AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸಹಕಾರಿ ವಲಯದಲ್ಲಿ ಕೇಂದ್ರದಿಂದ ಕ್ರಾಂತಿಕಾರಿ ಹೆಜ್ಜೆ; ಎಲ್ಲಾ ರಾಜ್ಯಗಳ ರಿಜಿಸ್ಟ್ರಾರ್ ಮತ್ತು ಕೃಷಿ ಬ್ಯಾಂಕುಗಳ ಕಂಪ್ಯೂಟರೀಕರಣಕ್ಕೆ ನಿರ್ಧಾರ

Union Cooperation Minister Amit Shah: ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ ಕಂಪ್ಯೂಟೀಕರಣ ಯೋಜನೆ ರೀತಿಯಲ್ಲಿ ಕೇಂದ್ರದ ಪ್ರಾಯೋಜಕತ್ವದಲ್ಲಿ ಎಆರ್​ಡಿಬಿಗಳ ಗಣಕೀಕೃತ ಕಾರ್ಯಕ್ಕೆ ಅನುಮೋದನೆ ಕೊಡಲಾಗಿದೆ. ಸೆಂಟ್ರಲ್ ರಿಜಿಸ್ಟ್ರಾರ್ ರೀತಿಯಲ್ಲಿ ಸಹಕಾರಿ ಸಂಸ್ಥೆಗಳ ರಿಜಿಸ್ಟ್ರಾರ್ ಕಚೇರಿಗಳನ್ನು ನ್ಯಾಷನಲ್ ಯೂನಿಫೈಡ್ ಸಾಫ್ಟ್​ವೇರ್ ಮೂಲಕ ಕಂಪ್ಯೂಟರೀಕರಣಗೊಳಿಸಲಾಗುತ್ತದೆ. ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸೆಂಟ್ರಲ್ ಪ್ರಾಜೆಕ್ಟ್ ಮಾನಿಟರಿಂಗ್ ಯೂನಿಟ್ ಅನ್ನು ಸ್ಥಾಪಿಸಲಾಗುತ್ತದೆ. ಇದರ ಅಂದಾಜು ವೆಚ್ಚ 225 ಕೋಟಿ ರೂ ಎಂದಿದೆ.

ಸಹಕಾರಿ ವಲಯದಲ್ಲಿ ಕೇಂದ್ರದಿಂದ ಕ್ರಾಂತಿಕಾರಿ ಹೆಜ್ಜೆ; ಎಲ್ಲಾ ರಾಜ್ಯಗಳ ರಿಜಿಸ್ಟ್ರಾರ್ ಮತ್ತು ಕೃಷಿ ಬ್ಯಾಂಕುಗಳ ಕಂಪ್ಯೂಟರೀಕರಣಕ್ಕೆ ನಿರ್ಧಾರ
ಅಮಿತ್ ಶಾ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: Oct 08, 2023 | 4:44 PM

ನವದೆಹಲಿ, ಅಕ್ಟೋಬರ್ 8: ದೇಶದ ಸಹಕಾರಿ ಕ್ಷೇತ್ರಕ್ಕೆ ಪುಷ್ಟಿ ಕೊಡುವ ನಿಟ್ಟಿನಲ್ಲಿ ಸರ್ಕಾರ (Union Ministry of Cooperation) ಪ್ರಮುಖ ನಿರ್ಧಾರಗಳನ್ನು ಕೈಗೊಂಡಿದೆ. ದೇಶದ ಎಲ್ಲಾ 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳ ರಿಜಿಸ್ಟ್ರಾರ್​ಗಳನ್ನು (registrars of cooperatives) ಸಂಪೂರ್ಣವಾಗಿ ಕಂಪ್ಯೂಟರೀಕರಿಸಲಾಗುತ್ತಿದೆ. 13 ರಾಜ್ಯಗಳಲ್ಲಿರುವ 1,851 ಕೃಷಿ ಮತ್ತು ಗ್ರಾಮೀಣಾಭವೃದ್ಧಿ ಬ್ಯಾಂಕ್​ಗಳನ್ನೂ (ಎಆರ್​ಡಿಬಿ) ಬಲಪಡಿಸಲು ಕ್ರಮ ಕೈಗೊಳ್ಳಲಾಗಿದೆ.

ಪ್ರಾಥಮಿಕ ಕೃಷಿ ಪತ್ತಿನ ಸಂಘಗಳ (Primary Agriculture Credit Societies) ಕಂಪ್ಯೂಟೀಕರಣ ಯೋಜನೆ ರೀತಿಯಲ್ಲಿ ಕೇಂದ್ರದ ಪ್ರಾಯೋಜಕತ್ವದಲ್ಲಿ ಎಆರ್​ಡಿಬಿಗಳ ಗಣಕೀಕೃತ ಕಾರ್ಯಕ್ಕೆ ಅನುಮೋದನೆ ಕೊಡಲಾಗಿದೆ. ಸೆಂಟ್ರಲ್ ರಿಜಿಸ್ಟ್ರಾರ್ ರೀತಿಯಲ್ಲಿ ಸಹಕಾರಿ ಸಂಸ್ಥೆಗಳ ರಿಜಿಸ್ಟ್ರಾರ್ ಕಚೇರಿಗಳನ್ನು ನ್ಯಾಷನಲ್ ಯೂನಿಫೈಡ್ ಸಾಫ್ಟ್​ವೇರ್ ಮೂಲಕ ಕಂಪ್ಯೂಟರೀಕರಣಗೊಳಿಸಲಾಗುತ್ತದೆ.

