Sign In

By signing in or creating an account, you agree with Associated Broadcasting Company's Terms & Conditions and Privacy Policy.

ಜೂನ್ 5ರಿಂದ ಆರ್​ಬಿಐ ಎಂಪಿಸಿ ಸಭೆ; ಡಿಸೆಂಬರ್​ವರೆಗೂ ಬಡ್ಡಿದರ ಇಳಿಕೆ ಇಲ್ಲವಾ?

RBI MPC Meeting Updates: ಆರ್​ಬಿಐನ ಹಣಕಾಸು ನೀತಿ ಸಮಿತಿಯ ಸಭೆ ಜೂನ್ 5ರಂದು ಆರಂಭವಾಗಲಿದ್ದು, ಜೂನ್ 7ಕ್ಕೆ ಆರ್​ಬಿಐ ಗವರ್ನರ್ ಶಕ್ತಿಕಾಂತ್ ದಾಸ್ ಸುದ್ದಿಗೋಷ್ಠಿ ಉದ್ದೇಶಿಸಿ ಮಾತನಾಡಲಿದ್ದಾರೆ. ಎಂಪಿಸಿ ಸಭೆಯಲ್ಲಿ ಹಣದುಬ್ಬರ, ಜಿಡಿಪಿ ಬಗ್ಗೆ ಅವಲೋಕನ ಮಾಡುವುದಲ್ಲದೆ, ಬಹಳ ಮುಖ್ಯವಾದ ರೆಪೋ ಇತ್ಯಾದಿ ದರಗಳ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ. ಕಳೆದ ಹಲವು ಬಾರಿಯಿಂದಲೂ ಬಡ್ಡಿದರ ಶೇ. 6.5ರಲ್ಲೇ ಮುಂದುವರಿಯುತ್ತಿದ್ದು ಈ ಬಾರಿಯೂ ಯಥಾಸ್ಥಿತಿ ಉಳಿಸುವ ಸಾಧ್ಯತೆ ಇದೆ.

ಜೂನ್ 5ರಿಂದ ಆರ್​ಬಿಐ ಎಂಪಿಸಿ ಸಭೆ; ಡಿಸೆಂಬರ್​ವರೆಗೂ ಬಡ್ಡಿದರ ಇಳಿಕೆ ಇಲ್ಲವಾ?
ಆರ್​ಬಿಐ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 03, 2024 | 12:07 PM

ನವದೆಹಲಿ, ಜೂನ್ 3: ಭಾರತೀಯ ರಿಸರ್ವ್ ಬ್ಯಾಂಕ್ ದ್ವೈಮಾಸಿಕವಾಗಿ ನಡೆಸುವ ಮಾನಿಟರಿ ಪಾಲಿಸಿ ಕಮಿಟಿ ಸಭೆ (Monetary policy committee) ಇದೇ ಬುಧವಾರ (ಜೂನ್ 5) ಆರಂಭವಾಗಲಿದೆ. ಎರಡು ದಿನಗಳ ಸಭೆ ಬಳಿಕ ಜೂನ್ 7ರಂದು ಸಭೆಯ ನಿರ್ಣಯಗಳನ್ನು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ (Shaktikanta Das) ಪ್ರಕಟಿಸಲಿದ್ದಾರೆ. ಈ ಸಭೆಯಲ್ಲಿ ಎಲ್ಲರ ಚಿತ್ತ ಹೆಚ್ಚಾಗಿ ಬ್ಯಾಂಕ್ ಬಡ್ಡಿದರ ವಿಚಾರದ ಬಗ್ಗೆ ನೆಟ್ಟಿರುತ್ತದೆ. ಜೊತೆಗೆ, ಜಿಡಿಪಿ ಮತ್ತು ಹಣದುಬ್ಬರದ ಬಗ್ಗೆ ಆರ್​ಬಿಐ ಮಾಡುವ ಅಂದಾಜು ಕುರಿತೂ ಕುತೂಹಲ ಇರುತ್ತದೆ.

