AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಆರ್​ಬಿಐನಿಂದ ಸರ್ಕಾರಕ್ಕೆ ದಾಖಲೆಯ 2.11 ಲಕ್ಷ ಕೋಟಿ ರೂ ಡಿವಿಡೆಂಡ್

RBI to transfer Over Rs 2.11 Lakh Crore to Central Govt: ಭಾರತೀಯ ರಿಸರ್ವ್ ಬ್ಯಾಂಕ್ 2023-24ರ ಸಾಲಿಗೆ ಸರ್ಕಾರಕ್ಕೆ 2.11 ಲಕ್ಷ ಕೋಟಿ ರೂ ಡಿವಿಡೆಂಡ್ ಕೊಡಲು ನಿರ್ಧರಿಸಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತದಾಸ್ ನೇತೃತ್ವದಲ್ಲಿ ನಡೆದ ಸಭೆಯೊಂದರಲ್ಲಿ ಈ ಕ್ರಮಕ್ಕೆ ಅನುಮೋದನೆ ಸಿಕ್ಕಿದೆ. ಈ ಬಾರಿ ಫಾರೆಕ್ಸ್ ನಿಧಿಯಲ್ಲಿ ಹೆಚ್ಚಳ ಆಗಿರುವುದೂ ಸೇರಿದಂತೆ ವಿವಿಧ ಕಾರಣಗಳಿಂದ ಆರ್​ಬಿಐ ಡಿವಿಡೆಂಡ್ ಹೆಚ್ಚಾಗಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಸರ್ಕಾರಕ್ಕೆ ಆರ್​ಬಿಐ ನೀಡಲಿರುವ ಲಾಭಾಂಶದಲ್ಲಿ ಎರಡು ಪಟ್ಟು ಹೆಚ್ಚಳವಾಗಿದೆ.

ಆರ್​ಬಿಐನಿಂದ ಸರ್ಕಾರಕ್ಕೆ ದಾಖಲೆಯ 2.11 ಲಕ್ಷ ಕೋಟಿ ರೂ ಡಿವಿಡೆಂಡ್
ಆರ್​ಬಿಐ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 22, 2024 | 4:54 PM

Share

ನವದೆಹಲಿ, ಮೇ 22: ಆರ್​ಬಿಐನಿಂದ ಸರ್ಕಾರಕ್ಕೆ ನೀಡಲಾಗುವ ಲಾಭಾಂಶದಲ್ಲಿ (dividend) ಎರಡು ಪಟ್ಟು ಹೆಚ್ಚಾಗಿದೆ. 2023-24ರ ಸಾಲಿಗೆ ಆರ್​ಬಿಐ 2.11 ಲಕ್ಷ ಕೋಟಿ ರೂ ಮೊತ್ತದ ಡಿವಿಡೆಂಡ್ ಅನ್ನು ಸರ್ಕಾರಕ್ಕೆ ಪಾವತಿಸಲಿದೆ. ಹಿಂದಿನ ಹಣಕಾಸು ವರ್ಷಕ್ಕೆ ಹೋಲಿಸಿದರೆ ಈ ಡಿವಿಡೆಂಡ್ ದ್ವಿಗುಣಗೊಂಡಿದೆ. ಆರ್​ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅಧ್ಯಕ್ಷತೆಯಲ್ಲಿ ನಡೆದ ರಿಸರ್ವ್ ಬ್ಯಾಂಕ್​ನ ಕೇಂದ್ರೀಯ ನಿರ್ದೇಶಕರ ಮಂಡಳಿಯ (RBI Central Board of directors) 608ನೇ ಸಭೆಯಲ್ಲಿ ಸರ್ಕಾರಕ್ಕೆ 2.11 ಲಕ್ಷ ಕೋಟಿ ರೂ ಲಾಭಾಂಶ ಒದಗಿಸುವ ನಿರ್ಧಾರಕ್ಕೆ ಸಮ್ಮತಿ ಕೊಡಲಾಗಿದೆ. ಆರ್​ಬಿಐನಿಂದ ಈವರೆಗೆ ನೀಡಲಾಗಿರುವ ಗರಿಷ್ಠ ಲಾಭಾಂಶ ಇದಾಗಲಿದೆ.

