AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

SBI Personal Loan: ಎಸ್​ಬಿಐ ಯೋನೋ ಮೂಲಕ ಫಟಾಫಟ್​ ಪರ್ಸನಲ್ ಲೋನ್ ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್

ಯೋನೋ ಮೂಲಕ ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ ನೀಡುವುದಾಗಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾವು ಘೋಷಣೆ ಮಾಡಿದೆ.

SBI Personal Loan: ಎಸ್​ಬಿಐ ಯೋನೋ ಮೂಲಕ ಫಟಾಫಟ್​ ಪರ್ಸನಲ್ ಲೋನ್ ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್
ಸಾಂದರ್ಭಿಕ ಚಿತ್ರ
TV9 Web
| Edited By: |

Updated on: May 23, 2022 | 6:23 PM

Share

ಸ್ಟೇಟ್ ಬ್ಯಾಂಕ್ ಬ್ಯಾಂಕ್ ಆಫ್ ಇಂಡಿಯಾ (State Bank Of India) ಸೋಮವಾರ ಘೋಷಣೆ ಮಾಡಿದ ಪ್ರಕಾರ, ಯೋನೋ ಪ್ಲಾಟ್​ಫಾರ್ಮ್​ನಲ್ಲಿ (Yono) ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ ಪರಿಚಯಿಸುತ್ತಿದೆ. ಈ ಮೂಲಕ ಅರ್ಹ ಗ್ರಾಹಕರಿಗೆ 35 ಲಕ್ಷ ರೂಪಾಯಿ ತನಕ ವೈಯಕ್ತಿಕ ಸಾಲ (Personal Loan) ದೊರೆಯುತ್ತದೆ. ಬ್ಯಾಂಕ್ ತಿಳಿಸಿರುವ ಪ್ರಕಾರ, ಈ ಸಾಲದ ಉತ್ಪನ್ನವು ವೇತನದಾರ ಗ್ರಾಹಕರಿಗಾಗಿ ಇದೆ. ಎಕ್ಸ್​ಪ್ರೆಸ್ ಕ್ರೆಡಿಟ್ ಇದೀಗ ಡಿಜಿಟಲ್ ರೂಪದಲ್ಲಿ ಸಿಗುತ್ತಿದ್ದು, ಗ್ರಾಹಕರು ಯೋನೋ ಮೂಲಕ ಇದನ್ನು ಪಡೆಯಬಹುದು. ಇದು ಶೇ 100ರಷ್ಟು ಕಾಗದರಹಿತ ಆಗಿರುತ್ತದೆ. ಮೊದಲಿಂದ ಕೊನೆ ತನ ಎಂಟು ಹಂತದ ಪಯಣ ಆಗಿರಲಿದೆ ಮತ್ತು ಡಿಜಿಟಲ್ ಅನುಭವ ನೀಡಲಿದೆ.

ರಿಯಲ್ ಟೈಮ್ ಎಕ್ಸ್​ಪ್ರೆಸ್ ಸಾಲದ ಅಡಿಯಲ್ಲಿ ಕೇಂದ್ರ, ರಾಜ್ಯ ಸರ್ಕಾರ ಮತ್ತು ರಕ್ಷಣಾ ವಲಯದ ವೇತನದಾರ ಗ್ರಾಹಕರು ವೈಯಕ್ತಿಕ ಸಾಲ ಪಡೆಯುವ ಸಲುವಾಗಿ ಎಸ್​ಬಿಐ ಶಾಖೆಗೆ ಭೇಟಿ ನೀಡುವ ಅಗತ್ಯ ಇಲ್ಲ. ಕ್ರೆಡಿಟ್ ಪರಿಶೀಲನೆ, ಅರ್ಹತೆ, ವಿತರಣೆ ಮತ್ತು ದಾಖಲಾತಿಗಳ ಸಂಗ್ರಹ ಎಲ್ಲವೂ ರಿಯಲ್​ಟೈಮ್​ನಲ್ಲಿ ಡಿಜಿಟಲ್​ ಆಗಿ ಮುಗಿಯುತ್ತದೆ, ಎನ್ನಲಾಗಿದೆ.

