ದ ರಿಯಾಯ್ತಿಯನ್ನು ಮಾರ್ಚ್ 31, 2023ರವರೆಗೆ ಮುಂದುವರಿಸುವುದಾಗಿ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು.

ಕೈಗೆಟುಕುವ ಗೃಹಸಾಲ: ಆರ್​ಬಿಐನಿಂದ ಸಾಲಕ್ಕೆ ತಕ್ಕ ಆಸ್ತಿಮೌಲ್ಯ ನಿಯಮಗಳ ರಿಯಾಯ್ತಿ ವಿಸ್ತರಣೆ
ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ (ಸಂಗ್ರಹ ಚಿತ್ರ)
TV9 Web
| Updated By: Ghanashyam D M | ಡಿ.ಎಂ.ಘನಶ್ಯಾಮ|

Updated on:Apr 08, 2022 | 12:06 PM

Share

ಮುಂಬೈ: ಗೃಹಸಾಲಗಳ ಸಮಾನ ಮಾಸಿಕ ಕಂತು (Equated Monthly Installment – EMI) ಗ್ರಾಹಕರಿಗೆ ಹೊರೆಯಾಗಬಾರದು ಎನ್ನುವ ಕಾಳಜಿಯನ್ನು ಭಾರತೀಯ ರಿಸರ್ವ್ ಬ್ಯಾಂಕ್ (Reserve Bank of India – RBI) ಮುಂದುವರಿಸಿದೆ. ಆಸ್ತಿ ಮೌಲ್ಯ ಮತ್ತು ಸಾಲದ (Loan To Value – LTV) ಅನುಪಾತದ ನಡುವೆ ಇದ್ದ ರಿಯಾಯ್ತಿಯನ್ನು ಮಾರ್ಚ್ 31, 2023ರವರೆಗೆ ಮುಂದುವರಿಸುವುದಾಗಿ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಹೇಳಿದರು. ಸಾಲ ನೀಡುವಾಗ ಬ್ಯಾಂಕ್​ ಅಥವಾ ಹಣಕಾಸು ಸಂಸ್ಥೆಗಳು ಪರಿಗಣಿಸುವ ಅಪಾಯಗಳ (ರಿಸ್ಕ್​) ಬಗ್ಗೆ ಏಕರೂಪ ನಿಯಮಗಳನ್ನು ರೂಪಿಸಲಾಗುವುದು ಎಂದು ಅವರು ತಿಳಿಸಿದರು.

ದೇಶದ ಆರ್ಥಿಕತೆಯ ಚೇತರಿಕೆಯಲ್ಲಿ ರಿಯಲ್ ಎಸ್ಟೇಟ್ ವಲಯವು ಬಹುಮುಖ್ಯ ಪಾತ್ರ ನಿರ್ವಹಿಸಲಿದೆ. ಇತರ ಹಲವು ಕ್ಷೇತ್ರಗಳು ಸಹ ರಿಯಲ್ ಎಸ್ಟೇಟ್​ನೊಂದಿಗೆ ಬೆಸೆದುಕೊಂಡಿವೆ. ಮತ್ತಷ್ಟು ಕುಸಿತ ತಡೆಗಟ್ಟಲು ಮತ್ತು ಆರ್ಥಿಕತೆಯ ಚೇತರಿಕೆ ಕಾರ್ಯಸಾಧುವಾಗಿಸಲು ಗೃಹಸಾಲಕ್ಕೆ ಸಿಗುತ್ತಿರುವ ರಿಯಾಯ್ತಿಗಳನ್ನು ಮುಂದುವರಿಸಲು ನಿರ್ಧರಿಸಲಾಗಿದೆ. ಇದರಿಂದ ಉದ್ಯೋಗ ಸೃಷ್ಟಿಯೂ ಹಲವು ಅನುಕೂಲಗಳು ಆಗುತ್ತವೆ ಎಂದು ಅವರು ಹೇಳಿದರು.

