AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

GDP forecast: ಈ ಹಣಕಾಸು ವರ್ಷ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆ ಹೆಚ್ಚಿಸಿದ ಆರ್​ಬಿಐ

RBI MPC Meeting Highlights: ಭಾರತದ ಜಿಡಿಪಿ 2023-24ರ ಹಣಕಾಸು ವರ್ಷದಲ್ಲಿ ಶೇ. 7ರಷ್ಟು ಬೆಳೆಯಬಹುದು ಎಂದು ಭಾರತೀಯ ರಿಸರ್ವ್ ಬ್ಯಾಂಕ್ ನಿರೀಕ್ಷೆ ಹೆಚ್ಚಿಸಿದೆ. ಈ ಹಣಕಾಸು ವರ್ಷದ ಮೊದಲೆರಡು ಕ್ವಾರ್ಟರ್​ನಲ್ಲಿ ಭಾರತದ ಜಿಡಿಪಿ ಕ್ರಮವಾಗಿ ಶೇ 7.8 ಮತ್ತು ಶೇ. 7.6ರಷ್ಟು ಬೆಳೆದಿದೆ. ಮುಂದಿನ ಐದು ಕ್ವಾರ್ಟರ್ ಅವಧಿಗೆ ಆರ್ಥಿಕತೆ ಎಷ್ಟು ಬೆಳೆಯಬಹುದು ಎಂಬ ಅಂದಾಜನ್ನು ಆರ್​ಬಿಐ ಮಾಡಿದೆ.

GDP forecast: ಈ ಹಣಕಾಸು ವರ್ಷ ಭಾರತದ ಜಿಡಿಪಿ ಶೇ. 7ರಷ್ಟಾಗಬಹುದು: ನಿರೀಕ್ಷೆ ಹೆಚ್ಚಿಸಿದ ಆರ್​ಬಿಐ
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Dec 08, 2023 | 11:13 AM

Share

ನವದೆಹಲಿ, ಡಿಸೆಂಬರ್ 8: ಭಾರತೀಯ ರಿಸರ್ವ್ ಬ್ಯಾಂಕ್ ಈ ಹಣಕಾಸು ವರ್ಷಕ್ಕೆ (2023-24ರಲ್ಲಿ) ಜಿಡಿಪಿ ವಿಚಾರದಲ್ಲಿ ತನ್ನ ಹಿಂದಿನ ಅಂದಾಜನ್ನು ಬದಲಿಸಿದೆ. ಈ ಹಿಂದೆ ಶೇ. 6.5ರಷ್ಟು ಬೆಳೆಯಬಹುದು ಎಂದು ಭವಿಷ್ಯ ನುಡಿದಿದ್ದ ಆರ್​ಬಿಐ (RBI MPC Meeting) ಇದೀಗ ಅದನ್ನು ಶೇ. 7ಕ್ಕೆ ಹೆಚ್ಚಿಸಿದೆ. 2023-24ರಲ್ಲಿ ಭಾರತದ ಜಿಡಿಪಿ ಶೇ. 7ರಷ್ಟು ಬೆಳೆಯಬಹುದು ಎಂದು ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಇಂದು ಶುಕ್ರವಾರ (ಡಿ. 8) ಹೇಳಿದ್ದಾರೆ. ಮೊನ್ನೆಯಿಂದ (ಡಿ. 6) ನಡೆದ ಎಂಪಿಸಿ ಸಭೆಯಲ್ಲಿ ಜಿಡಿಪಿ ವಿಚಾರ (Indian Economy) ಚರ್ಚೆಯಾಗಿದ್ದು, ಆರ್​ಬಿಐ ತನ್ನ ಹಿಂದಿನ ಅಂದಾಜನ್ನು ಬದಲಿಸಿದೆ.

ಎರಡನೇ ಕ್ವಾರ್ಟರ್ ಅವಧಿಯಲ್ಲಿ ಭಾರತದ ಜಿಡಿಪಿ ನಿರೀಕ್ಷೆಮೀರಿ ಅಧಿಕ ಮಟ್ಟದಲ್ಲಿತ್ತು. ಮೊದಲ ಕ್ವಾರ್ಟರ್​ನಲ್ಲಿ ಜಿಡಿಪಿ ಶೇ. 7.8ರಷ್ಟು ಬೆಳೆದರೆ ಎರಡನೇ ತ್ರೈಮಾಸಿಕ ಅವಧಿಯಲ್ಲಿ (2023ರ ಜುಲೈನಿಂದ ಸೆಪ್ಟೆಂಬರ್) ಶೇ. 7.6ರಷ್ಟು ಹೆಚ್ಚಳಗೊಂಡಿತ್ತು. ಇಷ್ಟು ಹೆಚ್ಚಿನ ಮಟ್ಟದಲ್ಲಿ ಜಿಡಿಪಿ ಹೆಚ್ಚುತ್ತದೆ ಎಂದು ಆರ್​ಬಿಐ ಕೂಡ ನಿರೀಕ್ಷಿಸಿರಲಿ. ಈ ಹಿನ್ನೆಲೆಯಲ್ಲಿ ಈ ಹಣಕಾಸು ವರ್ಷದ ಆರ್ಥಿಕ ಬೆಳವಣಿಗೆ ವಿಚಾರದಲ್ಲಿ ಆರ್​ಬಿಐ ತನ್ನ ಹಿಂದಿನ ಅಂದಾಜನ್ನು ಸಹಜವಾಗಿ ಬದಲಿಸಿ, ನಿರೀಕ್ಷೆಯನ್ನು ಹೆಚ್ಚಿಸಿದೆ. ಮುಂದಿನ ಎರಡು ತ್ರೈಮಾಸಿಕ ಅವಧಿಯ ಜಿಡಿಪಿ ನಿರೀಕ್ಷೆಯನ್ನೂ ಆರ್​​ಬಿಐ ಹೆಚ್ಚಿಸಿದೆ.

