AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Coin Vending Machine: ಬರಲಿದೆ ಕ್ಯುಆರ್ ಕೋಡ್ ಆಧಾರಿತ ಕಾಯಿನ್ ವೆಂಡಿಂಗ್ ಮಷಿನ್; ಏನಿದು ಆರ್​​ಬಿಐ ಹೊಸ ಯೋಜನೆ?

QR Code Coin Vending Machines; 12 ನಗರಗಳಲ್ಲಿ ಪ್ರಾಯೋಗಿಕವಾಗಿ ಕ್ಯುಆರ್ ಕೋಡ್ ಆಧಾರಿತ ಕಾಯಿನ್ ವೆಂಡಿಂಗ್ ಮಷಿನ್​ಗಳನ್ನು ಸ್ಥಾಪಿಸಲಾಗುವುದು. ಇದರಿಂದ ಜನರು ಪ್ರತಿ ಬಾರಿ ಹಣ ಪಡೆಯಲು ಬ್ಯಾಂಕ್​​ಗಳಿಗೆ ಹೋಗುವುದು, ಬ್ಯಾಂಕ್​​ಗಳಲ್ಲಿ ಕಾಯಬೇಕಾಗಿ ಬರುವುದು ತಪ್ಪಲಿದೆ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಹೇಳಿದರು.

Coin Vending Machine: ಬರಲಿದೆ ಕ್ಯುಆರ್ ಕೋಡ್ ಆಧಾರಿತ ಕಾಯಿನ್ ವೆಂಡಿಂಗ್ ಮಷಿನ್; ಏನಿದು ಆರ್​​ಬಿಐ ಹೊಸ ಯೋಜನೆ?
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on:Feb 08, 2023 | 12:35 PM

ಮುಂಬೈ: ದೇಶದ 12 ನಗರಗಳಲ್ಲಿ ಪ್ರಾಯೋಗಿಕವಾಗಿ ಕ್ಯುಆರ್ ಕೋಡ್ ಆಧಾರಿತ ಕಾಯಿನ್ ವೆಂಡಿಂಗ್ ಮಷಿನ್​ಗಳನ್ನು (QR Code Coin Vending Machines) ಸ್ಥಾಪಿಸಲಾಗುವುದು ಎಂದು ಆರ್​ಬಿಐ (RBI) ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಘೋಷಣೆ ಮಾಡಿದರು. ಆರ್​​ಬಿಐ ಹಣಕಾಸು ನೀತಿ ಸಮಿತಿ ಸಭೆಯ ನಿರ್ಣಯಗಳನ್ನು ಪ್ರಕಟಿಸಿದ ಬಳಿಕ ಅವರು, ಜನಸಾಮಾನ್ಯರಿಗೆ ನೆರವಾಗುವ ನಿಟ್ಟಿನಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದರು. 12 ನಗರಗಳಲ್ಲಿ ಪ್ರಾಯೋಗಿಕವಾಗಿ ಕ್ಯುಆರ್ ಕೋಡ್ ಆಧಾರಿತ ಕಾಯಿನ್ ವೆಂಡಿಂಗ್ ಮಷಿನ್​ಗಳನ್ನು ಸ್ಥಾಪಿಸಲಾಗುವುದು. ಇದರಿಂದ ಜನರು ಪ್ರತಿ ಬಾರಿ ಹಣ ಪಡೆಯಲು ಬ್ಯಾಂಕ್​​ಗಳಿಗೆ ಹೋಗುವುದು, ಬ್ಯಾಂಕ್​​ಗಳಲ್ಲಿ ಕಾಯಬೇಕಾಗಿ ಬರುವುದು ತಪ್ಪಲಿದೆ. ಕಾಯಿನ್​​ ವೆಂಡಿಂಗ್ ಮಷಿನ್​​ಗಳ ಮೂಲಕವೇ ಜನರು ಹಣ ಪಡೆಯಬಹುದಾಗಿದೆ ಎಂದು ಶಕ್ತಿಕಾಂತ ದಾಸ್ ಹೇಳಿದರು.

