AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐ ಎಂಪಿಸಿ ಸಭೆ ಹೈಲೈಟ್ಸ್; ರೆಪೋ ದರ ಶೇ. 6.5ರಲ್ಲಿ ಮುಂದುವರಿಕೆ; ಜಿಡಿಪಿ, ಹಣದುಬ್ಬರ ಅಂದಾಜು ವಿವರ ಇಲ್ಲಿದೆ

Shaktikanta Das Press Conference: ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆಯಂತೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೋ ದರವನ್ನು ಶೇ. 6.5ರಲ್ಲೇ ಮುಂದುವರಿಸಲು ಆರ್​ಬಿಐ ನಿರ್ಧರಿಸಿದೆ. ಅಕ್ಟೋಬರ್ 4ರಿಂದ ನಡೆದ ಎಂಪಿಸಿ ಸಭೆಯಲ್ಲಿ ತೆಗೆದುಕೊಂಡ ಹಲವು ಮಹತ್ವದ ನಿರ್ಧಾರಗಳಲ್ಲಿ ಇದೂ ಒಂದು. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಎಂಪಿಸಿ ಸಭೆಯ ನಿರ್ಧಾರಗಳು ಮತ್ತು ವಿಚಾರಗಳನ್ನು ಪ್ರಸ್ತುತಪಡಿಸಿದರು.

ಆರ್​ಬಿಐ ಎಂಪಿಸಿ ಸಭೆ ಹೈಲೈಟ್ಸ್; ರೆಪೋ ದರ ಶೇ. 6.5ರಲ್ಲಿ ಮುಂದುವರಿಕೆ; ಜಿಡಿಪಿ, ಹಣದುಬ್ಬರ ಅಂದಾಜು ವಿವರ ಇಲ್ಲಿದೆ
ಭಾರತೀಯ ರಿಸರ್ವ್ ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Oct 06, 2023 | 11:52 AM

Share

ನವದೆಹಲಿ, ಅಕ್ಟೋಬರ್ 6: ಭಾರತೀಯ ರಿಸರ್ವ್ ಬ್ಯಾಂಕ್ (RBI) ನಿರೀಕ್ಷೆಯಂತೆ ರೆಪೋ ದರದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ರೆಪೋ ದರವನ್ನು ಶೇ. 6.5ರಲ್ಲೇ ಮುಂದುವರಿಸಲು ಆರ್​ಬಿಐ ನಿರ್ಧರಿಸಿದೆ. ಅಕ್ಟೋಬರ್ 4ರಿಂದ ನಡೆದ ಎಂಪಿಸಿ ಸಭೆಯಲ್ಲಿ ತೆಗೆದುಕೊಂಡ ಹಲವು ಮಹತ್ವದ ನಿರ್ಧಾರಗಳಲ್ಲಿ ಇದೂ ಒಂದು. ಇಂದು ಬೆಳಗ್ಗೆ 10 ಗಂಟೆಗೆ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಿದ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್, ಎಂಪಿಸಿ ಸಭೆಯ ನಿರ್ಧಾರಗಳು ಮತ್ತು ವಿಚಾರಗಳನ್ನು ಪ್ರಸ್ತುತಪಡಿಸಿದರು. ಈ ಹಣಕಾಸು ವರ್ಷದ ಜಿಡಿಪಿ ಬೆಳವಣಿಗೆ, ಹಣದುಬ್ಬರ ಇತ್ಯಾದಿ ಬಗ್ಗೆ ಆರ್​ಬಿಐ ಅಭಿಪ್ರಾಯಗಳನ್ನು ತಿಳಿಸಿದರು.

ಹಣದುಬ್ಬರವನ್ನು ಶೇ. 4ಕ್ಕೆ ತಂದು ನಿಲ್ಲಿಸುವ ತಮ್ಮ ಗುರಿಯ ಈಡೇರಿಕೆಗೆ ಪೂರಕವಾಗಿ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ ಎಂದು ಶಕ್ತಿಕಾಂತದಾಸ್ ತಿಳಿಸಿದ್ದಾರೆ. ರೆಪೋ ದರ ಶೇ. 6.5ರಲ್ಲಿ ಮುಂದುವರಿಸುವ ನಿರ್ಧಾರ ಮಾತ್ರವಲ್ಲದೇ, ಎಸ್​ಡಿಎಫ್ ದರವನ್ನು ಶೇ. 6.25ರಲ್ಲೂ ಮತ್ತು ಎಂಎಸ್​ಎಫ್ ಹಾಗು ಬ್ಯಾಂಕ್ ದರಗಳನ್ನು ಶೇ. 6.75ರಲ್ಲೂ ಮುಂದುವರಿಸಲು ಆರ್​ಬಿಐನ ಈ ಸಮಿತಿ ನಿರ್ಧಾರ ಮಾಡಿರುವುದನ್ನು ದಾಸ್ ಹೇಳಿದರು. ಎಸ್​ಡಿಎಫ್ ಮತ್ತು ಎಂಎಸ್​ಎಫ್ ಎಂಬುದು ಬಡ್ಡಿದರದ ಕೆಳಗಿನ ಮತ್ತು ಮೇಲಿನ ಮಿತಿ ಆಗಿವೆ.

