AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಕರೆನ್ಸಿ ಹೆಚ್ಚೆಚ್ಚು ಬಳಸಿ; ರೂಪಾಯಿ ಅಂತಾರಾಷ್ಟ್ರೀಕರಣಕ್ಕೆ ಆರ್​ಬಿಐ ಸಮಿತಿಯಿಂದ ಹಲವು ಶಿಫಾರಸು

Internationalization of Rupee Currency: ಅಂತಾರಾಷ್ಟ್ರೀಯ ವ್ಯವಹಾರದಲ್ಲಿ, ಕ್ಯಾಪಿಟಲ್ ಅಕೌಂಟ್ ಟ್ರಾನ್ಸಾಕ್ಷನ್​ನಲ್ಲಿ ರೂಪಾಯಿ ಬಳಕೆ, ಎಸ್​ಡಿಆರ್​ನಲ್ಲಿ ರೂಪಾಯಿ ಇರಿಸುವುದು ಇತ್ಯಾದಿ ಕ್ರಮಗಳಿಗೆ ಆರ್​ಬಿಐನ ಸಮಿತಿಯೊಂದು ಶಿಫಾರಸು ಮಾಡಿದೆ.

RBI: ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಕರೆನ್ಸಿ ಹೆಚ್ಚೆಚ್ಚು ಬಳಸಿ; ರೂಪಾಯಿ ಅಂತಾರಾಷ್ಟ್ರೀಕರಣಕ್ಕೆ ಆರ್​ಬಿಐ ಸಮಿತಿಯಿಂದ ಹಲವು ಶಿಫಾರಸು
ರುಪಾಯಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 06, 2023 | 12:23 PM

Share

ನವದೆಹಲಿ: ರುಪಾಯಿಯನ್ನು ಅಂತಾರಾಷ್ಟ್ರೀಯವಾಗಿ ಹೆಚ್ಚೆಚ್ಚು ಬಳಸಲು ರಿಸರ್ವ್ ಬ್ಯಾಂಕ್​ನ ಸಮಿತಿಯೊಂದು ವಿವಿಧ ಕ್ರಮಗಳನ್ನು ಶಿಫಾರಸು ಮಾಡಿದೆ. ವಿದೇಶೀ ವಿನಿಮಯ ದರದ ಭಾಗವಾಗಿರುವ ಎಸ್​ಡಿಆರ್ ಗುಂಪಿನಲ್ಲಿ (SDR Basket) ರಪಾಯಿಯನ್ನು ಒಳಗೊಳ್ಳುವುದು, ಅಂತಾರಾಷ್ಟ್ರೀಯ ವ್ಯವಹಾರದಲ್ಲಿ ರುಪಾಯಿ ಕರೆನ್ಸಿಯಲ್ಲಿ ಇನ್ವಾಯ್ಸ್ ಸಲ್ಲಿಸುವುದು, ಕ್ಯಾಪಿಟಲ್ ಅಕೌಂಟ್ ಟ್ರಾನ್ಸಾಕ್ಷನ್​ನಲ್ಲಿ (Capital Account Transaction) ರುಪಾಯಿ ಬಳಸುವುದು ಇತ್ಯಾದಿ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಆರ್​ಬಿಐನ ಎಕ್ಸಿಕ್ಯೂಟಿವ್ ಡೈರೆಕ್ಟರ್ ರಾಧಾ ಶ್ಯಾಮ್ ರಾಥೋ ನೇತೃತ್ವದ ಇಂಟರ್ ಡಿಪಾರ್ಟ್​ಮೆಂಟಲ್ ಗ್ರೂಪ್ (IDG- Interdepartmental Group) ಶಿಫಾರಸು ಮಾಡಿದೆ.

ಯಾವುದೇ ಕರೆನ್ಸಿಯ ಅಂತಾರಾಷ್ಟ್ರೀಕರಣಕ್ಕೂ ಆ ದೇಶದ ಆರ್ಥಿಕ ಬೆಳವಣಿಗೂ ಕೊಂಡಿ ಇದೆ. ಅದರಲ್ಲೂ ಮುಖ್ಯವಾಗಿ ಜಾಗತಿಕ ವಹಿವಾಟಿನಲ್ಲಿ ಒಂದು ದೇಶ ಬೆಳವಣಿಗೆ ಸಾಧಿಸುವುದಕ್ಕೂ ಕರೆನ್ಸಿ ಅಂತಾರಾಷ್ಟ್ರೀಕರಣಕ್ಕೂ ಸಂಬಂಧ ಇದೆ. ಅತಿವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಹಲವು ಪ್ರಮುಖ ಎಡರುತೊಡರುಗಳ ನಡುವೆಯೂ ಭಾರತ ಉತ್ತಮ ಪ್ರಗತಿ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕರೆನ್ಸಿಯಾಗುವ ಸಾಮರ್ಥ್ಯ ರುಪಾಯಿಗೆ ಇದೆ ಎಂಬುದು ಆರ್​ಬಿಐನ ಈ ಸಮಿತಿಯ ಅನಿಸಿಕೆ.

ಇದನ್ನೂ ಓದಿRBI: ಮೊಬೈಲ್​ಗಿದ್ದ ಪೋರ್ಟಬಿಲಿಟಿ ಕ್ರೆಡಿಟ್ ಕಾರ್ಡ್​ಗೂ ಬರಲಿದೆಯಾ? ಆರ್​ಬಿಐ ಹೊರಡಿಸಿದ ಕರಡು ಅಧಿಸೂಚನೆಯಲ್ಲೇನಿದೆ?

ಭಾರತ ಹಾಗೂ ಹೊರಗೆ ಅನಿವಾಸಿ ಭಾರತೀಯರಿಗೆ ರುಪಾಯಿ ಖಾತೆಗಳನ್ನು ತೆರೆಯಬೇಕು. ಅಂತರ್ ದೇಶೀಯ ವಹಿವಾಟುಗಳಿಗೆ ಭಾರತೀಯ ಪೇಮೆಂಟ್ ವ್ಯವಸ್ಥೆ ಅಳವಡಿಸಬೇಕು ಎಂದೂ ಆರ್​ಬಿಐನ ಇಂಟರ್ಡಿಪಾರ್ಟ್​ಮೆಂಟಲ್ ಗ್ರೂಪ್ ಸಲಹೆ ಕೊಟ್ಟಿದೆ.

ಆರ್​ಬಿಐ ತನ್ನ ಸಮಿತಿ ಸಲ್ಲಿಸಿದ ಶಿಫಾರಸುಗಳನ್ನು ವೆಬ್​ಸೈಟ್​ನಲ್ಲಿ ಪೋಸ್ಟ್ ಮಾಡಿದೆ. ಇದು ಆರ್​ಬಿಐನ ನಿಲುವು ಅಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ವರದಿಯ ಅಂಶಗಳನ್ನು ಪರಾಮರ್ಶಿಸಿ, ಶಿಫಾರಸುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬ ನಿಟ್ಟಿನಲ್ಲಿ ಆರ್​ಬಿಐ ಆಲೋಚಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಮಾಧುಸ್ವಾಮಿ ದಿಢೀರ್ ಪ್ರತ್ಯಕ್ಷ:ಸ್ವಪಕ್ಷದ ನಾಯಕರ ನಡೆಗೆ ಬಹಿರಂಗ ಅಸಮಾಧಾನ
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ಪೋಕ್ಸೋ ಕೇಸ್​​ ವಿಚಾರಣೆ ಬಳಿಕ ವಚನಾನಂದ ಶ್ರೀ ಫಸ್ಟ್​​ ರಿಯಾಕ್ಷನ್​​
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