AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI update: ರೈತರಿಗೆ ಖುಷಿ ಸುದ್ದಿ; ಅಡಮಾನರಹಿತ ಕೃಷಿಸಾಲದ ಮಿತಿ 2 ಲಕ್ಷ ರೂಗೆ ಏರಿಕೆ

Collateral-free agriculture loan: ಅಡಮಾನರಹಿತ ಕೃಷಿ ಸಾಲ ಮಿತಿಯನ್ನು 1.6 ಲಕ್ಷ ರೂನಿಂದ 2 ಲಕ್ಷ ರೂಗೆ ಹೆಚ್ಚಿಸಲಾಗಿದೆ. ಆರ್​ಬಿಐ ಎಂಪಿಸಿಯಲ್ಲಿ ತೆಗೆದುಕೊಳ್ಳಲಾದ ಈ ನಿರ್ಧಾರದಿಂದ ಸಣ್ಣ ರೈತರಿಗೆ ಅನುಕೂಲವಾಗಲಿದೆ. ಇದೇ ವೇಳೆ, ಫಾರೀನ್ ಕರೆನ್ಸಿ ನಾನ್ ರೆಸಿಡೆಂಟ್ (ಎಫ್​ಸಿಎನ್​ಆರ್) ಠೇವಣಿಗಳಿಗೆ ಬಡ್ಡಿದರದ ಮಿತಿಯನ್ನು 200 ಮೂಲಾಂಕಗಳಷ್ಟು ಹೆಚ್ಚಿಸಲಾಗಿದೆ.

RBI update: ರೈತರಿಗೆ ಖುಷಿ ಸುದ್ದಿ; ಅಡಮಾನರಹಿತ ಕೃಷಿಸಾಲದ ಮಿತಿ 2 ಲಕ್ಷ ರೂಗೆ ಏರಿಕೆ
ಕೃಷಿ ಸಾಲ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 06, 2024 | 11:46 AM

Share

ನವದೆಹಲಿ, ಡಿಸೆಂಬರ್ 6: ಭಾರತೀಯ ರಿಸರ್ವ್ ಬ್ಯಾಂಕ್ ಅಡಮಾನರಹಿತ ಕೃಷಿ ಸಾಲದ ಮಿತಿಯನ್ನು (collateral-free loan) 2 ಲಕ್ಷ ರೂಗೆ ಏರಿಸಿದೆ. ಆರ್​ಬಿಐನ ಮಾನಿಟರಿ ಪಾಲಿಸಿ ಸಮಿತಿಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಇಂದು ಶುಕ್ರವಾರ ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಈ ನಿರ್ಧಾರವನ್ನು ಪ್ರಕಟಿಸಿದರು. ಸದ್ಯ ಅಡಮಾನರಹಿತ ಕೃಷಿ ಸಾಲದ ಮಿತಿ 1.6 ಲಕ್ಷ ರೂ ಇದೆ. ಇದನ್ನು ಎರಡು ಲಕ್ಷ ರೂಗೆ ಏರಿಸಲಾಗಿದೆ. ಅಂದರೆ, ಒಬ್ಬ ವ್ಯಕ್ತಿ ಯಾವುದೇ ಅಡಮಾನ ಇಡುವ ಅಗತ್ಯ ಇಲ್ಲದೇ 2 ಲಕ್ಷ ರೂವರೆಗೆ ಕೃಷಿ ಸಾಲ ಪಡೆಯಲು ಅವಕಾಶ ಇರುತ್ತದೆ.

ಆರ್​ಬಿಐನ ಈ ನಿರ್ಧಾರವು ಸಣ್ಣ ರೈತರಿಗೆ ಅನುಕೂಲವಾಗಲಿದೆ. ಹೆಚ್ಚು ಸಾಲ ಪಡೆದು ಕೃಷಿ ಚಟುವಟಿಕೆಗೆ ಉಪಯೋಗಿಸಿಕೊಳ್ಳಬಹುದು.

