AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RBI campaign: ಜ. 1ರಿಂದ ಬ್ಯಾಂಕ್ ಗ್ರಾಹಕರ ದೂರುಗಳ ಶೀಘ್ರ ವಿಲೇವಾರಿಗೆ ಎರಡು ತಿಂಗಳ ಅಭಿಯಾನ

RBI to start 2 month campaign from Jan 1st to resolve ombudsman grievances: ಆರ್​ಬಿಐನ ಒಂಬುಡ್ಸ್​ಮನ್ ಬಳಿ ಒಂದು ತಿಂಗಳಿಗಿಂತ ಹೆಚ್ಚು ಕಾಲದಿಂದ ಬಾಕಿ ಇರುವ ದೂರುಗಳನ್ನು ಇತ್ಯರ್ಥಪಡಿಸಲು ಅಭಿಯಾನ ನಡೆಯಲಿದೆ. ಜನವರಿ 1ರಿಂದ ಫೆಬ್ರುವರಿ 28ರವರೆಗೆ ಎರಡು ತಿಂಗಳ ಅಭಿಯಾನ ನಡೆಸುವುದಾಗಿ ಆರ್​ಬಿಐ ಹೇಳಿದೆ. ಆರ್​ಬಿಐ ಎಂಪಿಸಿ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಗವರ್ನರ್ ಸಂಜಯ್ ಮಲ್ಹೋತ್ರಾ ಈ ವಿಚಾರ ತಿಳಿಸಿದ್ದಾರೆ.

RBI campaign: ಜ. 1ರಿಂದ ಬ್ಯಾಂಕ್ ಗ್ರಾಹಕರ ದೂರುಗಳ ಶೀಘ್ರ ವಿಲೇವಾರಿಗೆ ಎರಡು ತಿಂಗಳ ಅಭಿಯಾನ
ಬ್ಯಾಂಕ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Dec 05, 2025 | 1:20 PM

Share

ನವದೆಹಲಿ, ಡಿಸೆಂಬರ್ 5: ಆರ್​ಬಿಐ ಈಗ ಗ್ರಾಹಕರ ಸೇವೆಗೆ ಅತಿಹೆಚ್ಚು ಅದ್ಯತೆ ಕೊಡಲು ನಿರ್ಧರಿಸಿದೆ. ಆರ್​ಬಿಐ ಒಂಬುಡ್ಸ್​ಮೆನ್ (RBI Ombudsman) ಬಳಿ ಒಂದು ತಿಂಗಳಿಗಿಂತ ಹೆಚ್ಚು ಕಾಲದಿಂದ ಬಾಕಿ ಉಳಿದಿರುವ ಎಲ್ಲಾ ದೂರುಗಳನ್ನು (grievances) ಶೀಘ್ರ ಇತ್ಯರ್ಥ ಪಡಿಸಲು ಎರಡು ತಿಂಗಳ ಅಭಿಯಾನ (campaign) ಕೈಗೊಳ್ಳಲಿದೆ. 2026ರ ಜನವರಿಯಿಂದ ಫೆಬ್ರುವರಿವರೆಗೆ ಎರಡು ತಿಂಗಳ ಕಾಲ ಈ ಅಭಿಯಾನ ಇರಲಿದೆ. ಆರ್​ಬಿಐ ಗವರ್ನರ್ ಸಂಜಯ್ ಮಲ್ಹೋತ್ರಾ ಅವರು ಎಂಪಿಸಿ ಸಭೆಯ (RBI MPC Meet) ನಿರ್ಧಾರಗಳನ್ನು ಪ್ರಕಟಿಸುವ ಸಂದರ್ಭದಲ್ಲಿ ಈ ಮಾಹಿತಿ ಹಂಚಿಕೊಂಡಿದ್ದಾರೆ.

