AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

RIL: ಕೇಂದ್ರ ಸರ್ಕಾರ ವಿರುದ್ಧ ಕೇಸ್ ಗೆದ್ದ ಅಂಬಾನಿ ಕಂಪನಿ; 14,000 ಕೋಟಿ ದಂಡದಿಂದ ತಪ್ಪಿಸಿಕೊಂಡ ಆರ್​ಐಎಲ್

Delhi HC Uphelds Arbitral Award In Favour of RIL: ಆಂಧ್ರದ ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಅನಿಲ ನಿಕ್ಷೇಪ ಯೋಜನೆಯಲ್ಲಿ ಭಾಗಿಯಾಗಿದ್ದ ಒಎನ್​ಜಿಸಿ ಮತ್ತು ರಿಲಾಯನ್ಸ್ ಇಂಡಸ್ಟ್ರೀಸ್ ನಡುವಿನ ವ್ಯಾಜ್ಯದಲ್ಲಿ ಆರ್​ಐಎಲ್ ಪರವಾಗಿ ನ್ಯಾಯತೀರ್ಪು ಬಂದಿದೆ.

RIL: ಕೇಂದ್ರ ಸರ್ಕಾರ ವಿರುದ್ಧ ಕೇಸ್ ಗೆದ್ದ ಅಂಬಾನಿ ಕಂಪನಿ; 14,000 ಕೋಟಿ ದಂಡದಿಂದ ತಪ್ಪಿಸಿಕೊಂಡ ಆರ್​ಐಎಲ್
ಮುಕೇಶ್ ಅಂಬಾನಿ
ಸುಗ್ಗನಹಳ್ಳಿ ವಿಜಯಸಾರಥಿ
|

Updated on: May 10, 2023 | 1:57 PM

Share

ನವದೆಹಲಿ: ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ (Krishna Godavari Basin) ಅನಿಲ ಹಂಚಿಕೆ ವಿಚಾರದಲ್ಲಿ ಉಂಟಾದ ವ್ಯಾಜ್ಯವೊಂದರಲ್ಲಿ ರಿಲಾಯನ್ಸ್ ಇಂಡಸ್ಟ್ರೀಸ್ ಸಂಸ್ಥೆಯ ಪರವಾಗಿ ದೆಹಲಿ ಹೈಕೋರ್ಟ್ ತೀರ್ಪು ನೀಡಿದೆ. 2018ರಲ್ಲಿ ನ್ಯಾಯಮಂಡಳಿ ನೀಡಿದ್ದ ತೀರ್ಪನ್ನು ದೆಹಲಿ ಉಚ್ಚನ್ಯಾಯಾಲಯ (Delhi High Court) ಮೇ 9ರಂದು ಎತ್ತಿಹಿಡಿದು ಆದೇಶ ಹೊರಡಿಸಿದೆ. ಮೂವರು ಸದಸ್ಯರ ನ್ಯಾಯಪೀಠವು 2:1 ಬಹುಮತದಲ್ಲಿ ಆರ್​ಐಎಲ್ ಪರವಾಗಿ ತೀರ್ಪು ನೀಡಿದೆ. ಇದರೊಂದಿಗೆ ರಿಲಾಯನ್ಸ್ ಇಂಡಸ್ಟ್ರೀಸ್ ಹಾಗೂ ಅದರ ಪಾಲುದಾರ ಸಂಸ್ಥೆಗಳಾದ ಬ್ರಿಟಿಷ್ ಪೆಟ್ರೋಲಿಯಂ ಮತ್ತು ನೀಕೋ (NECO) ನಿಟ್ಟುಸಿರುಬಿಡುವಂತಾಗಿದೆ. ನ್ಯಾಯಮಂಡಳಿ ತೀರ್ಪನ್ನು ದೆಹಲಿ ಹೈಕೋರ್ಟ್ ತಿರಸ್ಕರಿಸಿ ಕೇಂದ್ರದ ಪರ ತೀರ್ಪು ನೀಡಿದ್ದರೆ ರಿಲಾಯನ್ಸ್ ಸಂಸ್ಥೆ ಸುಮಾರು 14,000 ಕೋಟಿ ರೂ ಪರಿಹಾರ ಕಟ್ಟಿಕೊಡಬೇಕಿತ್ತು. ಸರ್ಕಾರಿ ಸ್ವಾಮ್ಯದ ಒಎನ್​ಜಿಸಿ ಮತ್ತು ರಿಲಾಯನ್ಸ್ ನಡುವಿನ ಅನಿಲ ವ್ಯಾಜ್ಯದ ಪ್ರಕರಣ ಇದು.

ಏನಿದು ರಿಲಾಯನ್ಸ್ ಮತ್ತು ಒಎನ್​ಜಿಸಿ ವ್ಯಾಜ್ಯ?

ಕೃಷ್ಣ ಗೋದಾವರಿ ಜಲಾನಯನ ಪ್ರದೇಶದಲ್ಲಿ ಅನಿಲ ನಿಕ್ಷೇಪ ಹಂಚಿಕೆಗೆ ಸಂಬಂಧಿಸಿದ ಪ್ರಕರಣ ಇದು. ಆಂಧ್ರದ ಕರಾವಳಿ ಭಾಗದಲ್ಲಿ ನೈಸರ್ಗಿಕ ಅನಿಲ ನಿಕ್ಷೇಪ ಶೋಧಿಸಲು ಮತ್ತು ಹೊರತೆಗೆಯಲು 2000ದ ಏಪ್ರಿಲ್ 12ರಂದು ರಿಲಾಯನ್ಸ್ ಮತ್ತಿತರ ಕಂಪನಿಗಳ ಜೊತೆ ಕೇಂದ್ರ ಸರ್ಕಾರ ಪ್ರಾಡಕ್ಟ್ ಶೇರಿಂಗ್ ಗುತ್ತಿಗೆ (ಪಿಎಸ್​ಸಿ) ಒಪ್ಪಂದ ಮಾಡಿಕೊಂಡಿತ್ತು. ಎರಡಕ್ಕೂ ಬೇರೆ ಬೇರೆ ಬ್ಲಾಕ್​ಗಳನ್ನು ನಿಯೋಜಿಸಲಾಗಿತ್ತು.