ಪ್ರಾಯೋಗಿಕ ಯೋಜನೆಯ ಯಶಸ್ಸನ್ನು ಆಧರಿಸಿಕೊಂಡು ಯೋಜನೆಯನ್ನು ಮುಂದುವರಿಸಬೇಕೇ ಅಥವಾ ಬೇಡವೇ ಎಂಬ ಬಗ್ಗೆ ಮುಂದಿನ ದಿನಗಳಲ್ಲಿ ನಿರ್ಧಾರ ಕೈಗೊಳ್ಳಲಿದ್ದೇವೆ ಎಂದು ಅವರು ತಿಳಿಸಿದರು. ಆದರೆ, ಯಾವೆಲ್ಲ ನಗರಗಳಲ್ಲಿ ಕಾಯಿನ್ ವೆಂಡಿಂಗ್ ಮಷಿನ್​ಗಳನ್ನು ಸ್ಥಾಪಿಸಲಾಗುತ್ತದೆ ಎಂಬುದನ್ನು ಅವರು ತಿಳಿಸಿಲ್ಲ. ಜತೆಗೆ ಹೆಚ್ಚಿನ ವಿವರಗಳನ್ನು ಅವರು ಬಹಿರಂಗಪಡಿಸಿಲ್ಲ. ವೆಂಡಿಂಗ್ ಮಷಿನ್​​ಗಳಲ್ಲಿ ಕ್ಯುಆರ್​ ಕೋಡ್ ಇದ್ದು, ಅದನ್ನು ಸ್ಕ್ಯಾನ್ ಮಾಡಿ ಎಷ್ಟು ಮೊತ್ತದ ಹಣ ಬೇಕೆಂದು ನಮೂದಿಸಿದರೆ ಅಷ್ಟು ಹಣವನ್ನು ಮಷಿನ್ ನೀಡಲಿದೆ.

ಇದನ್ನೂ ಓದಿ: Repo Rate: ಆರ್​ಬಿಐ ಹಣಕಾಸು ನೀತಿ, ರೆಪೊ ದರ, ರಿವರ್ಸ್ ರೆಪೊ ದರ ಎಂದರೇನು? ಇಲ್ಲಿದೆ ಪೂರ್ತಿ ವಿವರ

ಜಿ20 ದೇಶದಗಳ ಸದಸ್ಯರಿಗೆ ಯುಪಿಐ

ಜಿ20 ಸದಸ್ಯರ ರಾಷ್ಟ್ರಗಳ ಜನರಿಗೂ ಯುಪಿಐ ವ್ಯವಸ್ಥೆಯ ಸೌಲಭ್ಯ ದೊರೆಯುವಂತೆ ಮಾಡಲಾಗುವುದು. ಸದಸ್ಯ ರಾಷ್ಟ್ರಗಳ ಜನರು ಭಾರತಕ್ಕೆ ಬಂದಾಗ ಇಲ್ಲಿನ ವಿಮಾನ ನಿಲ್ದಾಣಗಳಲ್ಲಿ ಯುಪಿಐ ಮೂಲಕವೇ ಪಾವತಿ ಮಾಡಬಹುದು ಎಂದು ಶಕ್ತಿಕಾಂತ ದಾಸ್ ತಿಳಿಸಿದರು. ಯುಎಇ, ಸಿಂಗಾಪುರ, ಮಾರಿಷಸ್, ನೇಪಾಳ ಹಾಗೂ ಭೂತಾನ್​​ನಲ್ಲಿ ಫೋನ್​ಪೇ ಮೂಲಕ ಪಾವತಿಗೆ ಅವಕಾಶ ಕಲ್ಪಿಸಿರುವುದನ್ನು ಇಲ್ಲಿ ಗಮನಿಸಬಹುದಾಗಿದೆ.

