Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI: ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಕರೆನ್ಸಿ ಹೆಚ್ಚೆಚ್ಚು ಬಳಸಿ; ರೂಪಾಯಿ ಅಂತಾರಾಷ್ಟ್ರೀಕರಣಕ್ಕೆ ಆರ್​ಬಿಐ ಸಮಿತಿಯಿಂದ ಹಲವು ಶಿಫಾರಸು

Internationalization of Rupee Currency: ಅಂತಾರಾಷ್ಟ್ರೀಯ ವ್ಯವಹಾರದಲ್ಲಿ, ಕ್ಯಾಪಿಟಲ್ ಅಕೌಂಟ್ ಟ್ರಾನ್ಸಾಕ್ಷನ್​ನಲ್ಲಿ ರೂಪಾಯಿ ಬಳಕೆ, ಎಸ್​ಡಿಆರ್​ನಲ್ಲಿ ರೂಪಾಯಿ ಇರಿಸುವುದು ಇತ್ಯಾದಿ ಕ್ರಮಗಳಿಗೆ ಆರ್​ಬಿಐನ ಸಮಿತಿಯೊಂದು ಶಿಫಾರಸು ಮಾಡಿದೆ.

RBI: ಅಂತಾರಾಷ್ಟ್ರೀಯ ವಹಿವಾಟಿನಲ್ಲಿ ಕರೆನ್ಸಿ ಹೆಚ್ಚೆಚ್ಚು ಬಳಸಿ; ರೂಪಾಯಿ ಅಂತಾರಾಷ್ಟ್ರೀಕರಣಕ್ಕೆ ಆರ್​ಬಿಐ ಸಮಿತಿಯಿಂದ ಹಲವು ಶಿಫಾರಸು
ರುಪಾಯಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jul 06, 2023 | 12:23 PM

ನವದೆಹಲಿ: ರುಪಾಯಿಯನ್ನು ಅಂತಾರಾಷ್ಟ್ರೀಯವಾಗಿ ಹೆಚ್ಚೆಚ್ಚು ಬಳಸಲು ರಿಸರ್ವ್ ಬ್ಯಾಂಕ್​ನ ಸಮಿತಿಯೊಂದು ವಿವಿಧ ಕ್ರಮಗಳನ್ನು ಶಿಫಾರಸು ಮಾಡಿದೆ. ವಿದೇಶೀ ವಿನಿಮಯ ದರದ ಭಾಗವಾಗಿರುವ ಎಸ್​ಡಿಆರ್ ಗುಂಪಿನಲ್ಲಿ (SDR Basket) ರಪಾಯಿಯನ್ನು ಒಳಗೊಳ್ಳುವುದು, ಅಂತಾರಾಷ್ಟ್ರೀಯ ವ್ಯವಹಾರದಲ್ಲಿ ರುಪಾಯಿ ಕರೆನ್ಸಿಯಲ್ಲಿ ಇನ್ವಾಯ್ಸ್ ಸಲ್ಲಿಸುವುದು, ಕ್ಯಾಪಿಟಲ್ ಅಕೌಂಟ್ ಟ್ರಾನ್ಸಾಕ್ಷನ್​ನಲ್ಲಿ (Capital Account Transaction) ರುಪಾಯಿ ಬಳಸುವುದು ಇತ್ಯಾದಿ ರೀತಿಯಲ್ಲಿ ಕ್ರಮಗಳನ್ನು ಕೈಗೊಳ್ಳಬಹುದು ಎಂದು ಆರ್​ಬಿಐನ ಎಕ್ಸಿಕ್ಯೂಟಿವ್ ಡೈರೆಕ್ಟರ್ ರಾಧಾ ಶ್ಯಾಮ್ ರಾಥೋ ನೇತೃತ್ವದ ಇಂಟರ್ ಡಿಪಾರ್ಟ್​ಮೆಂಟಲ್ ಗ್ರೂಪ್ (IDG- Interdepartmental Group) ಶಿಫಾರಸು ಮಾಡಿದೆ.

ಯಾವುದೇ ಕರೆನ್ಸಿಯ ಅಂತಾರಾಷ್ಟ್ರೀಕರಣಕ್ಕೂ ಆ ದೇಶದ ಆರ್ಥಿಕ ಬೆಳವಣಿಗೂ ಕೊಂಡಿ ಇದೆ. ಅದರಲ್ಲೂ ಮುಖ್ಯವಾಗಿ ಜಾಗತಿಕ ವಹಿವಾಟಿನಲ್ಲಿ ಒಂದು ದೇಶ ಬೆಳವಣಿಗೆ ಸಾಧಿಸುವುದಕ್ಕೂ ಕರೆನ್ಸಿ ಅಂತಾರಾಷ್ಟ್ರೀಕರಣಕ್ಕೂ ಸಂಬಂಧ ಇದೆ. ಅತಿವೇಗವಾಗಿ ಬೆಳೆಯುತ್ತಿರುವ ದೇಶಗಳಲ್ಲಿ ಭಾರತವೂ ಒಂದು. ಹಲವು ಪ್ರಮುಖ ಎಡರುತೊಡರುಗಳ ನಡುವೆಯೂ ಭಾರತ ಉತ್ತಮ ಪ್ರಗತಿ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಅಂತಾರಾಷ್ಟ್ರೀಯ ಕರೆನ್ಸಿಯಾಗುವ ಸಾಮರ್ಥ್ಯ ರುಪಾಯಿಗೆ ಇದೆ ಎಂಬುದು ಆರ್​ಬಿಐನ ಈ ಸಮಿತಿಯ ಅನಿಸಿಕೆ.

