AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ

RBI MPC announcements: ಆರ್​ಬಿಐ ಎಂಪಿಸಿ ಸಭೆಯಲ್ಲಿ ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಲಾಗಿದೆ. ಜೂನ್ 3ರಿಂದ ನಡೆದ ಎಂಪಿಸಿ ಸಭೆಯಲ್ಲಿ ಸರ್ವಾನುಮತದಿಂದ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಈ ವರ್ಷ ಜಿಡಿಪಿ ಬೆಳವಣಿಗೆ ಶೇ. 6.9 ಅಲ್ಲ, ಶೇ. 6.6ರಷ್ಟು ಮಾತ್ರ ಬೆಳೆಯಬಹುದು. ಹಣದುಬ್ಬರ ಶೇ. 5.1ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜಿಸಿದೆ.

RBI MPC: ರೆಪೋ ದರ ಶೇ. 5.25, ಜಿಡಿಪಿ ದರ ಶೇ. 6.6, ಹಣದುಬ್ಬರ ಶೇ. 5.1 ಸಾಧ್ಯತೆ; ಆರ್​ಬಿಐ ಎಂಪಿಸಿ ಪ್ರಕಟಣೆ
ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾImage Credit source: RBI Youtube
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 05, 2026 | 10:43 AM

Share

ನವದೆಹಲಿ, ಜೂನ್ 5: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ರೆಪೋ ದರವನ್ನು (Repo Rate) ಯಥಾಸ್ಥಿತಿಯಲ್ಲಿ ಮುಂದುವರಿಸಲು ನಿರ್ಧರಿಸಿದೆ. ಮೊನ್ನೆಯಿಂದ ನಡೆದ ಎಂಪಿಸಿ ಸಭೆಯ ನಂತರ ಇವತ್ತು ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ, ರೆಪೋ ದರವನ್ನು ಶೇ. 5.25ರಲ್ಲಿ ಮುಂದುವರಿಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ. ಎಸ್​ಟಿಎಫ್ ದರ ಶೇ. 5, ಎಂಎಸ್​ಎಫ್ ಮತ್ತು ಬ್ಯಾಂಕ್ ರೇಟ್ ಶೇ. 5.5 ನಲ್ಲಿ ಮುಂದುವರಿಯಲಿವೆ. ಹಾಗೆಯೇ, ಆರ್​ಬಿಐನ ಪಾಲಿಸಿ ತಟಸ್ಥ ನೀತಿಯಲ್ಲಿ (Neutral Stance) ಮುಂದುವರಿಯಲಿದೆ. ಅಂದರೆ, ಅಗತ್ಯಬಿದ್ದಾಗ ರೆಪೋ ದರ ಏರಿಸಬಹುದು, ಅಥವಾ ಇಳಿಸಬಹುದು.

ಆರ್ಥಿಕ ಬೆಳವಣಿಗೆ ನಿರೀಕ್ಷೆ ತಗ್ಗಿಸಿದ ಆರ್​ಬಿಐ

ಮಧ್ಯಪ್ರಾಚ್ಯ ಬಿಕ್ಕಟ್ಟು ಇತ್ಯಾದಿ ಕಾರಣಕ್ಕೆ ಆರ್ಥಿಕ ಬೆಳವಣಿಗೆಯ ಮೇಲೆ ಪರಿಣಾಮ ಬೀರಬಹುದು ಎಂದು ಸಂಜಯ್ ಮಲ್ಹೋತ್ರಾ ತಿಳಿಸಿದರು. ಈ ವರ್ಷದ (2026-27) ಆರ್ಥಿಕ ಬೆಳವಣಿಗೆ ಶೇ. 6.9ರಷ್ಟು ಹೆಚ್ಚಬಹುದು ಎಂದು ಈ ಹಿಂದಿನ ಎಂಪಿಸಿ ಸಭೆಯಲ್ಲಿ ಅಂದಾಜಿಸಲಾಗಿತ್ತು. ಈಗ ಆ ನಿರೀಕ್ಷೆಯನ್ನು ಶೇ. 6.6ಕ್ಕೆ ತಗ್ಗಿಸಲಾಗಿದೆ. ಇದಕ್ಕೆ ಜಾಗತಿಕ ರಾಜಕೀಯದ ಪ್ರಕ್ಷುಬ್ದ ವಾತಾವರಣ ಕಾರಣವಿರಬಹುದು ಎಂದಿದ್ದಾರೆ.

