AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ನಾಳೆಯಿಂದ ಆರ್​ಬಿಐನ ಎಂಪಿಸಿ ಸಭೆ; ಶೇ. 6.5ರ ರೆಪೋ ದರ ಮುಂದುವರಿಯುವ ಸಾಧ್ಯತೆ

Focus on Repo Rate: ಆರ್​ಬಿಐನ ಮಾನಿಟರಿ ಪಾಲಿಸಿ ಕಮಿಟಿ ಸಭೆ ಫೆ. 6ರಂದು ಆರಂಭವಾಗುತ್ತದೆ. ಫೆ. 8ರಂದು ಸಭೆ ನಿರ್ಧಾರ ಪ್ರಕಟವಾಗಲಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ನೇತೃತ್ವದಲ್ಲಿ ನಡೆಯುವ ಸಭೆಯಲ್ಲಿ ಶೇ. 6.5ರ ರೆಪೋ ದರ ಮುಂದುವರಿಸಲು ನಿರ್ಧರಿಸಬಹುದು ಎನ್ನಲಾಗಿದೆ. ಶಕ್ತಿಕಾಂತ ದಾಸ್, ರಾಜೀವ್ ರಂಜನ್, ಮೈಕೇಲ್ ದೇಬಬ್ರತಾ ಪಾತ್ರ ಸೇರಿದಂತೆ ಆರು ಜನರು ಎಂಪಿಸಿ ಸಮಿತಿಯ ಸದಸ್ಯರಾಗಿದ್ದಾರೆ.

RBI: ನಾಳೆಯಿಂದ ಆರ್​ಬಿಐನ ಎಂಪಿಸಿ ಸಭೆ; ಶೇ. 6.5ರ ರೆಪೋ ದರ ಮುಂದುವರಿಯುವ ಸಾಧ್ಯತೆ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Feb 05, 2024 | 10:23 AM

Share

ನವದೆಹಲಿ, ಫೆ. 5: ಭಾರತೀಯ ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿ ದ್ವೈಸಿಕ ವಾಗಿ (RBI MPC Meet) ನಡೆಸುವ ಸಭೆ ನಾಳೆ (ಫೆ. 6) ಆರಂಭವಾಗಲಿದೆ. ನಾಳೆ ಆರಂಭವಾಗಿ ಎರಡು ದಿನ ಸಭೆ ನಡೆಯುತ್ತದೆ. ಬಳಿಕ ಫೆಬ್ರುವರಿ 8ರಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿ, ಎಂಪಿಸಿ ಸಭೆಯ ನಿರ್ಧಾರಗಳನ್ನು ಪ್ರಕಟಿಸಲಿದ್ದಾರೆ. ತಜ್ಞರ ಪ್ರಕಾರ ಈ ಬಾರಿಯೂ ಬಡ್ಡಿದರದಲ್ಲಿ (repo rate) ವ್ಯತ್ಯಯ ಆಗುವ ಸಾಧ್ಯತೆ ಇಲ್ಲ. ರಾಯ್ಟರ್ಸ್ ನಡೆಸಿದ ಆರ್ಥಿಕ ತಜ್ಞರ ಅಭಿಮತ ಸಂಗ್ರಹದಲ್ಲೂ ಇದೇ ಅನಿಸಿಕೆ ವ್ಯಕ್ತವಾಗಿದೆ. ಸದ್ಯ ಬಡ್ಡಿದರ ಅಥವಾ ರೆಪೋ ದರ ಶೇ. 6.5ರಷ್ಟಿದೆ. ಅದೇ ದರ ಮುಂದುವರಿಯಬಹುದು ಎನ್ನಲಾಗಿದೆ.

ಆರ್​ಬಿಐ ರೆಪೋ ದರ ಪರಿಷ್ಕರಿಸಿ ಸರಿಯಾಗಿ ಒಂದು ವರ್ಷ ಆಯಿತು. 2023ರ ಫೆಬ್ರುವರಿಯಲ್ಲಿ ನಡೆದಿದ್ದ ಎಂಪಿಸಿ ಸಭೆಯಲ್ಲಿ ಶೇ. 6.25ರಷ್ಟಿದ್ದ ರೆಪೋ ದರವನ್ನು ಶೇ. 6.50ಕ್ಕೆ ಹೆಚ್ಚಿಸಲಾಗಿತ್ತು. ಅದಾದ ಬಳಕ ಸತತವಾಗಿ ದರದ ಯಥಾಸ್ಥಿತಿ ಕಾಯ್ದುಕೊಳ್ಳಲಾಗಿದೆ.

