Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಸ ನಿಯಮ: ಟೋಕನೈಜೇಶನ್​​ಗೆ ಅಂತಿಮ ದಿನಾಂಕ ನಿಗದಿಪಡಿಸಿದ ಆರ್​ಬಿಐ

ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರು ಸೆಪ್ಟೆಂಬರ್ 30, 2022 ರೊಳಗೆ ಕಾರ್ಡಗಳನ್ನು ಟೋಕನೈಜೇಶನ್​​ಗೆ ಬದಲಾಯಿಸಿಕೊಳ್ಳಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ ಗಡುವು ನೀಡಿದೆ.

ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಸ ನಿಯಮ: ಟೋಕನೈಜೇಶನ್​​ಗೆ ಅಂತಿಮ ದಿನಾಂಕ ನಿಗದಿಪಡಿಸಿದ ಆರ್​ಬಿಐ
ಸಾಂಧರ್ಬಿಕ ಚಿತ್ರ
Follow us
TV9 Web
| Updated By: ವಿವೇಕ ಬಿರಾದಾರ

Updated on: Aug 23, 2022 | 3:13 PM

ನವದೆಹಲಿ: ಕ್ರೆಡಿಟ್ (Credit Card) ಮತ್ತು ಡೆಬಿಟ್ ಕಾರ್ಡ್ (Debit Card) ಬಳಕೆದಾರರು ಸೆಪ್ಟೆಂಬರ್ 30, 2022 ರೊಳಗೆ ಕಾರ್ಡಗಳನ್ನು ಟೋಕನೈಜೇಶನ್​​ಗೆ ಬದಲಾಯಿಸಿಕೊಳ್ಳಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗಡುವು ನೀಡಿದೆ. ಗ್ರಾಹಕರ ವಹಿವಾಟುಗಳನ್ನು ಸುರಕ್ಷಿತವಾಗಿಡಲು ಆರ್​ಬಿಐ ಹೊಸ ವ್ಯವಸ್ಥೆಯನ್ನು ಆರಂಭಿಸಿದೆ. ಟೋಕನೈಜೇಶನ್​ನಿಂದ ಕಾರ್ಡ್ ವಿವರಗಳನ್ನು ಎನ್‌ಕ್ರಿಪ್ಟ್ ಮಾಡಿ ಟೋಕನ್​ಆಗಿ ಸಂಗ್ರಹಿಸಲಾಗುತ್ತದೆ.

ಇದರಿಂದ ಗ್ರಾಹಕರು ವಿವರಗಳನ್ನು ಬಹಿರಂಗಪಡಿಸದೆ ಪಾವತಿ ಮಾಡಬಹುದಾಗಿದೆ. ಆರ್‌ಬಿಐ ಮಾರ್ಗಸೂಚಿ ಪ್ರಕಾರ ಕಾರ್ಡ್ ಡೇಟಾವನ್ನು ಎನ್‌ಕ್ರಿಪ್ಟ್ ಮಾಡಿದ ಡಿಜಿಟಲ್ ಟೋಕನ್‌ನೊಂದಿಗೆ ಬದಲಾಯಿಸುವುದನ್ನು ಕಡ್ಡಾಯಗೊಳಿಸಿದೆ.

ಹೆಚ್ಚಾಗಿ ಇದು ಕಾರ್ಡ್‌ದಾರರ ಆನ್‌ಲೈನ್ ವಹಿವಾಟಿನ ಅನುಭವಗಳನ್ನು ಸುಧಾರಿಸುತ್ತದೆ ಮತ್ತು ಆನ್‌ಲೈನ್ ವಂಚಕರಿಂದ ನಿಮ್ಮ ಕಾರ್ಡ್ ಮಾಹಿತಿಯನ್ನು ರಕ್ಷಿಸುತ್ತದೆ. ಅಸುರಕ್ಷಿತ ಆನ್‌ಲೈನ್ ಅಭ್ಯಾಸಗಳಿಗೆ ಪ್ರತಿಕ್ರಿಯೆಯಾಗಿ ಗ್ರಾಹಕರನ್ನು ರಕ್ಷಿಸಲು ಆರ್​ಬಿಐ ಹೊಸ ನಿಯಮಗಳನ್ನು ಆರ್​​ಬಿಐ ರಚಿಸಿದೆ.

