AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI MPC Meet: ಬಡ್ಡಿದರ 25 ಮೂಲಾಂಕಗಳಷ್ಟು ಇಳಿಸಿದ ಆರ್​ಬಿಐ; ರಿಪೋ ದರ ಶೇ. 5.25ಕ್ಕೆ ಇಳಿಕೆ

RBI Governor Sanjay Malhotra announces policy decisions of MPC: ತತ್​ಕ್ಷಣವೇ ಜಾರಿಗೆ ಬರುವಂತೆ ಆರ್​ಬಿಐ ತನ್ನ ರಿಪೋ ದರವನ್ನು ಶೇ. 5.5ರಿಂದ ಶೇ. 5.25ಕ್ಕೆ ಇಳಿಸಿದೆ. ಆರ್​ಬಿಐನ ಪಾಲಿಸಿ ಸ್ಟ್ಯಾನ್ಸ್ ಅಥವಾ ನೀತಿ ನಿಲುವನ್ನು ನ್ಯೂಟ್ರಲ್​ಗೆ ಇಡಲಾಗಿದೆ. ಈ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.3ರಷ್ಟು ಹೆಚ್ಚಬಹುದು. ಹಣದುಬ್ಬರ ಶೇ. 2ರಷ್ಟಿರಬಹುದು ಎಂದೂ ಅಂದಾಜಿಸಲಾಗಿದೆ.

RBI MPC Meet: ಬಡ್ಡಿದರ 25 ಮೂಲಾಂಕಗಳಷ್ಟು ಇಳಿಸಿದ ಆರ್​ಬಿಐ; ರಿಪೋ ದರ ಶೇ. 5.25ಕ್ಕೆ ಇಳಿಕೆ
ಸಂಜಯ್ ಮಲ್ಹೋತ್ರಾ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 05, 2025 | 10:43 AM

Share

ನವದೆಹಲಿ, ಡಿಸೆಂಬರ್ 5: ಭಾರತೀಯ ರಿಸರ್ವ್ ಬ್ಯಾಂಕ್ (RBI) ತನ್ನ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಿದೆ. ಈ ಮೂಲಕ ಬಡ್ಡಿದರ ಶೇ. 5.50ರಷ್ಟು ಇದ್ದದ್ದು ಶೇ. 5.25ಕ್ಕೆ ಇಳಿದಿದೆ. ಬುಧವಾರದಿಂದ ನಡೆದ ಎಂಪಿಸಿ ಸಭೆಯ ನಿರ್ಧಾರಗಳನ್ನು ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಇಂದು ಶುಕ್ರವಾರ ಪ್ರಕಟಿಸಿದ್ದಾರೆ. ಎಂಪಿಸಿಯ ಆರೂ ಸದಸ್ಯರು ಸರ್ವಾನುಮತದಿಂದ ರಿಪೋ ದರವನ್ನು 25 ಮೂಲಾಂಕಗಳಷ್ಟು ಇಳಿಸಲು ನಿರ್ಧರಿಸಿದ್ದಾಗಿ ತಿಳಿಸಿದ್ದಾರೆ. ಈ ಹೊಸ ದರಗಳು ತತ್​ಕ್ಷಣದಿಂದಲೇ ಜಾರಿಗೆ ಬರುತ್ತವೆ ಎಂದೂ ಹೇಳಿದ್ದಾರೆ.

ಅನಿಶ್ಚಿತ ಬಾಹ್ಯ ಪರಿಸ್ಥಿತಿ ನಡುವೆಯೂ ದೇಶದ ಆರ್ಥಿಕತೆಯ ಶಕ್ತಿ ಉತ್ತಮವಾಗಿದೆ ಎಂದು ಹೇಳಿದ ಆರ್​ಬಿಐ ಗವರ್ನರ್, ಗ್ರಾಮೀಣ ಹಾಗೂ ನಗರ ಭಾಗಗಳಲ್ಲಿ ಬೇಡಿಕೆ ಉತ್ತಮವಾಗಿದೆ. ಖಾಸಗಿ ಹೂಡಿಕೆಯೂ ಚೆನ್ನಾಗಿ ಆಗುತ್ತಿದೆ ಎಂದು ವಿವರಿಸಿದ್ದಾರೆ.

ಇದನ್ನೂ ಓದಿ: ಕೇಂದ್ರೀಯ ಅಬಕಾರಿ ತಿದ್ದುಪಡಿ ಮಸೂದೆಗೆ ಸಂಸತ್ ಅಸ್ತು; ರಾಜ್ಯಗಳಿಗೂ ಲಾಭ ಹಂಚಿಕೆ ಎಂದ ನಿರ್ಮಲಾ ಸೀತಾರಾಮನ್

ಈ ವರ್ಷ ಶೇ. 7.3 ಜಿಡಿಪಿ ವೃದ್ಧಿ: ಆರ್​ಬಿಐ ಅಂದಾಜು

ಭಾರತದ ಆರ್ಥಿಕತೆ ಈ ವರ್ಷ ಮೊದಲಾರ್ಧ ಶೇ. 8ರಷ್ಟು ಬೆಳೆದಿದೆ ಎಂದು ಹೇಳಿರುವ ಸಂಜಯ್ ಮಲ್ಹೋತ್ರಾ, ಈ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 7.3ರಷ್ಟು ಬೆಳೆಯಬಹುದು ಎಂದು ನಿರೀಕ್ಷಿಸಿದ್ದಾರೆ. ಈ ಹಿಂದಿನ ಎಂಪಿಸಿ ಸಭೆಯಲ್ಲಿ ಈ ವರ್ಷದ ಜಿಡಿಪಿ ಬೆಳವಣಿಗೆ ಶೇ. 6.3ರಷ್ಟು ಮಾತ್ರ ಇರಬಹುದು ಎಂದು ಅಂದಾಜು ಮಾಡಲಾಗಿತ್ತು. ಆದರೆ, ಕಳೆದ ಎರಡು ಕ್ವಾರ್ಟರ್​ಗಳಲ್ಲಿ ನಿರೀಕ್ಷೆಮೀರಿದಷ್ಟು ವೇಗದಲ್ಲಿ ಆರ್ಥಿಕತೆ ಬೆಳೆದಿರುವುದರಿಂದ ಆರ್​ಬಿಐ ತನ್ನ ಅಂದಾಜನ್ನು ಪರಿಷ್ಕರಿಸಿದೆ.

ಆರ್​ಬಿಐ ಗವರ್ನರ್ ಅವರು ಮುಂದಿನ ನಾಲ್ಕು ಕ್ವಾರ್ಟರ್​ಗಳಿಗೂ ಅವರು ಅಂದಾಜು ಮಾಡಿದ್ದಾರೆ. ಮುಂದಿನ ನಾಲ್ಕು ತ್ರೈಮಾಸಿಕಗಳಲ್ಲಿ ಜಿಡಿಪಿ ಶೇ. 7, ಶೇ 6.5, ಶೇ. 6.7 ಮತ್ತು ಶೇ. 6.8ರಷ್ಟು ಬೆಳೆಯಬಹುದು ಎಂದಿದ್ದಾರೆ.

ಹಣದುಬ್ಬರ ನಿರೀಕ್ಷೆಗಿಂತ ಕಡಿಮೆ

ದೇಶದಲ್ಲಿ ಹಣದುಬ್ಬರವು ಆರ್​ಬಿಐ ನಿರೀಕ್ಷಿಸುದದಕ್ಕಿಂತಲೂ ಕಡಿಮೆ ಆಗಿದೆ ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ ಈ ವರ್ಷ ಹಣದುಬ್ಬರ ಶೇ 2ರಷ್ಟು ಮಾತ್ರವೇ ಇರುತ್ತದೆ ಎಂದು ನಿರೀಕ್ಷಿಸಿದ್ದಾರೆ. ಹಿಂದಿನ ಎಂಪಿಸಿ ಸಭೆಯಲ್ಲಿ ಮಾಡಿದ ಅಂದಾಜಿಗಿಂತಲೂ ಶೇ. 0.6ರಷ್ಟು ಕಡಿಮೆ ಹಣದುಬ್ಬರ ದಾಖಲಾಗಬಹುದು ಎಂದಿದ್ದಾರೆ.

ಇದನ್ನೂ ಓದಿ: ಪಿಎಲ್​ಐ ಸ್ಕೀಮ್ ಅಡಿಯಲ್ಲಿ ಸೋಲಾರ್ ಪಿವಿ ಮಾಡ್ಯೂಲ್; ಸೃಷ್ಟಿಯಾದ ಉದ್ಯೋಗಗಳ ಸಂಖ್ಯೆ 43,000

ಮುಂದಿನ ನಾಲ್ಕು ಕ್ವಾರ್ಟರ್​ಗಳಲ್ಲಿ ಹಣದುಬ್ಬರ ದರ ಕ್ರಮವಾಗಿ ಶೇ. 0.6, ಶೇ. 1, ಶೇ. 3.9 ಮತ್ತು ಶೇ. 4ರಷ್ಟು ಇರಬಹುದು ಎಂದು ಆರ್​​ಬಿಐನ ಎಂಪಿಸಿ ಸಭೆಯಲ್ಲಿ ಅಂದಾಜು ಮಾಡಲಾಗಿದೆ.

ಆರ್​ಬಿಐ ಎಂಪಿಸಿ ಡಿಸೆಂಬರ್ ಸಭೆಯಲ್ಲಿ ಪ್ರಮುಖ ನಿರ್ಧಾರಗಳು

  • ರಿಪೋದರ 25 ಮೂಲಾಂಕಗಳು ಇಳಿಕೆ. ಶೇ. 5.50ರಿಂದ ಶೇ. 5.25ಕ್ಕೆ ಇಳಿಕೆ.
  • ಜಿಡಿಪಿ ದರ 2025-26ರಲ್ಲಿ ಶೇ. 7.3ರಷ್ಟು ಬೆಳೆಯಬಹುದು
  • ಹಣದುಬ್ಬರ 2025-26ರಲ್ಲಿ ಶೇ. 2ಕ್ಕೆ ಸೀಮಿತಗೊಳ್ಳಬಹುದು.
  • ಆರ್​​ಬಿಐ ಪಾಲಿಸಿ ನಿಲುವು ಅಥವಾ ಪಾಲಿಸಿ ಸ್ಟಾನ್ಸ್ ನ್ಯೂಟ್ರಲ್ ಆಗಿರುತ್ತದೆ
  • ಭಾರತದ ಫಾರೆಕ್ಸ್ ರಿಸರ್ವ್ ನಿಧಿ 686 ಬಿಲಿಯನ್ ಡಾಲರ್

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 10:12 am, Fri, 5 December 25

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ
ಸಿದ್ದರಾಮಯ್ಯ ಬಿಟ್ರೆ CM ಆಗುವ ಅರ್ಹತೆ ಖರ್ಗೆಗೆ ಮಾತ್ರ: ರಾಯರೆಡ್ಡಿ