ಇದನ್ನೂ ಓದಿ: ಅಮೆರಿಕಕ್ಕೆ ಹೋಗಿ ದೊಡ್ಡ ಉದ್ಯಮಗಳನ್ನು ಕಟ್ಟಿದ ವಲಸಿಗರಲ್ಲಿ ಭಾರತೀಯರೇ ಅತಿಹೆಚ್ಚು

ಜಿಡಿಪಿ ದರ ಅಂದಾಜು

2026-27ರಲ್ಲಿ ಜಿಡಿಪಿ ದರ ಶೇ. 6.6

  1. ಮೊದಲ ತ್ರೈಮಾಸಿಕದಲ್ಲಿ ಶೇ. 6.6
  2. ಎರಡನೇ ತ್ರೈಮಾಸಿಕದಲ್ಲಿ ಶೇ. 6.3
  3. ಮೂರನೇ ತ್ರೈಮಾಸಿಕದಲ್ಲಿ ಶೇ. 6.5
  4. ನಾಲ್ಕನೇ ತ್ರೈಮಾಸಿಕದಲ್ಲಿ ಶೇ. 6.8

ಇಲ್ಲಿ ಮೊದಲ ತ್ರೈಮಾಸಿಕವೆಂದರೆ 2026ರ ಏಪ್ರಿಲ್​ನಿಂದ ಜೂನ್​ವರೆಗಿನ ಮೂರು ತಿಂಗಳ ಅವಧಿ. ನಾಲ್ಕನೇ ತ್ರೈಮಾಸಿಕ 2027ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿಯಾಗಿರುತ್ತದೆ.

ಹಣದುಬ್ಬರ ಸ್ಥಿತಿಯಲ್ಲೂ ಪ್ರಕ್ಷುಬ್ದತೆ

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಹಣದುಬ್ಬರದ ಮೇಲೆ ಒತ್ತಡ ಹೆಚ್ಚುತ್ತಿರುವುದನ್ನು ಗುರುತಿಸಿದ್ದಾರೆ. ಈ ವರ್ಷ ಹಣದುಬ್ಬರವು ಆರ್​ಬಿಐನ ಇನ್​ಫ್ಲೇಶನ್ ಟಾರ್ಗೆಟ್ ಅನ್ನು ಮೀರಿ ಹೋಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ. ಅವರ ಪ್ರಕಾರ ಈ ವರ್ಷ ಹಣದುಬ್ಬರ ದರ ಶೇ. 5.1ಕ್ಕೆ ಹೆಚ್ಚಬಹುದು. ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ ಮಾಡಲಾದ ಅಂದಾಜು ಪ್ರಕಾರ ಹಣದುಬ್ಬರ ಶೇ. 4.6ರಷ್ಟು ಇರಬಹುದು ಎನ್ನಲಾಗಿತ್ತು. ಈ ಬಾರಿ ಅದು ನಿರೀಕ್ಷೆ ಮೀರಿ ಹೆಚ್ಚಳವಾಗುತ್ತಿದೆ.

ಇದನ್ನೂ ಓದಿ: ಪ್ರಧಾನಿ ಮೋದಿಯೊಂದಿಗೆ ವೆನಿಜುವೆಲಾ ಅಧ್ಯಕ್ಷೆ ಮಾತುಕತೆ; ಪ್ರಸ್ತಾಪಿತ ಇಂಧನ ಒಪ್ಪಂದದಿಂದ ಭಾರತಕ್ಕೇನು ಲಾಭ?

