AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RIL: ಕೇಂದ್ರ ಸರ್ಕಾರ ವಿರುದ್ಧ ಕೇಸ್ ಗೆದ್ದ ಅಂಬಾನಿ ಕಂಪನಿ; 14,000 ಕೋಟಿ ದಂಡದಿಂದ ತಪ್ಪಿಸಿಕೊಂಡ ಆರ್​ಐಎಲ್

Delhi HC Uphelds Arbitral Award In Favour of RIL: ಆಂಧ್ರದ ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಅನಿಲ ನಿಕ್ಷೇಪ ಯೋಜನೆಯಲ್ಲಿ ಭಾಗಿಯಾಗಿದ್ದ ಒಎನ್​ಜಿಸಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ನಡುವಿನ ವ್ಯಾಜ್ಯದಲ್ಲಿ ಆರ್​ಐಎಲ್ ಪರವಾಗಿ ನ್ಯಾಯತೀರ್ಪು ಬಂದಿದೆ.

RIL: ಕೇಂದ್ರ ಸರ್ಕಾರ ವಿರುದ್ಧ ಕೇಸ್ ಗೆದ್ದ ಅಂಬಾನಿ ಕಂಪನಿ; 14,000 ಕೋಟಿ ದಂಡದಿಂದ ತಪ್ಪಿಸಿಕೊಂಡ ಆರ್​ಐಎಲ್
ಮುಕೇಶ್ ಅಂಬಾನಿ
Follow us
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 10, 2023 | 1:57 PM

ನವದೆಹಲಿ: ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ (Krishna Godavari Basin) ಅನಿಲ ಹಂಚಿಕೆ ವಿಚಾರದಲ್ಲಿ ಉಂಟಾದ ವ್ಯಾಜ್ಯವೊಂದರಲ್ಲಿ ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಪರವಾಗಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. 2018ರಲ್ಲಿ ನ್ಯಾಯಮಂಡಳಿ ನೀಡಿದ್ದ ತೀರ್ಪನ್ನು ದೆಹಲಿ ಉಚ್ಚನ್ಯಾಯಾಲಯ (Delhi High Court) ಮೇ 9ರಂದು ಎತ್ತಿಹಿಡಿದು ಆದೇಶ ಹೊರಡಿಸಿದೆ. ಮೂವರು ಸದಸ್ಯರ ನ್ಯಾಯಪೀಠವು 2:1 ಬಹುಮತದಲ್ಲಿ ಆರ್​ಐಎಲ್ ಪರವಾಗಿ ತೀರ್ಪು ನೀಡಿದೆ. ಇದರೊಂದಿಗೆ ರಿಲಾಯನ್ಸ್ ಇಂಡಸ್ಟ್ರೀಸ್ ಹಾಗೂ ಅದರ ಪಾಲುದಾರ ಸಂಸ್ಥೆಗಳಾದ ಬ್ರಿಟಿಷ್ ಪೆಟ್ರೋಲಿಯಂ ಮತ್ತು ನೀಕೋ (NECO) ನಿಟ್ಟುಸಿರುಬಿಡುವಂತಾಗಿದೆ. ನ್ಯಾಯಮಂಡಳಿ ತೀರ್ಪನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿ ಕೇಂದ್ರದ ಪರ ತೀರ್ಪು ನೀಡಿದ್ದರೆ ರಿಲಾಯನ್ಸ್ ಸಂಸ್ಥೆ ಸುಮಾರು 14,000 ಕೋಟಿ ರೂ ಪರಿಹಾರ ಕಟ್ಟಿಕೊಡಬೇಕಿತ್ತು. ಸರ್ಕಾರಿ ಸ್ವಾಮ್ಯದ ಒಎನ್​ಜಿಸಿ ಮತ್ತು ರಿಲಾಯನ್ಸ್ ನಡುವಿನ ಅನಿಲ ವ್ಯಾಜ್ಯದ ಪ್ರಕರಣ ಇದು.

ಏನಿದು ರಿಲಾಯನ್ಸ್ ಮತ್ತು ಒಎನ್​ಜಿಸಿ ವ್ಯಾಜ್ಯ?

ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಅನಿಲ ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದ ಪ್ರಕರಣ ಇದು. ಆಂಧ್ರದ ಕರಾವಳಿ ಭಾಗದಲ್ಲಿ ನೈಸರ್ಗಿಕ ಅನಿಲ ನಿಕ್ಷೇಪ ಶೋಧಿಸಲು ಮತ್ತು ಹೊರತೆಗೆಯಲು 2000ದ ಏಪ್ರಿಲ್ 12ರಂದು ರಿಲಾಯನ್ಸ್ ಮತ್ತಿತರ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಪ್ರಾಡಕ್ಟ್ ಶೇರಿಂಗ್ ಗುತ್ತಿಗೆ (ಪಿಎಸ್​ಸಿ) ಒಪ್ಪಂದ ಮಾಡಿಕೊಂಡಿತ್ತು. ಎರಡಕ್ಕೂ ಬೇರೆ ಬೇರೆ ಬ್ಲಾಕ್​ಗಳನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿGo First: ಗೋ ಫಸ್ಟ್ ವಿಮಾನಗಳನ್ನು ಪಡೆಯಲು ಟಾಟಾ, ಇಂಡಿಗೋ ಮುಂದು; ಲೀಸಿಂಗ್ ಕಂಪನಿಗಳ ಜೊತೆ ಮಾತುಕತೆ

