AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Note Withdrawal: 2,000 ರೂ ನೋಟು ಹಿಂಪಡೆದ ಬಳಿಕ ಮರಳಿದೆ ಶೇ. 50ರಷ್ಟು ಹಣ; ಶೇ. 15ರಷ್ಟು ನೋಟು ಬದಲಾವಣೆ

Rs 2,000 Notes Back From Public: ಆರ್​ಬಿಐ ಮಾಹಿತಿ ನೀಡಿದ ಪ್ರಕಾರ 2,000 ರೂ ಮುಖಬೆಲೆಯ ಶೇ. 50ರಷ್ಟು ನೋಟುಗಳನ್ನು ಸಾರ್ವಜನಿಕರು ಮರಳಿಸಿದ್ದಾರೆ. ಇದರಲ್ಲಿ ಶೇ. 85ರಷ್ಟು ನೋಟುಗಳು ಖಾತೆಗಳಿಗೆ ಡೆಪಾಸಿಟ್ ಆಗಿವೆಯಂತೆ.

Note Withdrawal: 2,000 ರೂ ನೋಟು ಹಿಂಪಡೆದ ಬಳಿಕ ಮರಳಿದೆ ಶೇ. 50ರಷ್ಟು ಹಣ; ಶೇ. 15ರಷ್ಟು ನೋಟು ಬದಲಾವಣೆ
2,000 ರೂ ಮುಖಬೆಲೆಯ ನೋಟು
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Jun 08, 2023 | 1:21 PM

Share

ನವದೆಹಲಿ: ಭಾರತೀಯ ರಿಸರ್ವ್ ಬ್ಯಾಂಕ್ (RBI) ಇತ್ತೀಚೆಗೆ 2,000 ರೂ ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದುಕೊಂಡಿತ್ತು. 3.50 ಲಕ್ಷಕ್ಕೂ ಹೆಚ್ಚು ಕೋಟಿ ರೂ ಮೊತ್ತದ 2000 ರೂ ನೋಟುಗಳ ಪೈಕಿ ಅರ್ಧದಷ್ಟು ನೋಟುಗಳು ಆರ್​ಬಿಐ ಅಥವಾ ಬ್ಯಾಂಕುಗಳಿಗೆ ಮರಳಿವೆಯಂತೆ. ಆರ್​ಬಿಐನ ಎಂಪಿಸಿ ಸಭೆ ಬಳಿಕ ನಡೆದ ಮಾಧ್ಯಮ ಸಂವಾದದಲ್ಲಿ ಆರ್​ಬಿಐ ಈ ಬಗ್ಗೆ ಮಾಹಿತಿ ನೀಡಿದ್ದು, ಇಲ್ಲಿಯವರೆಗೆ 1.82 ಲಕ್ಷ ಕೋಟಿ ರೂ ಮೌಲ್ಯದ 2,000 ರೂ ಮುಖಬೆಲೆಯ ನೋಟುಗಳು ವಾಪಸ್ ಬಂದಿವೆ ಎಂದು ಹೇಳಿದೆ. ಈ ಪೈಕಿ ಶೇ. 85ರಷ್ಟು ನೋಟುಗಳು ಗ್ರಾಹಕರ ಬ್ಯಾಂಕ್ ಖಾತೆಗೆ ಠೇವಣಿಯಾಗಿವೆ. ಅಂದರೆ ಶೇ. 15ರಷ್ಟು ನೋಟು ಬದಲಾವಣೆ ಆಗಿರುವುದು ತಿಳಿದುಬಂದಿದೆ.