ಹಣದುಬ್ಬರ ದರವೇ ಕಿಂಗ್​ಪಿನ್

ಆರ್​ಬಿಐ ರೆಪೋ ದರ ಪರಿಷ್ಕರಣೆಗೆ ಬಹುತೇಕ ಹಣದುಬ್ಬರ ದರವೇ ಆಧಾರವಾಗಿರುತ್ತದೆ. ಆರ್ಥಿಕತೆಯ ಓಟವನ್ನು ಇನ್ನಷ್ಟು ಸರಾಗಗೊಳಿಸಲು ಬಡ್ಡಿದರ ಕಡಿಮೆ ಮಾಡುವ ಅವಶ್ಯಕತೆ ಇದೆ. ಆದರೆ, ಹಣದುಬ್ಬರ ಈ ಕ್ರಮಕ್ಕೆ ಅಡ್ಡಿಯಾಗುತ್ತಾ ಬಂದಿದೆ. ಡಿಸೆಂಬರ್ ತಿಂಗಳಲ್ಲಿ ಹಣದುಬ್ಬರ ಶೇ. 5.69ರಷ್ಟಿದೆ. ಜನವರಿಯಲ್ಲೂ ಹೆಚ್ಚು ವ್ಯತ್ಯಯವಾಗುವುದು ಅನುಮಾನ. ಹೀಗಾಗಿ, ರೆಪೊ ದರವನ್ನು ಶೇ. 6.5ರ ದರದಲ್ಲೇ ಮುಂದುವರಿಸುವುದು ಆರ್​ಬಿಐಗೆ ಅನಿವಾರ್ಯ ಆಗಬಹುದು.

ಇದನ್ನೂ ಓದಿ: ಕೇಂದ್ರದಿಂದ ಅತಿಹೆಚ್ಚು ತೆರಿಗೆ ಪಾಲು ಪಡೆಯುವ ರಾಜ್ಯಗಳ್ಯಾವುವು? ಕರ್ನಾಟಕದ ಪಾಲೆಷ್ಟು? ಇಲ್ಲಿದೆ ತೆರಿಗೆ ಹಂಚಿಕೆ ಸೂತ್ರ ಇತ್ಯಾದಿ ಮಾಹಿತಿ

ಆರ್​ಬಿಐ ಮಾನಿಟರಿ ಪಾಲಿಸಿ ಕಮಿಟಿಯಲ್ಲಿ ಆರು ಸದಸ್ಯರು

ರಿಸರ್ವ್ ಬ್ಯಾಂಕ್​ನ ಹಣಕಾಸು ನೀತಿ ಸಮಿತಿಯಲ್ಲಿ ಆರು ಸದಸ್ಯರಿದ್ದಾರೆ. ಇದರಲ್ಲಿ ಮೂವರು ಆರ್​ಬಿಐಗೆ ಸೇರಿದವರೇ ಆಗಿದ್ದರೆ, ಇತರ ಮೂವರು ಹೊರಗಿನವರಾಗಿದ್ದಾರೆ. ಈ ಸಮಿತಿ ಸದಸ್ಯರ ಪಟ್ಟಿ ಇಂತಿದೆ:

  1. ಶಕ್ತಿಕಾಂತ ದಾಸ್
  2. ರಾಜೀವ್ ರಂಜನ್
  3. ಮೈಕೇಲ್ ದೇಬಬ್ರತಾ ಪಾತ್ರ
  4. ಶಶಾಂಕ ಭಿಡೆ
  5. ಅಶಿಮಾ ಗೋಯಲ್
  6. ಜಯಂತ್ ಆರ್ ವರ್ಮಾ

ಶಕ್ತಿಕಾಂತ ದಾಸ್ ಆರ್​ಬಿಐನ ಗವರ್ನರ್ ಆಗಿದ್ದಾರೆ. ರಾಜೀವ್ ರಂಜನ್ ಆರ್​ಬಿಐನ ಎಕ್ಸಿಕ್ಯೂಟಿವ್ ಡೈರೆಕ್ಟರ್ ಆಗಿದ್ದರೆ ಮೈಕೇಲ್ ದೇಬಬ್ರತಾ ಪಾಲ್ ಉಪಗವರ್ನರ್ ಆಗಿದ್ದಾರೆ.

ಇದನ್ನೂ ಓದಿ: ಖಾಸಗಿ ಬಂಡವಾಳ ವೆಚ್ಚ ಬರದಿದ್ದರೂ ಇದೇ ಆರ್ಥಿಕ ವೇಗ ಉಳಿಯಲು ಸಾಧ್ಯ: ಟಿವಿ ಸೋಮನಾಥನ್

ಉಳಿದ ಮೂವರಾದ ಶಶಾಂಕ್ ಭಿಡೆ, ಆಶಿಮಾ ಗೋಯಲ್ ಮತ್ತು ಜಯಂತ್ ವರ್ಮಾ ಸ್ವತಂತ್ರ ಸದಸ್ಯರು. ಈ ಮೂವರನ್ನು ಸರ್ಕಾರ 2020ರಲ್ಲಿ ಸಮಿತಿಗೆ ನೇಮಕ ಮಾಡಿತ್ತು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಬಹುಭಾಷೆಯಲ್ಲಿ ರೈತನ ಅಹವಾಲು ಕೇಳಿ ಶಾಸಕರಿಗೇ ಅಚ್ಚರಿ!
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು