AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP forecast: ಈ ಹಣಕಾಸು ವರ್ಷ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆ ಹೆಚ್ಚಿಸಿದ ಆರ್​ಬಿಐ

RBI MPC Meeting Highlights: ಭಾರತದ ಜಿಡಿಪಿ 2023-24ರ ಹಣಕಾಸು ವರ್ಷದಲ್ಲಿ ಶೇ. 7ರಷ್ಟು ಬೆಳೆಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆ ಹೆಚ್ಚಿಸಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಕ್ರಮವಾಗಿ ಶೇ 7.8 ಮತ್ತು ಶೇ. 7.6ರಷ್ಟು ಬೆಳೆದಿದೆ. ಮುಂದಿನ ಐದು ಕ್ವಾರ್ಟರ್ ಅವಧಿಗೆ ಆರ್ಥಿಕತೆ ಎಷ್ಟು ಬೆಳೆಯಬಹುದು ಎಂಬ ಅಂದಾಜನ್ನು ಆರ್​ಬಿಐ ಮಾಡಿದೆ.

GDP forecast: ಈ ಹಣಕಾಸು ವರ್ಷ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆ ಹೆಚ್ಚಿಸಿದ ಆರ್​ಬಿಐ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 08, 2023 | 11:13 AM

Share

ನವದೆಹಲಿ, ಡಿಸೆಂಬರ್ 8: ಭಾರತೀಯ ರಿಸರ್ವ್ ಬ್ಯಾಂಕ್ ಈ ಹಣಕಾಸು ವರ್ಷಕ್ಕೆ (2023-24ರಲ್ಲಿ) ಜಿಡಿಪಿ ವಿಚಾರದಲ್ಲಿ ತನ್ನ ಹಿಂದಿನ ಅಂದಾಜನ್ನು ಬದಲಿಸಿದೆ. ಈ ಹಿಂದೆ ಶೇ. 6.5ರಷ್ಟು ಬೆಳೆಯಬಹುದು ಎಂದು ಭವಿಷ್ಯ ನುಡಿದಿದ್ದ ಆರ್​ಬಿಐ (RBI MPC Meeting) ಇದೀಗ ಅದನ್ನು ಶೇ. 7ಕ್ಕೆ ಹೆಚ್ಚಿಸಿದೆ. 2023-24ರಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಶುಕ್ರವಾರ (ಡಿ. 8) ಹೇಳಿದ್ದಾರೆ. ಮೊನ್ನೆಯಿಂದ (ಡಿ. 6) ನಡೆದ ಎಂಪಿಸಿ ಸಭೆಯಲ್ಲಿ ಜಿಡಿಪಿ ವಿಚಾರ (Indian Economy) ಚರ್ಚೆಯಾಗಿದ್ದು, ಆರ್​ಬಿಐ ತನ್ನ ಹಿಂದಿನ ಅಂದಾಜನ್ನು ಬದಲಿಸಿದೆ.

ಎರಡನೇ ಕ್ವಾರ್ಟರ್ ಅವಧಿಯಲ್ಲಿ ಭಾರತದ ಜಿಡಿಪಿ ನಿರೀಕ್ಷೆಮೀರಿ ಅಧಿಕ ಮಟ್ಟದಲ್ಲಿತ್ತು. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳೆದರೆ ಎರಡನೇ ತ್ರೈಮಾಸಿಕ ಅವಧಿಯಲ್ಲಿ (2023ರ ಜುಲೈನಿಂದ ಸೆಪ್ಟೆಂಬರ್) ಶೇ. 7.6ರಷ್ಟು ಹೆಚ್ಚಳಗೊಂಡಿತ್ತು. ಇಷ್ಟು ಹೆಚ್ಚಿನ ಮಟ್ಟದಲ್ಲಿ ಜಿಡಿಪಿ ಹೆಚ್ಚುತ್ತದೆ ಎಂದು ಆರ್​ಬಿಐ ಕೂಡ ನಿರೀಕ್ಷಿಸಿರಲಿ. ಈ ಹಿನ್ನೆಲೆಯಲ್ಲಿ ಈ ಹಣಕಾಸು ವರ್ಷದ ಆರ್ಥಿಕ ಬೆಳವಣಿಗೆ ವಿಚಾರದಲ್ಲಿ ಆರ್​ಬಿಐ ತನ್ನ ಹಿಂದಿನ ಅಂದಾಜನ್ನು ಸಹಜವಾಗಿ ಬದಲಿಸಿ, ನಿರೀಕ್ಷೆಯನ್ನು ಹೆಚ್ಚಿಸಿದೆ. ಮುಂದಿನ ಎರಡು ತ್ರೈಮಾಸಿಕ ಅವಧಿಯ ಜಿಡಿಪಿ ನಿರೀಕ್ಷೆಯನ್ನೂ ಆರ್​​ಬಿಐ ಹೆಚ್ಚಿಸಿದೆ.