ಇದನ್ನೂ ಓದಿRBI: ಮೊಬೈಲ್​ಗಿದ್ದ ಪೋರ್ಟಬಿಲಿಟಿ ಕ್ರೆಡಿಟ್ ಕಾರ್ಡ್​ಗೂ ಬರಲಿದೆಯಾ? ಆರ್​ಬಿಐ ಹೊರಡಿಸಿದ ಕರಡು ಅಧಿಸೂಚನೆಯಲ್ಲೇನಿದೆ?

ಭಾರತ ಹಾಗೂ ಹೊರಗೆ ಅನಿವಾಸಿ ಭಾರತೀಯರಿಗೆ ರುಪಾಯಿ ಖಾತೆಗಳನ್ನು ತೆರೆಯಬೇಕು. ಅಂತರ್ ದೇಶೀಯ ವಹಿವಾಟುಗಳಿಗೆ ಭಾರತೀಯ ಪೇಮೆಂಟ್ ವ್ಯವಸ್ಥೆ ಅಳವಡಿಸಬೇಕು ಎಂದೂ ಆರ್​ಬಿಐನ ಇಂಟರ್ಡಿಪಾರ್ಟ್​ಮೆಂಟಲ್ ಗ್ರೂಪ್ ಸಲಹೆ ಕೊಟ್ಟಿದೆ.

ಆರ್​ಬಿಐ ತನ್ನ ಸಮಿತಿ ಸಲ್ಲಿಸಿದ ಶಿಫಾರಸುಗಳನ್ನು ವೆಬ್​ಸೈಟ್​ನಲ್ಲಿ ಪೋಸ್ಟ್ ಮಾಡಿದೆ. ಇದು ಆರ್​ಬಿಐನ ನಿಲುವು ಅಲ್ಲ ಎಂದೂ ಸ್ಪಷ್ಟಪಡಿಸಿದೆ. ಈ ವರದಿಯ ಅಂಶಗಳನ್ನು ಪರಾಮರ್ಶಿಸಿ, ಶಿಫಾರಸುಗಳನ್ನು ಹೇಗೆ ಜಾರಿಗೊಳಿಸಬಹುದು ಎಂಬ ನಿಟ್ಟಿನಲ್ಲಿ ಆರ್​ಬಿಐ ಆಲೋಚಿಸಲಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ಯತ್ನಾಳ್​ಗೆ ರೇಣುಕಾ ಯಲ್ಲಮ್ಮನ ದರ್ಶನ ಮಾಡಿಸಿದ ಯಡಿಯೂರಪ್ಪ!
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ವಾರಾಹಿ ಪಂಜುರ್ಲಿ ಕ್ಷೇತ್ರಕ್ಕೆ ರಿಷಬ್ ಶೆಟ್ಟಿ ಬಂದಾಗ ಏನೆಲ್ಲ ನಡೆಯಿತು?
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಯುವತಿಯ ಖಾಸಗಿ ಅಂಗ ಸ್ಪರ್ಶ ಕೇಸ್: ಉಡಾಫೆ ಉತ್ತರ ಕೊಟ್ಟ ಗೃಹ ಸಚಿವ
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ಪೊಲೀಸ್ ಭದ್ರತೆ ಮಧ್ಯೆ ಪ್ರವೀಣ್ ನೆಟ್ಟರು ಹಂತಕನಿಗೆ ಮುತ್ತಿಕ್ಕಿದ ಯುವಕ!
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ರಿಷಬ್ ಶೆಟ್ಟಿ ಭೇಟಿ ನೀಡಿದ ವಾರಾಹಿ ಪಂಜುರ್ಲಿ ಕ್ಷೇತ್ರ ಹೇಗಿದೆ ನೋಡಿ..
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ನಡುವೆ ಅಸಮಾಧಾನಗಳಿವೆಯಾ?
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಕೋಲಾರ ಜಿಲ್ಲಾಸ್ಪತ್ರೆಯಲ್ಲಿ ಕೆಟ್ಟ ಐಸಿಯು ಎಸಿ: ರೋಗಿಗಳು ಬೇರೆಡೆ ಶಿಫ್ಟ್
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ಬ್ಯಾಗ್ ಕದಿಯಲು ಬಂದವಗೆ ಒಳ್ಳೆ ರಿಪ್ಲೇ ಕೊಟ್ಟ ಯುವತಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ರಾಣಿ ಚೆನ್ನಮ್ಮ ಹೆಸರಲ್ಲೂ ಅಭಿವೃದ್ಧಿ ಪ್ರಾಧಿಕಾರ ಸ್ಥಾಪಿಸಲಿ: ಸ್ವಾಮೀಜಿ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ
ಚ್ಯಾನೆಲ್​ಗಳಲ್ಲಿ ವರದಿ ಬಿತ್ತರವಾದಾಗ ಮಾತ್ರ ಅಧಿಕಾರಿಗಳು ಬಂದು ಹೋಗುತ್ತಾರೆ