AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

UPI payment: ವ್ಯಾಪಾರಿಗಳಿಗೆ ಹೆಚ್ಚು ಯುಪಿಐ ವಹಿವಾಟು ಅವಕಾಶ? ಎನ್​​ಪಿಸಿಐಗೆ ನಿರ್ಧಾರದ ಅಧಿಕಾರ ಕೊಟ್ಟ ಆರ್​​ಬಿಐ

RBI MPC decision highlight: ಗ್ರಾಹಕರಿಂದ ವರ್ತಕರಿಗೆ ಮಾಡಲಾಗುವ ಯುಪಿಐ ಹಣ ಪಾವತಿ ಮಿತಿಯನ್ನು ಪರಿಷ್ಕರಿಸುವ ಅಧಿಕಾರವನ್ನು ಎನ್​​ಪಿಸಿಐಗೆ ನೀಡಲಾಗಿದೆ. ಆರ್​​ಬಿಐ ಎಂಪಿಸಿ ಸಭೆ ಬಳಿಕ ಈ ಮಹತ್ವದ ನಿರ್ಧಾರ ತೆಗೆದುಕೊಳ್ಳಲಾಗಿದೆ. ಸದ್ಯ, ವರ್ತಕರಿಗೆ ಗ್ರಾಹಕರಿಂದ ಆಗುವ ಯುಪಿಐ ವಹಿವಾಟು ಮಿತಿ 2 ಲಕ್ಷ ರೂ ಇದೆ. ಬ್ಯಾಂಕು ಹಾಗು ಇತರ ಭಾಗಿದಾರರೊಂದಿಗೆ ಸಮಾಲೋಚಿಸಿ ಎನ್​​ಪಿಸಿಐ ಈ ಮಿತಿ ಏರಿಸಬಹುದು.

UPI payment: ವ್ಯಾಪಾರಿಗಳಿಗೆ ಹೆಚ್ಚು ಯುಪಿಐ ವಹಿವಾಟು ಅವಕಾಶ? ಎನ್​​ಪಿಸಿಐಗೆ ನಿರ್ಧಾರದ ಅಧಿಕಾರ ಕೊಟ್ಟ ಆರ್​​ಬಿಐ
ಯುಪಿಐ ಪಾವತಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Apr 09, 2025 | 12:54 PM

Share

ನವದೆಹಲಿ, ಏಪ್ರಿಲ್ 9: ವ್ಯಾಪಾರಿಗಳಿಗೆ ಗ್ರಾಹಕರು ಯುಪಿಐ ಮೂಲಕ ಹಣ ಪಾವತಿಸಲು ಎಷ್ಟು ಮಿತಿ ಇರಬೇಕು ಎಂಬುದನ್ನು ನಿರ್ಧರಿಸುವ ಅಧಿಕಾರವನ್ನು ಎನ್​​ಪಿಸಿಐಗೆ ನೀಡಲಾಗಿದೆ. ಆರ್​​ಬಿಐನ ಮಾನಿಟರಿ ಪಾಲಿಸಿ ಸಮಿತಿ ಸಭೆಯಲ್ಲಿ (RBI Monetary Policy Committee meeting) ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ವ್ಯಾಪಾರಿಗಳಿಗೆ ಗ್ರಾಹಕರಿಂದ ಯುಪಿಐ ಮೂಲಕ ಆಗುವ ಹಣ ವಹಿವಾಟು ಮಿತಿಯನ್ನು (Person to Merchant UPI transaction limit) ಎನ್​​ಪಿಸಿಐ ಪರಿಷ್ಕರಿಸಬಹುದು ಎಂದು ಆರ್​​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಸುದ್ದಿಗೋಷ್ಠಿಯಲ್ಲಿ ಹೇಳಿದರು.

