Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI payment: ವ್ಯಾಪಾರಿಗಳಿಗೆ ಹೆಚ್ಚು ಯುಪಿಐ ವಹಿವಾಟು ಅವಕಾಶ? ಎನ್​​ಪಿಸಿಐಗೆ ನಿರ್ಧಾರದ ಅಧಿಕಾರ ಕೊಟ್ಟ ಆರ್​​ಬಿಐ

RBI MPC decision highlight: ಗ್ರಾಹಕರಿಂದ ವರ್ತಕರಿಗೆ ಮಾಡಲಾಗುವ ಯುಪಿಐ ಹಣ ಪಾವತಿ ಮಿತಿಯನ್ನು ಪರಿಷ್ಕರಿಸುವ ಅಧಿಕಾರವನ್ನು ಎನ್​​ಪಿಸಿಐಗೆ ನೀಡಲಾಗಿದೆ. ಆರ್​​ಬಿಐ ಎಂಪಿಸಿ ಸಭೆ ಬಳಿಕ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ, ವರ್ತಕರಿಗೆ ಗ್ರಾಹಕರಿಂದ ಆಗುವ ಯುಪಿಐ ವಹಿವಾಟು ಮಿತಿ 2 ಲಕ್ಷ ರೂ ಇದೆ. ಬ್ಯಾಂಕು ಹಾಗು ಇತರ ಭಾಗಿದಾರರೊಂದಿಗೆ ಸಮಾಲೋಚಿಸಿ ಎನ್​​ಪಿಸಿಐ ಈ ಮಿತಿ ಏರಿಸಬಹುದು.

UPI payment: ವ್ಯಾಪಾರಿಗಳಿಗೆ ಹೆಚ್ಚು ಯುಪಿಐ ವಹಿವಾಟು ಅವಕಾಶ? ಎನ್​​ಪಿಸಿಐಗೆ ನಿರ್ಧಾರದ ಅಧಿಕಾರ ಕೊಟ್ಟ ಆರ್​​ಬಿಐ
ಯುಪಿಐ ಪಾವತಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 09, 2025 | 12:54 PM

ನವದೆಹಲಿ, ಏಪ್ರಿಲ್ 9: ವ್ಯಾಪಾರಿಗಳಿಗೆ ಗ್ರಾಹಕರು ಯುಪಿಐ ಮೂಲಕ ಹಣ ಪಾವತಿಸಲು ಎಷ್ಟು ಮಿತಿ ಇರಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರವನ್ನು ಎನ್​​ಪಿಸಿಐಗೆ ನೀಡಲಾಗಿದೆ. ಆರ್​​ಬಿಐನ ಮಾನಿಟರಿ ಪಾಲಿಸಿ ಸಮಿತಿ ಸಭೆಯಲ್ಲಿ (RBI Monetary Policy Committee meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವ್ಯಾಪಾರಿಗಳಿಗೆ ಗ್ರಾಹಕರಿಂದ ಯುಪಿಐ ಮೂಲಕ ಆಗುವ ಹಣ ವಹಿವಾಟು ಮಿತಿಯನ್ನು (Person to Merchant UPI transaction limit) ಎನ್​​ಪಿಸಿಐ ಪರಿಷ್ಕರಿಸಬಹುದು ಎಂದು ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸದ್ಯ, ಗ್ರಾಹಕರಿಂದ ವರ್ತಕರಿಗೆ ಹಣ ಪಾವತಿಗೆ ಎರಡು ಲಕ್ಷ ರೂ ಮಿತಿ ನಿಗದಿ ಮಾಡಲಾಗಿದೆ. ಈ ಮಿತಿಯನ್ನು ಬದಲಿಸಲು, ಅಂದರೆ ಏರಿಸಲೋ ಅಥವಾ ಇರಿಸಲೋ ನಿರ್ಧರಿಸುವ ಅಧಿಕಾರ ಎನ್​​ಪಿಸಿಐಗೆ ನೀಡಲಾಗಿದೆ. ಯುಪಿಐ ಅನ್ನು ಅಭಿವೃದ್ಧಿಪಡಿಸಿದ್ದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಶನ್ (ಎನ್​​ಪಿಸಿಐ). ಬ್ಯಾಂಕು ಹಾಗೂ ಯುಪಿಐ ಪಾವತಿ ವ್ಯವಸ್ಥೆಯಲ್ಲಿನ ಇತರ ಎಲ್ಲಾ ಭಾಗಿದಾರರೊಂದಿಗೆ ಸಮಾಲೋಚಿಸಿ, ಯುಪಿಐ ಟ್ರಾನ್ಸಾಕ್ಷನ್ ಮಿತಿಯನ್ನು ಎನ್​​ಪಿಸಿಐ ನಿರ್ಧರಿಸಬಹುದು ಎಂದು ಆರ್​​ಬಿಐ ಹೇಳಿದೆ.