ಈ ಹಣಕಾಸು ವರ್ಷದ ನಾಲ್ಕು ತ್ರೈಮಾಸಿಕಗಳಲ್ಲಿ ಹಣದುಬ್ಬರ ಕ್ರಮವಾಗಿ ಶೇ. 4.8, ಶೇ. 5.1, ಶೇ. 5.9 ಮತ್ತು ಶೇ. 5.4ರಷ್ಟು ಇರಬಹುದು ಎಂದು ಸಂಜಯ್ ಮಲ್ಹೋತ್ರಾ ಹೇಳಿದ್ದಾರೆ. ಆರ್​ಬಿಐ ಹಣದುಬ್ಬರದ ಗುರಿಯನ್ನು ಶೇ. 4ಕ್ಕೆ ನಿಗದಿ ಮಾಡಿದೆ. ಆ ನಿಟ್ಟಿನಲ್ಲಿ ತಾಳಿಕೆ ಮಿತಿಯಾಗಿ ಶೇ. 2ರಿಂದ 6 ಅನ್ನು ನಿಗದಿ ಮಾಡಿದೆ. ಸದ್ಯ, ಈ ವರ್ಷದ ಹಣದುಬ್ಬರದ ಅಂದಾಜು ದರವು ಈ ತಾಳಿಕೆಯ ಮಿತಿಯೊಳಗೆಯೇ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:21 am, Fri, 5 June 26

Follow Us
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
RSS ವಿರುದ್ಧ ಅವಹೇಳನಕಾರಿ ಪೋಸ್ಟ್: ಪ್ರಿಯಾಂಕ್ ಖರ್ಗೆ, ನಲಪಾಡ್‌ಗೆ ಸಮನ್ಸ್
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಸಿಎಂ ಸ್ಥಾನದಿಂದ ಕೆಳಗಿಳಿದ ಬಳಿಕ ಮೊದಲ ಬಾರಿಗೆ ತವರಿಗೆ ಸಿದ್ದರಾಮಯ್ಯ ಭೇಟಿ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಪೊಲೀಸರ ಮೇಲೆ ಹಲ್ಲೆ ಮಾಡಿ ಆರೋಪಿ ಪರಾರಿ: ಸಿಸಿಟಿವಿಯಲ್ಲಿ ದೃಶ್ಯ ಸೆರೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಅಣ್ಣ ಬಾಂಬ್ ಇದೆ ಓಡು ಅಂದು ಹೋದ್ಲು: ಕಾರು ಕಳೆದುಕೊಂಡವನ ಕರುಣಾಜನಕ ಕಥೆ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಭಾಮಾ ಹರೀಶ್ ಪುತ್ರ ನಿಧನ: ನಡೆದಿದ್ದೇನೆಂದು ವಿವರಿಸಿದ ಚಿಕ್ಕಪ್ಪ
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಇತಿಹಾಸ ಸೃಷ್ಟಿಸೋ ಕೆಲಸ ಮಾಡ್ತೀವಿ ಎಂದ ಸಿಎಂ ಡಿಕೆ ಶಿವಕುಮಾರ್
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಚಿಕ್ಕಬಳ್ಳಾಪುರದಲ್ಲಿ ಶಾಸಕ ಪ್ರದೀಪ್ ಈಶ್ವರ್ ಮೇಲೆ ಚಪ್ಪಲಿ ಎಸೆತ!
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬೆಳಗಾವಿ ಮೂಲದ ಶಾಸಕನಿಂದ ಅಡ್ಡಮತದಾನ ಶಂಕೆ, ಬಿಜೆಪಿಯಲ್ಲಿ ಸಂಚಲನ
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಬಿಜೆಪಿ ನಾಯಕರ ಮಧ್ಯೆಯೇ ಜೋರಾದ ವಾಗ್ಯುದ್ಧ!
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ
ಕೆಂಪೇಗೌಡ ಜಯಂತಿ ನಡೆಯಲು ಬಿಡದೇ ಪ್ರದೀಪ್ ಈಶ್ವರ್ ವಿರುದ್ಧ ಆಕ್ರೋಶ