AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಹತ್ತು ವರ್ಷದಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್ ನಿಷ್ಕ್ರಿಯವಾಗುತ್ತಾ? ಯುಐಡಿಎಐ ಕೊಟ್ಟ ಮಾಹಿತಿ ಇದು

Aadhaar card not updated for 10 years: ಹತ್ತು ವರ್ಷದಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್​ಗಳು ಜೂನ್ 14 ರ ಬಳಿಕ ನಿಷ್ಕ್ರಿಯಗೊಳ್ಳಲಿವೆ ಎನ್ನುವಂತಹ ವದಂತಿಯೊಂದು ಸೋಷಿಯಲ್ ಮೀಡಿಯಾದಲ್ಲಿ ಹರಿದಾಡುತ್ತಿದೆ. ಆದರೆ ಯುಐಡಿಎಐ ಇದು ಸುಳ್ಳು ಸುದ್ದಿ ಎಂದು ಹೇಳಿ ಸ್ಪಷ್ಟಪಡಿಸಿದೆ. ಜೂನ್ 14ರ ಬಳಿಕ ಆನ್ಲೈನ್​ನಲ್ಲಿ ಆಧಾರ್ ಕಾರ್ಡ್ ವಿವರವನ್ನು ಉಚಿತವಾಗಿ ಅಪ್​ಡೇಟ್ ಮಾಡಲು ಆಗುವುದಿಲ್ಲ. ಅದನ್ನೇ ತಿರುಚಿ ಸುಳ್ಳು ಹಬ್ಬಿಸಲಾಗುತ್ತಿದೆ.

ಹತ್ತು ವರ್ಷದಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್ ನಿಷ್ಕ್ರಿಯವಾಗುತ್ತಾ? ಯುಐಡಿಎಐ ಕೊಟ್ಟ ಮಾಹಿತಿ ಇದು
ಆಧಾರ್ ಕಾರ್ಡ್
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 23, 2024 | 12:56 PM

Share

ಹತ್ತಕ್ಕೂ ಹೆಚ್ಚು ವರ್ಷಗಳ ಹಿಂದಿನ ಆಧಾರ್ ಕಾರ್ಡ್ ಅನ್ನು ಅಪ್​ಡೇಟ್ ಮಾಡಿಸಿ ಎಂದು ಸರ್ಕಾರ ಸಾಕಷ್ಟು ಬಾರಿ ಕೇಳುತ್ತಿದೆ. ಕಳೆದ 10 ವರ್ಷದಿಂದ ಆಧಾರ್ ಕಾರ್ಡ್ ಅಪ್​ಡೇಟ್ ಮಾಡದವರಿಗೆ (Aadhaar card update) ಇದು ಅನ್ವಯ ಆಗುತ್ತದೆ. ಒಂದು ವೇಳೆ ಹತ್ತು ವರ್ಷದಿಂದ ಅಪ್​ಡೇಟ್ ಆಗದಿದ್ದರೆ ಅಂಥ ಆಧಾರ್ ಕಾರ್ಡ್ ಏನಾಗುತ್ತದೆ? ಇತ್ತೀಚೆಗೆ ಸೋಷಿಯಲ್ ಮೀಡಿಯಾದಲ್ಲಿ ಇಂಥದ್ದೊಂದು ಪೋಸ್ಟ್ ವೈರಲ್ ಆಗಿದೆ. ಜೂನ್ 14ರ ಬಳಿಕ ಇಂತಹ ಆಧಾರ್ ಕಾರ್ಡ್​ಗಳು ನಿಷ್ಕ್ರಿಯಗೊಳ್ಳಲಿವೆ ಎಂದು ಈ ವೈರಲ್ ಪೋಸ್ಟ್​ನಲ್ಲಿ ಬರೆಯಲಾಗಿದೆ. ಆದರೆ, ಆಧಾರ್ ಕಾರ್ಡ್ ರೂಪಿಸಿರುವ ಯುಐಡಿಎಐ ಸಂಸ್ಥೆ ಈ ಅಂಶವನ್ನು ಅಲ್ಲಗಳೆದಿದೆ. ಹತ್ತು ವರ್ಷದಿಂದ ಅಪ್ಡೇಟ್ ಆಗದ ಆಧಾರ್ ಕಾರ್ಡ್ ನಿಷ್ಕ್ರಿಯಗೊಳ್ಳುತ್ತದೆ ಎನ್ನುವ ಸುದ್ದಿ ಸತ್ಯಕ್ಕೆ ದೂರವಾದುದು ಎಂದು ಯುಐಡಿಎಐ ಹೇಳಿದೆ.