ಕಳೆದ ಬಾರಿಯ ಎಂಪಿಸಿ ಸಭೆ ಏಪ್ರಿಲ್ ತಿಂಗಳಲ್ಲಿ ನಡೆದಿತ್ತು. ಈ ಹಣಕಾಸು ವರ್ಷದಲ್ಲಿ ಇದು ಎರಡನೇ ಸಭೆಯಾಗಲಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಸೇರಿದಂತೆ ಆರು ಜನರು ಮಾನಿಟರಿ ಪಾಲಿಸಿ ಕಮಿಟಿಯಲ್ಲಿ ಇದ್ದಾರೆ. ಇವರ ಪೈಕಿ ಮೂವರು ಆರ್​ಬಿಐಯೊಳಗೆಯೇ ಇರುವ ಅಧಿಕಾರಿಗಳಾದರೆ ಇನ್ನೂ ಮೂವರು ಹೊರಗಿನ ಸದಸ್ಯರಾಗಿರುತ್ತಾರೆ. ನಿಯಮಗಳ ಪ್ರಕಾರ ಆರ್​ಬಿಐನ ಎಂಪಿಸಿ ಒಂದು ವರ್ಷದಲ್ಲಿ ಕನಿಷ್ಠ ನಾಲ್ಕು ಬಾರಿ ಸಭೆ ನಡೆಸಬೇಕು. ಸಾಮಾನ್ಯವಾಗಿ ಎರಡು ತಿಂಗಳಿಗೊಮ್ಮೆ ಎಂಪಿಸಿ ಸಭೆ ನಡೆಯುತ್ತದೆ. ಅಂದರೆ ವರ್ಷದಲ್ಲಿ ಆರು ಬಾರಿ ಸಭೆ ನಡೆಯುತ್ತಿದೆ.

ಇದನ್ನೂ ಓದಿ: ರಿಸಲ್ಟ್ ಬರುವ ಮುನ್ನವೇ ಉಬ್ಬಿ ನಿಂತ ಷೇರುಪೇಟೆ; ನಿಫ್ಟಿ, ಸೆನ್ಸೆಕ್ಸ್ ಸೇರಿ ಪ್ರಮುಖ ಸೂಚ್ಯಂಕಗಳು ಮೇಲಕ್ಕೆ

ಏಪ್ರಿಲ್ 5ರಂದು ಆರ್​ಬಿಐ ಬಡ್ಡಿದರವನ್ನು ಶೇ. 6.50ರಲ್ಲಿ ಮುಂದುವರಿಸಲು ನಿರ್ಧರಿಸಿದೆ. ಎಂಪಿಸಿಯಲ್ಲಿರುವ ಆರು ಸದಸ್ಯರಲ್ಲಿ ಐವರು ಬಡ್ಡಿದರ ಯಥಾಸ್ಥಿತಿ ಉಳಿಸುವ ಪರವಾಗಿ ಮತ ಹಾಕಿದ್ದಾರೆ. ಒಬ್ಬರಿಂದ ಮಾತ್ರವೇ ವಿರುದ್ಧ ಮತ ಬಂದಿದೆ. ಈ ಬಾರಿಯೂ 5:1 ಮತಗಳ ಬೆಂಬಲದಲ್ಲಿ ಬಡ್ಡಿದರ ಮುಂದುವರಿಸುವ ನಿರ್ಧಾರ ಬರಬಹುದು.

ಡಿಸೆಂಬರ್​ವರೆಗೂ ರೆಪೋ ದರ ಕಡಿತ ಇಲ್ಲ?

ರೆಪೋ ದರ ಎಂಬುದು ಬ್ಯಾಂಕುಗಳಿಗೆ ಆರ್​ಬಿಐನಿಂದ ಕೊಡಲಾಗುವ ಫಂಡಿಂಗ್​ಗೆ ವಿಧಿಸುವ ಬಡ್ಡಿದರವಾಗಿದೆ. ಇದಕ್ಕೆ ಅನುಗುಣವಾಗಿ ಬ್ಯಾಂಕುಗಳು ತಮ್ಮ ಗ್ರಾಹಕರಿಗೆ ಬಡ್ಡಿದರ ವಿಧಿಸಬಹುದು. ಹಣದುಬ್ಬರ ಮೇಲ್ಮಟ್ಟದಲ್ಲೇ ಇದ್ದರೆ ರೆಪೋ ದರವನ್ನೂ ಮೇಲ್ಮಟ್ಟದಲ್ಲೇ ಉಳಿಸಲಾಗುತ್ತದೆ. ಹಣದುಬ್ಬರ ನಿಯಂತ್ರಣಕ್ಕೆ ರೆಪೋ ಒಂದು ಅಸ್ತ್ರವಾಗಿದೆ.

