ಆರ್​ಬಿಐ ಹಣಕಾಸು ನೀತಿ ನ್ಯೂಟ್ರಲ್​ಗೆ ಬದಲಾವಣೆ; ಅಕಾಮೊಡೇಶನ್ ನೀತಿ ಹಿಂತೆಗೆದದ್ದು ಯಾಕೆ? ಡಿಸೆಂಬರ್​ನಲ್ಲಿ ಬಡ್ಡಿ ಇಳಿಯುತ್ತಾ?

RBI MPC Meet: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಹಣಕಾಸು ನೀತಿಯನ್ನು ನ್ಯೂಟ್ರಲ್​ಗೆ ಬದಲಾಯಿಸಿದೆ. ವಿತ್​ಡ್ರಾಯಲ್ ಆಫ್ ಅಕಾಮೊಡೇಶನ್ ನೀತಿಯನ್ನು ಆರ್​ಬಿಐ ಅನುಸರಿಸುತ್ತಿತ್ತು. ಈಗ ಅದನ್ನು ನ್ಯೂಟ್ರಲ್ ನೀತಿಗೆ ಬದಲಿಸಿರುವುದು ಗಮನಾರ್ಹ. ಮುಂದಿನ ಸಭೆಯಲ್ಲಿ ರಿಪೋದರ ಕಡಿಮೆಗೊಳ್ಳುವ ಸುಳಿವನ್ನು ಆರ್​ಬಿಐ ನೀಡಿದೆ.

ಆರ್​ಬಿಐ ಹಣಕಾಸು ನೀತಿ ನ್ಯೂಟ್ರಲ್​ಗೆ ಬದಲಾವಣೆ; ಅಕಾಮೊಡೇಶನ್ ನೀತಿ ಹಿಂತೆಗೆದದ್ದು ಯಾಕೆ? ಡಿಸೆಂಬರ್​ನಲ್ಲಿ ಬಡ್ಡಿ ಇಳಿಯುತ್ತಾ?
ಹಣ
Follow us
|

Updated on: Oct 09, 2024 | 11:13 AM

ನವದೆಹಲಿ, ಅಕ್ಟೋಬರ್ 9: ಆರ್​ಬಿಐ ತನ್ನ ಹಣಕಾಸು ನೀತಿಯ ನಿಲುವನ್ನು ನ್ಯೂಟ್ರಲ್​ಗೆ ಬದಲಾಯಿಸಿದೆ. ಮೂರು ದಿನಗಳ ಕಾಲ ನಡೆದ ಆರ್​ಬಿಐ ಎಂಪಿಸಿ ಸಭೆಯ ಬಳಿಕ ಗವರ್ನರ್ ಶಕ್ತಿಕಾಂತದಾಸ್ ಸುದ್ದಿಗೋಷ್ಠಿಯಲ್ಲಿ ಈ ನಿಲುವನ್ನು ಪ್ರಕಟಿಸಿದ್ದಾರೆ. ಈ ಮೊದಲು ಹಲವು ತಿಂಗಳಿಂದ ಆರ್​ಬಿಐ ವಿತ್​​ಡ್ರಾಯಲ್ ಆಫ್ ಅಕಾಮೊಡೇಶನ್ ನಿಲುವನ್ನು ಹೊಂದಿತ್ತು. ಈಗ ಆ ನೀತಿಯನ್ನು ನ್ಯೂಟ್ರಲ್​ಗೆ ಬದಲಿಸಿದೆ. ಈ ಮೂಲಕ ಮುಂದಿನ ಸಭೆಗಳಲ್ಲಿ ಬಡ್ಡಿದರಗಳನ್ನು ಇಳಿಸುವ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ದಟ್ಟವಾಗಿದೆ.

ಏನಿದು ಆರ್​ಬಿಐನ ನ್ಯೂಟ್ರಲ್ ಮತ್ತು ಅಕಾಮೊಡೇಶನ್ ನೀತಿ..?

ಆರ್​ಬಿಐನ ಹಣಕಾಸು ನೀತಿಯಲ್ಲಿ ಮೂರು ವಿಧ ಇವೆ. ಅಕಾಮೊಡೇಶನ್, ನ್ಯೂಟ್ರಲ್ ಮತ್ತು ವಿತ್​ಡ್ರಾಯಲ್. ಅಕಾಮೊಡೇಶನ್ ಎಂದರೆ ಆರ್ಥಿಕತೆಯ ಬೆಳವಣಿಗೆಯನ್ನು ಉತ್ತೇಜಿಸಲು ಹಣದ ಹರಿವಿನ ಹೆಚ್ಚಳಕ್ಕೆ ಆರ್​ಬಿಐ ಕ್ರಮ ಕೈಗೊಳ್ಳುತ್ತದೆ.