ಬಿಮಲ್ ಜಲನ್ ಕಮಿಟಿ ಶಿಫಾರಸು ಮೇರೆಗೆ ರೂಪಿಸಲಾಗಿರುವ ಎಕನಾಮಿಕ್ ಕ್ಯಾಪಿಟಲ್ ಫ್ರೇಮ್​ವರ್ಕ್ (ಇಸಿಎಫ್) ಆಧಾರದ ಮೇಲೆ ಆರ್​ಬಿಐ ಈ ದಾಖಲೆ ಮೊತ್ತದ ಡಿವಿಡೆಂಡ್ ಹಣವನ್ನು ಸರ್ಕಾರಕ್ಕೆ ಒದಗಿಸಲು ನಿರ್ಧರಿಸಿದೆ. ಅಧಿಕಾರ ಫಾರೆಕ್ಸ್ ಮೀಸಲು ನಿಧಿ ಸೇರಿದಂತೆ ವಿವಿಧ ಅಂಶಗಳು ಆರ್​ಬಿಐನ ಹೆಚ್ಚುವರಿ ಡಿವಿಡೆಂಡ್ ವರ್ಗಾವಣೆಗೆ ಕಾರಣವಾಗಿವೆ ಎನ್ನಲಾಗಿದೆ.

ಈಗ ಅಧಿಕ ಡಿವಿಡೆಂಡ್ ಮೊತ್ತವು 2024-25ರ ಸರ್ಕಾರದ ಖಾತೆಗಳಲ್ಲಿ ನಮೂದಾಗಲಿದೆ. ಇದರಿಂದ ಸರ್ಕಾರದ ಬಳಿ ಹೆಚ್ಚು ಹಣದ ಹರಿವು ಇರಲಿದೆ. ಬಂಡವಾಳ ವೆಚ್ಚಕ್ಕೆ ಹೆಚ್ಚು ಹಣ ಸಿಗಲಿದೆ.

ಇದನ್ನೂ ಓದಿ: ಹಡಗು ಅಲ್ಲಿಂದ ಇಲ್ಲಿ ಬರುವಷ್ಟರಲ್ಲಿ ಬೆಲೆ ದುಪ್ಪಟ್ಟು; ಯುಪಿಎ ಟೈಮಲ್ಲಿ ಅದಾನಿ ಬಿಸಿನೆಸ್ ಹೇಗಿತ್ತು ನೋಡಿ

ಎಕನಾಮಿಕ್ ಕ್ಯಾಪಿಟಲ್ ಫ್ರೇಮ್​ವರ್ಕ್ ಪ್ರಕಾರ 2023-24ಕ್ಕೆ ಕಂಟಿಂಜೆಂಜ್ ರಿಸ್ಕ್ ಬಫರ್ (ಸಿಆರ್​ಬಿ) ಅನ್ನು ಶೇ. 6.5ಕ್ಕೆ ಹೆಚ್ಚಿಸಲಾಗಿತ್ತು. ಕಂಟಿಂಜೆಂಟ್ ರಿಸ್ಕ್ ಬಫರ್ ಎಂಬುದು ಅನಿರೀಕ್ಷಿತ ಹಣಕಾಸು ಪರಿಸ್ಥಿತಿಯನ್ನು ಎದುರಿಸಲು ಇರುವ ತುರ್ತು ನಿಧಿಯಾಗಿದೆ. 2018-19ರಿಂದ 2021-22ರವರೆಗೆ ಅಂದಿನ ಸ್ಥೂಲ ಆರ್ಥಿಕ ಪರಿಸ್ಥಿತಿ ಕಾರಣದಿಂದಾಗಿ ಸಿಆರ್​ಬಿಯನ್ನು ಶೇ. 5.50ಕ್ಕೆ ಇಳಿಸಲಾಗಿತ್ತು. ಆರ್ಥಿಕ ಪರಿಸ್ಥಿತಿ ಉತ್ತಮಗೊಂಡಂತೆ ಸಿಆರ್​ಬಿಯನ್ನು ಶೇ. 6 ಮತ್ತು ಈಗ ಶೇ. 6.50ಕ್ಕೆ ಹೆಚ್ಚಿಸಲಾಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಮಧ್ಯ ರಾತ್ರಿ 2 ಗಂಟೆ ಮೇಲೆ ರಕ್ಷಿತಾ ಪ್ರೇಮ್ ಕರೆ ಮಾಡಿದ್ರು: ಧ್ರುವ ಸರ್ಜಾ
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆರೂರು PSI ಲೋಕಾಯುಕ್ತ ಬಲೆಗೆ: ಪಟಾಕಿ ಸಿಡಿಸಿ ಸಂಭ್ರಮಿಸಿದ ಯುವಕರು
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