‘ನಾವು ಗ್ರಾಹಕ ಸೇವೆಗಳನ್ನು ಸುಧಾರಿಸಲು ಗಮನ ಹರಿಸಿದ್ದೇವೆ. ಈ ನಿಟ್ಟಿನಲ್ಲಿ ಸಾಕಷ್ಟು ಕ್ರಮಗಳನ್ನು ಕೈಗೊಂಡಿದ್ದೇವೆ. ಮರು ಕೆವೈಸಿ, ಹಣಕಾಸು ಒಳಗೊಳ್ಳುವಿಕೆ ಮತ್ತು ನಿಮ್ಮ ಹಣ ನಿಮ್ಮ ಅಧಿಕಾರ ಅಭಿಯಾನಗಳು ಇಂಥ ಕೆಲ ಕ್ರಮಗಳಾಗಿವೆ. ಈ ವರ್ಷದ ಆರಂಭದಲ್ಲಿ ನಮ್ಮ ಸಿಟಿಜನ್ ಚಾರ್ಟರ್ ಅನ್ನೂ ಪರಾಮರ್ಶಿಸಿದ್ದೇವೆ. ನಮ್ಮ ಎಲ್ಲಾ ಸೇವೆಗಳಿಗೆ ಅರ್ಜಿಗಳನ್ನು ಆನ್​ಲೈನ್​ನಲ್ಲೇ ನೀಡಿದ್ದೇವೆ. ಸಮಸ್ಯೆ ಇತ್ಯರ್ಥಪಡಿಸಲಾಗಿರುವುದರ ವಿವರವನ್ನು ಪ್ರತೀ ತಿಂಗಳು ನೀಡುತ್ತಿದ್ದೇವೆ. ಬಾಕಿ ಉಳಿದಿರುವ ಅರ್ಜಿಗಳನ್ನು ಪ್ರತೀ ತಿಂಗಳ ಮೊದಲ ತಾರೀಖಿನಿಂದು ಪ್ರಕಟಿಸುತ್ತಿದ್ದೇವೆ’ ಎಂದು ಸಂಜಯ್ ಮಲ್ಹೋತ್ರಾ ಅವರು ಆರ್​ಬಿಐನಿಂದ ತೆಗೆದುಕೊಳ್ಳಲಾಗಿರುವ ಗ್ರಾಹಕ ಕೇಂದ್ರಿತ ಕ್ರಮಗಳ ವಿವರ ನೀಡಿದ್ದಾರೆ

ಇದನ್ನೂ ಓದಿ: ಆರ್​ಬಿಐನಿಂದ ಲಕ್ಷ ಕೋಟಿ ರೂ ಒಎಂಒ ಖರೀದಿ; 5 ಬಿಲಿಯನ್ ಡಾಲರ್ ಕರೆನ್ಸಿ ಖರೀದಿಗೆ ನಿರ್ಧಾರ; ಏನಿದರ ಮಹತ್ವ

ಎರಡು ತಿಂಗಳ ಅಭಿಯಾನ

‘ಆರ್​ಬಿಐ ನಿಯಂತ್ರಿತವಾಗಿರುವ ಎಲ್ಲಾ ಹಣಕಾಸು ಸಂಸ್ಥೆಗಳೂ ಕೂಡ ತಮ್ಮ ನೀತಿ ಮತ್ತು ಕಾರ್ಯಾಚರಣೆಗಳಲ್ಲಿ ಗ್ರಾಹಕರಿಗೆ ಆದ್ಯತೆ ಕೊಡಬೇಕು. ಗ್ರಾಹಕ ಸೇವೆ ಸುಧಾರಿಸಬೇಕು ಮತ್ತು ಸಮಸ್ಯೆಗಳನ್ನು ಕಡಿಮೆಗೊಳಿಸಬೇಕು. ಮುಂದಿನ ವರ್ಷದ ಜನವರಿ 1ರಿಂದ ಎರಡು ತಿಂಗಳ ಅಭಿಯಾನ ನಡೆಸಲು ಉದ್ದೇಶಿಸಿದ್ದೇವೆ. ಆರ್​ಬಿಐ ಒಂಬುಡ್ಸ್​ಮೆನ್ (ಸಾರ್ವಜನಿಕ ತನಿಖಾಧಿಕಾರಿ) ಬಳಿ ಒಂದು ತಿಂಗಳಿಗಿಂತ ಹೆಚ್ಚು ಕಾಲ ಬಾಕಿ ಇರುವ ದೂರುಗಳನ್ನು ಇತ್ಯರ್ಥಪಡಿಸುವ ಗುರಿ ಹೊಂದಿದ್ದೇವೆ. ಈ ನಿಟ್ಟಿನಲ್ಲಿ ಎಲ್ಲಾ ಸಂಸ್ಥೆಗಳೂ ಸಹಕರಿಸಬೇಕು ಎಂದು ನಿರೀಕ್ಷಿಸುತ್ತೇನೆ’ ಎಂದು ಆರ್​ಬಿಐ ಗವರ್ನರ್ ಹೇಳಿದ್ದಾರೆ.

