AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Repo Rate: ಆರ್​​​ಬಿಐ ರಿಪೋ ದರ 50 ಮೂಲಾಂಕಗಳಷ್ಟು ಕಡಿತ; ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆ

RBI cuts repo rate by 50 basis points: ಭಾರತೀಯ ರಿಸರ್ವ್ ಬ್ಯಾಂಕ್ ತನ್ನ ಜೂನ್ ತಿಂಗಳ ಎಂಪಿಸಿ ಸಭೆಯಲ್ಲಿ ರಿಪೋ ದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಿದೆ. ಇದರೊಂದಿಗೆ ಶೇ. 6ರಷ್ಟಿದ್ದ ರಿಪೋ ದರ ಶೇ. 5.50ಕ್ಕೆ ಇಳಿಕೆಯಾಗಿದೆ. ಆರ್​​ಬಿಐ ಸತತ ಮೂರನೇ ಬಾರಿ ರಿಪೋ ದರ ಇಳಿಕೆ ಮಾಡಿದೆ. ಫೆಬ್ರುವರಿ ಮತ್ತು ಏಪ್ರಿಲ್ ತಿಂಗಳಲ್ಲಿ ತಲಾ 25 ಮೂಲಾಂಕಗಳಷ್ಟು ಬಡ್ಡಿದರ ಇಳಿಸಲಾಗಿತ್ತು.

Repo Rate: ಆರ್​​​ಬಿಐ ರಿಪೋ ದರ 50 ಮೂಲಾಂಕಗಳಷ್ಟು ಕಡಿತ; ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆ
ಸಂಜಯ್ ಮಲ್ಹೋತ್ರಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jun 06, 2025 | 10:39 AM

Share

ನವದೆಹಲಿ, ಜೂನ್ 6: ಆರ್​​ಬಿಐ ಸತತ ಮೂರನೇ ಬಾರಿ ರಿಪೋ ದರ ಕಡಿತಗೊಳಿಸಿದೆ. ನಿರೀಕ್ಷೆಯಂತೆ ಈ ಬಾರಿ ಬಡ್ಡಿದರವನ್ನು 50 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಶೇ. 6ರಷ್ಟಿರುವ ಬಡ್ಡಿದರ ಈಗ ಶೇ. 5.50ಕ್ಕೆ ಇಳಿಕೆಯಾಗಿದೆ. ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆಯ ಈ ನಿರ್ಧಾರವನ್ನು ಪತ್ರಿಕಾಗೋಷ್ಠಿಯಲ್ಲಿ ಪ್ರಕಟಿಸಿದ್ದಾರೆ. ಆರ್​​ಬಿಐ ತನ್ನ ರಿಪೋ ದರವನ್ನು ಸತತ ಮೂರನೇ ಬಾರಿ ಇಳಿಕೆ ಮಾಡಿದಂತಾಗಿದೆ. ಈ ವರ್ಷದ ಆರಂಭದಲ್ಲಿ ರಿಪೋ ದರ ಶೇ. 6.50ರಷ್ಟಿತ್ತು. ಆರು ತಿಂಗಳ ಅವಧಿಯಲ್ಲಿ ಶೇ. 1ರಷ್ಟು ದರ ಇಳಿದಂತಾಗಿದೆ. ಈ ಹೊಸ ದರವು ತತ್​​ಕ್ಷಣದಿಂದಲೇ ಜಾರಿಗೆ ಬರಲಿದೆ.

ಬಡ್ಡಿದರ ಇಳಿಸಲು ಇದು ಕಾರಣ?

ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ರಿಪೋ ದರ ಇಳಿಸುವ ನಿರ್ಧಾರಕ್ಕೆ ಪ್ರಮುಖ ಕಾರಣವನ್ನೂ ಹೆಸರಿಸಿದ್ದಾರೆ. ಹಣದುಬ್ಬರ ನಿಯಂತ್ರಣದಲ್ಲಿರುವುದರಿಂದ ಆರ್​​ಬಿಐಗೆ ಈ ನಿರ್ಧಾರ ತೆಗೆದುಕೊಳ್ಳಲು ಸಾಧ್ಯವಾಗಿದೆ. ಜಾಗತಿಕ ಅನಿಶ್ಚಿತ ವಾತಾವರಣದಿಂದ ಹಿನ್ನಡೆಯಲ್ಲಿರುವ ಆರ್ಥಿಕತೆಗೆ ರಿಪೋ ದರ ಇಳಿಕೆಯು ಪುಷ್ಟಿ ಕೊಡುವ ನಿರೀಕ್ಷೆ ಇದೆ.

ಇದನ್ನೂ ಓದಿ: ಭಾರತದಲ್ಲಿ ತಯಾರಾಗಲಿದೆ ರಫೇಲ್ ಯುದ್ಧವಿಮಾನದ ಫ್ಯೂಸಲಾಜ್; ಡಸೋ ಏವಿಯೇಶನ್ ಜೊತೆ ಟಾಟಾ ಗ್ರೂಪ್ ಒಪ್ಪಂದ

ಆರ್​​ಬಿಐ ಹಣಕಾಸು ನಿಲುವು ನ್ಯೂಟ್ರಲ್​​ಗೆ ಬದಲಾವಣೆ

ಮತ್ತೊಂದು ಪ್ರಮುಖ ನಿರ್ಧಾರದಲ್ಲಿ ಆರ್​​ಬಿಐ ತನ್ನ ಮಾನಿಟರಿ ಪಾಲಿಸಿ ಸ್ಟ್ಯಾನ್ಸ್ ಅಥವಾ ಹಣಕಾಸು ನೀತಿ ನಿಲುವನ್ನು ಬದಲಾಯಿಸಿದೆ. ಅಕಾಮೊಡೇಟಿವ್ ಎಂದಿದ್ದ ನಿಲುವನ್ನು ನ್ಯೂಟ್ರಲ್​​ಗೆ ಬದಲಾಯಿಸಲಾಗಿದೆ. ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ ನೀತಿ ನಿಲುವನ್ನು ನ್ಯೂಟ್ರಲ್​​ನಿಂದ ಅಕಾಮೊಡೇಟಿವ್​​ಗೆ ಬದಲಾಯಿಸಲಾಗಿತ್ತು. ಈಗ ವಾಪಸ್ ನ್ಯೂಟ್ರಲ್ ನಿಲುವಿಗೆ ಬರಲಾಗಿದೆ.

ಹಾಗೆಯೇ, ಕ್ಯಾಷ್ ರಿಸರ್ವ್ ರೇಶಿಯೋವನ್ನು 100 ಮೂಲಾಂಕಗಳಷ್ಟು ಇಳಿಕೆ ಮಾಡಲಾಗಿದೆ. ಇದರೊಂದಿಗೆ ಬ್ಯಾಂಕಿಂಗ್ ವ್ಯವಸ್ಥೆಗೆ 2.5 ಲಕ್ಷ ಕೋಟಿ ರೂ ಮೊತ್ತದ ಹಣದ ಹರಿವು ಆಗಲು ಸಾಧ್ಯವಾಗಲಿದೆ.

ಇದನ್ನೂ ಓದಿ: ಸರ್ಕಾರಕ್ಕೆ ಅದಾನಿ ಗ್ರೂಪ್​​ನಿಂದ ಸಖತ್ ಟ್ಯಾಕ್ಸ್ ಕಲೆಕ್ಷನ್; ಇಡೀ ಬೆಂಗಳೂರು ಮೆಟ್ರೋ ನಿರ್ಮಾಣಕ್ಕಾಗುವಷ್ಟು ಹಣ ಅದು