2,000 ರೂ ಮುಖಬೆಲೆಯ ನೋಟುಗಳನ್ನು ಹೊಂದಿರುವ ಜನರು ತಮಗೆ ಅನುಕೂಲವಾಗುವ ಸಮಯದಲ್ಲಿ ಬ್ಯಾಂಕ್​ಗೆ ಹೋಗಿ ಠೇವಣಿ ಇಟ್ಟು ಬರಬಹುದು ಅಥವಾ ನೋಟು ಬದಲಾವಣೆ ಮಾಡಿಕೊಳ್ಳಬಹುದು. ಯಾವುದೇ ಆತುರ ಬೇಡ. ಆದರೆ, ಕೊನೆಯ ಕ್ಷಣದವರೆಗೂ ಕಾಯುವುದೂ ಬೇಡ ಎಂದು ದಾಸ್ ಹೇಳಿದರು.

ಆರ್​ಬಿಐ ಘೋಷಣೆ ಪ್ರಕಾರ 2,000 ರೂ ನೋಟುಗಳನ್ನು ವಾಪಸ್ ಮಾಡಲು ಸೆಪ್ಟೆಂಬರ್ 30ರವರೆಗೂ ಕಾಲಾವಕಾಶ ಇದೆ. ಮೇ 19ರಂದು 2,000 ರೂ ನೋಟುಗಳನ್ನು ಚಲಾವಣೆಯಿಂದ ಹಿಂಪಡೆದಿರುವುದಾಗಿ ಆರ್​ಬಿಐ ಘೋಷಣೆ ಮಾಡಿತ್ತು.

ಇದನ್ನೂ ಓದಿRBI: ಈ ಹಣಕಾಸು ವರ್ಷ ಹಣದುಬ್ಬರ ಶೇ. 5.1, ಜಿಡಿಪಿ ಶೇ. 6.5; ಆರ್​ಬಿಐ ಅಂದಾಜು

ಆರ್​ಬಿಐನ ಮಾನಿಟರಿ ಪಾಲಿಸಿ ಕಮಿಟಿಯಲ್ಲಿ ಗವರ್ನರ್ ಶಕ್ತಿಕಾಂತ ದಾಸ್ ಸೇರಿ 6 ಮಂದಿ ಸದಸ್ಯರಿದ್ದಾರೆ. ಡಾ. ಮೈಕೇಲ್ ದೇಬಬ್ರತ ಪಾತ್ರ, ಡಾ. ಶಶಾಂಕ ಭಿಡೆ, ಡಾ. ಅಶಿಮಾ ಗೋಯಲ್, ಪ್ರೊ. ಜಯಂತ್ ವರ್ಮಾ, ಡಾ. ರಾಜೀವ್ ರಂಜನ್ ಅವರೂ ಈ ಸಮಿತಿಯಲ್ಲಿದ್ದಾರೆ. ರೆಪೋ ದರವನ್ನು ಶೇ. 6.5ರಲ್ಲಿ ಮುಂದುವರಿಸಲು ಈ ಆರೂ ಸದಸ್ಯರು ಸರ್ವಾನುಮತದಿಂದ ನಿರ್ಧಾರ ಕೈಗೊಂಡಿರುವುದು ತಿಳಿದುಬಂದಿದೆ.

2023-24ರ ಹಣಕಾಸು ವರ್ಷದಲ್ಲಿ ಹಣದುಬ್ಬರವು ಶೇ. 5.1ರಷ್ಟು ಇರಬಹುದು ಎಂದು ಆರ್​ಬಿಐ ಅಂದಾಜು ಮಾಡಿದೆ. ಆದರೆ, ಹಣದುಬ್ಬರವನ್ನು ಶೇ. 4ಕ್ಕೆ ಇಳಿಸುವುದು ತನ್ನ ಗುರಿ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನಗಳಿರುತ್ತವೆ. ಆದರೆ, ಅನಿಶ್ಚಿತ ಸಂದರ್ಭಗಳಿಂದಾಗಿ ಈ ಗುರಿ ನಿಖರವಾಗಿ ಈಡೇರಿಸಲಾಗುತ್ತದೆ ಎಂದು ಹೇಳಲು ಆಗುವದಿಲ್ಲ ಎಂದು ಮಾಧ್ಯಮ ಸಂವಾದದ ವೇಳೆ ಶಕ್ತಿಕಾಂತ ದಾಸ್ ಹೇಳಿದ್ದಾರೆ.