ಇದನ್ನೂ ಓದಿ: ಆರ್​​ಬಿಐ ನಿಲುವಿನಲ್ಲಿ ಪರಿಷ್ಕರಣೆ; ನ್ಯೂಟ್ರಲ್​​ನಿಂದ Accommodativeಗೆ ಬದಲಾವಣೆ; ಜೂನ್​​ನಲ್ಲೂ ಬಡ್ಡಿ ದರ ಇಳಿಕೆಯಾಗುತ್ತಾ?

ಇದನ್ನೂ ಓದಿ
Image
ಆರ್​​ಬಿಐ ನಿಲುವು ನ್ಯೂಟ್ರಲ್​​ನೀಂದ Accommodativeಗೆ ಬದಲಾವಣೆ
Image
ಜಿಡಿಪಿ ಶೇ. 6.5, ಹಣದುಬ್ಬರ ಶೇ. 4: ಆರ್​​ಬಿಐ ಅಂದಾಜು
Image
ಬಡ್ಡಿದರ ಶೇ. 6ಕ್ಕೆ ಇಳಿಸಿದ ಆರ್​​ಬಿಐ
Image
ಯುಎಎನ್ ಆ್ಯಕ್ಟಿವೇಶನ್​​ಗೆ ಫೇಸ್ ಅಥೆಂಟಿಕೇಶನ್ ಫೀಚರ್

ಇಲ್ಲಿ ಗ್ರಾಹಕರಿಂದ ವ್ಯಾಪಾರಿಗೆ ಯುಪಿಐ ಮೂಲಕ ಮಾಡಲಾಗುವ ಹಣ ಪಾವತಿಯ ವಹಿವಾಟು ಮಿತಿ ಇದಾಗಿದೆ. ಸದ್ಯ ಇದು ಎರಡು ಲಕ್ಷ ರೂಗೆ ನಿಗದಿ ಮಾಡಲಾಗಿದೆ. ಬ್ಯಾಂಕ್ ಮತ್ತಿತರ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ಎನ್​​ಪಿಸಿಐ ಈ ಮಿತಿಯನ್ನು ಹೆಚ್ಚಿಸಲು ಸ್ವತಂತ್ರವಾಗಿರುತ್ತದೆ.

ಇನ್ನು, ವ್ಯಕ್ತಿಯಿಂದ ವ್ಯಕ್ತಿಗೆ ಯುಪಿಐ ಪಾವತಿ ಮಿತಿ ಒಂದು ಲಕ್ಷ ರೂ ಇದೆ. ಇದರಲ್ಲಿ ಸದ್ಯ ಯಾವ ಬದಲಾವಣೆ ಇರುವುದಿಲ್ಲ. ವರ್ತಕರಿಗೆ ಮಾಡಲಾಗುವ ಯುಪಿಐ ವಹಿವಾಟು ಮಿತಿ ಹೆಚ್ಚಳ ಸಾಧ್ಯತೆ ಸದ್ಯಕ್ಕೆ ಕಂಡುಬರುತ್ತಿದೆ.