ಜಿಡಿಪಿ, ಹಣದುಬ್ಬರದ ಬಗ್ಗೆ ಆರ್​​ಬಿಐ ಅಂದಾಜು

ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಭಾರತದ ಆರ್ಥಿಕತೆ ಈ ವರ್ಷ (2025-26) ಶೇ. 6.5ರಷ್ಟು ಹೆಚ್ಚಬಹುದು ಎಂದಿದ್ದಾರೆ. ಹಾಗೆಯೇ, ಹಣದುಬ್ಬರವು ಈ ವರ್ಷ ಶೇ. 3.7ರಷ್ಟು ಇರುವ ಸಾಧ್ಯತೆ ಇದೆ ಎಂದಿದ್ಧಾರೆ. ಇದು ಈ ಬಾರಿ ಸರಿಯಾದ ಪ್ರಮಾಣದಲ್ಲಿ ಮುಂಗಾರು ಮಳೆ ಬಂದು ಉತ್ತಮ ಬೆಳೆಯಾದರೆ ಇರುವ ಹಣದುಬ್ಬರ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:26 am, Fri, 6 June 25

ಕ್ರೌಡ್ ನಿಭಾಯಿಸಲಾಗದೆ ಮಾಲೀಕನಿಂದ ಅಂಗಡಿ ಕ್ಲೋಸ್!
ಕ್ರೌಡ್ ನಿಭಾಯಿಸಲಾಗದೆ ಮಾಲೀಕನಿಂದ ಅಂಗಡಿ ಕ್ಲೋಸ್!
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
ರಾಹುಲ್ ಬರುವ ಮೊದಲು ಶಾಸಕರ, ಕಾರ್ಯಕರ್ತರ ಸಭೆ: ಶಿವಕುಮಾರ್
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
‘ನಿಂಗ್ಯಾಕೆ ಬೇಕು ಇದೆಲ್ಲ’: ಪ್ರಥಮ್ ವಿರುದ್ಧ ನಿರ್ಮಾಪಕ ಕೆ ಮಂಜು
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸಿದ್ದರಾಮಯ್ಯರಿಂದ ಶಾಸಕರನ್ನೆಲ್ಲ ತಮ್ಮೆಡೆ ಸೆಳೆದುಕೊಳ್ಳುವ ಹುನ್ನಾರ: ಅಶೋಕ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಸತೀಶ್ ಜಾರಕಿಹೊಳಿ ಸೇರಿದಂತೆ ಯಾರೂ ತನ್ನ ಪರ ಮಾತಾಡಲಿಲ್ಲ: ಕರೆಮ್ಮ, ಶಾಸಕಿ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಧರ್ಮಸ್ಥಳ ಪ್ರಕರಣ: 2ನೇ ದಿನವೂ ಶವಗಳಿಗಾಗಿ ಮುಂದುವರಿದ ಶೋಧ
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಶಾಸಕರೊಂದಿಗೆ ಸಭೆ ನಡೆಸುವುದು ಸಿಎಂರ ಪರಮೋಚ್ಛ ಅಧಿಕಾರ: ಸುರೇಶ್
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಬೆಳಗಿನ ಜಾವ 3.50ಕ್ಕೆ ಸಂಭವಿಸಿರುವ ಅಪಘಾತ, ಲಾರಿಯ ಆರ್ಧಭಾಗ ರಸ್ತೆ ಮೇಲಿದೆ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಕೆಎಂಎಫ್​​ಗೆ ಮೆಜಾರಿಟಿ ಇರುವ ಪಕ್ಷದವರು ಅಧ್ಯಕ್ಷರಾಗುತ್ತಾರೆ: ಜಾರಕಿಹೊಳಿ
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್
ಪ್ರತಿಭಟನೆ ಸ್ವರೂಪವನ್ನು ಸಿಎಂ, ಡಿಸಿಎಂ ಇನ್ನೂ ನಿರ್ಧರಿಸಿಲ್ಲ: ಪರಮೇಶ್ವರ್