ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ

ಮಧ್ಯಪ್ರಾಚ್ಯ ಯುದ್ಧದಿಂದ ಎದುರಾದ ಎಲ್​ಪಿಜಿ ಕೊರತೆ ನೀಗಿಸಲು ರಿಲಯನ್ಸ್ ಇಂಡಸ್ಟ್ರೀಸ್ ಮಹತ್ವದ ಘೋಷಣೆ ಮಾಡಿದೆ. ಜಾಮ್‌ನಗರ ಸಂಸ್ಕರಣಾಗಾರದಲ್ಲಿ ಎಲ್​ಪಿಜಿ ಉತ್ಪಾದನೆಯನ್ನು ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸಲು ನಿರ್ಧರಿಸಿದೆ. ಕೆಜಿ-ಡಿ6 ಬ್ಲಾಕ್‌ನಿಂದ ಅನಿಲವನ್ನು ಆದ್ಯತಾ ವಲಯಗಳಿಗೆ ಪೂರೈಸಲಾಗುವುದು. ಭಾರತದ ಇಂಧನ ಭದ್ರತೆ ಮತ್ತು ಕುಟುಂಬಗಳಿಗೆ ಅಡೆತಡೆ ಇಲ್ಲದ ಅನಿಲ ಪೂರೈಕೆಗೆ ರಿಲಯನ್ಸ್‌ನ ಬದ್ಧವಾಗಿದೆ ಎಂದು ಕಂಪನಿ ತಿಳಿಸಿದೆ.

ಎಲ್​ಪಿಜಿ ಕೊರತೆ: ರಿಲಯನ್ಸ್‌ನಿಂದ ಜಾಮ್‌ನಗರದಲ್ಲಿ ಅನಿಲ ಉತ್ಪಾದನೆ ಹೆಚ್ಚಳದ ಬಗ್ಗೆ ಘೋಷಣೆ
ರಿಲಯನ್ಸ್ ಇಂಡಸ್ಟ್ರೀಸ್​ನಿಂದ ಮಹತ್ವದ ಘೋಷಣೆ
Image Credit source: Google

Updated on: Mar 11, 2026 | 12:27 PM

ಮುಂಬೈ, ಮಾರ್ಚ್ 11: ಮಧ್ಯಪ್ರಾಚ್ಯದಲ್ಲಿ ಯುದ್ಧದ ಪರಿಣಾಮವಾಗಿ ಕರ್ನಾಟಕ ಸೇರಿ ಭಾರತದ ಹಲವೆಡೆ ಎಲ್​​ಪಿಜಿ ಸಿಲಿಂಡರ್​​ಗಳ ಅಭಾವ ತಲೆದೋರಿದೆ. ಈ ಹೊತ್ತಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಮಹತ್ತರವಾದ ಘೋಷಣೆ ಮಾಡಿದ್ದು, ಜಾಮ್ ನಗರದಲ್ಲಿನ ಸಂಸ್ಕರಣಾಗಾರ ಹಾಗೂ ಪೆಟ್ರೋಕೆಮಿಕಲ್ಸ್ ಸಮುಚ್ಚಯದಿಂದ ಎಲ್​​ಪಿಜಿ ಉತ್ಪಾದನೆಯನ್ನು ಸ್ವಯಂಪ್ರೇರಿತವಾಗಿ ಗರಿಷ್ಠ ಪ್ರಮಾಣದಲ್ಲಿ ಹೆಚ್ಚಿಸುವುದಕ್ಕೆ ನಿರ್ಧಾರ ಕೈಗೊಂಡಿರೋದಾಗಿ ತಿಳಿಸಿದೆ. ಜಾಮ್ ನಗರದಲ್ಲಿ ಇರುವ ಈ ಘಟಕ ವಿಶ್ವದಲ್ಲಿಯೇ ಅತಿದೊಡ್ಡ ಸಂಯೋಜಿತ ಸಂಸ್ಕರಣೆ ಹಬ್ ಎಂಬ ದಾಖಲೆಗೆ ಪಾತ್ರವಾಗಿದೆ ಎಂದು ಕಂಪನಿಯ ಹೇಳಿದ್ದು,  KG- D6 ಬ್ಲಾಕ್​​ನಲ್ಲಿ ಉತ್ಪಾದನೆ ಆದ ಅನಿಲವನ್ನು ಆದ್ಯತೆ ವಲಯಗಳಿಗೆ ಪೂರೈಕೆಮಾಡಲಾಗುವುದು. ರಾಷ್ಟ್ರೀಯ ಇಂಧನ ಆದ್ಯತೆಗಳು ಹಾಗೂ ಸರ್ಕಾರಿ ಮಾರ್ಗದರ್ಶನದ ಅನ್ವಯ ಆದ್ಯತಾ ವಲಯಗಳಿಗೆ ಪೂರೈಕೆ ಬೆಂಬಲ ನೀಡುವುದಕ್ಕಾಗಿ ಈ ಮಹತ್ವದ ಘೋಷಣೆ ಮಾಡಿರೋದಾಗಿ ಕಂಪನಿ ತಿಳಿಸಿದೆ.