ಸದ್ಯ, ಗ್ರಾಹಕರಿಂದ ವರ್ತಕರಿಗೆ ಹಣ ಪಾವತಿಗೆ ಎರಡು ಲಕ್ಷ ರೂ ಮಿತಿ ನಿಗದಿ ಮಾಡಲಾಗಿದೆ. ಈ ಮಿತಿಯನ್ನು ಬದಲಿಸಲು, ಅಂದರೆ ಏರಿಸಲೋ ಅಥವಾ ಇರಿಸಲೋ ನಿರ್ಧರಿಸುವ ಅಧಿಕಾರ ಎನ್​​ಪಿಸಿಐಗೆ ನೀಡಲಾಗಿದೆ. ಯುಪಿಐ ಅನ್ನು ಅಭಿವೃದ್ಧಿಪಡಿಸಿದ್ದು ನ್ಯಾಷನಲ್ ಪೇಮೆಂಟ್ ಕಾರ್ಪೊರೇಶನ್ (ಎನ್​​ಪಿಸಿಐ). ಬ್ಯಾಂಕು ಹಾಗೂ ಯುಪಿಐ ಪಾವತಿ ವ್ಯವಸ್ಥೆಯಲ್ಲಿನ ಇತರ ಎಲ್ಲಾ ಭಾಗಿದಾರರೊಂದಿಗೆ ಸಮಾಲೋಚಿಸಿ, ಯುಪಿಐ ಟ್ರಾನ್ಸಾಕ್ಷನ್ ಮಿತಿಯನ್ನು ಎನ್​​ಪಿಸಿಐ ನಿರ್ಧರಿಸಬಹುದು ಎಂದು ಆರ್​​ಬಿಐ ಹೇಳಿದೆ.

ಇದನ್ನೂ ಓದಿ: ಆರ್​​ಬಿಐ ನಿಲುವಿನಲ್ಲಿ ಪರಿಷ್ಕರಣೆ; ನ್ಯೂಟ್ರಲ್​​ನಿಂದ Accommodativeಗೆ ಬದಲಾವಣೆ; ಜೂನ್​​ನಲ್ಲೂ ಬಡ್ಡಿ ದರ ಇಳಿಕೆಯಾಗುತ್ತಾ?

ಇದನ್ನೂ ಓದಿ
Image
ಆರ್​​ಬಿಐ ನಿಲುವು ನ್ಯೂಟ್ರಲ್​​ನೀಂದ Accommodativeಗೆ ಬದಲಾವಣೆ
Image
ಜಿಡಿಪಿ ಶೇ. 6.5, ಹಣದುಬ್ಬರ ಶೇ. 4: ಆರ್​​ಬಿಐ ಅಂದಾಜು
Image
ಬಡ್ಡಿದರ ಶೇ. 6ಕ್ಕೆ ಇಳಿಸಿದ ಆರ್​​ಬಿಐ
Image
ಯುಎಎನ್ ಆ್ಯಕ್ಟಿವೇಶನ್​​ಗೆ ಫೇಸ್ ಅಥೆಂಟಿಕೇಶನ್ ಫೀಚರ್

ಇಲ್ಲಿ ಗ್ರಾಹಕರಿಂದ ವ್ಯಾಪಾರಿಗೆ ಯುಪಿಐ ಮೂಲಕ ಮಾಡಲಾಗುವ ಹಣ ಪಾವತಿಯ ವಹಿವಾಟು ಮಿತಿ ಇದಾಗಿದೆ. ಸದ್ಯ ಇದು ಎರಡು ಲಕ್ಷ ರೂಗೆ ನಿಗದಿ ಮಾಡಲಾಗಿದೆ. ಬ್ಯಾಂಕ್ ಮತ್ತಿತರ ಸಂಸ್ಥೆಗಳೊಂದಿಗೆ ಸಮಾಲೋಚಿಸಿ ಎನ್​​ಪಿಸಿಐ ಈ ಮಿತಿಯನ್ನು ಹೆಚ್ಚಿಸಲು ಸ್ವತಂತ್ರವಾಗಿರುತ್ತದೆ.

ಇನ್ನು, ವ್ಯಕ್ತಿಯಿಂದ ವ್ಯಕ್ತಿಗೆ ಯುಪಿಐ ಪಾವತಿ ಮಿತಿ ಒಂದು ಲಕ್ಷ ರೂ ಇದೆ. ಇದರಲ್ಲಿ ಸದ್ಯ ಯಾವ ಬದಲಾವಣೆ ಇರುವುದಿಲ್ಲ. ವರ್ತಕರಿಗೆ ಮಾಡಲಾಗುವ ಯುಪಿಐ ವಹಿವಾಟು ಮಿತಿ ಹೆಚ್ಚಳ ಸಾಧ್ಯತೆ ಸದ್ಯಕ್ಕೆ ಕಂಡುಬರುತ್ತಿದೆ.