ಇದನ್ನೂ ಓದಿ: RBI MPC Meet: ಶೇ. 6.5ರಷ್ಟು ಬಡ್ಡಿದರ ಮುಂದುವರಿಸಿದ ಆರ್​ಬಿಐ; ಸತತ ಆರನೇ ಬಾರಿ ಬಡ್ಡಿದರ ಯಥಾಸ್ಥಿತಿ

ಆರ್​ಬಿಐನ ಜಿಡಿಪಿ ಬೆಳವಣಿಗೆ: ಹೊಸ ಅಂದಾಜು

  • 2023ರ ಅಕ್ಟೋಬರ್​ನಿಂದ ಡಿಸೆಂಬರ್ ಅವಧಿ: ಶೇ. 6ರಿಂದ ಶೇ. 6.5ಕ್ಕೆ ಹೆಚ್ಚಳ
  • 2024ರ ಜನವರಿಯಿಂದ ಮಾರ್ಚ್ ಅವಧಿ: ಶೇ. 5.7ರಿಂದ ಶೇ. 6ಕ್ಕೆ ಹೆಚ್ಚಳ
  • 2024ರ ಏಪ್ರಿಲ್​ನಿಂದ ಜೂನ್ ಅವಧಿ: ಶೇ. 6.66ರಿಂದ ಶೇ. 6.7ಕ್ಕೆ ಹೆಚ್ಚಳ
  • 2024ರ ಜುಲೈನಿಂದ ಸೆಪ್ಟೆಂಬರ್ ಅವಧಿ: ಶೇ. 6.5
  • 2024ರ ಅಕ್ಟೋಬರ್​ನಿಂದ ಡಿಸೆಂಬರ್ ಅವಧಿ: ಶೇ. 6.4

ಬಡ್ಡಿದರ ಯಥಾಸ್ಥಿತಿ

ಆರ್​​ಬಿಐ ಈ ಬಾರಿಯೂ ರೆಪೋ ದರದಲ್ಲಿ ಯಾವ ಬದಲಾವಣೆ ಮಾಡಿಲ್ಲ. ಶೇ. 6.5ರ ದರವನ್ನೇ ಮುಂದುವರಿಸಿದೆ. ಅಂದರೆ ಆರ್​ಬಿಐನ ಬಡ್ಡಿದರ ಶೇ. 6.5ರಷ್ಟೇ ಇರಲಿದೆ. ಇದರೊಂದಿಗೆ ಸತತ ಐದು ಅವಧಿಯೂ ಬಡ್ಡಿದರದಲ್ಲಿ ವ್ಯತ್ಯಯವಾಗಿಲ್ಲ. ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ಮತ್ತು ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ ದರದಲ್ಲೂ ಯಾವ ಬದಲಾವಣೆ ಆಗಿಲ್ಲ.

