Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI Monetary Policy: ಮತ್ತೆ ರೆಪೊ ದರ ಹೆಚ್ಚಿಸಲಿದೆಯೇ ಆರ್​ಬಿಐ?

ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ ಹಣಕಾಸು ನೀತಿ ಸಮಿತಿಯು ಮತ್ತೆ ರೆಪೊ ದರ ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.

RBI Monetary Policy: ಮತ್ತೆ ರೆಪೊ ದರ ಹೆಚ್ಚಿಸಲಿದೆಯೇ ಆರ್​ಬಿಐ?
ಭಾರತೀಯ ರಿಸರ್ವ್ ಬ್ಯಾಂಕ್ (ಸಂಗ್ರಹ ಚಿತ್ರ)
Follow us
TV9 Web
| Updated By: Ganapathi Sharma

Updated on:Oct 17, 2022 | 4:04 PM

ನವದೆಹಲಿ: ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ಹಣಕಾಸು ನೀತಿ ಸಮಿತಿಯು (MPC) ಮತ್ತೆ ರೆಪೊ ದರ (Repo Rate) ಹೆಚ್ಚಳ ಮಾಡುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ಹಣದುಬ್ಬರ (Inflation) ತಡೆಯುವ ಸಲುವಾಗಿ ಕಠಿಣ ಕ್ರಮಗಳನ್ನು ಕೈಗೊಳ್ಳುತ್ತಿರುವ ಆರ್​ಬಿಐ ಸೆಪ್ಟೆಂಬರ್ 30ರಂದು ರೆಪೊ ದರವನ್ನು 50 ಮೂಲಾಂಶಗಳಷ್ಟು ಹೆಚ್ಚಿಸಿತ್ತು. ಜಾಗತಿಕ ಆರ್ಥಿಕ ತಲ್ಲಣದ ಪರಿಣಾಮ ಮತ್ತು ಹಣದುಬ್ಬರ ನಿಯಂತ್ರಣಕ್ಕೆ ಬಾರದಿರುವ ಕಾರಣ ಹಣಕಾಸು ನೀತಿ ಸಮಿತಿಯು ಮತ್ತೆ 35ರಿಂದ 50 ಮೂಲಾಂಶಗಳ ವರೆಗೆ ರೆಪೊ ದರ ಹೆಚ್ಚಿಸುವ ಸಾಧ್ಯತೆ ಇದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ದೇಶದ ಆರ್ಥಿಕ ವೃದ್ಧಿ ದರದ ಬಗ್ಗೆ ಇರುವ ಕಳವಳ, ಹಣದುಬ್ಬರ ತಡೆಗೆ ಕ್ರಮಕೈಗೊಳ್ಳಬೇಕಾದ ತುರ್ತು ಆರ್​ಬಿಐ ಹಣಕಾಸು ನೀತಿ ಸಮಿತಿ ಮುಂದಿದೆ. ಹೀಗಾಗಿ ಸಮಿತಿಯು ಇನ್ನಷ್ಟು ಕಠಿಣ ಕ್ರಮಗಳನ್ನು ಕೈಗೊಳ್ಳುವ ಸಾಧ್ಯತೆ ಇದೆ ಎಂದು ತಜ್ಞರ ಹೇಳಿಕೆ ಉಲ್ಲೇಖಿಸಿ ‘ಫೈನಾನ್ಶಿಯಲ್ ಎಕ್ಸ್​ಪ್ರೆಸ್’ ವರದಿ ಮಾಡಿದೆ.