ಇದನ್ನೂ ಓದಿ: ಬಡ್ಡಿದರ 25 ಅಂಕ ಇಳಿಸಿದ ಆರ್​​ಬಿಐ; ರಿಪೋ ದರ ಶೇ. 6ಕ್ಕೆ ಇಳಿಕೆ

ಆರ್​​ಬಿಐನ ಈ ನಿರ್ಧಾರವನ್ನು ಹಣಕಾಸು ಕ್ಷೇತ್ರದವರು ಸ್ವಾಗತಿಸಿದ್ದಾರೆ. ವ್ಯಾಪಾರಿಗಳಿಗೆ ಹೆಚ್ಚಿನ ಮೊತ್ತದ ಹಣವನ್ನು ಯುಪಿಐ ಮೂಲಕ ಪಾವತಿಸಲು ಸಾಧ್ಯವಾಗುತ್ತದೆ ಎಂದಾದಲ್ಲಿ ಅದರಿಂದ ರೀಟೇಲ್ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ. ಪ್ರವಾಸ, ಆರೋಗ್ಯ, ಶಿಕ್ಷಣ ಮತ್ತಿತರ ಸೆಕ್ಟರ್​​ಗಳಿಗೆ ಇದರಿಂದ ಅನುಕೂಲವಾಗಬಹುದು ಎಂದು ಮುಫಿನ್​​ಪೇ (MufinPay) ಸಂಸ್ಥೆಯ ಸಿಇಒ ಅಂಕುಶ್ ಜುಲ್ಕಾ ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ತಕ್ಕ ಪಾಠ ಕಲಿಸುತ್ತೇವೆ; ಉಗ್ರರ ದಾಳಿಗೆ ಸಚಿವ ಪ್ರಲ್ಹಾದ್ ಜೋಶಿ ಖಂಡನೆ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಮಂಜುನಾಥ್, ಸಾವಿಗೂ ಮುನ್ನ ಪತ್ನಿಯೊಂದಿಗೆ ಕಾಶ್ಮೀರದಲ್ಲಿ ಕಳೆದ ಕೊನೆ ಕ್ಷಣ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಉಗ್ರರ ದಾಳಿ ಬಳಿಕ ಭದ್ರತಾ ಪರಿಶೀಲನೆಗೆ ಶ್ರೀನಗರಕ್ಕೆ ತೆರಳಿದ ಅಮಿತ್ ಶಾ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪಹಲ್ಗಾಮ್‌: ಪತ್ನಿ ಎದುರೇ ಪತಿಯನ್ನ ಕೊಂದು ಮೋದಿಗೆ ಹೋಗಿ ಹೇಳು ಎಂದ ಉಗ್ರ
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಪತ್ನಿ ಪಲ್ಲವಿ ಹಾಗೂ ಮಗನೊಂದಿಗೆ ಪ್ರವಾಸ ತೆರಳಿದ್ದ ಮಂಜುನಾಥ್
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ಕೇವಲ ಕಳ್ಳತನಕ್ಕಾಗಿ ನಡೆದ ಕೊಲೆ ಅಲ್ಲ ಇದು, ಬೇರೆ ಕಾರಣವೂ ಇದೆ: ಡಿಸಿಪಿ
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್ ಜಾಮೀನು ರದ್ದು ಅರ್ಜಿ: ಸುಪ್ರೀಂಕೋರ್ಟ್​ನಲ್ಲಿ ಇಂದು ನಡೆದ ವಾದವೇನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ದರ್ಶನ್, ಪವಿತ್ರಾ ಗೌಡ ಸಂಬಂಧದ ಬಗ್ಗೆ ಸುಪ್ರೀಂಕೋರ್ಟ್ ಕೇಳಿದ ಪ್ರಶ್ನೆ ಏನು?
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ನಾವು ಇದುವರೆಗೆ ಯಾರನ್ನೂ ಅಪರಾಧಿಗಳು ಅಂತ ಹೇಳಿಲ್ಲ: ರಿಕ್ಕಿ ರೈ ವಕೀಲ
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್
ವಿಜಯಪುರದಲ್ಲಿ ವಿಜಯೇಂದ್ರ ಭಾಷಣ ಮಾಡುವಾಗ ಸ್ವಲ್ಪ ಜನರಿದ್ದರು: ಯತ್ನಾಳ್