ಇದನ್ನೂ ಓದಿ: ಕಳೆದ 10 ವರ್ಷದಲ್ಲಿ ಒಮ್ಮೆಯೂ ನೆಗಟಿವ್ ರಿಟರ್ನ್ಸ್ ಕೊಟ್ಟಿಲ್ಲ 36 ಈಕ್ವಿಟಿ ಮ್ಯೂಚುವಲ್ ಫಂಡ್ಸ್

ಭಾರತದಲ್ಲಿ ಹಣದುಬ್ಬರ ಇನ್ನೂ ಕೂಡ ಶೇ. 4ಕ್ಕಿಂತ ಮೇಲ್ಮಟ್ಟದಲ್ಲೇ ಉಳಿದಿದೆ. ಹೀಗಾಗಿ, ಸದ್ಯಕ್ಕೆ ಬಡ್ಡಿದರ ಇಳಿಸುವ ಮನಸ್ಸಿನಲ್ಲಿ ಆರ್​ಬಿಐ ಇಲ್ಲ. ತಜ್ಞರ ಪ್ರಕಾರ ಡಿಸೆಂಬರ್​ವರೆಗೂ ರೆಪೋ ದರವನ್ನು ಕಡಿತಗೊಳಿಸುವ ಸಾಧ್ಯತೆ ಬಹಳ ಕಡಿಮೆ. 2024ರ ಜನವರಿ ಬಳಿಕ ಬಡ್ಡಿದರ ಕಡಿಮೆ ಮಾಡಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಅದು ಪರ್ಸನಲ್ ವಿಷಯ: ದರ್ಶನ್ ಜೀವನದ ಬದಲಾವಣೆ ಬಗ್ಗೆ ಧನ್ವೀರ್ ಪ್ರತಿಕ್ರಿಯೆ
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಕಷ್ಟದಲ್ಲಿ ಬಿಟ್ಟುಹೋಗುವವನು ನಾನಲ್ಲ: ದರ್ಶನ್ ಸ್ನೇಹದ ಬಗ್ಗೆ ಧನ್ವೀರ್ ಮಾತು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಸೈಕಲ್ ತುಳಿಯುವ ಅಗತ್ಯವಿಲ್ಲಾಂತ ಮುಖಂಡರನ್ನು ತುಳಿಯುತ್ತಾರೆಯೇ? ಅಭಿಮಾನಿಗಳು
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಕೇವಲ 33 ದಿನಗಳಲ್ಲಿ ಝೋಜಿಲಾ ಪಾಸ್ ಓಪನ್; ಲಡಾಖ್ ಸಂಪರ್ಕ ಈಗ ಇನ್ನಷ್ಟು ಸುಲಭ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಹೊಸಪಕ್ಷ ಕಟ್ಟಿದರೆ 224 ಸ್ಥಾನಗಳಿಗೆ ಅಭ್ಯರ್ಥಿಗಳೂ ಸಿಗಲ್ಲ: ರೇಣುಕಾಚಾರ್ಯ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಮೋದಿ ಬಳಿ ಅಶೋಕ ಚಕ್ರದ ವಿಶೇಷತೆ ಕೇಳಿದ ಚಿಲಿಯ ಅಧ್ಯಕ್ಷ
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಕೆಮ್ಮು ಬಾಧಿಸಲಾರಂಭಿಸಿದಾಗ ಯಡಿಯೂರಪ್ಪ ಮಗನಿಗೆ ಮಾತಾಡುವಂತೆ ಹೇಳಿದರು
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಅಧಿವೇಶನದಲ್ಲಿ ಉತ್ತರ ಕರ್ನಾಟಕದ ಸಮಸ್ಯೆ ಯತ್ನಾಳ್ ಚರ್ಚಿಸಿಲ್ಲ: ನಡಹಳ್ಳಿ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ಧಾರವಾಡ: ಮದ್ಯ ಮಾರಾಟದ ಅಂಗಡಿಗಳಿಗೆ ಮಹಿಳೆಯರ ಮುತ್ತಿಗೆ
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್
ನನ್ನ ವರ್ತನೆ ಮತ್ತು ವರಸೆ ಯಾವ ಕಾರಣಕ್ಕೂ ಬದಲಾಗದು: ಯತ್ನಾಳ್