ಟೋಕನೈಜೇಶನ್ ಎಂದರೆ ನಿಮ್ಮ ಕಾರ್ಡ್ ವಿವರಗಳನ್ನು ಟೋಕನೊಂದಿಗೆ ಬದಲಾಯಿಸಿಕೊಳ್ಳುವುದೇ ಟೋಕನೈಜೇಶನ್. ಇದರಿಂದ ಇನ್ನೂ ಮುಂದೆ ಸಂಪರ್ಕರಹಿತ ಬ್ಯಾಂಕಿಂಗ್​ಗೆ ಸಿವಿವಿ ನೀಡಬೇಕಾಗಿಲ್ಲ. ಇದು ಸಂಪೂರ್ಣವಾಗಿ ನೆಟ್​ವರ್ಕ ಮೂಲಕ ಕಾರ್ಯನಿರ್ವಹಿಸುತ್ತದೆ. ಟೋಕನೈಜೇಶನ್​ನಿಂದ ಡೇಟಾ ಕಳ್ಳತನವನ್ನು ತಪ್ಪಿಸಿಕೊಳ್ಳಬಹುದಾಗಿದೆ.

ಆರ್‌ಬಿಐ ನೀಡಿರುವ ಮಾರ್ಗಸೂಚಿಗಳ ಪ್ರಕಾರ, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ಕಾರ್ಡ್ ವಿತರಕರು ಅಥವಾ ನೆಟ್‌ವರ್ಕ್‌ಗಳನ್ನು ಹೊರತುಪಡಿಸಿ ಯಾವುದೇ ಘಟಕದಿಂದ ಸಂಗ್ರಹಿಸುವಹಾಗಿಲ್ಲ. ಈಗಾಗಲೇ ಸಂಗ್ರಹವಾಗಿರುವ ಯಾವುದೇ ಡೇಟಾವನ್ನು ಅಳಿಸುವುದು ಅವಶ್ಯಕ.

ಟೋಕನೈಸೇಶನ್ ವ್ಯವಸ್ಥೆಯು ಸಂಪೂರ್ಣವಾಗಿ ಉಚಿತವಾಗಿದೆ. ಟೋಕನೈಸೇಶನ್ ದೇಶೀಯ ಆನ್‌ಲೈನ್ ವಹಿವಾಟುಗಳಿಗೆ ಮಾತ್ರ ಅನ್ವಯಿಸುತ್ತದೆ.

ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಓಂ ಪ್ರಕಾಶ್​ ಹತ್ಯೆ: ಏನಿದು ಸ್ಕಿಜೋಫ್ರೇನಿಯಾ ರೋಗ? ಎಷ್ಟು ಡೇಂಜರ್​?
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ಕಾರು ಅಡ್ಡಗಟ್ಟಿ ಮಧ್ಯದ ಬೆರಳು ತೋರಿಸಿ ನಿಂದಿನಿಸಿದ ಆಟೋ ಚಾಲಕ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ನಾಸಿಕ್‌ನಲ್ಲಿ ಕುಡಿಯುವ ನೀರಿಗಾಗಿ ಜೀವವನ್ನೇ ಪಣಕ್ಕಿಟ್ಟು ಬಾವಿಗಿಳಿದ ಮಹಿಳೆ
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಬೆಂಗಳೂರಿನಲ್ಲಿ ರಾಯಲ್ ಎನ್ಫೀಲ್ಡ್ ಬುಲೆಟ್ ಓಡಿಸಿದ ಪುಟ್ಟ ಬಾಲಕ!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಕೊಲೆಯಾದ ನಿವೃತ್ತ ಐಪಿಎಸ್​​ ಓಂಪ್ರಕಾಶ್​ ಫಾರ್ಮ್ ಹೌಸ್ ಹೇಗಿದೆ ನೋಡಿ...!
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
ಯುಎಸ್ ಉಪಾಧ್ಯಕ್ಷ ಜೆಡಿ. ವ್ಯಾನ್ಸ್ ಕುಟುಂಬಕ್ಕೆ ಶಾಸ್ತ್ರೀಯ ನೃತ್ಯದ ಸ್ವಾಗತ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
VIDEO: ಮೊದಲು ಕಿತ್ತಾಟ... ಆಮೇಲೆ ಸ್ನೇಹಹಸ್ತ: ಇದು ವಿರಾಟ್ ಕೊಹ್ಲಿ
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
ಹುಲಿಯನ್ನೇ ಅಟ್ಟಾಡಿಸಿದ ಒಂಟಿ ಸಲಗ: ಅಪರೂಪದ ವಿಡಿಯೋ ವೈರಲ್​
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
VIDEO: ಅಣ್ಣನ ಬ್ಯಾಟಿಂಗ್ ಎಂಟ್ರಿಗೆ ಬಿಕ್ಕಳಿಸಿ ಅತ್ತ ತಮ್ಮ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ
‘ನಾನು ಶಿವನ ಭಕ್ತ, ಅದಕ್ಕಾಗಿ ಇಲ್ಲಿಗೆ ಬಂದೆ’; ಮಹಾಕಾಳೇಶ್ವರ ದೇವಾಲಯ ಭೇಟಿ