ಆರ್​ಬಿಐ ಒಂಬುಡ್ಸ್ಮನ್ ಎಂಬುದು ಬ್ಯಾಂಕ್ ಗ್ರಾಹಕರು ನೀಡುವ ದೂರುಗಳನ್ನು ತನಿಖೆ ನಡೆಸಿ ನ್ಯಾಯ ಕೊಡಿಸಲು ಇರುವ ಒಂದು ನ್ಯಾಯವ್ಯವಸ್ಥೆ. ಗ್ರಾಹಕರ ಸಮಸ್ಯೆ ಬಗೆಹರಿಸಲು ಬ್ಯಾಂಕು ವಿಫಲವಾದರೆ, ಅಥವಾ ಬ್ಯಾಂಕ್ ಕ್ರಮದಿಂದ ಸಮಾಧಾನ ಸಿಗದ ಗ್ರಾಹಕರು ಆರ್​ಬಿಐನ ಒಂಬುಡ್ಸ್​ಮನ್​ಗೆ ದೂರು ಕೊಡುವ ಅವಕಾಶ ಇರುತ್ತದೆ. ಈ ಒಂಬುಡ್ಸ್​ಮನ್​ಗೆ ಸ್ವಾಯತ್ತ ಅಧಿಕಾರ ಇರುತ್ತದೆ. ಬ್ಯಾಂಕುಗಳ ವಿರುದ್ಧ ಗ್ರಾಹಕರು ನೀಡುವ ದೂರನ್ನು ಪರಿಶೀಲಿಸಿ, ನ್ಯಾಯಯುತವಾಗಿ ವ್ಯಾಜ್ಯಕ್ಕೆ ಪರಿಹಾರ ಕೊಡಲಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ಕಾಂಗ್ರೆಸ್ ಮುಖಂಡ ಹಾಜಿ ಸೈಯದ್ ಜಿಯಾವುಲ್ಲಾ ಅಂತಿಮ ದರ್ಶನ ಪಡೆದ ಡಿಕೆಶಿ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ವಿವಾಹ ವಾರ್ಷಿಕೋತ್ಸವದ ದಿನ ದರ್ಶನ್ ಭೇಟಿ ಮಾಡಿ ಹೊರಟ ವಿಜಯಲಕ್ಷ್ಮಿ; ವಿಡಿಯೋ
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಮನೆ ಮೇಲೆ ಬಿದ್ದ ಬೃಹತ್​ ಮರ: ಆಚೆ ಬರಲಾಗದೇ ಮನೆಯೊಳಗೆ ಮೂವರು ಲಾಕ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಹತ್ತು ತಿಂಗಳ ಬಳಿಕ ಪತ್ನಿ-ಮಗನ ಮುಖಾ-ಮುಖಿ ಭೇಟಿಯಾದ ದರ್ಶನ್
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಆನೆ ಸಾವು, ತಪ್ಪು ಯಾರದ್ದು?
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಿವಾಹ ವಾರ್ಷಿಕೋತ್ಸವ: ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಲಿಫ್ಟ್‌ನಲ್ಲಿ ಸಿಲುಕಿದ್ದ 9 ಜನರನ್ನ ರಕ್ಷಿಸಿದ ಅಗ್ನಿಶಾಮಕ ಸಿಬ್ಬಂದಿ
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಯತ್ನಾಳ್​​ ಹೇಳಿಕೆ ಬೆಂಬಲಿಸಿದ ಗಂಗಾವತಿ ಶಾಸಕ ಜನಾರ್ದನ ರೆಡ್ಡಿ!
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಏಕಾಏಕಿ ಕಳಚಿ ಬಿತ್ತು ವೇಗವಾಗಿ ಚಲಿಸುತ್ತಿದ್ದ ಬಸ್ಸಿನ ಟೈರ್
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?
ಇಡೀ ವಿಶ್ವಕ್ಕೆ ಇಂಟರ್ನೆಟ್ ಆಘಾತ ನೀಡುತ್ತಾ ಇರಾನ್?