ಜಾಗತಿಕ ಇಂಧನ ಮಾರುಕಟ್ಟೆಯಲ್ಲಿ ವಿಪರೀತದ ಏರಿಳಿತ ಕಾಣುತ್ತಿರುವ ಸಂದರ್ಭದಲ್ಲಿ, ಭಾರತೀಯ ಕುಟುಂಬಗಳಿಗೆ ಅಗತ್ಯವಾದ ಇಂಧನವನ್ನು ಅಡೆತಡೆಯೇ ಇಲ್ಲದೆ ಪೂರೈಕೆ ಮಾಡುತ್ತೇವೆ ಎಂದು ಈ ಮೂಲಕ ಖಾತ್ರಿ ಪಡಿಸುತ್ತೇವೆ. ಇದೀಗ ರಾಷ್ಟ್ರೀಯ ಆದ್ಯತೆಯಾಗಿದೆ ಎಂದು ಮುಕೇಶ್ ಅಂಬಾನಿ ನೇತೃತ್ವದ ಕಂಪನಿ ತಿಳಿಸಿದೆ. ಹಗಲು-ರಾತ್ರಿ ನಮ್ಮ ತಂಡ ಸಂಸ್ಕರಣಾಗಾರದಿಂದ ಗರಿಷ್ಠ ಪ್ರಮಾಣದ ಉತ್ಪಾದನೆಗಾಗಿ ಶ್ರಮಿಸುತ್ತಿದೆ. ಮತ್ತು ಎಲ್​​ಪಿಜಿ ಉತ್ಪಾದನೆ ವಿಸ್ತರಣೆಗೆ ಪ್ರಯತ್ನಿಸುತ್ತಿದೆ. ಈ ಶ್ರಮದ ಹಿಂದಿನ ಉದ್ದೇಶ ಏನೆಂದರೆ, ದೇಶೀಯ ಮಾರುಕಟ್ಟೆಗೆ ಸ್ಥಿರವಾದ ಹಾಗೂ ವಿಶ್ವಾಸಾರ್ಹ ಅನಿಲ ಪೂರೈಕೆ ಮಾಡುವುದಾಗಿದೆ.

ಇದನ್ನೂ ಓದಿ: ಇಂಡಿಗೋ ಸಿಇಒ ಪೀಟರ್ ಎಲ್ಬರ್ಸ್ ರಾಜೀನಾಮೆ; ರಾಹುಲ್ ಭಾಟಿಯಾ ಹಂಗಾಮಿ ಮುಖ್ಯಸ್ಥ

ರಿಲಯನ್ಸ್​​ಗೆ ಕೋಟ್ಯಂತರ ಭಾರತೀಯ ಕುಟುಂಬಗಳ ಯೋಗಕ್ಷೇಮ ಹಾಗೂ ಭಾರತೀಯ ಇಂಧನ ಭದ್ರತೆ ಯಾವಾಗಲೂ ಮೊದಲು. ನಾವು ಭಾರತ ಸರ್ಕಾರದ ಜೊತೆಗೆ ನಿಕಟವಾಗಿ ಕೆಲಸ ಮಾಡುತ್ತಿದ್ದೇವೆ. ಮತ್ತು ರಾಷ್ಟ್ರೀಯ ಮಾರ್ಗದರ್ಶಿ ಸೂತ್ರಗಳಿಗೆ ಮತ್ತು ವಿತರಣೆ ಆದ್ಯತೆಗಳಿಗೆ ಸಂಪೂರ್ಣ ಬದ್ಧರಾಗಿದ್ದೇವೆ. ಇಂಧನ ಪೂರೈಕೆ ಯಾವ ವಲಯಕ್ಕೆ ಹಾಗೂ ಸಮುದಾಯಕ್ಕೆ ಬಹಳ ಅಗತ್ಯ ಆಗಿರುತ್ತದೋ ಅವರಿಗೆ ತಲುಪಿಸುವುದನ್ನು ಖಾತ್ರಿ ಪಡಿಸುತ್ತೇವೆ ಎಂದು ಕಂಪನಿ ಹೇಳಿದೆ. ನಾವು ದೇಶದೊಂದಿಗೆ ದೃಢವಾಗಿ ನಿಲ್ಲುತ್ತೇವೆ ಮತ್ತು ಭಾರತದ ಇಂಧನ ಭದ್ರತೆಗೆ ಹಾಗೂ ದೇಶಕ್ಕೆ ಬೇಕಾದ ಅಗತ್ಯ ಇಂಧನ ಪೂರೈಕೆ ವಿಶ್ವಾಸಾರ್ಹತೆ ಉಳಿಯುವುದಕ್ಕೆ ಏನೆಲ್ಲ ಮಾಡುವುದಕ್ಕೆ ಸಾಧ್ಯವೋ ಆ ಎಲ್ಲವನ್ನೂ ಮಾಡುವುದಕ್ಕೆ ಬದ್ಧರಾಗಿದ್ದೇವೆ ಎಂದು ತಿಳಿಸಿದೆ.

ಮತ್ತಷ್ಟು ಸುದ್ದಿ ಓದಲು ಇಲ್ಲಿ ಕ್ಲಿಕ್​​ ಮಾಡಿ.

Published On - 12:26 pm, Wed, 11 March 26

Follow Us