AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Reliance Industries: ಅಬುಧಾಬಿ ಗ್ಲೋಬಲ್ ಮಾರ್ಕೆಟ್​ನಲ್ಲಿ RINL ಸೇರ್ಪಡೆ ಮಾಡಿದ ರಿಲಯನ್ಸ್ ಇಂಡಸ್ಟ್ರೀಸ್

ರಿಲಯನ್ಸ್ ಇಂಡಸ್ಟ್ರೀಸ್​​ನಿಂದ ಯುಎಇಯಲ್ಲಿ ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್​ ಅನ್ನು ಇನ್​ಕಾರ್ಪೊರೇಟ್​ ಮಾಡಲಾಗಿದೆ. ಆ ಬಗ್ಗೆ ವಿವರ ಇಲ್ಲಿದೆ.

Reliance Industries: ಅಬುಧಾಬಿ ಗ್ಲೋಬಲ್ ಮಾರ್ಕೆಟ್​ನಲ್ಲಿ RINL ಸೇರ್ಪಡೆ ಮಾಡಿದ ರಿಲಯನ್ಸ್ ಇಂಡಸ್ಟ್ರೀಸ್
ರಿಲಯನ್ಸ್ ಅಧ್ಯಕ್ಷ ಮುಕೇಶ್ ಅಂಬಾನಿ (ಸಂಗ್ರಹ ಚಿತ್ರ)
TV9 Web
| Updated By: Srinivas Mata|

Updated on: Oct 02, 2021 | 5:24 PM

Share

ರಿಲಯನ್ಸ್ ಇಂಡಸ್ಟ್ರೀಸ್ ಲಿಮಿಟೆಡ್​ (RIL)ನಿಂದ ಸಂಪೂರ್ಣ ಒಡೆತನದ ಅಂಗ ಸಂಸ್ಥೆಯಾದ ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ (RINL) ಎಂಬುದನ್ನು ಯುನೈಟೆಡ್ ಅರಬ್ ಎಮಿರೇಟ್ಸ್​ನ (UAE) ಅಬುಧಾಬಿ ಗ್ಲೋಬಲ್ ಮಾರ್ಕೆಟ್​ನಲ್ಲಿ ಸೇರ್ಪಡೆ (Incorporate) ಮಾಡಲಾಗಿದೆ. ಕಂಪೆನಿಯು 7.42 ಕೋಟಿ ರೂಪಾಯಿ ಅಥವಾ 10 ಲಕ್ಷ ಅಮೆರಿಕನ್ ಡಾಲರ್ ನಗದನ್ನು ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್​ನ ತಲಾ 1 ಯುಎಸ್​ಡಿಯ 10 ಲಕ್ಷ ಈಕ್ವಿಟಿ ಷೇರುಗಳಲ್ಲಿ ಹೂಡಿಕೆ ಮಾಡಿದೆ, ಎಂದು ಶನಿವಾರ ಫೈಲಿಂಗ್​ನಲ್ಲಿ ತಿಳಿಸಲಾಗಿದೆ. ಕಚ್ಚಾ ತೈಲ, ಪೆಟ್ರೋಲಿಯಂ ಉತ್ಪನ್ನಗಳು, ಪೆಟ್ರೋಕೆಮಿಕಲ್ಸ್ ಮತ್ತು ಕೃಷಿ ಪದಾರ್ಥಗಳಲ್ಲಿ ವಹಿವಾಟು ನಡೆಸುವುದಕ್ಕೆ ಈ ಅಂಗಸಂಸ್ಥೆಯನ್ನು ಸ್ಥಾಪಿಸಲಾಗಿದೆ. ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ ವಾಣಿಜ್ಯ ಕಾರ್ಯ ಚಟುವಟಿಕೆ ಇನ್ನಷ್ಟೇ ಆರಂಭಗೊಳ್ಳಬೇಕಿದೆ. ಅಬುಧಾಬಿ ನ್ಯಾಷನಲ್ ಆಯಿಲ್ ಕಂಪೆನಿ ಯೋಜನೆಯಲ್ಲಿ ಹೂಡಿಕೆ ಮಾಡುವುದಾಗಿ ಕಳೆದ ಜೂನ್​ನಲ್ಲಿ ರಿಲಯನ್ಸ್ ಇಂಡಸ್ಟ್ರೀಸ್ ಘೋಷಣೆ ಮಾಡಿತ್ತು. ಆಗಿನ ಯೋಜನೆಯ ಬೆನ್ನಿಗೆ ಈ ಬೆಳವಣಿಗೆ ಆಗಿದೆ.

