AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Maruti Suzuki: ಮಾರುತಿ ಸುಜುಕಿ ನಿವ್ವಳ ಲಾಭ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳ

ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ ಮಾರುತಿ ಸುಜುಕಿ ಇಂಡಿಯಾದ ನಿವ್ವಳ ಲಾಭದಲ್ಲಿ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳವಾಗಿದೆ.

Maruti Suzuki: ಮಾರುತಿ ಸುಜುಕಿ ನಿವ್ವಳ ಲಾಭ ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳ
ಮಾರುತಿ ಸುಜುಕಿ ಇಂಡಿಯಾ
Follow us
TV9 Web
| Updated By: Ganapathi Sharma

Updated on: Oct 28, 2022 | 4:20 PM

ನವದೆಹಲಿ: ಸೆಪ್ಟೆಂಬರ್ 30ಕ್ಕೆ ಕೊನೆಗೊಂಡ ತ್ರೈಮಾಸಿಕ ಅವಧಿಯಲ್ಲಿ (Q2 results) ಮಾರುತಿ ಸುಜುಕಿ ಇಂಡಿಯಾದ (Maruti Suzuki India) ನಿವ್ವಳ ಲಾಭದಲ್ಲಿ (Net Profit) ಬರೋಬ್ಬರಿ ನಾಲ್ಕು ಪಟ್ಟು ಹೆಚ್ಚಳವಾಗಿದೆ. ದಾಖಲೆ ಪ್ರಮಾಣದಲ್ಲಿ ಮಾರಾಟ ಹೆಚ್ಚಳವಾಗಿರುವುದು ಲಾಭದಲ್ಲಿ ಭಾರಿ ಹೆಚ್ಚಳಕ್ಕೆ ಕಾರಣವಾಗಿದೆ. ಈ ತ್ರೈಮಾಸಿಕ ಅವಧಿಯಲ್ಲಿ ಕಂಪನಿಯು 2,112.5 ಕೋಟಿ ರೂ. ನಿವ್ವಳ ಲಾಭ ಗಳಿಸಿದೆ. ಕಳೆದ ವರ್ಷ ಇದೇ ತ್ರೈಮಾಸಿಕ ಅವಧಿಯಲ್ಲಿ ಕಂಪನಿ ಗಳಿಸಿದ್ದ ಕ್ರೂಡೀಕೃತ ನಿವ್ವಳ ಲಾಭ 486.9 ಕೋಟಿ ರೂ. ಆಗಿತ್ತು.

ಎರಡನೇ ತ್ರೈಮಾಸಿಕ ಅವಧಿಯಲ್ಲಿ ಕಾರ್ಯಾಚರಣೆಗಳಿಂದ 29,942.5 ರೂ. ಆದಾಯ ಗಳಿಸಲಾಗಿದೆ. ಕಳೆದ ವರ್ಷ ಇದೇ ಅವಧಿಯಲ್ಲಿ ಗಳಿಸಿದ ಆದಾಯ 20,550.9 ರೂ. ಆಗಿತ್ತು ಎಂದು ಕಂಪನಿ ತಿಳಿಸಿದೆ.

ದಾಖಲೆಯ ವಾಹನ ಮಾರಾಟ

ಇದನ್ನೂ ಓದಿ
Image
Petrol Price On October 28: ಕಚ್ಚಾ ತೈಲ ಬೆಲೆ ಕುಸಿತ, ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಬದಲಾವಣೆಯಾಗಿದೆಯೇ? ತಿಳಿಯಿರಿ
Image
Gold Price Today: ದೇಶದ ಪ್ರಮುಖ ನಗರಗಳಲ್ಲಿ ಇಂದು ಚಿನ್ನ, ಬೆಳ್ಳಿ ದರವೆಷ್ಟಿದೆ? ಇಲ್ಲಿದೆ ಮಾಹಿತಿ
Image
RBI Meet: ನಿಯಂತ್ರಣಕ್ಕೆ ಬರುತ್ತಿಲ್ಲ ಹಣದುಬ್ಬರ; ನವೆಂಬರ್​ 3ಕ್ಕೆ ಎಂಪಿಸಿ ವಿಶೇಷ ಸಭೆ ಕರೆದ ಆರ್​ಬಿಐ
Image
Banking Frauds: ಕ್ರೆಡಿಟ್ ಕಾರ್ಡ್ ವಾರ್ಷಿಕ ಶುಲ್ಕ ಮನ್ನಾ ಹೆಸರಲ್ಲಿ ವಂಚನೆ; ಎಚ್ಚರ ವಹಿಸಿ