ಇದನ್ನೂ ಓದಿ: ಇವರೇನು ಸೆಬಿಯನ್ನು ಮೂರ್ಖ ಅಂದುಕೊಂಡಿದ್ದಾರಾ?: ಸೋಷಿಯಲ್ ಮೀಡಿಯಾ ಸ್ಟಾರ್ಸ್, ಆಲ್ಗೋ ಟ್ರೇಡರ್​ಗಳನ್ನು ತರಾಟೆಗೆ ತೆಗೆದುಕೊಂಡ ಸೆಬಿ ಅಧ್ಯಕ್ಷೆ

ರೆಪೋ ದರ ಎಂದರೇನು?

ರೆಪೋ ದರ ಎಂಬುದು ಆರ್​ಬಿಐನ ಸಾಲಕ್ಕೆ ಬಡ್ಡಿದರವಾಗಿದೆ. ವಾಣಿಜ್ಯ ಬ್ಯಾಂಕುಗಳು ಆರ್​ಬಿಐ ಬಳಿ ಪಡೆಯುವ ಸಾಲಕ್ಕೆ ತೆರಬೇಕಾದ ಬಡ್ಡಿದರ ಅದು. ರಿವರ್ಸ್ ರೆಪೋ ದರ ಎಂದರೆ ಬ್ಯಾಂಕುಗಳು ಆರ್​ಬಿಐ ಬಳಿ ಇರಿಸುವ ಠೇವಣಿಗೆ ಸಿಗುವ ಬಡ್ಡಿದರವಾಗಿದೆ.

ಇನ್ನು, ಹಣಕಾಸು ಹರಿವು ಹಿಂಪಡೆಯುವ (Withdrawal of Accommodation ವಿಚಾರದಲ್ಲೂ ಆರ್​ಬಿಐ ನಿಲುವು ಮುಂದುವರಿದಿದೆ. ಕಳೆದ ಬಾರಿಯ ಎಂಪಿಸಿ ಸಭೆಯಲ್ಲಿ ಹಣದುಬ್ಬರಕ್ಕೆ ಕಡಿವಾಣ ಹಾಕಲು ಹಣಕಾಸು ಹರಿವನ್ನು ಹಿಂಪಡೆಯಲು ನಿರ್ಧರಿಸಲಾಗಿತ್ತು. ಆಗ ಎಲ್ಲಾ ಎಂಪಿಸಿ ಸದಸ್ಯರು ಒಮ್ಮತದಿಂದ ಅದನ್ನು ಬೆಂಬಲಿಸಿದ್ದರು. ಈ ಬಾರಿ ಆ ನಿಲುವಿಗೆ 5:1ರ ಬೆಂಬಲ ಸಿಕ್ಕಿದೆ.

ಇದನ್ನೂ ಓದಿ: ಮೂರನೇ ತ್ರೈಮಾಸಿಕ ಅವಧಿಗೆ ಪಿಎಫ್ ಬಡ್ಡಿದರದಲ್ಲಿ ಇಲ್ಲ ಬದಲಾವಣೆ; ಹತ್ತು ವಿವಿಧ ಪಿಎಫ್ ನಿಧಿಗಳಿಗೆ ಸರ್ಕಾರ ಎಷ್ಟು ಬಡ್ಡಿ ನೀಡುತ್ತೆ?

ಹಣದುಬ್ಬರ ಅಂದಾಜು

ಮುಂಬರುವ ದಿನಗಳಲ್ಲಿ ಹಣದುಬ್ಬರ ಎಷ್ಟಿರಬಹುದು ಎಂದು ಆರ್​ಬಿಐ ಅವಲೋಕಿಸಿದ್ದು, ಹಿಂದಿನ ಅಭಿಪ್ರಾಯಗಳನ್ನೇ ಪುನರುಚ್ಚರಿಸಿದೆ. ಈ ಹಣಕಾಸು ವರ್ಷದಲ್ಲಿ ಹಣದುಬ್ಬರ ಶೇ. 5.4ರಷ್ಟಿರಬಹುದು ಎಂದು ಹೇಳಿದೆ. ಸೆಪ್ಟೆಂಬರ್ ಅಂತ್ಯದ ಕ್ವಾರ್ಟರ್ ಸೇರಿದಂತೆ 4 ತ್ರೈಮಾಸಿಕ ಅವಧಿಯಲ್ಲಿ ಹಣದುಬ್ಬರ ಎಷ್ಟಿರಬಹುದು ಎಂದು ಆರ್​ಬಿಐ ಮಾಡಿದ ಅಂದಾಜು ಹೀಗಿದೆ:

  • 2ನೇ ಕ್ವಾರ್ಟರ್ (2023ರ ಜುಲೈನಿಂದ ಸೆಪ್ಟೆಂಬರ್​ವರೆಗಿನ ಅವಧಿ): ಶೇ. 6.4
  • 3ನೇ ಕ್ವಾರ್ಟರ್: ಶೇ. 5.6
  • 4ನೇ ಕ್ವಾರ್ಟರ್ (2025ರ ಜನವರಿಯಿಂದ ಮಾರ್ಚ್​ವರೆಗಿನ ಅವಧಿ: ಶೇ. 5.2
  • 2025ರ ಏಪ್ರಿಲ್​ನಿಂದ ಜೂನ್​ವರೆಗಿನ ಕ್ವಾರ್ಟರ್: ಶೇ. 5.2

ಇನ್ನು, ಈ ಹಣಕಾಸು ವರ್ಷದಲ್ಲಿ ಜಿಡಿಪಿ ಶೇ. 6.5 ರಷ್ಟು ಬೆಳೆಯಬಹುದು ಎನ್ನುವ ತನ್ನ ಲೆಕ್ಕಾಚಾರಕ್ಕೆ ಆರ್​ಬಿಐ ಬದ್ಧವಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:03 am, Fri, 6 October 23

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು