AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಹಣಕಾಸು ನೀತಿ ನ್ಯೂಟ್ರಲ್​ಗೆ ಬದಲಾವಣೆ; ಅಕಾಮೊಡೇಶನ್ ನೀತಿ ಹಿಂತೆಗೆದದ್ದು ಯಾಕೆ? ಡಿಸೆಂಬರ್​ನಲ್ಲಿ ಬಡ್ಡಿ ಇಳಿಯುತ್ತಾ?

RBI MPC Meet: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಹಣಕಾಸು ನೀತಿಯನ್ನು ನ್ಯೂಟ್ರಲ್​ಗೆ ಬದಲಾಯಿಸಿದೆ. ವಿತ್​ಡ್ರಾಯಲ್ ಆಫ್ ಅಕಾಮೊಡೇಶನ್ ನೀತಿಯನ್ನು ಆರ್​ಬಿಐ ಅನುಸರಿಸುತ್ತಿತ್ತು. ಈಗ ಅದನ್ನು ನ್ಯೂಟ್ರಲ್ ನೀತಿಗೆ ಬದಲಿಸಿರುವುದು ಗಮನಾರ್ಹ. ಮುಂದಿನ ಸಭೆಯಲ್ಲಿ ರಿಪೋದರ ಕಡಿಮೆಗೊಳ್ಳುವ ಸುಳಿವನ್ನು ಆರ್​ಬಿಐ ನೀಡಿದೆ.

ಆರ್​ಬಿಐ ಹಣಕಾಸು ನೀತಿ ನ್ಯೂಟ್ರಲ್​ಗೆ ಬದಲಾವಣೆ; ಅಕಾಮೊಡೇಶನ್ ನೀತಿ ಹಿಂತೆಗೆದದ್ದು ಯಾಕೆ? ಡಿಸೆಂಬರ್​ನಲ್ಲಿ ಬಡ್ಡಿ ಇಳಿಯುತ್ತಾ?
ಹಣ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 09, 2024 | 11:13 AM

Share

ನವದೆಹಲಿ, ಅಕ್ಟೋಬರ್ 9: ಆರ್​ಬಿಐ ತನ್ನ ಹಣಕಾಸು ನೀತಿಯ ನಿಲುವನ್ನು ನ್ಯೂಟ್ರಲ್​ಗೆ ಬದಲಾಯಿಸಿದೆ. ಮೂರು ದಿನಗಳ ಕಾಲ ನಡೆದ ಆರ್​ಬಿಐ ಎಂಪಿಸಿ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತದಾಸ್ ಸುದ್ದಿಗೋಷ್ಠಿಯಲ್ಲಿ ಈ ನಿಲುವನ್ನು ಪ್ರಕಟಿಸಿದ್ದಾರೆ. ಈ ಮೊದಲು ಹಲವು ತಿಂಗಳಿಂದ ಆರ್​ಬಿಐ ವಿತ್​​ಡ್ರಾಯಲ್ ಆಫ್ ಅಕಾಮೊಡೇಶನ್ ನಿಲುವನ್ನು ಹೊಂದಿತ್ತು. ಈಗ ಆ ನೀತಿಯನ್ನು ನ್ಯೂಟ್ರಲ್​ಗೆ ಬದಲಿಸಿದೆ. ಈ ಮೂಲಕ ಮುಂದಿನ ಸಭೆಗಳಲ್ಲಿ ಬಡ್ಡಿದರಗಳನ್ನು ಇಳಿಸುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಏನಿದು ಆರ್​ಬಿಐನ ನ್ಯೂಟ್ರಲ್ ಮತ್ತು ಅಕಾಮೊಡೇಶನ್ ನೀತಿ..?

ಆರ್​ಬಿಐನ ಹಣಕಾಸು ನೀತಿಯಲ್ಲಿ ಮೂರು ವಿಧ ಇವೆ. ಅಕಾಮೊಡೇಶನ್, ನ್ಯೂಟ್ರಲ್ ಮತ್ತು ವಿತ್​ಡ್ರಾಯಲ್. ಅಕಾಮೊಡೇಶನ್ ಎಂದರೆ ಆರ್ಥಿಕತೆಯ ಬೆಳವಣಿಗೆಯನ್ನು ಉತ್ತೇಜಿಸಲು ಹಣದ ಹರಿವಿನ ಹೆಚ್ಚಳಕ್ಕೆ ಆರ್​ಬಿಐ ಕ್ರಮ ಕೈಗೊಳ್ಳುತ್ತದೆ.

ವಿತ್​ಡ್ರಾಯಲ್ ಆಫ್ ಅಕಾಮೊಡೇಶನ್ ಎಂದರೆ, ಆರ್ಥಿಕ ವ್ಯವಸ್ಥೆಯಲ್ಲಿ ಹಣದ ಹರಿವನ್ನು ಕಡಿಮೆಗೊಳಿಸುವ ಮೂಲಕ ಹಣದುಬ್ಬರ ಏರಿಕೆಗೆ ಕಡಿವಾಣ ಹಾಕಲು ಆರ್​ಬಿಐ ಯತ್ನಿಸುತ್ತದೆ. ಹಣ ಹೆಚ್ಚಾಗಿದ್ದರೆ ವಸ್ತುಗಳ ಬೆಲೆ ಹೆಚ್ಚುತ್ತದೆ. ಹಣದ ಹರಿವು ಕಡಿಮೆ ಇದ್ದರೆ ವಸ್ತುಗಳ ಬೆಲೆ ಕಡಿಮೆ ಆಗುತ್ತದೆ ಎಂಬುದು ತರ್ಕ.

