AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಕರೆನ್ಸಿ ಹೆಚ್ಚೆಚ್ಚು ಬಳಸಿ; ರೂಪಾಯಿ ಅಂತಾರಾಷ್ಟ್ರೀಕರಣಕ್ಕೆ ಆರ್​ಬಿಐ ಸಮಿತಿಯಿಂದ ಹಲವು ಶಿಫಾರಸು

Internationalization of Rupee Currency: ಅಂತಾರಾಷ್ಟ್ರೀಯ ವ್ಯವಹಾರದಲ್ಲಿ, ಕ್ಯಾಪಿಟಲ್ ಅಕೌಂಟ್ ಟ್ರಾನ್ಸಾಕ್ಷನ್​ನಲ್ಲಿ ರೂಪಾಯಿ ಬಳಕೆ, ಎಸ್​ಡಿಆರ್​ನಲ್ಲಿ ರೂಪಾಯಿ ಇರಿಸುವುದು ಇತ್ಯಾದಿ ಕ್ರಮಗಳಿಗೆ ಆರ್​ಬಿಐನ ಸಮಿತಿಯೊಂದು ಶಿಫಾರಸು ಮಾಡಿದೆ.

RBI: ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಕರೆನ್ಸಿ ಹೆಚ್ಚೆಚ್ಚು ಬಳಸಿ; ರೂಪಾಯಿ ಅಂತಾರಾಷ್ಟ್ರೀಕರಣಕ್ಕೆ ಆರ್​ಬಿಐ ಸಮಿತಿಯಿಂದ ಹಲವು ಶಿಫಾರಸು
ರುಪಾಯಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 06, 2023 | 12:23 PM

Share

ನವದೆಹಲಿ: ರುಪಾಯಿಯನ್ನು ಅಂತಾರಾಷ್ಟ್ರೀಯವಾಗಿ ಹೆಚ್ಚೆಚ್ಚು ಬಳಸಲು ರಿಸರ್ವ್ ಬ್ಯಾಂಕ್​ನ ಸಮಿತಿಯೊಂದು ವಿವಿಧ ಕ್ರಮಗಳನ್ನು ಶಿಫಾರಸು ಮಾಡಿದೆ. ವಿದೇಶೀ ವಿನಿಮಯ ದರದ ಭಾಗವಾಗಿರುವ ಎಸ್​ಡಿಆರ್ ಗುಂಪಿನಲ್ಲಿ (SDR Basket) ರಪಾಯಿಯನ್ನು ಒಳಗೊಳ್ಳುವುದು, ಅಂತಾರಾಷ್ಟ್ರೀಯ ವ್ಯವಹಾರದಲ್ಲಿ ರುಪಾಯಿ ಕರೆನ್ಸಿಯಲ್ಲಿ ಇನ್ವಾಯ್ಸ್ ಸಲ್ಲಿಸುವುದು, ಕ್ಯಾಪಿಟಲ್ ಅಕೌಂಟ್ ಟ್ರಾನ್ಸಾಕ್ಷನ್​ನಲ್ಲಿ (Capital Account Transaction) ರುಪಾಯಿ ಬಳಸುವುದು ಇತ್ಯಾದಿ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಆರ್​ಬಿಐನ ಎಕ್ಸಿಕ್ಯೂಟಿವ್ ಡೈರೆಕ್ಟರ್ ರಾಧಾ ಶ್ಯಾಮ್ ರಾಥೋ ನೇತೃತ್ವದ ಇಂಟರ್ ಡಿಪಾರ್ಟ್​ಮೆಂಟಲ್ ಗ್ರೂಪ್ (IDG- Interdepartmental Group) ಶಿಫಾರಸು ಮಾಡಿದೆ.

ಯಾವುದೇ ಕರೆನ್ಸಿಯ ಅಂತಾರಾಷ್ಟ್ರೀಕರಣಕ್ಕೂ ಆ ದೇಶದ ಆರ್ಥಿಕ ಬೆಳವಣಿಗೂ ಕೊಂಡಿ ಇದೆ. ಅದರಲ್ಲೂ ಮುಖ್ಯವಾಗಿ ಜಾಗತಿಕ ವಹಿವಾಟಿನಲ್ಲಿ ಒಂದು ದೇಶ ಬೆಳವಣಿಗೆ ಸಾಧಿಸುವುದಕ್ಕೂ ಕರೆನ್ಸಿ ಅಂತಾರಾಷ್ಟ್ರೀಕರಣಕ್ಕೂ ಸಂಬಂಧ ಇದೆ. ಅತಿವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಹಲವು ಪ್ರಮುಖ ಎಡರುತೊಡರುಗಳ ನಡುವೆಯೂ ಭಾರತ ಉತ್ತಮ ಪ್ರಗತಿ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕರೆನ್ಸಿಯಾಗುವ ಸಾಮರ್ಥ್ಯ ರುಪಾಯಿಗೆ ಇದೆ ಎಂಬುದು ಆರ್​ಬಿಐನ ಈ ಸಮಿತಿಯ ಅನಿಸಿಕೆ.

ಇದನ್ನೂ ಓದಿRBI: ಮೊಬೈಲ್​ಗಿದ್ದ ಪೋರ್ಟಬಿಲಿಟಿ ಕ್ರೆಡಿಟ್ ಕಾರ್ಡ್​ಗೂ ಬರಲಿದೆಯಾ? ಆರ್​ಬಿಐ ಹೊರಡಿಸಿದ ಕರಡು ಅಧಿಸೂಚನೆಯಲ್ಲೇನಿದೆ?

ಭಾರತ ಹಾಗೂ ಹೊರಗೆ ಅನಿವಾಸಿ ಭಾರತೀಯರಿಗೆ ರುಪಾಯಿ ಖಾತೆಗಳನ್ನು ತೆರೆಯಬೇಕು. ಅಂತರ್ ದೇಶೀಯ ವಹಿವಾಟುಗಳಿಗೆ ಭಾರತೀಯ ಪೇಮೆಂಟ್ ವ್ಯವಸ್ಥೆ ಅಳವಡಿಸಬೇಕು ಎಂದೂ ಆರ್​ಬಿಐನ ಇಂಟರ್ಡಿಪಾರ್ಟ್​ಮೆಂಟಲ್ ಗ್ರೂಪ್ ಸಲಹೆ ಕೊಟ್ಟಿದೆ.

ಆರ್​ಬಿಐ ತನ್ನ ಸಮಿತಿ ಸಲ್ಲಿಸಿದ ಶಿಫಾರಸುಗಳನ್ನು ವೆಬ್​ಸೈಟ್​ನಲ್ಲಿ ಪೋಸ್ಟ್ ಮಾಡಿದೆ. ಇದು ಆರ್​ಬಿಐನ ನಿಲುವು ಅಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ವರದಿಯ ಅಂಶಗಳನ್ನು ಪರಾಮರ್ಶಿಸಿ, ಶಿಫಾರಸುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬ ನಿಟ್ಟಿನಲ್ಲಿ ಆರ್​ಬಿಐ ಆಲೋಚಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