ಇದನ್ನೂ ಓದಿ: ಚಿದಂಬರಂ, ರಾಜನ್​ರಿಗೆ ಮ್ಯಾನುಫ್ಯಾಕ್ಚರಿಂಗ್ ಪಾಠ ಬೋಧಿಸಿ, ಟ್ರೋಲ್ ಮಾಡಿದ ಸಚಿವ ಎ ವೈಷ್ಣವ್

ಆರ್​ಬಿಐಗೆ ಹಣದುಬ್ಬರ ತಲೆನೋವು

ರಿಸರ್ವ್ ಬ್ಯಾಂಕ್​ಗೆ ಹಣದುಬ್ಬರಕ್ಕೆ ಕಡಿವಾಣ ಹಾಕುವುದೇ ಹೆಚ್ಚಿನ ಸವಾಲಾಗಿದೆ. ಆಹಾರವಸ್ತುಗಳ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ನಿಯಂತ್ರಣಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂಬುದು ಆರ್​ಬಿಐನ ಹತಾಶೆ. ಈ ಹಣಕಾಸು ವರ್ಷದಲ್ಲಿ (2023-24) ಗ್ರಾಹಕ ಬೆಲೆ ಅನುಸೂಚಿ (ಸಿಪಿಐ) ಆಧಾರಿತ ಹಣದುಬ್ಬರ ಅಥವಾ ರೀಟೇಲ್ ಇನ್​ಫ್ಲೇಶನ್ ಶೇ. 5.4ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜು ಮಾಡಿದೆ. ಸದ್ಯದಲ್ಲೇ ಹಣದುಬ್ಬರ ನಿಗದಿತ ಗುರಿಯಾದ ಶೇ. 4ರ ದರಕ್ಕೆ ಇಳಿಸುವುದು ಸಾಧ್ಯವಿಲ್ಲ ಎನ್ನುವ ಸೂಚನೆಯನ್ನು ಆರ್​ಬಿಐ ರವಾನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Fri, 8 December 23

ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಲೋಕಸಭಾ ಚುನಾವಣೆಯಲ್ಲಿ ನಮಗೆ ರಾಜ್ಯದಲ್ಲಿ ಹೆಚ್ಚು ಸೀಟು ಬರಬೇಕಿತ್ತು: ಸಚಿವ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಯಶ್ ತಾಯಿಯನ್ನು ಅಂಡರ್ವಲ್ಡ್ ಡಾನ್ ಅಂದುಕೊಂಡಿದ್ದರಂತೆ ಪೃಥ್ವಿ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಬಿಕ್ಲು ಶಿವ ಕೊಲೆ ಪ್ರಕರಣವನ್ನು ಸಿಐಡಿ ತನಿಖೆಗೆ ಒಪ್ಪಿಸಿದ ಸರ್ಕಾರ
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ಪುನೀತ್ ರಾಜ್​ಕುಮಾರ್ ಜೊತೆ ಹೋಲಿಕೆ: ‘ಜೂನಿಯರ್’ ನಟ ಕಿರೀಟಿ ಹೇಳಿದ್ದೇನು?
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ನೋವಿನಲ್ಲೂ ಬ್ಯಾಟಿಂಗ್​ಗೆ ಬಂದ ರಿಷಭ್ ಪಂತ್​
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ತಮ್ಮ ತಪ್ಪು ಮುಚ್ಚಿಕೊಳ್ಳಲು ಸಿಎಂ ಮತ್ತು ಡಿಸಿಎಂರಿಂದ ಪ್ರಯತ್ನ: ಅರವಿಂದ್
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಈ ಬಾರಿಯಾದರೂ ರಾಹುಲ್ ಗಾಂಧಿ ಸಿಎಂ-ಡಿಸಿಎಂಗೆ ಸಮಯ ನೀಡುವರೇ?
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಭಾರತದ ಜೊತೆ ಮುಕ್ತ ವ್ಯಾಪಾರ ಒಪ್ಪಂದಕ್ಕೆ ಸಹಿ ಹಾಕಿದ ಬ್ರಿಟಿಷ್ ಪ್ರಧಾನಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಅಕ್ಕನಿಗೆ ಗಂಡ ಮತ್ತು ಅವನ ಮನೆಯವರಿಂದ ವಿಪರೀತ ಹಿಂಸೆ: ಸಹೋದರಿ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ
ಶಿರೂರು ದುರಂತ ಸಂಭವಿಸಿ ವರ್ಷ ಕಳೆದರೂ ಮುಗಿಯದ ಜನರ ಆತಂಕ