ಗ್ರಾಹಕ ದರ ಸೂಚ್ಯಂಕವು ಸೆಪ್ಟೆಂಬರ್​ನಲ್ಲಿ ಶೇಕಡಾ 7.41ಕ್ಕೆ ಹೆಚ್ಚಳವಾಗಿದೆ. ಹೀಗಾಗಿ ಕೇಂದ್ರ ಸರ್ಕಾರವು ಹಣಕಾಸು ನೀತಿ ಸಮಿತಿಯಿಂದ ವರದಿ ಕೇಳಿದೆ. ಅಕಾಲಿಕ ಮಳೆ, ಪೂರೈಕೆ ಸಮಸ್ಯೆಗಳು ಮತ್ತು ಜಾಗತಿಕ ಮಾರುಕಟ್ಟೆಯ ಚಂಚಲತೆಯ ಪರಿಣಾಮ ಚಿಲ್ಲರೆ ಹಣದುಬ್ಬರ ಮತ್ತೆ ಏರಿಕೆಯಾಗುವ ಸಾಧ್ಯತೆ ಇದೆ. ಸದ್ಯ ಅಮೆರಿಕದ ಹಾದಿಯಲ್ಲೇ ನಾವೂ ಸಹ ಬಡ್ಡಿ ದರ ಹೆಚ್ಚಿಸುವ ಮೂಲಕ ಹಣದುಬ್ಬರ ನಿಯಂತ್ರಿಸಲು ಕ್ರಮ ಕೈಗೊಳ್ಳುತ್ತಿದ್ದೇವೆ ಎಂದು ಎಂಪಿಸಿ ಸದಸ್ಯೆ ಅಶೀಮಾ ಗೋಯಲ್ ಹೇಳಿದ್ದಾರೆ.

ಇದನ್ನೂ ಓದಿ
Image
PM Kisan Samman Nidhi: ಪಿಎಂ ಕಿಸಾನ್​ ಯೋಜನೆಯ 12ನೇ ಕಂತು ಬಿಡುಗಡೆ: ಹಣ ಬಂದಿದೆಯೇ ಎಂದು ನೋಡುವುದು ಹೇಗೆ?
Image
SBI Interest Hike: ನೀವು ಎಸ್​ಬಿಐ ಗ್ರಾಹಕರೇ? ಹೆಚ್ಚು ಮೊತ್ತದ ಇಎಂಐ ಪಾವತಿಸಲು ಸಿದ್ಧರಾಗಿ
Image
PM Kisan 2022: ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ, 12ನೇ ಕಂತಿನ ಹಣ ಬಿಡುಗಡೆ
Image
Wheat Exports: ಏಪ್ರಿಲ್-ಆಗಸ್ಟ್ ಅವಧಿಯಲ್ಲಿ ಗೋಧಿ ರಫ್ತು ದ್ವಿಗುಣ

ಬೇಕಿದೆ ಬಡ್ಡಿ ದರ ಏರಿಕೆಗೆ ತಾತ್ಕಾಲಿಕ ತಡೆ:

ಹಣದುಬ್ಬರವನ್ನು ತಡೆಯುವುದಕ್ಕಾಗಿ ಬಡ್ಡಿ ದರ ಹೆಚ್ಚಿಸುವ ವಿಧಾನವನ್ನು ಅನುಸರಿಸಲಾಗುತ್ತಿದೆಯಾದರೂ ಸದ್ಯದ ಪರಿಸ್ಥಿತಿಯಲ್ಲಿ ಅದಕ್ಕೆ ತಾತ್ಕಾಲಿಕ ತಡೆ ನೀಡಬೇಕಾದ ಅಗತ್ಯವಿದೆ ಎಂದು ಗೋಯಲ್ ಅಭಿಪ್ರಾಯಪಟ್ಟಿದ್ದಾರೆ. ಬಡ್ಡಿ ದರವನ್ನು ಹೆಚ್ಚಿಸುತ್ತಾ ಹೋಗುವುದರಿಂದ ಮಾತ್ರವೇ ಹಣದುಬ್ಬರವನ್ನು ನಿಗದಿತ ಗುರಿಯಲ್ಲಿರುವಂತೆ ನೋಡಿಕೊಳ್ಳುವುದು ಸಾಧ್ಯವಿಲ್ಲ. ಪೂರೈಕೆಗೆ ಸಂಬಂಧಿಸಿದ ಹಣದುಬ್ಬರವನ್ನು ಕಡಿಮೆ ಮಾಡುವಲ್ಲಿ ಯಶಸ್ವಿಯಾದರೆ ಮಾತ್ರ ಯಶಸ್ಸು ಕಾಣಬಹುದು. ಇಲ್ಲವಾದಲ್ಲಿ ವೆಚ್ಚದಲ್ಲಿ ಹೆಚ್ಚಳವಾಗುವುದರಿಂದ ಬೇಡಿಕೆ ಹಾಗೂ ಹೂಡಿಕೆ ಕುಸಿತವಾಗಬಹುದು ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: PM Kisan 2022: ಪಿಎಂ ಕಿಸಾನ್ ಸಮ್ಮಾನ್ ಸಮ್ಮೇಳನಕ್ಕೆ ಪ್ರಧಾನಿ ಮೋದಿ ಚಾಲನೆ, 12ನೇ ಕಂತಿನ ಹಣ ಬಿಡುಗಡೆ

