AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ನಾಳೆಯಿಂದ ಆರ್​ಬಿಐನ ಎಂಪಿಸಿ ಸಭೆ; ಶೇ. 6.5ರ ರೆಪೋ ದರ ಮುಂದುವರಿಯುವ ಸಾಧ್ಯತೆ

Focus on Repo Rate: ಆರ್​ಬಿಐನ ಮಾನಿಟರಿ ಪಾಲಿಸಿ ಕಮಿಟಿ ಸಭೆ ಫೆ. 6ರಂದು ಆರಂಭವಾಗುತ್ತದೆ. ಫೆ. 8ರಂದು ಸಭೆ ನಿರ್ಧಾರ ಪ್ರಕಟವಾಗಲಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಶೇ. 6.5ರ ರೆಪೋ ದರ ಮುಂದುವರಿಸಲು ನಿರ್ಧರಿಸಬಹುದು ಎನ್ನಲಾಗಿದೆ. ಶಕ್ತಿಕಾಂತ ದಾಸ್, ರಾಜೀವ್ ರಂಜನ್, ಮೈಕೇಲ್ ದೇಬಬ್ರತಾ ಪಾತ್ರ ಸೇರಿದಂತೆ ಆರು ಜನರು ಎಂಪಿಸಿ ಸಮಿತಿಯ ಸದಸ್ಯರಾಗಿದ್ದಾರೆ.

RBI: ನಾಳೆಯಿಂದ ಆರ್​ಬಿಐನ ಎಂಪಿಸಿ ಸಭೆ; ಶೇ. 6.5ರ ರೆಪೋ ದರ ಮುಂದುವರಿಯುವ ಸಾಧ್ಯತೆ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 05, 2024 | 10:23 AM

Share

ನವದೆಹಲಿ, ಫೆ. 5: ಭಾರತೀಯ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿ ದ್ವೈಸಿಕ ವಾಗಿ (RBI MPC Meet) ನಡೆಸುವ ಸಭೆ ನಾಳೆ (ಫೆ. 6) ಆರಂಭವಾಗಲಿದೆ. ನಾಳೆ ಆರಂಭವಾಗಿ ಎರಡು ದಿನ ಸಭೆ ನಡೆಯುತ್ತದೆ. ಬಳಿಕ ಫೆಬ್ರುವರಿ 8ರಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಎಂಪಿಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ತಜ್ಞರ ಪ್ರಕಾರ ಈ ಬಾರಿಯೂ ಬಡ್ಡಿದರದಲ್ಲಿ (repo rate) ವ್ಯತ್ಯಯ ಆಗುವ ಸಾಧ್ಯತೆ ಇಲ್ಲ. ರಾಯ್ಟರ್ಸ್ ನಡೆಸಿದ ಆರ್ಥಿಕ ತಜ್ಞರ ಅಭಿಮತ ಸಂಗ್ರಹದಲ್ಲೂ ಇದೇ ಅನಿಸಿಕೆ ವ್ಯಕ್ತವಾಗಿದೆ. ಸದ್ಯ ಬಡ್ಡಿದರ ಅಥವಾ ರೆಪೋ ದರ ಶೇ. 6.5ರಷ್ಟಿದೆ. ಅದೇ ದರ ಮುಂದುವರಿಯಬಹುದು ಎನ್ನಲಾಗಿದೆ.

ಆರ್​ಬಿಐ ರೆಪೋ ದರ ಪರಿಷ್ಕರಿಸಿ ಸರಿಯಾಗಿ ಒಂದು ವರ್ಷ ಆಯಿತು. 2023ರ ಫೆಬ್ರುವರಿಯಲ್ಲಿ ನಡೆದಿದ್ದ ಎಂಪಿಸಿ ಸಭೆಯಲ್ಲಿ ಶೇ. 6.25ರಷ್ಟಿದ್ದ ರೆಪೋ ದರವನ್ನು ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅದಾದ ಬಳಕ ಸತತವಾಗಿ ದರದ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