ಇದನ್ನೂ ಓದಿ: ಬಡ್ಡಿದರ 25 ಅಂಕ ಇಳಿಸಿದ ಆರ್​​ಬಿಐ; ರಿಪೋ ದರ ಶೇ. 6ಕ್ಕೆ ಇಳಿಕೆ

ಆರ್​​ಬಿಐನ ಈ ನಿರ್ಧಾರವನ್ನು ಹಣಕಾಸು ಕ್ಷೇತ್ರದವರು ಸ್ವಾಗತಿಸಿದ್ದಾರೆ. ವ್ಯಾಪಾರಿಗಳಿಗೆ ಹೆಚ್ಚಿನ ಮೊತ್ತದ ಹಣವನ್ನು ಯುಪಿಐ ಮೂಲಕ ಪಾವತಿಸಲು ಸಾಧ್ಯವಾಗುತ್ತದೆ ಎಂದಾದಲ್ಲಿ ಅದರಿಂದ ರೀಟೇಲ್ ಕ್ಷೇತ್ರಕ್ಕೆ ಅನುಕೂಲವಾಗುತ್ತದೆ. ಪ್ರವಾಸ, ಆರೋಗ್ಯ, ಶಿಕ್ಷಣ ಮತ್ತಿತರ ಸೆಕ್ಟರ್​​ಗಳಿಗೆ ಇದರಿಂದ ಅನುಕೂಲವಾಗಬಹುದು ಎಂದು ಮುಫಿನ್​​ಪೇ (MufinPay) ಸಂಸ್ಥೆಯ ಸಿಇಒ ಅಂಕುಶ್ ಜುಲ್ಕಾ ಹೇಳುತ್ತಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ‘ಶಿವ ತಾಂಡವ’ ರಂಗು!
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಐಪಿಎಲ್ ಫೈನಲ್: ಬೆಂಗಳೂರಿನಲ್ಲಿ ಖಾಕಿ ಸರ್ಪಗಾವಲು; ತೀವ್ರ ಕಟ್ಟೆಚ್ಚರ
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಬಾಗೇಪಲ್ಲಿ ಭೀಕರ ರಸ್ತೆ ಅಪಘಾತ ಪ್ರಕರಣ: ಎಸ್‌ಪಿ ಬಿಗ್ ಸ್ಟೇಟ್‌ಮೆಂಟ್
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪ್ರಮಾಣವಚನ ದಿನವೇ ಕಾಂಗ್ರೆಸ್ ಭವನ ಶಂಕುಸ್ಥಾಪನೆಗೆ ಡಿಕೆಶಿ ಪ್ಲ್ಯಾನ್​
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಪವರ್​ ಪ್ಲೇನಲ್ಲೇ ಗುಜರಾತ್ ಪವರ್ ಕಸಿದ ಆರ್​ಸಿಬಿ
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಆರ್​​ಸಿಬಿ ಫ್ಯಾನ್ಸ್‌ಗೆ ಬೆಂಗಳೂರು ಕಮಿಷನರ್ ಕಠಿಣ ವಾರ್ನಿಂಗ್!
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಿದ್ ಶ್ರೀರಾಮ್ ಗಾಯನಕ್ಕೆ ಹಿನ್ನೆಲೆ ಸಂಗೀತದ ಅವಶ್ಯಕತೆಯೇ ಇಲ್ಲ: ವಿಡಿಯೋ
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಗ್​​ ಅಪ್ಡೇಡ್​​ ನೀಡಿದ ಡಿ.ಕೆ ಶಿವಕುಮಾರ್
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಶ್ರೀ ಕೃಷ್ಣನ ಸನ್ನಿಧಾನದಲ್ಲಿ ವಸಿಷ್ಠ ಸಿಂಹ, ಹರಿಪ್ರಿಯ ದಂಪತಿ: ವಿಡಿಯೋ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ
ಪುತ್ರಿ ರೂಪಾ ಶಶಿಧರ್ ಸಚಿವ ಸ್ಥಾನ ನೀಡುವ ಬಗ್ಗೆ ಮಹತ್ವದ ಹೇಳಿಕೆ