ಇದನ್ನೂ ಓದಿe-RUPI: ಬ್ಯಾಂಕೇತರ ಸಂಸ್ಥೆಗಳಿಂದಲೂ ಇ-ರುಪೀ ವೋಚರ್ ವಿತರಣೆಗೆ ಅವಕಾಶ; ಏನಿದು ಇ-ರುಪೀ?

ಆರ್​ಬಿಐ ಪ್ರಕಟಣೆ ಬಳಿಕವೂ ಏರಿಕೆ ಮುಂದುವರಿಸಿದ ಸೆನ್ಸೆಕ್ಸ್, ನಿಫ್ಟಿ

ಭಾರತೀಯ ರಿಸರ್ವ್ ಬ್ಯಾಂಕ್ ಎಂಪಿಸಿ ಸಭೆ ಮುಗಿಯುವ ಮುನ್ನವೇ ನಿನ್ನೆ ಷೇರುಮಾರುಕಟ್ಟೆಗಳು ಗರಿಗೆದರಿದ್ದವು. ಇಂದು ಬೆಳಗ್ಗೆಯೂ ಏರಿಕೆ ಆಗಿತ್ತು. ಗವರ್ನರ್ ಸುದ್ದಿಗೋಷ್ಠಿ ಬಳಿಕ ಷೇರುಪೇಟೆ ಇನ್ನಷ್ಟು ಕಳೆಗಟ್ಟಿದೆ. ಸೆನ್ಸೆಕ್ಸ್ ಮತ್ತು ನಿಫ್ಟಿ ಸೂಚ್ಯಂಕಗಳು ದಾಖಲೆ ಮಟ್ಟಕ್ಕೆ ಏರಿವೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಸುದೀಪ್ ರೀತಿಯೇ ಸಂಜಿತ್ ಇದ್ದಾರೆ; ಕಾರಣ ಕೊಟ್ಟ ಪ್ರಿಯಾ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಕಬಿನಿ ಹಿನ್ನೀರಿನಲ್ಲಿ ಆಹಾರ ಸಿಗದೆ ಆನೆಗಳ ಪರದಾಟ: ಮಳೆ ಕೊರತೆಯಿಂದ ಸಮಸ್ಯೆ
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಹೊಸಕೋಟೆ: ಕಣ್ಣೂರಹಳ್ಳಿ ರಸ್ತೆಯಲ್ಲಿ 23 ನಾಗರಹಾವು ಮರಿಗಳ ಪತ್ತೆ!
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ಕರ್ಕಾಟಕ ರಾಶಿಗೆ ಗುರು ಪ್ರವೇಶ; 12ರಾಶಿಗಳ ಮೇಲೆ ಇದರ ಪ್ರಭಾವ ಹೇಗಿರಲಿದೆ?
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ವಿಶ್ವ ದಾಖಲೆ... ಒಂದೇ ಓವರ್‌ನಲ್ಲಿ ೬ ಸಿಕ್ಸ್ ಸಿಡಿಸಿದ ಕುಶಾಲ್!
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಕೈಯಿಂದ ಪದೇ ಪದೇ ಎಣ್ಣೆ, ಹಾಲು ಜಾರಿಬಿದ್ರೆ ಏನರ್ಥ?
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಇಂದು ಈ ರಾಶಿಯವರು ಆರ್ಥಿಕ ವಿಷಯಗಳಲ್ಲಿ ಎಚ್ಚರಿಕೆ ವಹಿಸಬೇಕು
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
ಡಿಕೆ ಶಿವಕುಮಾರ್ ಜತೆ ಸಂಪುಟ ಸೇರೋ ಸಂಭಾವ್ಯ ಸಚಿವರ ಪಟ್ಟಿ ಇಲ್ಲಿದೆ
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