ವಿತ್​ಡ್ರಾಯಲ್ ಆಫ್ ಅಕಾಮೊಡೇಶನ್ ಎಂದರೆ, ಆರ್ಥಿಕ ವ್ಯವಸ್ಥೆಯಲ್ಲಿ ಹಣದ ಹರಿವನ್ನು ಕಡಿಮೆಗೊಳಿಸುವ ಮೂಲಕ ಹಣದುಬ್ಬರ ಏರಿಕೆಗೆ ಕಡಿವಾಣ ಹಾಕಲು ಆರ್​ಬಿಐ ಯತ್ನಿಸುತ್ತದೆ. ಹಣ ಹೆಚ್ಚಾಗಿದ್ದರೆ ವಸ್ತುಗಳ ಬೆಲೆ ಹೆಚ್ಚುತ್ತದೆ. ಹಣದ ಹರಿವು ಕಡಿಮೆ ಇದ್ದರೆ ವಸ್ತುಗಳ ಬೆಲೆ ಕಡಿಮೆ ಆಗುತ್ತದೆ ಎಂಬುದು ತರ್ಕ.

ಇದನ್ನೂ ಓದಿ: RBI MPC Meet October 2024: ಸತತ ಹತ್ತನೇ ಬಾರಿ ಶೇ. 6.5ರ ರೆಪೋದರದಲ್ಲಿ ಇಲ್ಲ ಬದಲಾವಣೆ; ಆರ್ಥಿಕ ಬೆಳವಣಿಗೆ ಬಗ್ಗೆ ಆರ್​ಬಿಐ ಆಶಾದಾಯಕ

ಆರ್​ಬಿಐನ ನ್ಯೂಟ್ರಲ್ ನೀತಿ

ಆರ್​ಬಿಐನ ನ್ಯೂಟ್ರಲ್ ಹಣಕಾಸು ನೀತಿಯಲ್ಲಿ ಸಂದರ್ಭಕ್ಕೆ ತಕ್ಕಂತೆ ನಿಲುವುಗಳನ್ನು ತೆಗೆದುಕೊಳ್ಳುವುದಕ್ಕೆ ಆದ್ಯತೆ ಕೊಡಲಾಗುತ್ತದೆ. ಅಂದರೆ, ಹಣದುಬ್ಬರ ಏರುತ್ತಿದೆ ಎಂದರೆ ರಿಪೋ ದರವನ್ನು ಹೆಚ್ಚಿಸಬಹುದು. ಹಣದುಬ್ಬರ ಕಡಿಮೆ ಆಗುತ್ತಿದೆ ಎಂದರೆ ರಿಪೋ ದರ ಕಡಿಮೆಗೊಳಿಸಬಹುದು. ಹೀಗಾಗಿ, ಆರ್​ಬಿಐನ ನ್ಯೂಟ್ರಲ್ ಪಾಲಿಸಿಯು ಮುಂದಿನ ದಿನಗಳಲ್ಲಿ ಬಡ್ಡಿದರ ಇಳಿಸುವ ಮುನ್ಸೂಚನೆ ಕಾಣುತ್ತಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
ಮಹದೇವಪ್ಪ ನಿವಾಸದಲ್ಲಿನ ರಹಸ್ಯ ಸಭೆಯ ಮಾಹಿತಿ ಬಿಚ್ಚಿಟ್ಟ ಜಿ ಪರಮೇಶ್ವರ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
‘ಯಾವ ಸೀಮೆಯ ಕ್ಯಾಪ್ಟನ್ ನೀವು?’; ಹಂಸಾ ವಿರುದ್ಧ ಸಿಡಿದೆದ್ದ ಚೈತ್ರಾ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿಯ 7ನೇ ದಿನ ಕಾಲರಾತ್ರಿ ದೇವಿ ಆರಾಧನೆಯ ಮಹತ್ವ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ನವರಾತ್ರಿ 7ನೇ ದಿನದ ರಾಶಿ ಭವಿಷ್ಯ, ಗ್ರಹಗಳ ಸಂಚಾರ ತಿಳಿಯಿರಿ
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಅರಮನೆ ಮುಂದೆ ಕಣ್ಮನ ಸೆಳೆದ ಪೊಲೀಸ್ ಬ್ಯಾಂಡ್ ವೀಕ್ಷಿಸಿದ ರಾಜವಂಶಸ್ಥರು
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
ಸುಪ್ರೀಂ ಕೋರ್ಟ್ ಒಳಗೆ ನುಗ್ಗಿ ವಕೀಲರ ಬ್ಯಾಗ್, ಊಟದ ಬಾಕ್ಸ್ ಕದ್ದ ಕೋತಿ
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
PM Modi Speech Live: ಹರಿಯಾಣ ಗೆದ್ದ ಖುಷಿಯಲ್ಲಿ ಮೋದಿ ಮಾತು
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ರಸ್ತೆಬದಿ ಕುಳಿತಿದ್ದ 3 ಮಕ್ಕಳನ್ನು ಎಳೆದೊಯ್ದ ಕಾರು; ವಿಡಿಯೋ ವೈರಲ್
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ಹೊಸ ಸಿನಿಮಾ ತಂಡಗಳಿಗೆ ಕಿವಿ ಮಾತು ಹೇಳಿದ ಸತೀಶ್ ನೀನಾಸಂ
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್
ರಾಜ್ಯದಲ್ಲಿ ಈಗ ಚುನಾವಣೆ ನಡೆದರೆ ಬಿಜೆಪಿ ಸುಲಭವಾಗಿ ಗೆಲ್ಲುತ್ತದೆ: ಜಗದೀಶ್