AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಚಿನ್ನ, ಬೆಳ್ಳಿ ಬೆಲೆ ಸತತವಾಗಿ ಏರಿಕೆ ಆಗುತ್ತಿರುವುದು ಯಾಕೆ? ಅಮೆರಿಕದಲ್ಲಿನ ಈ ವಿದ್ಯಮಾನ ಕಾರಣವಾ?

Reasons why gold, silver prices are going down: ಚಿನ್ನ ಮತ್ತು ಬೆಳ್ಳಿ ಬೆಲೆ ಕಳೆದ ಕೆಲ ದಿನಗಳಿಂದ ನಿರಂತರವಾಗಿ ಏರುತ್ತಿದೆ. ವಾರದ ಮುಂಚೆ ಇಳಿಕೆಯ ಹಾದಿಯಲ್ಲಿದ್ದ ಚಿನ್ನದ ಬೆಲೆಗೆ ದಿಢೀರ್ ಬೇಡಿಕೆ ಬಂದಿದೆ. ಇದಕ್ಕೆ ಕಾರಣ ಅಮೆರಿಕದಲ್ಲಿ ಬಡ್ಡಿದರ ಇಳಿಕೆ ಮಾಡುವ ಬಗ್ಗೆ ಸುಳಿವು ಸಿಕ್ಕಿರುವುದು. ಹಲವು ಹೂಡಿಕೆದಾರರು ಚಿನಿವಾರಪೇಟೆಯತ್ತು ಕೈಚಾಚತೊಡಗಿದ್ದಾರೆ.

ಚಿನ್ನ, ಬೆಳ್ಳಿ ಬೆಲೆ ಸತತವಾಗಿ ಏರಿಕೆ ಆಗುತ್ತಿರುವುದು ಯಾಕೆ? ಅಮೆರಿಕದಲ್ಲಿನ ಈ ವಿದ್ಯಮಾನ ಕಾರಣವಾ?
ಚಿನ್ನ
ಸುಗ್ಗನಹಳ್ಳಿ ವಿಜಯಸಾರಥಿ
|

Updated on:Jul 18, 2024 | 12:44 PM

Share

ನವದೆಹಲಿ, ಜುಲೈ 18: ಕಳೆದ ಕೆಲ ದಿನಗಳಿಂದ ಚಿನ್ನದ ಬೆಲೆ ಮತ್ತೊಮ್ಮೆ ಗಣನೀಯ ಏರಿಕೆಯ ಹಾದಿಗೆ ಬಂದಿದೆ. ಚಿನ್ನದ ಬೆಲೆ ಸತತ ಮೂರು ದಿನಗಳ ಕಾಲ ಏರುಗತಿಯಲ್ಲಿದೆ. ಅಂತಾರಾಷ್ಟ್ರೀಯ ವಿದ್ಯಮಾನಗಳಿಗೆ ಚಿನಿವಾರ ಪೇಟೆ ಸೂಕ್ಷ್ಮವಾಗಿ ಸ್ಪಂದಿಸುತ್ತದೆ. ಅದರಲ್ಲೂ ಅಮೆರಿಕದದ ವಿದ್ಯಮಾನಗಳ ಪ್ರಭಾವ ಈ ಮಾರುಕಟ್ಟೆ ಮೇಲೆ ಬಹಳ ಇದೆ. ಈಗ ಚಿನ್ನ ಮತ್ತು ಬೆಳ್ಳಿ ಬೆಲೆ ಏರಿಕೆ ಟ್ರೆಂಡ್​ಗೆ ಇದೇ ಅಮೆರಿಕವೇ ಮೂಲವಾಗಿದೆ.

ಅಮೆರಿಕದ ಫೆಡರಲ್ ರಿಸರ್ವ್ ಮುಖ್ಯಸ್ಥರು ಇತ್ತೀಚೆಗೆ ಬಡ್ಡಿದರ ಇಳಿಸುವ ಸುಳಿವು ನೀಡಿದ್ದರು. ಹಣದುಬ್ಬರ ಏರಿಕೆ ಆಗಲಿ ಬಿಡಲಿ ಆರ್ಥಿಕ ಬೆಳವಣಿಗೆಗೆ ಅನುವು ಮಾಡಿಕೊಡುವ ಸಲುವಾಗಿ ಬಡ್ಡಿದರ ಕಡಿಮೆ ಮಾಡುವ ಬಗ್ಗೆ ಆಲೋಚಿಸುತ್ತಿರುವುದಾಗಿ ಪೋವೆಲ್ ಅವರು ಹೇಳಿದ್ದರು. ಅಮೆರಿಕದಲ್ಲಿ ಸದ್ಯ ಬಡ್ಡಿದರ ಗರಿಷ್ಠ ಮಟ್ಟದಲ್ಲಿ ಇದೆ. ಈ ವರ್ಷದೊಳಗೆ ದರ ಕಡಿಮೆ ಮಾಡುವುದು ಖಚಿತವಾಗಿದೆ. ಇದು ಚಿನ್ನದ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ.

ಇದನ್ನೂ ಓದಿ: Gold Silver Price on 18th July: ಚಿನ್ನ ಮತ್ತು ಬೆಳ್ಳಿ ಬೆಲೆ ಎರಡೂ ಭರ್ಜರಿ ಹೆಚ್ಚಳ

ಬಡ್ಡಿದರ ಕಡಿಮೆ ಆದರೆ ಚಿನ್ನದ ಬೆಲೆ ಹೆಚ್ಚಳ ಯಾಕೆ?

ಚಿನ್ನ, ಬೆಳ್ಳಿ ಇತ್ಯಾದಿ ಅಮೂಲ್ಯ ವಸ್ತುಗಳು ಅನಿಶ್ಚಿತ ಪರಿಸ್ಥಿತಿಯಲ್ಲಿ ಬೇಡಿಕೆ ಪಡೆಯುತ್ತವೆ. ಹಣದುಬ್ಬರ ಹೆಚ್ಚಾದಾಗ, ಯುದ್ಧ ವಾತಾವರಣ ಇದ್ದಾಗ, ಆರ್ಥಿಕ ತುಮುಲಗಳಿದ್ದಾಗ ಇತ್ಯಾದಿ ಬಿಕ್ಕಟ್ಟುಗಳಲ್ಲಿ ಹೂಡಿಕೆದಾರರು ಚಿನ್ನದತ್ತ ಎಡೆತಾಕುತ್ತಾರೆ.

ಅಮೆರಿಕದಲ್ಲಿ ಬಡ್ಡಿದರ ಕಡಿಮೆ ಮಾಡಲಾಗುತ್ತದೆ ಎಂದರೆ ಅಲ್ಲಿನ ಡೆಟ್ ಫಂಡ್​ಗಳಲ್ಲಿನ ಇಳುವರಿ (ರಿಟರ್ನ್ಸ್) ಕಡಿಮೆ ಆಗುತ್ತದೆ. ಹೀಗಾಗಿ, ಅಲ್ಲಿ ಹೂಡಿಕೆ ಮಾಡಿದ್ದವರು ಹೆಚ್ಚಿನ ರಿಟರ್ನ್ ನಿರೀಕ್ಷೆಯಲ್ಲಿ ಷೇರು ಮಾರುಕಟ್ಟೆಗೋ, ಚಿನಿವಾರಪೇಟೆಗೋ ವಲಸೆ ಹೋಗಬಹುದು.

ಇದನ್ನೂ ಓದಿ: ಆಭರಣಕ್ಕೆ ಮೇಕಿಂಗ್ ಚಾರ್ಜಸ್, ವೇಸ್ಟೇಜ್ ಚಾರ್ಜಸ್ ಲೆಕ್ಕಾಚಾರ ಹೇಗಿರುತ್ತೆ? ಒಡವೆ ಖರೀದಿಸುವ ಮುನ್ನ ಈ ಸಂಗತಿ ತಿಳಿದಿರಿ

