AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Sovereign Green Bonds: ಎರಡು ಕಂತು ಸಾವರಿನ್ ಗ್ರೀನ್ ಬಾಂಡ್ ಬಿಡುಗಡೆ ಮಾಡಲಿದೆ ಆರ್​ಬಿಐ

ಸಾವರಿನ್ ಗ್ರೀನ್ ಬಾಂಡ್ ಎಂಬುದು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಹೂಡಿಕೆದಾರರಿಂದ ಹಣ ಸಂಗ್ರಹ ಮಾಡಲು ಇರುವ ಒಂದು ಸಾಧನ. ಅಂದರೆ ಈ ಬಾಂಡ್​​ಗಳನ್ನು ಹೂಡಿಕೆದಾರರಿಗೆ ಮಾರಾಟ ಮಾಡುವ ಮೂಲಕ ಸರ್ಕಾರ ಹಣ ಸಂಗ್ರಹಿಸುತ್ತದೆ. ಈ ಹಣವನ್ನು ಹವಾಮಾನ, ಪರಿಸರ ವ್ಯವಸ್ಥೆಗೆ ಪೂರಕವಾದ ಚಟುವಟಿಕೆಗಳಿಗೆ ಬಳಸಲಾಗುತ್ತದೆ.

Sovereign Green Bonds: ಎರಡು ಕಂತು ಸಾವರಿನ್ ಗ್ರೀನ್ ಬಾಂಡ್ ಬಿಡುಗಡೆ ಮಾಡಲಿದೆ ಆರ್​ಬಿಐ
ಸಾವರಿನ್ ಗ್ರೀನ್ ಬಾಂಡ್ (ಸಾಂದರ್ಭಿಕ ಚಿತ್ರ)
TV9 Web
| Edited By: |

Updated on:Jan 06, 2023 | 6:52 PM

Share

ನವದೆಹಲಿ: ಜನವರಿ 25 ಮತ್ತು ಫೆಬ್ರವರಿ 9ರಂದು 8,000 ಕೋಟಿ ರೂ.ನ ಎರಡು ಕಂತು ಸಾವರಿನ್ ಗ್ರೀನ್​ ಬಾಂಡ್​ (Sovereign Green Bonds) ಬಿಡುಗಡೆ ಮಾಡುವುದಾಗಿ ಆರ್​ಬಿಐ (RBI) ಘೋಷಿಸಿದೆ. ಬಾಂಡ್ ಮೂಲಕ ದೊರೆಯುವ ಆದಾಯವನ್ನು ಸರ್ಕಾರಿ ವಲಯದ ಯೋಜನೆಗಳಲ್ಲಿ ನಿಯೋಜಿಸಲಾಗುವುದು. ಅದು ಇಂಗಾಲದ ತೀವ್ರತೆಯನ್ನು ಕಡಿಮೆ ಮಾಡಲು ಸಹಾಯ ಮಾಡಲಿದೆ ಎಂದು ಆರ್​ಬಿಐ ಪ್ರಕಟಣೆ ತಿಳಿಸಿದೆ. ಹಸಿರು ಮೂಲಸೌಕರ್ಯಕ್ಕಾಗಿ ಸಂಪನ್ಮೂಲಗಳನ್ನು ಕ್ರೋಢೀಕರಿಸಲು ಸಾವರಿನ್ ಗ್ರೀನ್ ಬಾಂಡ್​ಗಳನ್ನು ಬಿಡುಗಡೆ ಮಾಡುವ ಬಗ್ಗೆ 2022-23ರ ಬಜೆಟ್​ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು.

ಅದರಂತೆ, 2022-23ನೇ ಸಾಲಿಗಾಗಿ ಒಟ್ಟು 16,000 ಕೋಟಿ ರೂ. ಮೊತ್ತದ ಸಾವರಿನ್ ಗ್ರೀನ್ ಬಾಂಡ್​ಗಳನ್ನು ಬಿಡುಗಡೆ ಮಾಡುವುದಾಗಿ 2022ರ ಸೆಪ್ಟೆಂಬರ್ 29ರಂದು ಸರ್ಕಾರ ಘೋಷಿಸಿತ್ತು. 2022ರ ನವೆಂಬರ್ 9ರಂದು ಸಾವರಿನ್ ಗ್ರೀನ್ ಬಾಂಡ್​​ ಮಾರ್ಗಸೂಚಿಯನ್ನು ಸರ್ಕಾರ ಸಿದ್ಧಪಡಿಸಿತ್ತು. ಈ ಗ್ರೀನ್ ಬಾಂಡ್​​ಗಳು 5ರಿಂದ 10 ವರ್ಷಗಳ ಅವಧಿಗೆ ಲಭ್ಯವಿರಲಿದೆ ಎಂದು ಆರ್​ಬಿಐ ತಿಳಿಸಿದೆ.