ಇದನ್ನೂ ಓದಿ: Repo Rate Hike; ಆರ್​ಬಿಐ ರೆಪೊ ದರ ಮತ್ತೆ 25 ಮೂಲಾಂಶ ಹೆಚ್ಚಳ; ಹೆಚ್ಚಾಗಲಿದೆ ಇಎಂಐ ಮೊತ್ತ

ಈ ಮಧ್ಯೆ, ಆರ್​ಬಿಐ ರೆಪೊ ದರವನ್ನು ಮತ್ತೆ 25 ಮೂಲಾಂಶ ಹೆಚ್ಚಿಸಿದ್ದು ಶೇ 6.50ಕ್ಕೆ ನಿಗದಿಪಡಿಸಿದೆ. 2022ರ ಮೇ ತಿಂಗಳ ನಂತರ ಸತತವಾಗಿ ಆರ್​ಬಿಐ ರೆಪೊ ದರ ಹೆಚ್ಚಿಸುತ್ತಾ ಬಂದಂತಾಗಿದ್ದು, ಒಟ್ಟಾರೆಯಾಗಿ 23ನೇ ಹಣಕಾಸು ವರ್ಷದಲ್ಲಿ ಆರ್​ಬಿಐ 250 ಮೂಲಾಂಶದಷ್ಟು ರೆಪೊ ದರ ಹೆಚ್ಚಿಸಿದಂತಾಗಿದೆ. ಇದೀಗ ಮತ್ತೆ ರೆಪೊ ದರ ಹೆಚ್ಚಿಸಿರುವುದರಿಂದ ಗೃಹ, ವಾಹನ ಸಾಲ ಸೇರಿದಂತೆ ವಿವಿಧ ಸಾಲಗಳ ಬಡ್ಡಿ ದರ, ಇಎಂಐ ಮೊತ್ತ ಇನ್ನಷ್ಟು ದುಬಾರಿಯಾಗುವ ಸಾಧ್ಯತೆ ಇದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Published On - 11:25 am, Wed, 8 February 23

ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಉತ್ತರ ಕನ್ನಡ ಜಿಲ್ಲೆಯ 4 ತಾಲೂಕುಗಳಲ್ಲಿ ಎಡಬಿಡದೆ ಸುರಿಯುತ್ತಿರುವ ಮಳೆ
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್​ಗೆ ಡಿಕ್ಕಿಯಾದ ಬಸ್, 20 ಜನ ಜಸ್ಟ್ ಮಿಸ್
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಮನಾಲಿಗೆ ಬರಲೇಬೇಡಿ, ಪಾಕ್​ಗಿಂತಾ ಕೆಟ್ಟದಾಗಿದೆ ಎಂದ ಮಹಿಳೆ
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಕಳ್ಳತನ ಆರೋಪ, ಆರೋಪಿಯ ಶರ್ಟ್​ ಬಿಚ್ಚಿ, ಚಪ್ಪಲಿ ಹಾರ ಹಾಕಿದ ಪೊಲೀಸರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
ಶಿಗ್ಗಾಂವಿ ಗುತ್ತಿಗೆದಾರನ ಕೊಲೆ: ಆರೋಪಿ ಮನೆಗೆ ಬೆಂಕಿ ಹಚ್ಚಿದ ಸಂಬಂಧಿಕರು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
VIDEO: ಮಗಾ... ಚೆನ್ನಾಗಿ ಹೋಗ್ತಿದೆ... ಆಂಗ್ಲರ ನಾಡಿನಲ್ಲಿ ಕನ್ನಡದ ಕಂಪು
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
ಮಣ್ಣೆತ್ತಿನ ಅಮಾವಾಸ್ಯೆ ಮಹತ್ವ ಹಾಗೂ ಆಚರಣೆ ಬಗ್ಗೆ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
Daily Horoscope: ಅಮಾವಾಸ್ಯೆಯಂದು ಯಾವೆಲ್ಲಾ ರಾಶಿಗಳಿಗೆ ಅದೃಷ್ಟ ತಿಳಿಯಿರಿ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ಲಖಿಂಪುರ ಖೇರಿಯ ಇಟ್ಟಿಗೆ ಗೂಡಿನಲ್ಲಿ ಕಪ್ಪು ಚಿರತೆ ಜೊತೆ ಸೆಣಸಾಡಿದ ಯುವಕ
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್
ನನ್ನ ಪತ್ರ ಸಿಎಂ ಏನು ಮಾಡಬೇಕೆಂದು ಕುಮಾರಸ್ವಾಮಿ ಹೇಳಬೇಕಿಲ್ಲ: ಪಾಟೀಲ್