‘ಅಡಮಾನರಹಿತ ಕೃಷಿ ಸಾಲದ ಮಿತಿಯನ್ನು ಕೊನೆಯದಾಗಿ ಪರಿಷ್ಕರಿಸಿದ್ದು 2019ರಲ್ಲಿ. ಅಲ್ಲಿಂದೀಚೆಗೆ ಮಿತಿ ಪರಿಷ್ಕರಿಸಲಾಗಿರಲಿಲ್ಲ. ಕೃಷಿ ವೆಚ್ಚದಲ್ಲಿ ಏರಿಕೆ ಆಗಿರುವುದು ಹಾಗು ಒಟ್ಟಾರೆ ಹಣದುಬ್ಬರ ಹೆಚ್ಚಳ ಆಗಿರುವುದನ್ನು ಪರಿಗಣಿಸಿ, ಅಡಮಾನರಹಿತ ಕೃಷಿ ಸಾಲಗಳ ಮಿತಿಯನ್ನು 1.6 ಲಕ್ಷ ರೂನಿಂದ 2 ಲಕ್ಷ ರೂಗೆ ಏರಿಸಲು ನಿರ್ಧರಿಸಲಾಗಿದೆ. ಸಣ್ಣ ಹಾಗೂ ಅತಿಸಣ್ಣ ರೈತರಿಗೆ ಹೆಚ್ಚು ಸಾಲದ ಅವಕಾಶ ಸಿಗುತ್ತದೆ’ ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಪತ್ರಿಕಾಗೋಷ್ಠಿಯಲ್ಲಿ ಹೇಳಿದರು.

ಇದನ್ನೂ ಓದಿ: RBI MPC Updates: ರಿಪೋ ದರ ಇಳಿಸದ ಆರ್​ಬಿಐ; ಶೇ. 6.50ರಲ್ಲೇ ಬಡ್ಡಿದರ ಮುಂದುವರಿಕೆ

ಎಫ್​ಸಿಎನ್​ಆರ್ ಬಡ್ಡಿಮಿತಿ ಹೆಚ್ಚಳ

ಬ್ಯಾಂಕುಗಳಿಗೆ ವಿದೇಶೀ ಹೂಡಿಕೆಗಳು ಹರಿದು ಬರುವಂತೆ ಅನುಕೂಲವಾಗುವ ನಿಟ್ಟಿನಲ್ಲಿ ಆರ್​​ಬಿಐ ಕ್ರಮ ತೆಗೆದುಕೊಂಡಿದೆ. ಎಫ್​ಸಿಎನ್​ಆರ್ ಠೇವಣಿಗಳಿಗೆ ನಿಗದಿ ಮಾಡಲಾಗಿದ್ದ ಬಡ್ಡಿದರ ಮಿತಿಯನ್ನು ಹೆಚ್ಚಿಸಲು ಆರ್​ಬಿಐನ ಎಂಪಿಸಿ ನಿರ್ಧರಿಸಿದೆ.

ಎಫ್​ಸಿಎನ್​ಆರ್ ಎಂದರೆ ಫಾರೀನ್ ಕರೆನ್ಸಿ ನಾನ್ ರೆಸಿಡೆಂಟ್ ಡೆಪಾಸಿಟ್​ಗಳು. ಅನಿವಾಸಿಗಳ ಫಾರೀನ್ ಕರೆನ್ಸಿ ಠೇವಣಿಗಳಿವು. ಒಂದರಿಂದ ಮೂರು ವರ್ಷದಲ್ಲಿ ಮೆಚ್ಯೂರಿಟಿ ಆಗುವ ಇಂಥ ಠೇವಣಿಗಳಿಗೆ ಬಡ್ಡಿದರ ಮಿತಿಯನ್ನು 200 ಅಂಕಗಳಷ್ಟು ಹೆಚ್ಚಿಸಲಾಗಿದೆ.