ಎರಡನೇ ತ್ರೈಮಾಸಿಕ ಅವಧಿಯಲ್ಲಿ 5,17,395 ವಾಹನ ಮಾರಾಟ ಮಾಡಲಾಗಿದೆ. ತ್ರೈಮಾಸಿಕ ಅವಧಿಯೊಂದರಲ್ಲಿ ಇಷ್ಟೊಂದು ಸಂಖ್ಯೆಯ ವಾಹನಗಳನ್ನು ಮಾರಾಟ ಮಾಡಿರುವುದು ಇದೇ ಮೊದಲಾಗಿದೆ ಎಂದು ಮಾರುತಿ ಸುಜುಕಿ ಇಂಡಿಯಾ ತಿಳಿಸಿದೆ.

‘ದೇಶೀಯ ಮಾರುಕಟ್ಟೆಯಲ್ಲಿ 4,54,200 ಯೂನಿಟ್ ಮಾರಾಟವಾಗಿವೆ. 63,195 ಯೂನಿಟ್ ರಫ್ತು ಮಾಡಲಾಗಿದೆ. ಎಲೆಕ್ಟ್ರಾನಿಕ್ ಸಲಕರಣೆಗಳ ಕೊರತೆಯು ಸುಮಾರು 35,000 ವಾಹನಗಳ ಉತ್ಪಾದನೆ ಮೇಲೆ ಪರಿಣಾಮ ಬೀರಿದೆ’ ಎಂದು ಕಂಪನಿ ತಿಳಿಸಿದೆ.

ಇದನ್ನೂ ಓದಿ: BYJU’S Turmoil: ಕೇರಳದಲ್ಲಿ ಕಚೇರಿ ಮುಚ್ಚಿದ ಬೈಜೂಸ್, ಉದ್ಯೋಗಿಗಳ ವಜಾ; ವರದಿ

ಕಳೆದ ವರ್ಷ ಇದೇ ಅವಧಿಯಲ್ಲಿ ಎಲೆಕ್ಟ್ರಾನಿಕ್ ಸಲಕರಣೆಗಳ ಕೊರತೆಯಿಂದಾಗಿ ಕಂಪನಿಗೆ 3,79,541 ವಾಹನಗಳನ್ನು ಮಾತ್ರ ಮಾರಾಟ ಮಾಡಲು ಸಾಧ್ಯವಾಗಿತ್ತು. ಈ ಪೈಕಿ 320,133 ಯೂನಿಟ್​ಗಳು ದೇಶೀಯ ಮಾರುಕಟ್ಟೆಯಲ್ಲಿ ಮಾರಾಟವಾಗಿದ್ದರೆ, 59,408 ಯೂನಿಟ್​ಗಳನ್ನು ರಫ್ತು ಮಾಡಲಾಗಿತ್ತು.

ಎಲೆಕ್ಟ್ರಾನಿಕ್ ಘಟಕಗಳ ಲಭ್ಯತೆಯನ್ನು ಖಾತರಿಪಡಿಸಲು ಮತ್ತು ವೆಚ್ಚ ಕಡಿತದ ದೃಷ್ಟಿಯಿಂದ ಕಂಪನಿಯು ಪ್ರಯತ್ನಗಳನ್ನು ಮಾಡುತ್ತಿದೆ ಎಂದು ಮಾರುತಿ ಸುಜುಕಿ ತಿಳಿಸಿದೆ.