ಕಂಪೆನಿಯು ಹೇಳಿರುವಂತೆ, ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್ ಹೂಡಿಕೆಯು ಸಂಬಂಧಪಟ್ಟ ವ್ಯಕ್ತಿಗಳ ವಹಿವಾಟಿಗೆ ಬರುವುದಿಲ್ಲ ಎಂದು ಕಂಪೆನಿ ಹೇಳಿದೆ. ಜತೆಗೆ ಪ್ರವರ್ತಕರು ಅಥವಾ ಪ್ರವರ್ತಕರ ಸಮೂಹ ಅಥವಾ ಸಮೂಹದ ಕಂಪೆನಿಗಳು ರಿಲಯನ್ಸ್ ಇಂಟರ್​ನ್ಯಾಷನಲ್ ಲಿಮಿಟೆಡ್​ನಲ್ಲಿ ಯಾವುದೇ ಆಸಕ್ತಿ ಹೊಂದಿಲ್ಲ ಎಂದು ತಿಳಿಸಲಾಗಿದೆ.

ಈಗಿನ ಹೂಡಿಕೆಗೆ ಸರ್ಕಾರದ ಅಥವಾ ನಿಯಂತ್ರಕರ ಅನುಮತಿಯ ಅಗತ್ಯ ಇಲ್ಲ ಎನ್ನಲಾಗಿದೆ. ರಿಲಯನ್ಸ್ ಕಂಪೆನಿಯಿಂದ ವಿಶ್ವದ ಅತಿ ದೊಡ್ಡ ತೈಲ ರಿಫೈನಿಂಗ್ ಸಮುಚ್ಚಯವನ್ನು ಗುಜರಾತ್​ನಲ್ಲಿ ನಡೆಸುತ್ತಿದೆ. ರಿಲಯನ್ಸ್ ಇಂಡಸ್ಟ್ರೀಸ್ ಕಂಪೆನಿಯ ಷೇರು ಶುಕ್ರವಾರದಂದು ಎನ್​ಎಸ್​ಇಯಲ್ಲಿ ವಾರದ ಕೊನೆಗೆ ರೂ. 2,525ಕ್ಕೆ ವಾರಾಂತ್ಯ ಕಂಡಿದೆ.

ಇದನ್ನೂ ಓದಿ: RRVL: ಜಸ್ಟ್​ ಡಯಲ್​ನಲ್ಲಿ ಶೇ 67ರಷ್ಟು ಷೇರು ಖರೀದಿಸಲಿದೆ ರಿಲಯನ್ಸ್ ರೀಟೇಲ್ ವೆಂಚರ್ಸ್

ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಇಂಗ್ಲೆಂಡ್ ವರನ ಕೈ ಹಿಡಿದ ಬೇಲೂರಿನ ವಧು! ನಡೆಯಿತು ಅದ್ದೂರಿ ಮದುವೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
ಎಲಿಮಿನೇಟ್ ಆಗದಿದ್ದರೂ ರಕ್ಷಿತಾ ಶೆಟ್ಟಿಗೆ ಶುರುವಾಯ್ತು ಹೊಸ ಚಿಂತೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
Video: ಆರತಿ ಎತ್ತಿರೋ ಫುಟ್​ಪಾತ್​ ಮೇಲೆ ಗಾಡಿ ಓಡ್ಸವ್ರಿಗೆ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
ಸೈಕಲ್ ಸವಾರನಿಗೆ ಡಿಕ್ಕಿ ಹೊಡೆದು ತಿರುಗಿಯೂ ನೋಡದೆ ಹೋದ ಬೈಕ್ ಸವಾರ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
Video: ಅಮ್ಮಾ ನನ್ನ ಮೈಬಣ್ಣ ಬೇರೆ ಮಾಡೋಕೆ ಆಗಲ್ವಾ, ಕಣ್ಣೀರಿಟ್ಟ ಬಾಲಕಿ
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ವಿಷ್ಣು ತುಳಿಸಿ, ಹಾಗೂ ಲಕ್ಷ್ಮೀ ತುಳಸಿ ಎರೆಡೂ ಮನೆಯಲ್ಲಿರಬೇಕು ಯಾಕೆ?
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಇಂದು ಈ ರಾಶಿಯವರಿಗೆ ಐದು ಗ್ರಹಗಳ ಶುಭಫಲವಿರುತ್ತದೆ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಮದ್ಯ ಕರ್ನಾಟದಲ್ಲಿ ಶಮನೂರು ಸಾಮ್ರಾಜ್ಯ: ಹೆಲಿಕಾಪ್ಟರ್, ಮಿನಿ ವಿಮಾನ ಒಡೆಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಟಿ20 ಕ್ರಿಕೆಟ್‌ನಲ್ಲಿ ವಿಕೆಟ್​ಗಳ ಶತಕ ಪೂರೈಸಿದ ಹಾರ್ದಿಕ್ ಪಾಂಡ್ಯ
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು
ಶಾಮನೂರು ಶಿವಶಂಕರಪ್ಪನವರಿಗೆ ಏನಾಗಿತ್ತು?ಆಸ್ಪತ್ರೆ ಮುಖ್ಯಸ್ಥ ಹೇಳಿದ್ದಿಷ್ಟು