ಇದನ್ನೂ ಓದಿ: ಸಿಆರ್​ಆರ್ 50 ಮೂಲಾಂಕಗಳಷ್ಟು ಇಳಿಕೆ; ಶೇ. 4ಕ್ಕೆ ಇಳಿದ ಕ್ಯಾಷ್ ರಿಸರ್ವ್ ರೇಶಿಯೋ; ಆರ್ಥಿಕತೆಗೆ ಪುಷ್ಟಿ ಸಿಗುವ ನಿರೀಕ್ಷೆ

ಈಗ ಈ ದರವು ಎಆರ್​ಆರ್+200 ಬೇಸಿಸ್ ಪಾಯಿಂಟ್ ಇದೆ. ಇದನ್ನು ಎಆರ್​ಆರ್+400 ಬೇಸಿಸ್ ಪಾಯಿಂಟ್​ಗಳಿಗೆ ಏರಿಸಲಾಗಿದೆ. ಈ ಕ್ರಮದಿಂದ ವಿದೇಶೀ ಡೆಪಾಸಿಟ್​ಗಳನ್ನು ಬ್ಯಾಂಕುಗಳು ಆಕರ್ಷಿಸಲು ಸಾಧ್ಯವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ರೈಲಿನಿಂದ ಬೀಳುತ್ತಿದ್ದ ಪ್ರಯಾಣಿಕನನ್ನು ಕಾಪಾಡಿದ ಸ್ಟೇಷನ್ ಮಾಸ್ಟರ್
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಗೃಹಲಕ್ಷ್ಮೀ ಹಣದ ಬಗ್ಗೆ ಸ್ಫೋಟಕ ಮಾಹಿತಿ ಬಿಚ್ಚಿಟ್ಟ ಸಿಎಂ ಆರ್ಥಿಕ ಸಲಹೆಗಾರ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಮೋದಿಯಿಂದ ನಾಳೆ ಉದ್ಘಾಟನೆಯಾಗಲಿದೆ ಅಸ್ಸಾಂನ ಅತಿದೊಡ್ಡ ವಿಮಾನ ನಿಲ್ದಾಣ
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಶಾಲೆಗೆ ಬರುವ ಮಕ್ಕಳನ್ನ ಗಾರೆ ಕೆಲಸಕ್ಕಚ್ಚಿದ ಮೇಸ್ಟ್ರು, ವಿಡಿಯೋ ವೈರಲ್
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಸಂಸತ್ ಅಧಿವೇಶನ ಮುಕ್ತಾಯ; ಮೋದಿ ಸೇರಿ ಎಲ್ಲ ಸಂಸದರಿಗೆ ಸ್ಪೀಕರ್ ಟೀ ಪಾರ್ಟಿ
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ಬಾಲಕನನ್ನು ಫುಟ್ಬಾಲ್​​ನಂತೆ ಒದ್ದ ಜಿಮ್ ಟ್ರೈನರ್​​ನ ಮತ್ತಷ್ಟು ಕೃತ್ಯಗಳು
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ವಕ್ಫ್ ಆಸ್ತಿಗಾಗಿ ಸಂಘರ್ಷ: 11 ಎಕರೆ ಜಮೀನಿಗಾಗಿ ಕುಟುಂಬಗಳ‌ ಮಧ್ಯೆ ಬಡಿದಾಟ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ದೇವಿ ದರ್ಶನ ಬಳಿಕ ಡಿಸಿಎಂ ಸ್ಫೋಟಕ ಹೇಳಿಕೆ: ಸಂಚಲನ ಮೂಡಿಸಿದ ಡಿಕೆಶಿ ಸಂದೇಶ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಕುರ್ಚಿ ಕದನದ ನಡುವೆ ಅಂಕೋಲದಲ್ಲಿ ಶಕ್ತಿ ದೇವತೆ ಮೊರೆ ಹೋದ ಡಿಕೆಶಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ
ಹಾವೇರಿ: ದೇವರ ಮೂರ್ತಿ ಭಗ್ನಗೊಳಿಸಿದ ಕಿಡಿಗೇಡಿಗಳು; ವಿಡಿಯೋ ನೋಡಿ