ಇದನ್ನೂ ಓದಿ: Green Bond: ನಿಮ್ಮ ಹಣ ಪರಿಸರಪೂರಕ ಕೆಲಸಕ್ಕೆ ಬಳಕೆಯಾಗಬೇಕೇ? ಗ್ರೀನ್ ಬಾಂಡ್ ಸರಿಯಾದ ಮಾರ್ಗ

ಏನಿದು ಸಾವರಿನ್ ಗ್ರೀನ್ ಬಾಂಡ್?

ಸಾವರಿನ್ ಗ್ರೀನ್ ಬಾಂಡ್ ಎಂಬುದು ಕೇಂದ್ರ ಅಥವಾ ರಾಜ್ಯ ಸರ್ಕಾರಗಳು ಹೂಡಿಕೆದಾರರಿಂದ ಹಣ ಸಂಗ್ರಹ ಮಾಡಲು ಇರುವ ಒಂದು ಸಾಧನ. ಅಂದರೆ ಈ ಬಾಂಡ್​​ಗಳನ್ನು ಹೂಡಿಕೆದಾರರಿಗೆ ಮಾರಾಟ ಮಾಡುವ ಮೂಲಕ ಸರ್ಕಾರ ಹಣ ಸಂಗ್ರಹಿಸುತ್ತದೆ. ಈ ಹಣವನ್ನು ಹವಾಮಾನ, ಪರಿಸರ ವ್ಯವಸ್ಥೆಗೆ ಪೂರಕವಾದ ಚಟುವಟಿಕೆಗಳಿಗೆ ಬಳಸಲಾಗುತ್ತದೆ. ಈ ಯೋಜನೆಯನ್ನು 2022-23ರ ಬಜೆಟ್​ನಲ್ಲಿ ಕೇಂದ್ರ ಸರ್ಕಾರ ಘೋಷಿಸಿತ್ತು. ಕೇಂದ್ರ ಸರ್ಕಾರದ ಪರವಾಗಿ ಆರ್​ಬಿಐ ಈ ಬಾಂಡ್​​ ಅನ್ನು ಬಿಡುಗಡೆ ಮಾಡುತ್ತದೆ. ಈ ಬಾಂಡ್​ಗೆ ಹೂಡಿಕೆದಾರರಿಗೆ ಸರ್ಕಾರ ಖಾತರಿ ನೀಡುತ್ತದೆ.

ವಾಣಿಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 5:51 pm, Fri, 6 January 23

ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೆಂಗಳೂರಿನಲ್ಲಿ ಭಾರೀ ಅಗ್ನಿ ಅವಘಡ: ಹತ್ತಾರು ಬೈಕ್ ಸುಟ್ಟು ಭಸ್ಮ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ಬೇಡ್ತಿ-ವರದಾ ಯೋಜನೆ ವಿರೋಧಿಸುತ್ತಿರುವುದೇಕೆ? ಸ್ವಾಮೀಜಿ ಶಾಕಿಂಗ್​ ಹೇಳಿಕೆ
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ವರದಾ-ಬೇಡ್ತಿ ನದಿ ಪ್ರಾಜೆಕ್ಟ್: ಕಾಗೇರಿ-ವೈದ್ಯ ಮಧ್ಯೆ ಟಾಕ್ ವಾರ್
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಬೆಂಗಳೂರಿನಲ್ಲಿ ‘ಜನ ನಾಯಗನ್’ ಸ್ವಾಗತಕ್ಕೆ ಹೀಗೆ ಮಾಡಿದ್ದರು ತಯಾರಿ
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ಸಿಎಂ ಕ್ಷೇತ್ರದಲ್ಲೇ ಹೀಗ್ ಮಾಡಿದ್ರೆ ಹೇಗೆ? ಅಧಿಕಾರಿಗೆ ಯತೀಂದ್ರ ಕ್ಲಾಸ್!
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ವರದಾ-ಬೇಡ್ತಿ ನದಿ ಜೋಡಣೆ ವಿರೋಧಿಸಿ ಬೃಹತ್ ಪ್ರತಿಭಟನೆ: ಸ್ವಾಮೀಜಿ ಎಚ್ಚರಿಕೆ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಕೆಲಸಕ್ಕೆ ಕನ್ನಡಿಗರು ಬೇಡ್ವಂತೆ:ಕನ್ನಡಿಗರನ್ನು ಕೆರಳಿಸಿದ ಬೆಂಗಳೂರಿನ ಕಂಪನಿ
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಶ್ರೀರಾಮುಲು ದೊಡ್ಡ ಪಾಳೇಗಾರನಾ? ಬಂದವ್ನೆ ಹೊಡಿರೋ: ರೆಡ್ಡಿ ವಿಡಿಯೋ ರಿಲೀಸ್‌
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಅವನ ಬಿಟ್ಟು ಇವನು, ಇವನ ಬಿಟ್ಟು ಅವನು: ಏನಿದು ಕಳ್ಳಾಟ?
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ
ಬೆಂಗಳೂರಿನ ಸುಜಾತಾ ಅಂಡರ್‌ಪಾಸ್‌ನಲ್ಲಿ ಅವೈಜ್ಞಾನಿಕ ರಸ್ತೆ ಕಾಮಗಾರಿ