ಆದರೆ, 2013ರಲ್ಲಿ ಒಎನ್​ಜಿಸಿಗೆ ಸೇರಿದ ಬ್ಲಾಕ್ ಮತ್ತು ಆರ್​ಐಎಲ್​ಗೆ ಸೇರಿದ ಬ್ಲಾಕ್ ಮಧ್ಯೆ ಸಂಪರ್ಕ ಜೋಡಿಸಿ ಆ ಮೂಲಕ ಅನಿಲವನ್ನು ಸಾಗಿಸಲಾಗುತ್ತಿತ್ತು ಎಂದು ಒಎನ್​ಜಿಸಿ ಶಂಕಿಸಿತ್ತು. ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ರಿಲಾಯನ್ಸ್ ವಿರುದ್ಧ 2016ರಲ್ಲಿ 1.5 ಬಿಲಿಯನ್ ಡಾಲರ್ ಹಾಗು 174 ಮಿಲಿಯನ್ ಡಾಲರ್ (ಒಟ್ಟು ಸುಮಾರು 14,000 ಕೋಟಿ ರೂ) ದಂಡ ವಿಧಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ರಿಲಾಯನ್ಸ್ ನೇತೃತ್ವದ ಸಂಸ್ಥೆಗಳು ನ್ಯಾಯಮಂಡಳಿ ಮೊರೆ ಹೋದವು. 2018ರಲ್ಲಿ ನ್ಯಾಯಮಂಡಳಿಯಿಂದ ಆರ್​ಐಎಲ್ ಪರವಾಗಿ ತೀರ್ಪು ಬಂದಿತು. ಇದನ್ನು ಪ್ರಶ್ನಿಸಿ ಸರ್ಕಾರವು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈಗ ದೆಹಲಿ ಕೋರ್ಟ್​ನಿಂದಲೂ ಸರ್ಕಾರದ ವಿರುದ್ಧವಾಗಿ ತೀರ್ಪು ಬಂದಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಟೆಂಡರ್ ಪ್ರಕ್ರಿಯೆಯಲ್ಲಿ ನಂದಿನಿ ಸಂಸ್ಥೆ ಭಾಗಿಯಾಗಿರಲಿಲ್ಲ: ಅಧಿಕಾರಿಗಳು
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ಕಾರ್ಯಕ್ರಮದಲ್ಲಿ ಶಿವಕುಮಾರ್​ಗೆ ಭಾರೀ ಕರತಾಡನ ಮತ್ತು ಶಿಳ್ಳೆ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ನಂದಿನಿ ದೇಶದ ಬೇರೆ ಬೇರೆ ಭಾಗಗಳಲ್ಲಿ ಮಳಿಗೆಗಳನ್ನು ಸ್ಥಾಪಿಸಿದೆ: ಸಿಟಿ ರವಿ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ರಾಜಾ ರಘುವಂಶಿ ಹನಿಮೂನ್​ಗೆಂದು ಮನೆಯಿಂದ ಹೊರಟ ವಿಡಿಯೋ
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಕಾವೇರಿ ನದಿ ಉಕ್ಕಿ ಹರಿಯುತ್ತಿರುವುದರಿಂದ ರಸ್ತೆ ಮೇಲೆ 15 ಅಡಿ ನೀರು
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ಸ್ವಚ್ಛ ಬೆಂಗಳೂರು ಕಾರ್ಯಕ್ರಮ ಶೀಘ್ರದಲ್ಲಿ ಜಾರಿಗೊಳ್ಳಲಿದೆ: ಶಿವಕುಮಾರ್
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ನೈಟ್ ರೈಡರ್ಸ್ ವಿರುದ್ಧ 11 ರನ್​ಗಳಿಂದ ಗೆದ್ದ ಗ್ಲೆನ್ ಮ್ಯಾಕ್ಸ್​ವೆಲ್..!
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಉಡುಪಿ: ಶರವೇಗದ ನದಿಯಲ್ಲಿ ದೋಣಿ ನಡೆಸುವ ಧೀರ ಮಹಿಳೆ, ವಿಡಿಯೋ ನೋಡಿ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ಯುವಮುಖಂಡರನ್ನು ಸೆಳೆಯುವಲ್ಲಿ ಈಶ್ವರಪ್ಪ ವಿಫಲರಾದಂತೆ ಕಾಣಿಸುತ್ತದೆ
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್
ನಮ್ಮಿಂದ ಆದ ಅಗೌರವವನ್ನು ರಚಿತಾ ರಾಮ್ ಸ್ಪಷ್ಟಪಡಿಸಬೇಕು; ನಾಗಶೇಖರ್