ಇದನ್ನೂ ಓದಿ: RBI MPC Meet: ಶೇ. 6.5ರಷ್ಟು ಬಡ್ಡಿದರ ಮುಂದುವರಿಸಿದ ಆರ್​ಬಿಐ; ಸತತ ಆರನೇ ಬಾರಿ ಬಡ್ಡಿದರ ಯಥಾಸ್ಥಿತಿ

ಆರ್​ಬಿಐನ ಜಿಡಿಪಿ ಬೆಳವಣಿಗೆ: ಹೊಸ ಅಂದಾಜು

  • 2023ರ ಅಕ್ಟೋಬರ್​ನಿಂದ ಡಿಸೆಂಬರ್ ಅವಧಿ: ಶೇ. 6ರಿಂದ ಶೇ. 6.5ಕ್ಕೆ ಹೆಚ್ಚಳ
  • 2024ರ ಜನವರಿಯಿಂದ ಮಾರ್ಚ್ ಅವಧಿ: ಶೇ. 5.7ರಿಂದ ಶೇ. 6ಕ್ಕೆ ಹೆಚ್ಚಳ
  • 2024ರ ಏಪ್ರಿಲ್​ನಿಂದ ಜೂನ್ ಅವಧಿ: ಶೇ. 6.66ರಿಂದ ಶೇ. 6.7ಕ್ಕೆ ಹೆಚ್ಚಳ
  • 2024ರ ಜುಲೈನಿಂದ ಸೆಪ್ಟೆಂಬರ್ ಅವಧಿ: ಶೇ. 6.5
  • 2024ರ ಅಕ್ಟೋಬರ್​ನಿಂದ ಡಿಸೆಂಬರ್ ಅವಧಿ: ಶೇ. 6.4

ಬಡ್ಡಿದರ ಯಥಾಸ್ಥಿತಿ

ಆರ್​​ಬಿಐ ಈ ಬಾರಿಯೂ ರೆಪೋ ದರದಲ್ಲಿ ಯಾವ ಬದಲಾವಣೆ ಮಾಡಿಲ್ಲ. ಶೇ. 6.5ರ ದರವನ್ನೇ ಮುಂದುವರಿಸಿದೆ. ಅಂದರೆ ಆರ್​ಬಿಐನ ಬಡ್ಡಿದರ ಶೇ. 6.5ರಷ್ಟೇ ಇರಲಿದೆ. ಇದರೊಂದಿಗೆ ಸತತ ಐದು ಅವಧಿಯೂ ಬಡ್ಡಿದರದಲ್ಲಿ ವ್ಯತ್ಯಯವಾಗಿಲ್ಲ. ಸ್ಟ್ಯಾಂಡಿಂಗ್ ಡೆಪಾಸಿಟ್ ಫೆಸಿಲಿಟಿ ಮತ್ತು ಮಾರ್ಜಿನಲ್ ಸ್ಟ್ಯಾಂಡಿಂಗ್ ಫೆಸಿಲಿಟಿ ದರದಲ್ಲೂ ಯಾವ ಬದಲಾವಣೆ ಆಗಿಲ್ಲ.

ಇದನ್ನೂ ಓದಿ: ಚಿದಂಬರಂ, ರಾಜನ್​ರಿಗೆ ಮ್ಯಾನುಫ್ಯಾಕ್ಚರಿಂಗ್ ಪಾಠ ಬೋಧಿಸಿ, ಟ್ರೋಲ್ ಮಾಡಿದ ಸಚಿವ ಎ ವೈಷ್ಣವ್

ಆರ್​ಬಿಐಗೆ ಹಣದುಬ್ಬರ ತಲೆನೋವು

ರಿಸರ್ವ್ ಬ್ಯಾಂಕ್​ಗೆ ಹಣದುಬ್ಬರಕ್ಕೆ ಕಡಿವಾಣ ಹಾಕುವುದೇ ಹೆಚ್ಚಿನ ಸವಾಲಾಗಿದೆ. ಆಹಾರವಸ್ತುಗಳ ಬೆಲೆ ಏರಿಕೆಯಿಂದಾಗಿ ಹಣದುಬ್ಬರ ನಿಯಂತ್ರಣಕ್ಕೆ ಬರಲು ಸಾಧ್ಯವಾಗುತ್ತಿಲ್ಲ ಎಂಬುದು ಆರ್​ಬಿಐನ ಹತಾಶೆ. ಈ ಹಣಕಾಸು ವರ್ಷದಲ್ಲಿ (2023-24) ಗ್ರಾಹಕ ಬೆಲೆ ಅನುಸೂಚಿ (ಸಿಪಿಐ) ಆಧಾರಿತ ಹಣದುಬ್ಬರ ಅಥವಾ ರೀಟೇಲ್ ಇನ್​ಫ್ಲೇಶನ್ ಶೇ. 5.4ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜು ಮಾಡಿದೆ. ಸದ್ಯದಲ್ಲೇ ಹಣದುಬ್ಬರ ನಿಗದಿತ ಗುರಿಯಾದ ಶೇ. 4ರ ದರಕ್ಕೆ ಇಳಿಸುವುದು ಸಾಧ್ಯವಿಲ್ಲ ಎನ್ನುವ ಸೂಚನೆಯನ್ನು ಆರ್​ಬಿಐ ರವಾನಿಸಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 11:09 am, Fri, 8 December 23

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ನಾಯಂಡಹಳ್ಳಿ ಗೋದಾಮಿನಲ್ಲಿ ಅಗ್ನಿ ಅನಾಹುತ: ಧಗ ಧಗಿಸಿದ ವಸ್ತುಗಳು
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