ಹೆಚ್ಚಿದ ಮಾರುತಿ ಸುಜುಕಿ ಷೇರು ಮೌಲ್ಯ

ತ್ರೈಮಾಸಿಕ ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಮಾರುತಿ ಸುಜುಕಿ ಇಂಡಿಯಾದ ಷೇರು ಮೌಲ್ಯದಲ್ಲಿ ಭಾರಿ ಏರಿಕೆಯಾಗಿದೆ. ಕಂಪನಿಯ ಷೇರು ಮೌಲ್ಯದಲ್ಲಿ ಶೇಕಡಾ 4.98ರಷ್ಟು ಹೆಚ್ಚಳ ದಾಖಲಾಗಿದೆ. ಶುಕ್ರವಾರದ ವಹಿವಾಟಿನ ಕೊನೆಯಲ್ಲಿ ಮಾರುತಿ ಸುಜುಕಿ ಇಂಡಿಯಾದ ಷೇರಿನ ಮುಖ ಬೆಲೆ 450.60 ರೂ. ಹೆಚ್ಚಾಗಿ 9,492.55 ರೂ. ಆಗಿದೆ.

ಇನ್ನಷ್ಟು ವಾಣಿಜ್ಯ ಸುದ್ದಿ ಓದಲು ಇಲ್ಲಿ ಕ್ಲಿಕ್ ಮಾಡಿ

Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
Daily Horoscope: ಈ ರಾಶಿಯವರ ವೈವಾಹಿಕ ಜೀವನದಲ್ಲಿ ಏರಿಳಿತ ಸಾಧ್ಯತೆ
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
‘ಎಡಗೈಯೇ ಅಪಘಾತಕ್ಕೆ ಕಾರಣ’ ಸಿನಿಮಾ ಡಿಫರೆಂಟ್ ಹೇಗೆ? ವಿವರಿಸಿದ ದಿಗಂತ್
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಟೇಕಾಫ್​​ನಿಂದ ಪತನದವರೆಗೆ; ಏರ್ ಇಂಡಿಯಾ ವಿಮಾನದ ಕೊನೆಯ ಕ್ಷಣಗಳಿವು
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ಊಟಕ್ಕೆ ಕುಳಿತ ವೈದ್ಯಕೀಯ ವಿದ್ಯಾರ್ಥಿಗಳ ಪ್ರಾಣವನ್ನೇ ಬಲಿ ಪಡೆದ ವಿಮಾನ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ತಕ್ಷಣ ಆಸ್ಪತ್ರೆಗೆ ಕರೆದುಕೊಂಡ ಹೋದ್ರೂ ಕಾಂತಾರ ಸಿನಿಮಾದ ನಟ ಬದುಕಲಿಲ್ಲ
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ವಿಮಾನ ಅಪಘಾತದಲ್ಲಿ ಪವಾಡದಂತೆ ಬದುಕುಳಿದ ಒಬ್ಬ ವ್ಯಕ್ತಿ!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಕಲ್ಯಾಣ ಕರ್ನಾಟಕಕ್ಕೆ ನಿಮ್ಮ ಕೊಡುಗೆಯೇನು ಅಂದಾಗ ಶೆಟ್ಟರ್ ಅವಕ್ಕಾದರು!
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಹಮದಾಬಾದ್​ನಲ್ಲಿ ವಿಮಾನ ಅಪಘಾತದ ಸ್ಥಳಕ್ಕೆ ಭೇಟಿ ನೀಡಿದ ಅಮಿತ್ ಶಾ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಅಂಜನಾದ್ರಿ ಹನುಮನ ಕೃಪೆಯಿಂದ ಶಾಸಕ ಸ್ಥಾನ ಅಭಾದಿತವಾಗಿದೆ: ಜನಾರ್ಧನ ರೆಡ್ಡಿ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ
ಕಿರಣ್ ರಾಜ್ ಜೀವನದ ‘ಕರ್ಣ’ ಯಾರು? ಅವರೇ ಕೊಟ್ಟಿದ್ದಾರೆ ಉತ್ತರ