AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

RIL: ಕೇಂದ್ರ ಸರ್ಕಾರ ವಿರುದ್ಧ ಕೇಸ್ ಗೆದ್ದ ಅಂಬಾನಿ ಕಂಪನಿ; 14,000 ಕೋಟಿ ದಂಡದಿಂದ ತಪ್ಪಿಸಿಕೊಂಡ ಆರ್​ಐಎಲ್

Delhi HC Uphelds Arbitral Award In Favour of RIL: ಆಂಧ್ರದ ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಅನಿಲ ನಿಕ್ಷೇಪ ಯೋಜನೆಯಲ್ಲಿ ಭಾಗಿಯಾಗಿದ್ದ ಒಎನ್​ಜಿಸಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ನಡುವಿನ ವ್ಯಾಜ್ಯದಲ್ಲಿ ಆರ್​ಐಎಲ್ ಪರವಾಗಿ ನ್ಯಾಯತೀರ್ಪು ಬಂದಿದೆ.

RIL: ಕೇಂದ್ರ ಸರ್ಕಾರ ವಿರುದ್ಧ ಕೇಸ್ ಗೆದ್ದ ಅಂಬಾನಿ ಕಂಪನಿ; 14,000 ಕೋಟಿ ದಂಡದಿಂದ ತಪ್ಪಿಸಿಕೊಂಡ ಆರ್​ಐಎಲ್
ಮುಕೇಶ್ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 10, 2023 | 1:57 PM

Share

ನವದೆಹಲಿ: ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ (Krishna Godavari Basin) ಅನಿಲ ಹಂಚಿಕೆ ವಿಚಾರದಲ್ಲಿ ಉಂಟಾದ ವ್ಯಾಜ್ಯವೊಂದರಲ್ಲಿ ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಪರವಾಗಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. 2018ರಲ್ಲಿ ನ್ಯಾಯಮಂಡಳಿ ನೀಡಿದ್ದ ತೀರ್ಪನ್ನು ದೆಹಲಿ ಉಚ್ಚನ್ಯಾಯಾಲಯ (Delhi High Court) ಮೇ 9ರಂದು ಎತ್ತಿಹಿಡಿದು ಆದೇಶ ಹೊರಡಿಸಿದೆ. ಮೂವರು ಸದಸ್ಯರ ನ್ಯಾಯಪೀಠವು 2:1 ಬಹುಮತದಲ್ಲಿ ಆರ್​ಐಎಲ್ ಪರವಾಗಿ ತೀರ್ಪು ನೀಡಿದೆ. ಇದರೊಂದಿಗೆ ರಿಲಾಯನ್ಸ್ ಇಂಡಸ್ಟ್ರೀಸ್ ಹಾಗೂ ಅದರ ಪಾಲುದಾರ ಸಂಸ್ಥೆಗಳಾದ ಬ್ರಿಟಿಷ್ ಪೆಟ್ರೋಲಿಯಂ ಮತ್ತು ನೀಕೋ (NECO) ನಿಟ್ಟುಸಿರುಬಿಡುವಂತಾಗಿದೆ. ನ್ಯಾಯಮಂಡಳಿ ತೀರ್ಪನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿ ಕೇಂದ್ರದ ಪರ ತೀರ್ಪು ನೀಡಿದ್ದರೆ ರಿಲಾಯನ್ಸ್ ಸಂಸ್ಥೆ ಸುಮಾರು 14,000 ಕೋಟಿ ರೂ ಪರಿಹಾರ ಕಟ್ಟಿಕೊಡಬೇಕಿತ್ತು. ಸರ್ಕಾರಿ ಸ್ವಾಮ್ಯದ ಒಎನ್​ಜಿಸಿ ಮತ್ತು ರಿಲಾಯನ್ಸ್ ನಡುವಿನ ಅನಿಲ ವ್ಯಾಜ್ಯದ ಪ್ರಕರಣ ಇದು.

ಏನಿದು ರಿಲಾಯನ್ಸ್ ಮತ್ತು ಒಎನ್​ಜಿಸಿ ವ್ಯಾಜ್ಯ?

ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಅನಿಲ ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದ ಪ್ರಕರಣ ಇದು. ಆಂಧ್ರದ ಕರಾವಳಿ ಭಾಗದಲ್ಲಿ ನೈಸರ್ಗಿಕ ಅನಿಲ ನಿಕ್ಷೇಪ ಶೋಧಿಸಲು ಮತ್ತು ಹೊರತೆಗೆಯಲು 2000ದ ಏಪ್ರಿಲ್ 12ರಂದು ರಿಲಾಯನ್ಸ್ ಮತ್ತಿತರ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಪ್ರಾಡಕ್ಟ್ ಶೇರಿಂಗ್ ಗುತ್ತಿಗೆ (ಪಿಎಸ್​ಸಿ) ಒಪ್ಪಂದ ಮಾಡಿಕೊಂಡಿತ್ತು. ಎರಡಕ್ಕೂ ಬೇರೆ ಬೇರೆ ಬ್ಲಾಕ್​ಗಳನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿGo First: ಗೋ ಫಸ್ಟ್ ವಿಮಾನಗಳನ್ನು ಪಡೆಯಲು ಟಾಟಾ, ಇಂಡಿಗೋ ಮುಂದು; ಲೀಸಿಂಗ್ ಕಂಪನಿಗಳ ಜೊತೆ ಮಾತುಕತೆ

ಆದರೆ, 2013ರಲ್ಲಿ ಒಎನ್​ಜಿಸಿಗೆ ಸೇರಿದ ಬ್ಲಾಕ್ ಮತ್ತು ಆರ್​ಐಎಲ್​ಗೆ ಸೇರಿದ ಬ್ಲಾಕ್ ಮಧ್ಯೆ ಸಂಪರ್ಕ ಜೋಡಿಸಿ ಆ ಮೂಲಕ ಅನಿಲವನ್ನು ಸಾಗಿಸಲಾಗುತ್ತಿತ್ತು ಎಂದು ಒಎನ್​ಜಿಸಿ ಶಂಕಿಸಿತ್ತು. ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ರಿಲಾಯನ್ಸ್ ವಿರುದ್ಧ 2016ರಲ್ಲಿ 1.5 ಬಿಲಿಯನ್ ಡಾಲರ್ ಹಾಗು 174 ಮಿಲಿಯನ್ ಡಾಲರ್ (ಒಟ್ಟು ಸುಮಾರು 14,000 ಕೋಟಿ ರೂ) ದಂಡ ವಿಧಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ರಿಲಾಯನ್ಸ್ ನೇತೃತ್ವದ ಸಂಸ್ಥೆಗಳು ನ್ಯಾಯಮಂಡಳಿ ಮೊರೆ ಹೋದವು. 2018ರಲ್ಲಿ ನ್ಯಾಯಮಂಡಳಿಯಿಂದ ಆರ್​ಐಎಲ್ ಪರವಾಗಿ ತೀರ್ಪು ಬಂದಿತು. ಇದನ್ನು ಪ್ರಶ್ನಿಸಿ ಸರ್ಕಾರವು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈಗ ದೆಹಲಿ ಕೋರ್ಟ್​ನಿಂದಲೂ ಸರ್ಕಾರದ ವಿರುದ್ಧವಾಗಿ ತೀರ್ಪು ಬಂದಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಇಂದು ಈ ರಾಶಿಯವರ ಪ್ರೇಮ ವ್ಯವಹಾರಗಳಿಗೆ ಅಡ್ಡಿ
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ಪಂಚಾಯ್ತಿಗೆ ನುಗ್ಗಿ PDO ಚೇರ್ ಮೇಲೆಯೇ ಹಾಯಾಗಿ ಮಲಗಿದ ಶ್ವಾನ!
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ವಾಸನೆ ಕುಡಿದು ಸಾಕಾಗಿ ಕೊನೆಗೆ ಫಾರಂನಲ್ಲಿದ್ದ ಕೋಳಿಗಳನ್ನೇ ಕದ್ದರು
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ದರ್ಶನ್ ಪತ್ನಿಗೆ ಕೆಟ್ಟ ಕಮೆಂಟ್: ಎಚ್ಚರಿಕೆ ನೀಡಿದ ಶಿವರಾಜ್​ಕುಮಾರ್
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