AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಸ ನಿಯಮ: ಟೋಕನೈಜೇಶನ್​​ಗೆ ಅಂತಿಮ ದಿನಾಂಕ ನಿಗದಿಪಡಿಸಿದ ಆರ್​ಬಿಐ

ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಬಳಕೆದಾರರು ಸೆಪ್ಟೆಂಬರ್ 30, 2022 ರೊಳಗೆ ಕಾರ್ಡಗಳನ್ನು ಟೋಕನೈಜೇಶನ್​​ಗೆ ಬದಲಾಯಿಸಿಕೊಳ್ಳಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ ಗಡುವು ನೀಡಿದೆ.

ಕ್ರೆಡಿಟ್ ಮತ್ತು ಡೆಬಿಟ್ ಕಾರ್ಡ್ ಹೊಸ ನಿಯಮ: ಟೋಕನೈಜೇಶನ್​​ಗೆ ಅಂತಿಮ ದಿನಾಂಕ ನಿಗದಿಪಡಿಸಿದ ಆರ್​ಬಿಐ
ಸಾಂಧರ್ಬಿಕ ಚಿತ್ರ
TV9 Web
| Updated By: ವಿವೇಕ ಬಿರಾದಾರ|

Updated on: Aug 23, 2022 | 3:13 PM

Share

ನವದೆಹಲಿ: ಕ್ರೆಡಿಟ್ (Credit Card) ಮತ್ತು ಡೆಬಿಟ್ ಕಾರ್ಡ್ (Debit Card) ಬಳಕೆದಾರರು ಸೆಪ್ಟೆಂಬರ್ 30, 2022 ರೊಳಗೆ ಕಾರ್ಡಗಳನ್ನು ಟೋಕನೈಜೇಶನ್​​ಗೆ ಬದಲಾಯಿಸಿಕೊಳ್ಳಬೇಕೆಂದು ಭಾರತೀಯ ರಿಸರ್ವ್ ಬ್ಯಾಂಕ್ (RBI) ಗಡುವು ನೀಡಿದೆ. ಗ್ರಾಹಕರ ವಹಿವಾಟುಗಳನ್ನು ಸುರಕ್ಷಿತವಾಗಿಡಲು ಆರ್​ಬಿಐ ಹೊಸ ವ್ಯವಸ್ಥೆಯನ್ನು ಆರಂಭಿಸಿದೆ. ಟೋಕನೈಜೇಶನ್​ನಿಂದ ಕಾರ್ಡ್ ವಿವರಗಳನ್ನು ಎನ್‌ಕ್ರಿಪ್ಟ್ ಮಾಡಿ ಟೋಕನ್​ಆಗಿ ಸಂಗ್ರಹಿಸಲಾಗುತ್ತದೆ.

ಇದರಿಂದ ಗ್ರಾಹಕರು ವಿವರಗಳನ್ನು ಬಹಿರಂಗಪಡಿಸದೆ ಪಾವತಿ ಮಾಡಬಹುದಾಗಿದೆ. ಆರ್‌ಬಿಐ ಮಾರ್ಗಸೂಚಿ ಪ್ರಕಾರ ಕಾರ್ಡ್ ಡೇಟಾವನ್ನು ಎನ್‌ಕ್ರಿಪ್ಟ್ ಮಾಡಿದ ಡಿಜಿಟಲ್ ಟೋಕನ್‌ನೊಂದಿಗೆ ಬದಲಾಯಿಸುವುದನ್ನು ಕಡ್ಡಾಯಗೊಳಿಸಿದೆ.

ಹೆಚ್ಚಾಗಿ ಇದು ಕಾರ್ಡ್‌ದಾರರ ಆನ್‌ಲೈನ್ ವಹಿವಾಟಿನ ಅನುಭವಗಳನ್ನು ಸುಧಾರಿಸುತ್ತದೆ ಮತ್ತು ಆನ್‌ಲೈನ್ ವಂಚಕರಿಂದ ನಿಮ್ಮ ಕಾರ್ಡ್ ಮಾಹಿತಿಯನ್ನು ರಕ್ಷಿಸುತ್ತದೆ. ಅಸುರಕ್ಷಿತ ಆನ್‌ಲೈನ್ ಅಭ್ಯಾಸಗಳಿಗೆ ಪ್ರತಿಕ್ರಿಯೆಯಾಗಿ ಗ್ರಾಹಕರನ್ನು ರಕ್ಷಿಸಲು ಆರ್​ಬಿಐ ಹೊಸ ನಿಯಮಗಳನ್ನು ಆರ್​​ಬಿಐ ರಚಿಸಿದೆ.