ಇದನ್ನೂ ಓದಿGo First: ಗೋ ಫಸ್ಟ್ ವಿಮಾನಗಳನ್ನು ಪಡೆಯಲು ಟಾಟಾ, ಇಂಡಿಗೋ ಮುಂದು; ಲೀಸಿಂಗ್ ಕಂಪನಿಗಳ ಜೊತೆ ಮಾತುಕತೆ

ಆದರೆ, 2013ರಲ್ಲಿ ಒಎನ್​ಜಿಸಿಗೆ ಸೇರಿದ ಬ್ಲಾಕ್ ಮತ್ತು ಆರ್​ಐಎಲ್​ಗೆ ಸೇರಿದ ಬ್ಲಾಕ್ ಮಧ್ಯೆ ಸಂಪರ್ಕ ಜೋಡಿಸಿ ಆ ಮೂಲಕ ಅನಿಲವನ್ನು ಸಾಗಿಸಲಾಗುತ್ತಿತ್ತು ಎಂದು ಒಎನ್​ಜಿಸಿ ಶಂಕಿಸಿತ್ತು. ಕೇಂದ್ರ ಪೆಟ್ರೋಲಿಯಂ ಸಚಿವಾಲಯವು ರಿಲಾಯನ್ಸ್ ವಿರುದ್ಧ 2016ರಲ್ಲಿ 1.5 ಬಿಲಿಯನ್ ಡಾಲರ್ ಹಾಗು 174 ಮಿಲಿಯನ್ ಡಾಲರ್ (ಒಟ್ಟು ಸುಮಾರು 14,000 ಕೋಟಿ ರೂ) ದಂಡ ವಿಧಿಸಿತ್ತು. ಸರ್ಕಾರದ ಈ ಕ್ರಮವನ್ನು ಪ್ರಶ್ನಿಸಿ ರಿಲಾಯನ್ಸ್ ನೇತೃತ್ವದ ಸಂಸ್ಥೆಗಳು ನ್ಯಾಯಮಂಡಳಿ ಮೊರೆ ಹೋದವು. 2018ರಲ್ಲಿ ನ್ಯಾಯಮಂಡಳಿಯಿಂದ ಆರ್​ಐಎಲ್ ಪರವಾಗಿ ತೀರ್ಪು ಬಂದಿತು. ಇದನ್ನು ಪ್ರಶ್ನಿಸಿ ಸರ್ಕಾರವು ದೆಹಲಿ ಹೈಕೋರ್ಟ್ ಮೆಟ್ಟಿಲೇರಿತ್ತು. ಈಗ ದೆಹಲಿ ಕೋರ್ಟ್​ನಿಂದಲೂ ಸರ್ಕಾರದ ವಿರುದ್ಧವಾಗಿ ತೀರ್ಪು ಬಂದಿದೆ.

ಇನ್ನಷ್ಟು ವ್ಯವಹಾರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ ಮಾಡಿ

Follow Us
Vijaya Sarathy SN
Vijaya Sarathy SN

ಹುಟ್ಟೂರು ಹಾಸನ ಜಿಲ್ಲೆಯ ಶ್ರವಣಬೆಳಗೊಳ ಸಮೀಪದ ಒಂದು ಪುಟ್ಟ ಹಳ್ಳಿ. ಬೆಳದದ್ದು ಬೆಂಗಳೂರು ನಗರದಲ್ಲಿ. ಹಲವು ವರ್ಷಗಳಿಂದ ಪತ್ರಿಕಾ ರಂಗದಲ್ಲಿ ನೆಲೆ. ಬರವಣಿಗೆಯ ಆಸಕ್ತಿ ಮತ್ತು ಪರಿಣಿತಿಯ ಕ್ಷೇತ್ರಗಳು ಆರ್ಥಿಕತೆ, ಹಣಕಾಸು, ಅಂತರರಾಷ್ಟ್ರೀಯ ವಿದ್ಯಮಾನ, ಜನಕ್ರಾಂತಿ, ರಾಷ್ಟ್ರೀಯತೆ, ಸಂಸ್ಕೃತಿ, ಮಾನವ ಸಂಬಂಧ, ಕ್ರೀಡೆ ಮೊದಲಾದವು ಇವೆ. ಓದುಗರಿಗೆ ಸುಲಭವಾಗಿ ಅರ್ಥವಾಗುವಂತೆ ಸಾಧ್ಯವಾದಷ್ಟೂ ಸ್ಫುಟವಾಗಿ, ಸರಳವಾಗಿ ಬರೆಯುವ ಇಚ್ಛೆ.

Read More
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
CLP Meeting: ಡಿಕೆಶಿ ಹೆಸರು ಘೋಷಿಸಿದ ಸಿದ್ರಾಮಯ್ಯ Exclusive ವಿಡಿಯೋ
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!