ಭಾರತದ ಎಲ್ಲ ಎಟಿಎಂಗಳಲ್ಲಿ ಕಾರ್ಡ್​ರಹಿತ ಹಣ ಹಿಂಪಡೆಯುವ ಸೌಲಭ್ಯ (Cardless Cash Withdrawal) ಸೌಲಭ್ಯ ಕಲ್ಪಿಸುವ ಸಾಧ್ಯತೆಯನ್ನು ಆರ್​ಬಿಐ ಈ ಬಾರಿ ಎಂಪಿಸಿಯಲ್ಲಿ ಪ್ರಸ್ತಾಪಿಸಿದೆ. ಯೂನಿಫೈಡ್ ಪೇಮೆಂಟ್ಸ್ ಇಂಟರ್​ಫೇಸ್ (Unified Payments Interface – UPI) ಮೂಲಕ ಈ ಸೌಲಭ್ಯ ಕಲ್ಪಿಸಬಹುದಾಗಿದೆ ಎಂದು ದಾಸ್ ಅಭಿಪ್ರಾಯಪಟ್ಟರು. ‘ಪ್ರಸ್ತುತ ಕಾರ್ಡ್​ರಹಿತ ಹಣ ಹಿಂಪಡೆಯುವ ಸೌಲಭ್ಯವು ಕೆಲವೇ ಬ್ಯಾಂಕ್​ಗಳಿಗೆ ಸೀಮಿತವಾಗಿದೆ. ಇದನ್ನು ಎಲ್ಲ ಬ್ಯಾಂಕ್​ಗಳು ಮತ್ತು ಎಟಿಎಂ ಜಾಲಗಳಿಗೆ ವಿಸ್ತರಿಸಲಾಗುವುದು’ ಎಂದು ದಾಸ್ ಹೇಳಿದರು. ಕಾರ್ಡ್​ರಹಿತ ಪಾವತಿ ವಿಧಾನಗಳ ಅಳವಡಿಕೆಯಿಂದ ಸ್ಕಿಮಿಂಗ್ ಮತ್ತು ಕಾರ್ಡ್​ ಕ್ಲೋನಿಂಗ್​ನಂಥ ಅಕ್ರಮಗಳನ್ನೂ ತಡೆಗಟ್ಟಬಹುದಾಗಿದೆ ಎಂದು ಅವರು ಅಭಿಪ್ರಾಯಪಟ್ಟರು.

ಆರ್​ಬಿಐ ನಿಯಂತ್ರಣದಲ್ಲಿರುವ ಹಣಕಾಸು ಸಂಸ್ಥೆಗಳು ಗ್ರಾಹಕರಿಗೆ ಒದಗಿಸುತ್ತಿರುವ ಸೇವೆಯ ಗುಣಮಟ್ಟದ ಬಗ್ಗೆ ಸಹ ನಾವು ನಿಗಾ ಇರಿಸುತ್ತೇವೆ. ಹೊಸಹೊಸ ಆವಿಷ್ಕಾರಗಳು, ಉತ್ಪನ್ನಗಳು ಮತ್ತು ಸೇವೆಗಳು ಬಳಕೆಗೆ ಬರುತ್ತಿವೆ. ಡಿಜಿಟಲ್ ಬ್ಯಾಂಕಿಂಗ್ ಸೇವೆಗಳ ಬಳಕೆದಾರರ ಸಂಖ್ಯೆ ಸಹ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಪ್ರಸ್ತುತ ಚಾಲ್ತಿಯಲ್ಲಿರುವ ಗ್ರಾಹಕ ಸೇವೆಗಳ ಸ್ಥಿತಿಗತಿ ಪರಿಶೀಲನೆಗೆ ಸಮಿತಿಯೊಂದನ್ನು ರಚಿಸಲಾಗುವುದು ಎಂದು ಅವರು ತಿಳಿಸಿದರು.

ಇದನ್ನೂ ಓದಿ: UPI For Feature Phones: ಫೀಚರ್​ ಫೋನ್​ ಯುಪಿಐಗೆ ಚಾಲನೆ ನೀಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್

ಇದನ್ನೂ ಓದಿ: RBI Monetary Policy: ರೆಪೊ ದರ ಯಥಾಸ್ಥಿತಿ; ಎಲ್ಲ ಎಟಿಎಂಗಳಲ್ಲಿ ಕಾರ್ಡ್​ಲೆಸ್​ ಕ್ಯಾಶ್ ಸವಲತ್ತು

Published On - 11:22 am, Fri, 8 April 22

ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
ಅಸ್ಥಿ ವಿಸರ್ಜನೆಗೂ ಪರದಾಟ: ಬೆಂಗಳೂರು ಏರ್​​ಪೋರ್ಟ್​​ನಲ್ಲಿ ಕುಟುಂಬ ಗೋಳಾಟ
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
NHMನಲ್ಲಿ 30000 ಹುದ್ದೆಗಳ ಮರು ನೇಮಕಾತಿ ಬಗ್ಗೆ ಸಚಿವ ದಿನೇಶ್ ಹೇಳಿದ್ದೇನು?
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!