Digital Rupee: ಇಂದು ಡಿಜಿಟಲ್ ರೂಪಾಯಿ ಬಿಡುಗಡೆ; ಬೆಂಗಳೂರಿನಲ್ಲೂ ಸಿಗಲಿದೆ ಇ-ರೂಪಾಯಿ

ಬೆಂಗಳೂರು, ನವದೆಹಲಿ, ಮುಂಬೈ ಹಾಗೂ ಭುವನೇಶ್ವರಗಳಲ್ಲಿ ನಿರ್ದಿಷ್ಟ ಗ್ರಾಹಕರು ಮತ್ತು ಉದ್ಯಮಿಗಳನ್ನು ಒಳಗೊಂಡ ಬಳಕೆದಾರರ ಗುಂಪಿನಲ್ಲಿ ಮಾತ್ರ ಆರಂಭದಲ್ಲಿ ಡಿಜಿಟಲ್ ರೂಪಾಯಿ ಚಲಾವಣೆಗೆ ಬರಲಿದೆ.

Digital Rupee: ಇಂದು ಡಿಜಿಟಲ್ ರೂಪಾಯಿ ಬಿಡುಗಡೆ; ಬೆಂಗಳೂರಿನಲ್ಲೂ ಸಿಗಲಿದೆ ಇ-ರೂಪಾಯಿ
ಸಾಂದರ್ಭಿಕ ಚಿತ್ರ
Follow us
| Updated By: ಗಣಪತಿ ಶರ್ಮ

Updated on: Dec 01, 2022 | 5:30 AM

ನವದೆಹಲಿ: ನವೆಂಬರ್ 1ರಂದು ಹೋಲ್​ಸೇಲ್ ಅಥವಾ ಸಗಟು ವಿಭಾಗದ ಪ್ರಾಯೋಗಿಕ ಡಿಜಿಟಲ್ ರೂಪಾಯಿಯನ್ನು (Digital Rupee) ಬಿಡುಗಡೆ ಮಾಡಿದ್ದ ಆರ್​ಬಿಐ (RBI) ಇಂದು ರಿಟೇಲ್ ಅಥವಾ ಚಿಲ್ಲರೆ ಬಳಕೆಯ ಡಿಜಿಟಲ್ ರೂಪಾಯಿಯನ್ನು (e-Rupee) ಬಿಡುಗಡೆ ಮಾಡಲಿದೆ. ಬೆಂಗಳೂರು (Bengaluru) ನವದೆಹಲಿ, ಮುಂಬೈ ಹಾಗೂ ಭುವನೇಶ್ವರಗಳಲ್ಲಿ ಪ್ರಾಯೋಗಿಕವಾಗಿ ಡಿಜಿಟಲ್ ರೂಪಾಯಿ ಅಸ್ತಿತ್ವಕ್ಕೆ ಬರಲಿದೆ. ಎಸ್​ಬಿಐ (SBI), ಐಸಿಐಸಿಐ ಬ್ಯಾಂಕ್ (ICICI Bank) ಸೇರಿದಂತೆ ನಾಲ್ಕು ಬ್ಯಾಂಕ್​ಗಳು ಆರಂಭದಲ್ಲಿ ರಿಟೇಲ್ ಡಿಜಿಟಲ್ ರೂಪಾಯಿ ವ್ಯವಹಾರದಲ್ಲಿ ತೊಡಗಿಕೊಳ್ಳಲಿವೆ ಎಂದು ಆರ್​ಬಿಐ ತಿಳಿಸಿದೆ.

ಬೆಂಗಳೂರು, ನವದೆಹಲಿ, ಮುಂಬೈ ಹಾಗೂ ಭುವನೇಶ್ವರಗಳಲ್ಲಿ ನಿರ್ದಿಷ್ಟ ಗ್ರಾಹಕರು ಮತ್ತು ಉದ್ಯಮಿಗಳನ್ನು ಒಳಗೊಂಡ ಬಳಕೆದಾರರ ಗುಂಪಿನಲ್ಲಿ ಮಾತ್ರ ಆರಂಭದಲ್ಲಿ ಡಿಜಿಟಲ್ ರೂಪಾಯಿ ಚಲಾವಣೆಗೆ ಬರಲಿದೆ. ಡಿಜಿಟಲ್ ರೂಪಾಯಿಯು ಡಿಜಿಟಲ್ ಟೋಕನ್ ರೂಪದಲ್ಲಿ ಇರಲಿದೆ. ಸದ್ಯ ಬಳಕೆಯಲ್ಲಿರುವ ಕರೆನ್ಸಿ ನೋಟುಗಳು ಮತ್ತು ನಾಣ್ಯಗಳ ಮುಖ ಬೆಲೆಯಲ್ಲೇ ಡಿಜಿಟಲ್ ರೂಪಾಯಿಯೂ ಮುದ್ರಿತವಾಗಿರಲಿದೆ. ಯುಪಿಐ ವ್ಯವಸ್ಥೆಗೆ ಯುಪಿಐ ಐಡಿ ಅಥವಾ ಕ್ಯುಆರ್ ಕೋಡ್ ಇದ್ದಂತೆ ಡಿಜಿಟಲ್ ರೂಪಾಯಿಗೂ ಡಿಜಿಟಲ್ ರೂಪಾಯಿ ವಾಲೆಟ್ ವ್ಯವಸ್ಥೆ ಇರಲಿದೆ. ಬಳಕೆದಾರರಿಗೆ ಇದನ್ನು ಮೊಬೈಲ್ ಫೋನ್‌ಗಳಲ್ಲಿ ಸಂಗ್ರಹಿಸಡಲು ಸಾಧ್ಯವಾಗಲಿದೆ ಎಂದು ಆರ್​ಬಿಐ ಹೇಳಿದೆ.