ಮತ್ತೊಂದು ಕಾರಣ ಎಂದರೆ ಡಾಲರ್ ಮೌಲ್ಯ ತುಸು ಕುಂದಿರುವುದು. ಇವೆಲ್ಲಾ ಸಂದರ್ಭಗಳಲ್ಲಿ ಹೂಡಿಕೆದಾರರಿಗೆ ಚಿನ್ನ ಸುರಕ್ಷಿತ ಆಯ್ಕೆಯಾಗಿ ಕಾಣುತ್ತದೆ. ಅಂತೆಯೇ, ಚಿನ್ನ, ಬೆಳ್ಳಿ ಇತ್ಯಾದಿ ಲೋಹಗಳ ಬೆಲೆ ಹೆಚ್ಚತೊಡಗಿದೆ. ಇದೇ ಜುಲೈ ಕೊನೆಯಲ್ಲಿ ಫೆಡರಲ್ ರಿಸರ್ವ್ ಸಭೆ ಇದ್ದು, ಹೊಸ ದರಗಳ ಘೋಷಣೆ ಮಾಡುವ ಸಾಧ್ಯತೆ ಇದೆ. ದರ ಕಡಿಮೆ ಮಾಡಿದರೆ ಚಿನ್ನದ ಬೆಲೆ ಇನ್ನಷ್ಟು ಹೆಚ್ಚಳ ಆಗುವ ಸಾಧ್ಯತೆ ಇದೆ. ಒಂದು ವೇಳೆ ದರ ಕಡಿಮೆ ಮಾಡದೇ ಇದ್ದರೆ ಚಿನ್ನ, ಬೆಳ್ಳಿ ಬೆಲೆ ಇಳಿಕೆ ಆಗಬಹುದು.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Published On - 12:30 pm, Thu, 18 July 24

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಕಿಡ್ನಿ ಆರೋಗ್ಯವಾಗಿರಬೇಕು ಅಂದ್ರೆ ಈ ಸಲಹೆಗಳನ್ನು ತಪ್ಪದೆ ಪಾಲಿಸಬೇಕು
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
ಶೇ. 55 ಅಂಕ ಪಡೆದ ಮಗನಿಗೆ ಅಪ್ಪ-ಅಮ್ಮ ಮಾಡಿದ್ದೇನು?
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
‘ಪೆದ್ದಿ’ ಚಿತ್ರದಲ್ಲಿ ಶಿವರಾಜ್​ಕುಮಾರ್ ಗತ್ತು ನೋಡಿ; ಮೇಕಿಂಗ್ ವಿಡಿಯೋ
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
ಮಂಗಳೂರು: ವಿಮಾನಗಳನ್ನ ಆಕಾಶದಲ್ಲೇ ಅಲೆದಾಡಿಸುತ್ತಿರುವ ಮಳೆರಾಯ!
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
‘ಲವ್ ಮಾಕ್ಟೆಲ್’ ಸೆಟ್​ನಲ್ಲಿ ದಿಲೀಪ್: ವಿಡಿಯೋ ಹಂಚಿಕೊಂಡ ಡಾರ್ಲಿಂಗ್ ಕೃಷ್ಣ
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಮಧ್ಯಪ್ರದೇಶದ ದೇವಾಸ್ ಪಟಾಕಿ ಕಾರ್ಖಾನೆಯಲ್ಲಿ ಸ್ಫೋಟ; ಮೂವರು ಸಾವು
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಕೇಸರಿ ಶಾಲು ನಿಷೇಧಿಸುವ ಅಧಿಕಾರ ಕೊಟ್ಟಿದ್ಯಾರು? ಪ್ರಲ್ಹಾದ್​ ಜೋಶಿ ಕಿಡಿ
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಗ್ರೇಟರ್ ಬೆಂಗಳೂರು ಪ್ರಾಧಿಕಾರ ಚುನಾವಣೆ ಮೇಲೂ SIR ನೆರಳು!
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ಯುವಕರಿಂದ ಸಮುದ್ರದಲ್ಲಿ ಮುಳುಗುತ್ತಿದ್ದ ಇಬ್ಬರು ಪ್ರವಾಸಿಗರ ರಕ್ಷಣೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ
ವಚನಾನಂದಶ್ರೀಗಳ ವೈದ್ಯಕೀಯ ಪರೀಕ್ಷೆ ಬಗ್ಗೆ ಡಾಕ್ಟರ್ ಸ್ಫೋಟಕ ಹೇಳಿಕೆ