ಹಣದುಬ್ಬರ ದರವೇ ಕಿಂಗ್​ಪಿನ್

ಆರ್​ಬಿಐ ರೆಪೋ ದರ ಪರಿಷ್ಕರಣೆಗೆ ಬಹುತೇಕ ಹಣದುಬ್ಬರ ದರವೇ ಆಧಾರವಾಗಿರುತ್ತದೆ. ಆರ್ಥಿಕತೆಯ ಓಟವನ್ನು ಇನ್ನಷ್ಟು ಸರಾಗಗೊಳಿಸಲು ಬಡ್ಡಿದರ ಕಡಿಮೆ ಮಾಡುವ ಅವಶ್ಯಕತೆ ಇದೆ. ಆದರೆ, ಹಣದುಬ್ಬರ ಈ ಕ್ರಮಕ್ಕೆ ಅಡ್ಡಿಯಾಗುತ್ತಾ ಬಂದಿದೆ. ಡಿಸೆಂಬರ್ ತಿಂಗಳಲ್ಲಿ ಹಣದುಬ್ಬರ ಶೇ. 5.69ರಷ್ಟಿದೆ. ಜನವರಿಯಲ್ಲೂ ಹೆಚ್ಚು ವ್ಯತ್ಯಯವಾಗುವುದು ಅನುಮಾನ. ಹೀಗಾಗಿ, ರೆಪೊ ದರವನ್ನು ಶೇ. 6.5ರ ದರದಲ್ಲೇ ಮುಂದುವರಿಸುವುದು ಆರ್​ಬಿಐಗೆ ಅನಿವಾರ್ಯ ಆಗಬಹುದು.

ಇದನ್ನೂ ಓದಿ: ಕೇಂದ್ರದಿಂದ ಅತಿಹೆಚ್ಚು ತೆರಿಗೆ ಪಾಲು ಪಡೆಯುವ ರಾಜ್ಯಗಳ್ಯಾವುವು? ಕರ್ನಾಟಕದ ಪಾಲೆಷ್ಟು? ಇಲ್ಲಿದೆ ತೆರಿಗೆ ಹಂಚಿಕೆ ಸೂತ್ರ ಇತ್ಯಾದಿ ಮಾಹಿತಿ

ಆರ್​ಬಿಐ ಮಾನಿಟರಿ ಪಾಲಿಸಿ ಕಮಿಟಿಯಲ್ಲಿ ಆರು ಸದಸ್ಯರು

ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿಯಲ್ಲಿ ಆರು ಸದಸ್ಯರಿದ್ದಾರೆ. ಇದರಲ್ಲಿ ಮೂವರು ಆರ್​ಬಿಐಗೆ ಸೇರಿದವರೇ ಆಗಿದ್ದರೆ, ಇತರ ಮೂವರು ಹೊರಗಿನವರಾಗಿದ್ದಾರೆ. ಈ ಸಮಿತಿ ಸದಸ್ಯರ ಪಟ್ಟಿ ಇಂತಿದೆ:

  1. ಶಕ್ತಿಕಾಂತ ದಾಸ್
  2. ರಾಜೀವ್ ರಂಜನ್
  3. ಮೈಕೇಲ್ ದೇಬಬ್ರತಾ ಪಾತ್ರ
  4. ಶಶಾಂಕ ಭಿಡೆ
  5. ಅಶಿಮಾ ಗೋಯಲ್
  6. ಜಯಂತ್ ಆರ್ ವರ್ಮಾ

ಶಕ್ತಿಕಾಂತ ದಾಸ್ ಆರ್​ಬಿಐನ ಗವರ್ನರ್ ಆಗಿದ್ದಾರೆ. ರಾಜೀವ್ ರಂಜನ್ ಆರ್​ಬಿಐನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರೆ ಮೈಕೇಲ್ ದೇಬಬ್ರತಾ ಪಾಲ್ ಉಪಗವರ್ನರ್ ಆಗಿದ್ದಾರೆ.

ಇದನ್ನೂ ಓದಿ: ಖಾಸಗಿ ಬಂಡವಾಳ ವೆಚ್ಚ ಬರದಿದ್ದರೂ ಇದೇ ಆರ್ಥಿಕ ವೇಗ ಉಳಿಯಲು ಸಾಧ್ಯ: ಟಿವಿ ಸೋಮನಾಥನ್

ಉಳಿದ ಮೂವರಾದ ಶಶಾಂಕ್ ಭಿಡೆ, ಆಶಿಮಾ ಗೋಯಲ್ ಮತ್ತು ಜಯಂತ್ ವರ್ಮಾ ಸ್ವತಂತ್ರ ಸದಸ್ಯರು. ಈ ಮೂವರನ್ನು ಸರ್ಕಾರ 2020ರಲ್ಲಿ ಸಮಿತಿಗೆ ನೇಮಕ ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಆಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