ಟೋಕನೈಜೇಶನ್ ಎಂದರೆ ನಿಮ್ಮ ಕಾರ್ಡ್ ವಿವರಗಳನ್ನು ಟೋಕನೊಂದಿಗೆ ಬದಲಾಯಿಸಿಕೊಳ್ಳುವುದೇ ಟೋಕನೈಜೇಶನ್. ಇದರಿಂದ ಇನ್ನೂ ಮುಂದೆ ಸಂಪರ್ಕರಹಿತ ಬ್ಯಾಂಕಿಂಗ್​ಗೆ ಸಿವಿವಿ ನೀಡಬೇಕಾಗಿಲ್ಲ. ಇದು ಸಂಪೂರ್ಣವಾಗಿ ನೆಟ್​ವರ್ಕ ಮೂಲಕ ಕಾರ್ಯನಿರ್ವಹಿಸುತ್ತದೆ. ಟೋಕನೈಜೇಶನ್​ನಿಂದ ಡೇಟಾ ಕಳ್ಳತನವನ್ನು ತಪ್ಪಿಸಿಕೊಳ್ಳಬಹುದಾಗಿದೆ.

ಆರ್‌ಬಿಐ ನೀಡಿರುವ ಮಾರ್ಗಸೂಚಿಗಳ ಪ್ರಕಾರ, ಡೆಬಿಟ್ ಅಥವಾ ಕ್ರೆಡಿಟ್ ಕಾರ್ಡ್ ಮಾಹಿತಿಯನ್ನು ಕಾರ್ಡ್ ವಿತರಕರು ಅಥವಾ ನೆಟ್‌ವರ್ಕ್‌ಗಳನ್ನು ಹೊರತುಪಡಿಸಿ ಯಾವುದೇ ಘಟಕದಿಂದ ಸಂಗ್ರಹಿಸುವಹಾಗಿಲ್ಲ. ಈಗಾಗಲೇ ಸಂಗ್ರಹವಾಗಿರುವ ಯಾವುದೇ ಡೇಟಾವನ್ನು ಅಳಿಸುವುದು ಅವಶ್ಯಕ.

ಟೋಕನೈಸೇಶನ್ ವ್ಯವಸ್ಥೆಯು ಸಂಪೂರ್ಣವಾಗಿ ಉಚಿತವಾಗಿದೆ. ಟೋಕನೈಸೇಶನ್ ದೇಶೀಯ ಆನ್‌ಲೈನ್ ವಹಿವಾಟುಗಳಿಗೆ ಮಾತ್ರ ಅನ್ವಯಿಸುತ್ತದೆ.

ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ರಷ್ಯಾ-ಉಕ್ರೇನ್ ಶಾಂತಿ ಹಾದಿಯಲ್ಲಿ ಸಾಗುತ್ತೆ ಎನ್ನುವ ನಂಬಿಕೆ ಇದೆ: ಮೋದಿ
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಸಾಫ್ಟವೇರ್‌ ಹುಡ್ಗ ,ನಿಂತಿದ್ದವನು ಮೆಟ್ರೋ ಹಳಿಗೆ ಸಡನ್ ಜಿಗಿದ್ಬಿಟ್ಟ!
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಡಿಕೆಶಿ ನಿವಾಸಕ್ಕೆ ದೌಡಾಯಿಸಿ ಪ್ರಿಯಾಂಕ್ ಖರ್ಗೆ: ಒಂದು ತಾಸು ಮಾತುಕತೆ
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಮಹಾತ್ಮ ಗಾಂಧಿ ಸ್ಮಾರಕಕ್ಕೆ ಗೌರವ ಸಲ್ಲಿಸಿದ ರಷ್ಯಾ ಅಧ್ಯಕ್ಷ ಪುಟಿನ್
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ವಧು-ವರರ ಆನ್​ಲೈನ್ ಆರತಕ್ಷತೆ! ವಧುವಿನ ತಂದೆ ಹೇಳಿದ್ದೇನು ನೋಡಿ
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ದೇವಸ್ಥಾನಗಳಲ್ಲಿ ಮದುವೆ ಮಾಡಿಸಲು ಹಿಂದೇಟು; ಅರ್ಚಕರ ನಿರ್ಧಾರಕ್ಕೆ ಕಾರಣ ಏನು
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ಬೆಂಗಳೂರಿನ ಹಲವೆಡೆ ತುಂತುರು ಮಳೆ, ಚುಮು ಚುಮು ಚಳಿ
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ತುಮಕೂರು: ಎಟಿಎಂ ಮಷಿನನ್ನೇ ಹೊತ್ತಯ್ದು ಕಸದ ಬುಟ್ಟಿ ಬಳಿ ಬಿಟ್ಟ ಕಳ್ಳರು!
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಉತ್ತರಾಖಂಡ: ಕಂದಕಕ್ಕೆ ಬಿದ್ದ ಬೊಲೆರೊ, ಐವರು ಸಾವು
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ
ಇಂಡಿಗೋ ವಿಮಾನ ರದ್ದು: ಕೆಎಸ್​ಆರ್​ಟಿಸಿ ಬಿಎಂಟಿಸಿ ಆದಾಯಕ್ಕೂ ಹೊಡೆತ