ಇದನ್ನೂ ಓದಿ: ಬೆರಳೆಣಿಕೆಯ ಕಂಪನಿಗಳು ಭಾರತದ ಅಭಿವೃದ್ಧಿಯ ಹಣೆಬರಹ ಬರೆಯುವಂತಾಗಬಾರದು: ಉದಯ್ ಕೋಟಕ್

ಈ ಯೋಜನೆಯನ್ನು ಯಶಸ್ವಿಯಾಗಿ ಜಾರಿಗೊಳಿಸಲು ಸೆಂಟ್ರಲ್ ಪ್ರಾಜೆಕ್ಟ್ ಮಾನಿಟರಿಂಗ್ ಯೂನಿಟ್ ಅನ್ನು ಸ್ಥಾಪಿಸಲಾಗುತ್ತದೆ. ಇದರ ಅಂದಾಜು ವೆಚ್ಚ 225 ಕೋಟಿ ರೂ ಎಂದಿದೆ.

ಕೇಂದ್ರ ಸಹಕಾರಿ ಸಚಿವರೂ ಆದ ಅಮಿತ್ ಶಾ ಕೈಗೊಂಡ ಈ ಕ್ರಮ ಯಶಸ್ವಿಯಾಗಿ ಜಾರಿಯಾದಲ್ಲಿ ಸಹಕಾರಿ ಇಲಾಖೆಗಳ ವಿವಿಧ ಸೇವೆಗಳು ಜನಸಾಮಾನ್ಯರಿಗೆ ಪರಿಣಾಮಕಾರಿಯಾಗಿ ತಲುಪಲು ಸಾಧ್ಯವಾಗುತ್ತದೆ. ರಿಜಿಸ್ಟ್ರಾರ್ ಕಚೇರಿಗಳು ಮತ್ತು ಕೃಷಿ ಮತ್ತು ಗ್ರಾಮೀಣಾಭಿವೃದ್ಧಿ ಬ್ಯಾಂಕುಗಳು ಹೆಚ್ಚು ಕ್ಷಮತೆ ಮತ್ತು ಪಾರದರ್ಶಕತೆಯಿಂದ ಕೆಲಸ ಮಾಡಲು ಅನುವಾಗುತ್ತದೆ.

ಇನ್ನಷ್ಟು ವಾಣಿಜ್ಯ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಬಿಸಿನೆಸ್ ವೆಬ್ ಸ್ಟೋರಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ನನ್ನ ಆಯುಷ್ಯವನ್ನೂ ದೇವರು ನಮ್ಮ ಸೈನಿಕರಿಗೆ ನೀಡಲಿ: ಪಲ್ಲವಿ ರಾವ್
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಬಾಗಲಕೋಟೆ: NWKRTC ಬಸ್​ ಚಾಲಕ, ಕಂಡಕ್ಟರ್​ ಮೇಲೆ ಕಟ್ಟಿಗೆಯಿಂದ ಹಲ್ಲೆ​
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಕೆನಡ ಚುನಾವಣೆಯಲ್ಲಿ ಸೋತಿದ್ದಕ್ಕೆ ಭಾವುಕರಾದ ಖಲಿಸ್ತಾನ್ ಪರ ಜಗ್ಮೀತ್ ಸಿಂಗ್
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ಸುದೀಪ್ ಮತ್ತು ಶಿವಣ್ಣನ ಜೊತೆಗಿನ ಗೆಳೆತನದ ಬಗ್ಗೆ ನಾನಿ ಮಾತು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ನಿನ್ನೆ ಶಿವಕುಮಾರ್ ಹೇಳಿದ್ದನ್ನೇ ಇಂದು ಪ್ರದೀಪ್ ಈಶ್ವರ್ ಪುನರುಚ್ಛರಿಸಿದರು
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ಮೋದಿ ನಿವಾಸದಲ್ಲಿ ಮಹತ್ವದ ಸಭೆ; ಸೇನಾ ಮುಖ್ಯಸ್ಥರು, ರಾಜನಾಥ್ ಸಿಂಗ್ ಭಾಗಿ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ದೇವೇಗೌಡರಂತೆ ಮಂಜುನಾಥ್ ಸಹ ಪಹಲ್ಗಾಮ್ ಬಗ್ಗೆ ಅನಾವಶ್ಯಕ ಮಾತಾಡಲಿಲ್ಲ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಅಧಿಕಾರದಿಂದ ಕೆಳಗಿಳಿಯುವ ಫ್ರಸ್ಟ್ರೇಶನ್ ಸಿಎಂರನ್ನು ಕಾಡುತ್ತಿದೆ: ಅಶೋಕ
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಧಗಧಗನೆ ಹೊತ್ತಿ ಉರಿದ ಚೀನಾದ ರೆಸ್ಟೋರೆಂಟ್; 22 ಜನ ಸಾವು
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ
ಉಗ್ರರ ದಾಳಿ: ಮಂಜುನಾಥ್​ ಕುಟುಂಬಕ್ಕೆ ಸಾಂತ್ವಾನ ಹೇಳಿದ 103 ವರ್ಷದ ಅಜ್ಜಿ