ಸೆಪ್ಟೆಂಬರ್ 30ರ ಹಣಕಾಸು ನೀತಿಯಲ್ಲಿ ಆರ್​ಬಿಐ ರೆಪೊ ದರವನ್ನು ಶೇಕಡಾ 0.50 ಹೆಚ್ಚಿಸಿ, 5.9ಕ್ಕೆ ನಿಗದಿಪಡಿಸಿತ್ತು. ಇದಕ್ಕೂ ಮುನ್ನ ಹಣದುಬ್ಬರ ತಡೆಗಾಗಿ ಸತತ 3 ಬಾರಿ ಆರ್​ಬಿಐ ರೆಪೊ ದರ ಹೆಚ್ಚಳ ಮಾಡಿತ್ತು.

Published On - 4:01 pm, Mon, 17 October 22

ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ಹಿಂದೂ ಕಾರ್ಯಕರ್ತರು ಯಾವ ಕಾರಣಕ್ಕೂ ಎದೆಗುಂದಬಾರದು: ಯತ್ನಾಳ್
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ವಿಜಯೇಂದ್ರ ಬಗ್ಗೆ ಹಿಂದೆ ನೀಡಿದ ಹೇಳಿಕೆಗೆ ಈಗಲೂ ಬದ್ಧ: ರಮೇಶ್ ಜಾರಕಿಹೊಳಿ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಜಾಮ್ನಗರದಿಂದ ದ್ವಾರಕಾಗೆ 140 ಕಿ.ಮೀ ದೂರ ಅನಂತ್ ಅಂಬಾನಿ ಪಾದಯಾತ್ರೆ
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಮಠದಲ್ಲಿ ಸಿದ್ಧಲಿಂಗ ಸ್ವಾಮೀಜಿಯವರ ಪಾದಕ್ಕೆ ನಮಸ್ಕರಿಸಿದ ರಾಜನಾಥ್ ಸಿಂಗ್
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಕರ್ನಾಟಕ ಕಾಂಗ್ರೆಸ್ ಸರ್ಕಾರವೇ ದೇಶದ ಪಾಲಿಗೆ ಗಾರ್ಬೇಜ್: ಪ್ರಲ್ಹಾದ್ ಜೋಶಿ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಅಧ್ಯಕ್ಷನ ಸ್ಥಾನ ಉತ್ತರ ಕರ್ನಾಟಕದವರಿಗೆ ಅನ್ನೋದು ಗಾಳಿಸುದ್ದಿ: ಖರ್ಗೆ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಸರ್ಕಾರದ ದುರಾಡಳಿತ ವಿರುದ್ಧ ಬಿಜೆಪಿ ಜನಜಾಗೃತಿ ಅಭಿಯಾನ: ವಿಜಯೇಂದ್ರ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಒರಿಜಿನಲ್ ರಂಗಾಯಣ ರಘುವಿಗೆ ಡುಪ್ಲಿಕೇಟ್ ರಂಗಾಯಣ ರಘು ಸಿಕ್ಕಾಗ
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಇಂದಿನಿಂದ ಕಸದ ಮೇಲೂ ತೆರಿಗೆ, ದಾರಿ ಯಾವುದಯ್ಯ ಬದುಕಲು?
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ
ಕಣ್ಮನ ಸೆಳೆಯುತ್ತಿದೆ ಶಿವಕುಮಾರ ಶ್ರೀಗಳ 125 ಅಡಿ ಉದ್ದದ ರಂಗೋಲಿ ಚಿತ್ರ