ಎಸ್​ಬಿಐ ಅಧ್ಯಕ್ಷ ದಿನೇಶ್ ಖರ ಮಾತನಾಡಿ, ರಿಯಲ್ ಟೈಮ್ ಎಕ್ಸ್​ಪ್ರೆಸ್ ಕ್ರೆಡಿಟ್ ಸಾಲ ವ್ಯವಸ್ಥೆಯನ್ನು ರಿಯಲ್​ಟೈಮ್​ನಲ್ಲಿ ನಮ್ಮ ಅರ್ಹ ಗ್ರಾಹಕರಿಗೆ ಯೋನೋ ಮೂಲಕ ಪರಿಚಯಿಸುತ್ತಿರುವುದಕ್ಕೆ ಸಂತೋಷವಾಗಿದೆ ಎಂದಿದ್ದಾರೆ. ಈ ಎಕ್ಸ್​ಪ್ರೆಸ್ ಕ್ರೆಡಿಟ್ ಉತ್ಪನ್ನದ ಮೂಲಕ ಸಾಲ ಪ್ರಕ್ರಿಯೆಯಲ್ಲಿ ನಮ್ಮ ಗ್ರಾಹಕರಿಗೆ ಡಿಜಿಟಲ್, ತಡೆರಹಿತ ಮತ್ತು ಕಾಗದರಹಿತ ಅನುಭವವನ್ನು ದೊರಕಿಸುತ್ತದೆ. ನಾವು ಎಸ್​ಬಿಐನಲ್ಲಿ ಬ್ಯಾಂಕಿಂಗ್ ಸರಳಗೊಳಿಸಲು ನಿರಂತರವಾಗಿ ತಂತ್ರಜ್ಞಾನ ಮುಂಚೂಣಿಯ ವಿಸ್ತೃತ ಡಿಜಿಟಲ್​ ಬ್ಯಾಂಕಿಂಗ್ ಅನುಭವವನ್ನು ಗ್ರಾಹಕರಿಗೆ ಒದಗಿಸುತ್ತಿದ್ದೇವೆ, ಎಂದು ಹೇಳಿದ್ದಾರೆ.

ಇನ್ನಷ್ಟು ವಾಣಿಜ್ಯ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ, ಪ್ರಮುಖ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

ಇದನ್ನೂ ಓದಿ: Electric Car Loan: ಎಸ್​ಬಿಐನಿಂದ ಎಲೆಕ್ಟ್ರಿಕ್ ಕಾರು ಸಾಲ ಶೇ 7.25 ಬಡ್ಡಿ ದರದಿಂದ ಆರಂಭ

Follow Us
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
ಕೇದಾರನಾಥಕ್ಕೆ ಹೊರಟಿದ್ದೀರಾ? ಮೊದಲ ದಿನವೇ ಭಕ್ತಸಾಗರದಿಂದ ಕಾಲ್ತುಳಿತ
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
20 ಎಸೆತಗಳಲ್ಲಿ ಅರ್ಧಶತಕ ಚಚ್ಚಿದ ದೇವದತ್ ಪಡಿಕ್ಕಲ್
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಬಿಸಿಲಿಗೆ ಕೆಂಗಟ್ಟ ಚಿಕ್ಕಮಗಳೂರು ಜನರಿಗೆ ತಂಪೆರೆದ ವರುಣ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಅತ್ತೆಯ ಸಪೋರ್ಟ್ ಜತೆಗೆ ಎರಡು ಮಕ್ಕಳನ್ನ ಕಟ್ಟಿಕೊಂಡು ಚಿನ್ನದ ಗೆದ್ದ ಅಯಿಷಾ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಒಳಮೀಸಲಾತಿ ಯಾರಿಗೆ ಎಷ್ಟು? ಹೇಗೆ ಜಾರಿಯಾಗುತ್ತೆ? ವಿವರಿಸಿದ ಸಚಿವ ಮಹದೇವಪ್ಪ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಸಿಮೆಂಟ್ ಟ್ಯಾಂಕರ್, ಬಸ್ ಹಾಗೂ ಆಟೋ ನಡುವೆ ಸರಣಿ ಅಪಘಾತ: 10 ಜನರಿಗೆ ಗಾಯ
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ಬಿಜೆಪಿಗೆ ಸೇರ್ಪಡೆಯಾದ ರಾಘವ್ ಚಡ್ಡಾ, ಸಂದೀಪ್ ಪಾಠಕ್, ಅಶೋಕ್ ಮಿತ್ತಲ್
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ರಾಜ್​ಕುಮಾರ್ ಹುಟ್ಟುಹಬ್ಬ: ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಿದ ಅಶ್ವಿನಿ
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಗುಡ್​ ನ್ಯೂಸ್: 56,400 ಹುದ್ದೆಗಳ ನೇಮಕಾತಿಗೆ ಗ್ರೀನ್ ಸಿಗ್ನಲ್
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ
ಒಳ ಮೀಸಲಾತಿ ಗೊಂದಲಕ್ಕೆ ತೆರೆ ಎಳೆದ ರಾಜ್ಯ ಸರ್ಕಾರ