ಇದನ್ನೂ ಓದಿ: RBI MPC Meet October 2024: ಸತತ ಹತ್ತನೇ ಬಾರಿ ಶೇ. 6.5ರ ರೆಪೋದರದಲ್ಲಿ ಇಲ್ಲ ಬದಲಾವಣೆ; ಆರ್ಥಿಕ ಬೆಳವಣಿಗೆ ಬಗ್ಗೆ ಆರ್​ಬಿಐ ಆಶಾದಾಯಕ

ಆರ್​ಬಿಐನ ನ್ಯೂಟ್ರಲ್ ನೀತಿ

ಆರ್​ಬಿಐನ ನ್ಯೂಟ್ರಲ್ ಹಣಕಾಸು ನೀತಿಯಲ್ಲಿ ಸಂದರ್ಭಕ್ಕೆ ತಕ್ಕಂತೆ ನಿಲುವುಗಳನ್ನು ತೆಗೆದುಕೊಳ್ಳುವುದಕ್ಕೆ ಆದ್ಯತೆ ಕೊಡಲಾಗುತ್ತದೆ. ಅಂದರೆ, ಹಣದುಬ್ಬರ ಏರುತ್ತಿದೆ ಎಂದರೆ ರಿಪೋ ದರವನ್ನು ಹೆಚ್ಚಿಸಬಹುದು. ಹಣದುಬ್ಬರ ಕಡಿಮೆ ಆಗುತ್ತಿದೆ ಎಂದರೆ ರಿಪೋ ದರ ಕಡಿಮೆಗೊಳಿಸಬಹುದು. ಹೀಗಾಗಿ, ಆರ್​ಬಿಐನ ನ್ಯೂಟ್ರಲ್ ಪಾಲಿಸಿಯು ಮುಂದಿನ ದಿನಗಳಲ್ಲಿ ಬಡ್ಡಿದರ ಇಳಿಸುವ ಮುನ್ಸೂಚನೆ ಕಾಣುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕಾಂಗ್ರೆಸ್ ಬಹಿರಂಗ ಸಭೆ ವೇಳೆ ಅಝಾನ್, ಕೈ ಅಭ್ಯರ್ಥಿ ಮಾಡಿದ್ದೇನು ನೋಡಿ
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಕೆಡಿ ಹಾಡಿನ ವಿವಾದ: ಜನರನ್ನು ಸೆಳೆಯುವ ಪ್ರಯತ್ನದ ಬಗ್ಗೆ ಗಾಯಕ ನವೀನ್ ಸಜ್ಜು
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
ಚಾಕೋಲೇಟ್ ಕೊಳ್ಳಲು ಅಂಗಡಿಗೆ ಬಂದ, ಚಿನ್ನದ ಸರ ಎಳೆದುಕೊಂಡು ಓಡಿದ!
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
‘ನಾನು ಸ್ಟಾರ್ ಅಲ್ಲ, ಕಲಾವಿದೆ; ಕಲಾವಿದರಿಗೆ ಸಾವಿಲ್ಲ’: ಶ್ರುತಿ ಹರಿಹರನ್
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ದಲಿತ ಎನ್ನೋ ಕಾರಣಕ್ಕೆ ಎಳೆದಾಡಿ ಸ್ವಾಮೀಜಿ ಮೇಲೆ ಹಲ್ಲೆ
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ಉಡುಪಿಯಲ್ಲೊಂದು ಅಪರೂಪದ ಘಟನೆ: ಗ್ಯಾಸ್ OTP ವ್ಯಕ್ತಿ ಜೀವ ಉಳಿಸಿದ್ಹೇಗೆ?
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ದಾವಣಗೆರೆ ಕಾಂಗ್ರೆಸ್ ಕಾರ್ಯಕರ್ತರಿಗೆ ಪ್ರಹ್ಲಾದ ಜೋಶಿ ಮಹತ್ವದ ಕರೆ
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ಬೆಂಕಿ ಬೌಲಿಂಗ್: ಒಂದೇ ಒಂದು ಬೌಂಡರಿ ಹೊಡೆಸಿಕೊಳ್ಳದ ಶಮಿ!
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ನೆಲವೇ ಹಾಸಿಗೆ, ಕಟ್ಟೆಯೇ ತಲೆದಿಂಬು; ಪ್ರಭುದೇವ ಎಷ್ಟು ಸಿಂಪಲ್ ನೋಡಿ 
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ
ಕಾದು ಕುಳಿತು ರೈಲು ಬರುತ್ತಿದ್ದಂತೆ ಪ್ರಯಾಣಿಕನನ್ನು ತಳ್ಳಿದ ವ್ಯಕ್ತಿ