ಹತ್ತು ವರ್ಷವಾದರೂ ಅಪ್​ಡೇಟ್ ಆಗದ ಆಧಾರ್ ಕಾರ್ಡ್​ಗೆ ಏನೂ ಆಗುವುದಿಲ್ಲ. ಅದು ಚಾಲನೆಯಲ್ಲಿ ಇರುತ್ತದೆ ಎಂದು ಯುಐಡಿಎಐ ಸ್ಪಷ್ಟಪಡಿಸಿದೆ.

ಜೂನ್ 14 ರ ಡೆಡ್​ಲೈನ್ ಸುದ್ದಿ ಹಿಂದಿನ ಮರ್ಮವೇನು?

ವಾಸ್ತವದಲ್ಲಿ ಆಧಾರ್ ವಿವರವನ್ನು ಆನ್​ಲೈನ್​ನಲ್ಲಿ ಉಚಿತವಾಗಿ ಮಾಡುವ ಅವಕಾಶವನ್ನು ಸರ್ಕಾರ ಕಲ್ಪಿಸಿದೆ. ಇದಕ್ಕೆ ಗಡುವನ್ನು ಹಲವು ಬಾರಿ ವಿಸ್ತರಿಸಲಾಗಿದೆ. ಹೊಸ ಗಡುವು ಇರುವುದು 2024ರ ಜೂನ್ 14ಕ್ಕೆ. ಅಲ್ಲಿಯವರೆಗೆ ಆನ್​ಲೈನ್​ನಲ್ಲಿ ಶುಲ್ಕ ಇಲ್ಲದೇ ಉಚಿತವಾಗಿ ಆಧಾರ್ ವಿವರವನ್ನು ಅಪ್​ಡೇಟ್ ಮಾಡಬಹುದು. ಕೆಲವರು ಇದನ್ನೇ ತಿರುಚಿ, ಹತ್ತು ವರ್ಷದಿಂದ ಅಪ್​ಡೇಟ್ ಆಗದ ಆಧಾರ್ ಕಾರ್ಡ್ ಜೂನ್ 14ರ ಬಳಿಕ ನಿಷ್ಕ್ರಿಯಗೊಳ್ಳುತ್ತದೆ ಎನ್ನುವಂತಹ ವದಂತೆ ಹಬ್ಬಿಸಿರಬಹುದು ಎನ್ನಲಾಗಿದೆ.

ಇದನ್ನೂ ಓದಿ: ಆಧಾರ್ ದುರ್ಬಳಕೆ; ಕಾದಿದೆ ಕಠಿಣ ಶಿಕ್ಷೆ; ಯಾವ್ಯಾವ ಅಪರಾಧಕ್ಕೆ ಯಾವ ಶಿಕ್ಷೆ, ಇಲ್ಲಿದೆ ಪಟ್ಟಿ

ಈಗ ಆನ್​ಲೈನ್​ನಲ್ಲಿ ಆಧಾರ್ ವಿವರನ್ನು ಉಚಿತವಾಗಿ ಅಪ್​ಡೇಟ್ ಮಾಡಬಹುದು. ಆಧಾರ್ ಸೆಂಟರ್​ಗೆ ಹೋಗಿಯೂ ಅಪ್​ಡೇಟ್ ಮಾಡಿಸಬಹುದು. ಆದರೆ, ಅಲ್ಪಮೊತ್ತದ ಶುಲ್ಕ ಕೊಡಬೇಕು. ಜೂನ್ 14ರ ಬಳಿಕವೂ ಆನ್​ಲೈನ್​ನಲ್ಲಿ ಆಧಾರ್ ಅಪ್​ಡೇಟ್ ಮಾಡಬಹುದು. ಆದರೆ ಉಚಿತ ಇರುವುದಿಲ್ಲ. 50 ರೂ ಅಥವಾ ಅದರ ಆಸುಪಾಸಿನ ಮೊತ್ತದ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

ಆನ್​ಲೈನ್​ನಲ್ಲಿ ಆಧಾರ್ ವಿವರ ಅಪ್​ಡೇಟ್ ಮಾಡುವುದು ಹೇಗೆ?