ಇದನ್ನೂ ಓದಿ: Digital Rupee: ಆರ್​ಬಿಐ ಡಿಜಿಟಲ್ ರೂಪಾಯಿ ವಿಶೇಷತೆ ಬಗ್ಗೆ ಇಲ್ಲಿದೆ ಪೂರ್ಣ ವಿವರ

ಡಿಜಿಟಲ್ ವಾಲೆಟ್ ಮೂಲಕ ಇ-ರೂಪಾಯಿ ವಹಿವಾಟು ನಡೆಯಲಿದ್ದು, ಹೆಚ್ಚು ಸುರಕ್ಷಿತವಾಗಿರಲಿದೆ ಎಂದು ಆರ್​ಬಿಐ ಹೇಳಿದೆ. ಒಂದು ಬಾರಿ ಬ್ಯಾಂಕ್​ನಿಂದ ಕರೆನ್ಸಿ ಖರೀದಿ ಮಾಡಿದರೆ ನಂತರ ಅದು ವಾಲೆಟ್​ನಿಂದ ವಾಲೆಟ್​ಗೆ ವರ್ಗಾವಣೆಯಾಗುತ್ತಾ ಇರಲಿದೆ. 10, 100, 200, 500 ರೂ. ಮುಖಬೆಲೆಯ ಡಿಜಿಟಲ್ ರೂಪಾಯಿಯೂ ದೊರೆಯಲಿದೆ. 50 ಪೈಸೆ ಹಾಗೂ 1 ರೂ. ಮುಖಬೆಲೆಯ ಡಿಜಿಟಲ್ ರೂಪಾಯಿಯೂ ಲಭ್ಯವಾಗಲಿದೆ ಎನ್ನಲಾಗಿದೆ.

ನವೆಂಬರ್ 1ರಂದು ಆರ್​ಬಿಐ ಹೋಲ್​ಸೇಲ್ ವಿಭಾಗದ ಇ-ರೂಪಾಯಿಯನ್ನು ಬಿಡುಗಡೆ ಮಾಡಿತ್ತು. ಈ ಮಾದರಿಯ ಡಿಜಿಟಲ್ ರೂಪಾಯಿಯು ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಬ್ಯಾಂಕ್ ಆಫ್ ಬರೋಡ, ಎಚ್​ಡಿಎಫ್​ಸಿ ಬ್ಯಾಂಕ್​, ಐಸಿಐಸಿಐ ಬ್ಯಾಂಕ್, ಕೋಟಕ್ ಮಹೀಂದ್ರಾ ಬ್ಯಾಂಕ್, ಯೆಸ್ ಬ್ಯಾಂಕ್, ಐಡಿಎಫ್​ಸಿ ಫಸ್ಟ್ ಬ್ಯಾಂಕ್ ಹಾಗೂ ಎಚ್​​ಎಸ್​ಬಿಸಿ ಬ್ಯಾಂಕ್​ಗಳಲ್ಲಿ ಸದ್ಯ ಪ್ರಾಯೋಗಿಕವಾಗಿ ಚಲಾವಣೆಯಲ್ಲಿವೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
20 ರೂ. ನೀರಿನ ಬಾಟಲಿ ಕೊಳ್ಳಲು ಬಂದವನು ಮಾಡಿದ್ದೇನು ನೋಡಿ!
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ಬ್ಯಾಕ್ ಟು ಬ್ಯಾಕ್ ವಿಕೆಟ್ ಉರುಳಿಸಿದ ಆಕಾಶ್ ದೀಪ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ದರ್ಶನ್ ಹೊರಗೆ ಬಂದ್ರೆ ಖುಷಿ; ತಪ್ಪು ಮಾಡಿದ್ದರೆ ಕ್ರಮ ಆಗಲಿ: ಗುರು ಕಿರಣ್
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ಭಗವಾನ್ ಜಗನ್ನಾಥನ ವಿಗ್ರಹ ಖರೀದಿಸಿ, ಡಿಜಿಟಲ್ ಪೇಮೆಂಟ್ ಮಾಡಿದ ಪಿಎಂ ಮೋದಿ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ತ್ರಿವರ್ಣ ಧ್ವಜದಲ್ಲಿ ಉರ್ದು ವಾಕ್ಯ ಬರೆದು ದರ್ಗಾಕ್ಕೆ ಕಟ್ಟಿದ ಯುವಕ:ವಿಡಿಯೋ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ದಸರಾ ಉದ್ಘಾಟನೆ ಅನಿರೀಕ್ಷಿತವಾಗಿ ಬಂದ ಸಂತೋಷದ ಕ್ಷಣ; ಹಂಪಾ ನಾಗರಾಜಯ್ಯ
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಬಯೋಲಾಜಿಕಲ್ ವಾರ್ ರೀತಿ ಏಡ್ಸ್ ಇರುವವರನ್ನು ಬಳಸಿದ್ದಾರೆ: ಡಿಕೆ ಸುರೇಶ್​
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ಹೆಚ್​ಡಿ ಕುಮಾರಸ್ವಾಮಿ ಸುದ್ದಿಗೋಷ್ಠಿ
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ನಕ್ಸಲರ ದಾಳಿಗೆ ತುತ್ತಾದ ಜನರ ಸಂಕಟ ತೆರೆದಿಡುವ ಸಾಕ್ಷ್ಯಚಿತ್ರವಿದು
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್
ಅಡ್ಡಲಾಗಿ ಬಿದ್ದ 10 ಚಕ್ರದ ಲಾರಿ, ರಿಂಗ್‌ ರೋಡಲ್ಲಿ ಫುಲ್ ಟ್ರಾಫಿಕ್ ಜಾಮ್