  • ಯುಐಡಿಎಐನ ಸೆಲ್ಫ್ ಸರ್ವಿಸ್ ಪೋರ್ಟಲ್ ssup.uidai.gov.in/ssup/ ಗೆ ಹೋಗಿ.
  • ಆಧಾರ್ ನಂಬರ್, ಒಟಿಪಿ ಬಳಸಿ ಲಾಗಿನ್ ಆಗಿ
  • ಲಾಗಿನ್ ಆದ ಬಳಿಕ ‘ಸರ್ವಿಸಸ್’ ಟ್ಯಾಬ್ ಅಡಿಯಲ್ಲಿ ‘ಅಪ್​ಡೇಟ್ ಆಧಾರ್ ಆನ್ಲೈನ್’ ಅನ್ನು ಆಯ್ಕೆ ಮಾಡಿ.
  • ‘ಪ್ರೊಸೀಡ್ ಟು ಅಪ್ಡೇಟ್ ಆಧಾರ್’ ಅನ್ನು ಕ್ಲಿಕ್ ಮಾಡಿ.
  • ಬಳಿಕ ನಿಮಗೆ ಯಾವ ವಿವರ ಬದಲಿಸಬೇಕೋ ಅದನ್ನು ಆಯ್ದುಕೊಳ್ಳಿ.
  • ಆಧಾರ್ ಕಾರ್ಡ್​ನಲ್ಲಿರುವ ನಿಮ್ಮ ಹೆಸರು ಕಾಣುತ್ತದೆ.
  • ನೀವು ಬೇಕಾದ ವಿವರವನ್ನು ಬದಲಿಸಬಹುದು. ಅದಕ್ಕೆ ಪೂರಕವಾದ ದಾಖಲೆಗಳನ್ನು ಅಪ್​ಲೋಡ್ ಮಾಡಬೇಕಾಗುತ್ತದೆ.
  • ವಿವರ ಬದಲಾವಣೆಯನ್ನು ಖಚಿತಪಡಿಸಿದರೆ ಅದು ಅಪ್​ಡೇಟ್ ಆಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
ಕೆಡಿ ಸಿನಿಮಾದಲ್ಲಿ ಇರುವ ಕೆಡಿಗಳು ಎಷ್ಟು ಜನ? ಪೂರ್ತಿ ಪಟ್ಟಿ ನೀಡಿದ ರಮೇಶ್
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
SSLC Results 2026: ಹಿಂದಿ ವಿಷಯಕ್ಕೆ ಗ್ರೇಡೋ, ಅಂಕನೋ? ಗೊಂದಲಗಳಿಗೆ ತೆರೆ
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಅದ್ಭುತ... ಅತ್ಯದ್ಭುತ: ರಿಷಭ್​ ಸ್ಪೈಡಿ ಕ್ಯಾಚ್​ಗೆ ದಂಗಾದ ಪ್ರೇಕ್ಷಕರು
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಮದುವೆ ಸಂಭ್ರಮದಲ್ಲಿ ಕಾರು ಡಿಕ್ಕಿಯಾಗಿ 25 ಅಡಿ ಮೇಲೆ ಹಾರಿದ ಕ್ಯಾಮೆರಾಮನ್
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಅಮರಾವತಿ ಲೈಂಗಿಕ ಹಗರಣದ ಆರೋಪಿಗೆ ನಗರದ ರಸ್ತೆಗಳಲ್ಲಿ ಮೆರವಣಿಗೆ
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಖಾಲಿ ಕೊಡ ಹಿಡಿದು ಸಚಿವ ತಂಗಡಗಿ ಕಾರಿಗೆ ಮುತ್ತಿಗೆ ಹಾಕಿದ ಮಹಿಳೆಯರು
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು